ಕುಡಿಯುವ ನೀರು ಪೂರೈಕೆಗೆ ಯೋಜನೆ ಸಿದ್ಧ

55 ಕೋಟಿ ರೂ. ವೆಚ್ಚದ ಯೋಜನೆ

Team Udayavani, May 24, 2022, 4:21 PM IST

pattana-panchayat

ಹೊಸಪೇಟೆ: ಒಳಚರಂಡಿ ಹಾಗೂ ಕುಡಿವ ನೀರು ಸರಬರಾಜು ಇಲಾಖೆಯಿಂದ ತಾಲೂಕಿನ ಕಮಲಾಪುರ ಪಟ್ಟಣ 20 ವಾರ್ಡ್‌ಗಳಿಗೆ ಸಮರ್ಪಕವಾಗಿ ಕುಡಿವ ನೀರು ಪೂರೈಕೆಗೆ 55 ಕೋಟಿ ರೂ. ವೆಚ್ಚದಲ್ಲಿ ವಿಸ್ತೃತ ಯೋಜನಾ ವರದಿ ರೂಪಿಸಲಾಗಿದೆ.

ಕಮಲಾಪುರ ಪಟ್ಟಣದಲ್ಲಿ 2011ರ ಜನಸಂಖ್ಯೆ ಪ್ರಕಾರ 25 ಸಾವಿರ ಜನಸಂಖ್ಯೆ ಇದ್ದು ಪ್ರಸ್ತುತ 30862 ಜನಸಂಖ್ಯೆ ಹೊಂದಿದೆ. ಜನಸಂಖ್ಯೆ ಅನುಗುಣವಾಗಿ ಪಟ್ಟಣದಿಂದ ಪುರಸಭೆಯಾಗಿ ಮೆಲ್ದರ್ಜೆಗೆ ಏರಿದೆ. ಆದರೆ ಪಟ್ಟಣಕ್ಕೆ ಕುಡಿವ ನೀರಿನ ಸರಬರಾಜು ಹೇಳಿಕೊಳ್ಳುವಷ್ಟು ಆಗುತ್ತಿಲ್ಲ. ಪಕ್ಕದಲ್ಲಿ ತುಂಗಭದ್ರಾ ಜಲಾಶಯದ ಕಾಲುವೆಗಳಿದ್ದರೂ ಪಟ್ಟಣಕ್ಕೆ ಕುಡಿವ ನೀರಿನ ತೊಂದರೆಯಾಗುತ್ತಿದೆ. ಆದ್ದರಿಂದ ಒಳಚರಂಡಿ ಹಾಗೂ ಕುಡಿವ ನೀರು ಸರಬರಾಜು ಇಲಾಖೆಯಿಂದ ಯೋಜನೆ ಸಿದ್ಧಪಡಿಸಿ ಸರಕಾರದ ಅನುಮೋದನೆಗೆ ಕಳುಹಿಸಲಾಗಿದೆ.

