ಗಣಿಬಾಧಿತ ಪ್ರದೇಶಗಳ ಅಭಿವೃದ್ಧಿಗೆ ಆದ್ಯತೆ

ಜಿಲ್ಲಾ ಉಸ್ತುವಾರಿ ಸಚಿವೆ ಜೊಲ್ಲೆ ಭರವಸೆ

Team Udayavani, May 1, 2022, 3:30 PM IST

development

ಹೊಸಪೇಟೆ: ಜಿಲ್ಲೆಯಲ್ಲಿ ಪ್ರತ್ಯಕ್ಷ ಗಣಿಬಾಧಿತ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡುವುದರ ಜೊತೆಗೆ ಪರೋಕ್ಷ ಗಣಿಬಾಧಿತವಾಗಿರುವ ಉಳಿದ ತಾಲೂಕುಗಳ ಸಮಾನ ಅಭಿವೃದ್ಧಿಗೆ ಆದ್ಯತೆ ನೀಡಲಾಗುವುದು ಎಂದು ಮುಜರಾಯಿ, ಹಜ್‌ ಮತ್ತು ವಕ್ಫ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವೆ ಶಶಿಕಲಾ ಜೊಲ್ಲೆ ಹೇಳಿದರು.

ನಗರದ ಡಿಸಿ ಕಚೇರಿ ಸಭಾಂಗಣದಲ್ಲಿ ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ, ಡಿಎಂಎಫ್‌ ಗೌರ್ನಿಂಗ್‌ ಕೌನ್ಸಿಲ್‌ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ವಿಜಯನಗರ ಜಿಲ್ಲೆಯಲ್ಲಿ ತಾಲೂಕಿನಲ್ಲಿ ಶೇ.37.84, ಹರಪನಹಳ್ಳಿ-ಶೇ.26.20, ಕೂಡ್ಲಿಗಿ-ಶೇ.12.29, ಹಗರಿಬೊಮ್ಮನಹಳ್ಳಿ ಮತ್ತು ಕೊಟ್ಟೂರು-ಶೇ.14.04, ಕೂಡ್ಲಿಗಿ-ಶೇ.12.29 ಹೂವಿನಹಡಗಲಿ-ಶೇ.9.63ರಷ್ಟು ಜನರು ಗಣಿ ಚಟುವಟಿಕೆಗಳಿಂದ ಬಾಧಿತರಾಗಿದ್ದು, ಈ ಪ್ರದೇಶಗಳ ಸಮಗ್ರ ಅಭಿವೃದ್ಧಿಗೆ ಕ್ರಮ ಕೈಗೊಳ್ಳಲಾಗುವುದು ಎಂದರು.

ಡಿಎಂಎಫ್‌ ಅಡಿ 2016-17ರಿಂದ 2021-22ರವರೆಗೆ ಒಟ್ಟು 6 ಕ್ರಿಯಾಯೋಜನೆಗಳು ಮಂಜೂರಾಗಿದ್ದು, ಅವಿಭಜಿತ ಬಳ್ಳಾರಿ ಜಿಲ್ಲೆಗೆ 267794.76ಲಕ್ಷ ರೂ. ಹಂಚಿಕೆ ಮಾಡಲಾಗಿದ್ದು, ಅದರಲ್ಲಿ ಶೇ.10ರಷ್ಟು ದತ್ತಿನಿಧಿಗಾಗಿ ಮತ್ತು ಆಡಳಿತಾತ್ಮಕ ವೆಚ್ಚಕ್ಕಾಗಿ ಶೇ.5ರಷ್ಟು ಕಾಯ್ದಿರಿಸಿ 222215.51ಲಕ್ಷ ರೂ.ಗಳ ಕ್ರಿಯಾಯೋಜನೆ ಸಿದ್ದಪಡಿಸಲಾಗಿತ್ತು. ವಿಜಯನಗರ ಜಿಲ್ಲೆಗೆ 63126.56ಲಕ್ಷ ರೂ. ಕ್ರಿಯಾ ಯೋಜನೆಗೆ ಅನುಮೋದನೆ ನೀಡಲಾಗಿದೆ ಎಂದರು.

ಪ್ರಸ್ತುತ ಬಳ್ಳಾರಿಯಿಂದ ವಿಜಯನಗರ ಜಿಲ್ಲೆಗೆ ಜಿಲ್ಲಾ ಖನಿಜ ನಿಧಿಯ ಅನುದಾನ ಈಗಾಗಲೇ 105 ಕೋಟಿ ರೂ. ವರ್ಗಾವಣೆ ಆಗಿದೆ. ಅಲ್ಲದೆ, ಕಳೆದ 6 ತಿಂಗಳಲ್ಲಿ ಸುಮಾರು 21 ಕೋಟಿಗಳಷ್ಟು ಸಂಗ್ರಹವಾಗಿದೆ. ವಿವಿಧ ಹಂತಗಳಲ್ಲಿ ಇನ್ನೂ ಕೂಡಾ ಹಣ ವರ್ಗಾವಣೆ ಆಗುತ್ತಿದೆ. ಇದರಲ್ಲಿ ಈಗಾಗಲೇ 29 ಕೋಟಿ ರೂ. ಗಳಷ್ಟು ಹಣವನ್ನು ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಬಿಡುಗಡೆ ಮಾಡಿದ್ದೇವೆ ಎಂದರು.

ಜಿಲ್ಲಾ ಖನಿಜ ನಿಧಿ ಅಡಿಯಲ್ಲಿ ಜಿಲ್ಲೆಯಲ್ಲಿ ಸುಮಾರು 1113 ಕಾಮಗಾರಿಗಳಿಗೆ ಯೋಜನೆ ರೂಪಿಸಲಾಗಿತ್ತು. ಅದರಲ್ಲಿ ಈಗಾಗಲೇ 568 ಯೋಜನೆಗಳು ಮುಕ್ತಾಯಗೊಂಡಿದ್ದು ಉಳಿದ ಯೋಜನೆಗಳೂ ಅನುಷ್ಠಾನದ ವಿವಿಧ ಹಂತಗಳಲ್ಲಿವೆ ಎಂದ ಅವರು, ಗ್ರಾಮೀಣ ಜನರಿಗೆ ಆರೋಗ್ಯ ಸೌಲಭ್ಯ, ಶುದ್ಧ ಕುಡಿಯುವ ನೀರು, ಶಿಕ್ಷಣ ಸೌಲಭ್ಯ, ಉತ್ತಮ ರಸ್ತೆ, ಅಗತ್ಯ ಸಾರಿಗೆ ಸೌಲಭ್ಯಗಳನ್ನು ನೀಡುವ ನಿಟ್ಟಿನಲ್ಲಿ ಯೋಜನೆ ರೂಪಿಸಲಾಗುತ್ತಿದೆ ಎಂದರು.

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಿಂದ 136.28 ಕೋಟಿ ಅನುದಾನ

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿಯಡಿ 2022-23ನೇ ಸಾಲಿನಲ್ಲಿ ಮೈಕ್ರೋ-95.40 ಕೋಟಿ, ಮ್ಯಾಕ್ರೋ 40.88 ಕೋಟಿ ರೂ. ಸೇರಿದಂತೆ ಒಟ್ಟು 136.28 ಕೋಟಿ ರೂ.ಗಳ ಅನುದಾನ ಹಂಚಿಕೆಯಾಗಿದೆ ಎಂದು ಜಿಲ್ಲಾಧಿಕಾರಿ ಅನಿರುದ್ಧ ಶ್ರವಣ್‌ ಮಾಹಿತಿ ನೀಡಿದರು.

40.88ಕೋಟಿ ರೂ. ಮ್ಯಾಕ್ರೋ ಅನುದಾನದಡಿ ಜಿಲ್ಲೆಯಲ್ಲಿ ಪರಿಣಾಮ ಬಿರುವಂತ ಯೋಜನೆಗಳನ್ನು ರೂಪಿಸಲು ಸೂಚಿಸಲಾಗಿದ್ದು, ಅದರಂತೆ 10 ಕೋಟಿ ರೂ.ವೆಚ್ಚದಲ್ಲಿ ವಿಜಯಿಭವ ಯೋಜನೆ ರೂಪಿಸಿ ಅದರ ಮೂಲಕ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ತರಬೇತಿ, ಶಾಲೆಗಳಿಗೆ ಸ್ಮಾರ್ಟ್‌ ಕ್ಲಾಸ್‌, ಗ್ರಂಥಾಲಯ ಸೌಲಭ್ಯ ಸೇರಿ ಇನ್ನಿತರ ಕ್ರಮ ಕೈಗೊಳ್ಳಲಾಗುತ್ತಿದೆ.