ಪಟ್ಟಣದಲ್ಲಿ ಸದ್ಯ 4.5 ಎಂಎಲ್‌ಡಿ ಶುದ್ಧ ಕುಡಿವ ನೀರಿನ ಘಟಕವಿದ್ದು, ಪಟ್ಟಣದ ಅಳ್ಳಿಕೆರಿ ಪ್ರದೇಶದಲ್ಲಿ 10 ಲಕ್ಷ ಲೀಟರ್‌ ಒಂದು ಒವರ್‌ ಟ್ಯಾಂಕ್‌, ಶುದ್ಧೀಕರಣ ಘಟಕದಲ್ಲಿ 5 ಲಕ್ಷ ಲೀಟರ್‌, ವಾಲ್ಮೀಕಿ ವೃತ್ತದ ಬಳಿ 2.5 ಲಕ್ಷ ಲೀಟರ್‌, ಚೌಡಿಕೇರಿಯಲ್ಲಿ ಒಂದು ಲಕ್ಷ ಲೀಟರ್‌ ಒಟ್ಟು 18.5 ಲಕ್ಷ ಲೀಟರ್‌ ನೀರು ಪೂರೈಕೆಯಾಗುತ್ತಿದೆ. ಇನ್ನೂ ಹೆಚ್ಚುವರಿಯಾಗಿ ನಗರದ ಜೈಭೀಮ್‌ ನಗರದಲ್ಲಿ 2.5 ಲಕ್ಷ ಲೀಟರ್‌ ಹಾಗೂ ಶುದ್ಧೀಕರಣ ಘಟಕದಲ್ಲಿ 2.5 ಲಕ್ಷ ಲೀಟರ್‌ ಓವರ್‌ಟ್ಯಾಂಕ್‌ ನಿರ್ಮಾಣ ಮಾಡಲಾಗಿದ್ದು ಇನ್ನೂ ಆರಂಭವಾಗಿಲ್ಲ. 55 ಕೋಟಿ ರೂ. ವೆಚ್ಚದ ನಿರಂತರ ಕುಡಿವ ನೀರಿನ ಯೋಜನೆಯಲ್ಲಿ ಇನ್ನೂ ಪಟ್ಟಣದ ಹಂಪಿ ರಸ್ತೆಯ ಬಳಿ ಹಾಗೂ ವಾಲ್ಮೀಕಿ ವೃತ್ತದಲ್ಲಿ 2.5 ಲಕ್ಷ ಲೀಟರ್‌ ಒವರ್‌ ಟ್ಯಾಂಕ್‌ ತೆರವುಗೊಳಿಸಿ 10 ಲಕ್ಷದ ಲಕ್ಷ ಲೀಟರ್‌ ಓವರ್‌ ಟ್ಯಾಂಕ್‌ ನಿರ್ಮಾಣ ಮಾಡಲು ಯೋಜನೆ ತಯಾರಾಗಿದೆ.

ಯೋಜನೆ ರದ್ದಾದರೆ ನೀರಿನ ಹಾಹಾಕಾರ

ತುಂಗಭದ್ರಾ ಜಲಾಶಯ 15 ಕಿಮೀ ದೂರದಲ್ಲಿದ್ದು ಹಾಗೂ ಪಟ್ಟಣದ ಮೂಲಕ ಎರಡು ಕಾಲುವೆಗಳು ಹರಿದುಹೋಗುಹೊತ್ತಿದ್ದು, ಒಂದು ಎರಡು ಕೆರೆಗಳಿದ್ದರೂ ಕುಡಿವ ನೀರಿನ ಸಬರಾಜು ಸಮರ್ಪಕವಾಗಿ ಆಗುತ್ತಿಲ್ಲ. 55 ಕೋಟಿ ರೂ. ವೆಚ್ಚದ ನಿರಂತರ ಕುಡಿವ ನೀರಿನ ಸಬರಾಜು ಯೋಜನೆ ಸರಕಾರ ಮಟ್ಟದಲ್ಲಿದೆ. ಅದು ಸದ್ಯ ಅನುಮೋದನೆಯಾಗಿ ಬಂದರೆ ಮುಂದಿನ 2025ರಲ್ಲಿ ಯೋಜನೆ ಪೂರ್ಣವಾಗಲಿದೆ. ಅಲ್ಲಿಯವರೆಗೆ ಜನರ ಸ್ಥಿತಿ ಯಥಾವತ್ತಾಗಿ ಮುಂದುವರಿಯಲಿದೆ. ಏನಾದರೂ ಸರಕಾರದಿಂದ ವಿಳಂಬ ಅಥವಾ ಯೋಜನೆ ರದ್ದಾದರೆ ಪಟ್ಟಣದಲ್ಲಿ ಕುಡಿವ ನೀರಿಗಾಗಿ ಹಾಹಾಕಾರ ಆಗಲಿದೆ ಎಂಬುದು ಸ್ಥಳೀಯರ ಅಳಲು.

30 ವರ್ಷದ ಮುಂದಾಲೋಚನೆ

2011ರ ಜನಗಣತಿ ಪ್ರಕಾರ ಶೇ. 15ರಷ್ಟು ಜನಸಂಖ್ಯೆ ಹೆಚ್ಚಾಗಿದೆ. ಕಳೆದ 30 ವರ್ಷಗಳ ಹಿಂದೆ ನಿರ್ಮಾಣ ಮಾಡಿದ ಕುಡಿವ ನೀರಿನ ಶುದ್ಧೀಕರಣ ಘಟಕದಿಂದ ಪ್ರಸ್ತುತ ಜನಸಂಖ್ಯೆಗೆ ನೀರಿನ ಪೂರೈಕೆಯಾಗುತ್ತಿಲ್ಲ. ಆದ್ದರಿಂದ ಒಳಚರಂಡಿ ಹಾಗೂ ಕುಡಿವ ನೀರು ಸರಬರಾಜು ಇಲಾಖೆಯಿಂದ ಮುಂದಿನ 30 ವರ್ಷದ ಅಂದಾಜು 50 ಸಾವಿರ ಜನಸಂಖ್ಯೆ ಅನುಗುಣವಾಗಿ ಪಟ್ಟಣಕ್ಕೆ ಆಗುವಷ್ಟು 55 ಕೋಟಿ ರೂ. ವೆಚ್ಚದಲ್ಲಿ ಪಟ್ಟಣದ 20 ವಾರ್ಡ್‌ ಸೇರಿ ಕನ್ನಡ ವಿವಿ ಹಾಗೂ ಪಟ್ಟಣದ ಹೊರವಲಯದ ಕೆಲ ಪ್ರದೇಶಗಳಿಗೆ ನೀರಿನ ಸರಬರಾಜಿನ ಯೋಜನೆ ರೂಪಿಸಲಾಗಿದೆ ಎಂದು ಅ ಧಿಕಾರಿಗಳು ತಿಳಿಸಿದ್ದಾರೆ.

ಕಮಲಾಪುರ ಪಟ್ಟಣಕ್ಕೆ ಜನಸಂಖ್ಯೆಗನುಗುಣವಾಗಿ ನೀರು ಸಾಲುತ್ತಿಲ್ಲ ಎಂದು 55 ಕೋಟಿ ರೂ, ವೆಚ್ಚದಲ್ಲಿ ನಿರಂತರ ಕುಡಿವ ನೀರಿನ ಯೋಜನೆಯ ವರದಿಯನ್ನು ಸರಕಾರಕ್ಕೆ ಮಟ್ಟದಲ್ಲಿ ಅನುಮೋದನೆಗೆ ಕಳುಹಿಸಲಾಗಿದೆ. -ಮಲ್ಲಿಕಾರ್ಜುನ, ಎಇಇ, ನಗರ ಕುಡಿವ ನೀರಿನ ಸರಬರಾಜು ಹಾಗೂ ಒಳಚರಂಡಿ ಮಂಡಳಿ, ಹೊಸಪೇಟೆ

ಟಾಪ್ ನ್ಯೂಸ್

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Sringeri Sharadamba Temple; ಪ್ರಧಾನಿ ಮೋದಿ ಹೆಸರಲ್ಲಿ ಸಹಸ್ರನಾಮ ಪೂಜೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ayodhya ದೇಶದಲ್ಲಿ ಧರ್ಮ ಜಾಗೃತಿ ಪರ್ವ: ಪೇಜಾವರ ಶ್ರೀ

Ayodhya Ram Mandir ದೇಶದಲ್ಲಿ ಧರ್ಮ ಜಾಗೃತಿ ಪರ್ವ: ಪೇಜಾವರ ಶ್ರೀ

4-

BJP ರೈತಮೋರ್ಚಾ ರಾಜ್ಯಾಧ್ಯಕ್ಷ ಭವಿಷ್ಯವಾಣಿ;ಎಂಪಿ ಚುನಾವಣೆ ನಂತರ ಕಾಂಗ್ರೆಸ್ ದೇಶದಲ್ಲಿರೊಲ್ಲ

10-hosapete

Hosapete: ಮಕರ ಸಂಕ್ರಾತಿ: ದಕ್ಷಿಣಕಾಶಿ ಹಂಪಿಗೆ ಪ್ರವಾಸಿಗರ ದಂಡು!

Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ

Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ

vij ramu

Ayodhya: ರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್ ಬಹಿಷ್ಕಾರ: ಶ್ರೀರಾಮುಲು ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

ಗದಗ: ತೋಟದಾರ್ಯ ಮಠ ಅನ್ನ-ಅಕ್ಷರ ದಾಸೋಹಕ್ಕೆ ಪ್ರಸಿದ್ಧ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.