ಕರಕುಶಲ ಕಾರ್ಮಿಕರಿಗೆ, ಗುಡಿಕೈಗಾರಿಕೆದಾರರ ಮಾರುಕಟ್ಟೆಗೆ ಅನುಕೂಲವಾಗಲು 3ಕೋಟಿ ರೂ. ವೆಚ್ಚದಲ್ಲಿ ಕೌಶಲ್ಯ ಕೇಂದ್ರ, ಜಿಲ್ಲಾ ಕ್ರೀಡಾಂಗಣ ನಿರ್ಮಾಣ, ಗುಡೇಕೋಟೆ, ಕಮಲಾಪುರ, ಹೊಸಪೇಟೆ ಮತ್ತು ಕೊಟ್ಟೂರು ಹೋಬಳಿಗಳಲ್ಲಿ ರೈತ ಸಂಪರ್ಕ ಕೇಂದ್ರಗಳ ಸ್ಥಾಪನೆ, ವಿಜಯನಗರ ಸ್ತ್ರೀಶಕ್ತಿ ಭವನ, ಪ್ರವಾಸಿಗರಿಗೆ ಅಗತ್ಯ ಮಾಹಿತಿ ನೀಡುವ ಜಿಲ್ಲೆಯ ಹಂಪಿ ಹಾಗೂ ಐತಿಹಾಸಿಕ ಮಾಹಿತಿಯುಳ್ಳ ಮಾಹಿತಿ ಕೇಂದ್ರ, ಅಮರಾವತಿ ಅತಿಥಿಗೃಹದ ಮೇಲ್ಭಾಗದಲ್ಲಿ ವಿಐಪಿಗಳ ಆತಿಥ್ಯಕ್ಕೆ ಮತ್ತೂಂದು ಹಂತದ ಸುಸಜ್ಜಿತ ಕೋಣೆಗಳ ನಿರ್ಮಾಣ ಸೇರಿದಂತೆ ವಿವಿಧ ವಿಶಿಷ್ಟ ಯೋಜನೆಗಳನ್ನು ರೂಪಿಸಲಾಗುತ್ತಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವರು ವಿವರಿಸಿದರು.

ಅನುದಾನ ಹಂಚಿಕೆ ಸಮಸ್ಯೆ, ಮುಖ್ಯ ಮಂತ್ರಿಗಳೊಂದಿಗೆ ಚರ್ಚೆ

ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿಯಡಿ ನಂಜುಂಡಪ್ಪ ವರದಿ ಹಾಗೂ ಸಿಡಿಆರ್‌ ಸೂಚ್ಯಂಕದ ಆಧಾರದ ಮೇಲೆ ಅನುದಾನ ಹಂಚಿಕೆಯಲ್ಲಿ ತಾರತಮ್ಯವಾಗಿದ್ದು, ಈ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಲು ಸಭೆ ಏರ್ಪಡಿಸುವಂತೆ ಸಂಸದ ಜಿ.ಎಂ. ಸಿದ್ಧೇಶ್ವರ, ಶಾಸಕರಾದ ಪಿ.ಟಿ. ಪರಮೇಶ್ವರ ನಾಯಕ್‌, ಜಿ.ಕರುಣಾಕರರೆಡ್ಡಿ, ಎನ್‌.ವೈ. ಗೋಪಾಲಕೃಷ್ಣ, ಭೀಮಾನಾಯಕ್‌, ಎಸ್‌.ವಿ. ರಾಮಚಂದ್ರ, ವೈ.ಎಂ. ಸತೀಶ ಒತ್ತಾಯಿಸಿದರು.

ಸಂಸದರು ಹಾಗೂ ಶಾಸಕರ ಅಹವಾಲು ಆಲಿಸಿದ ಜಿಲ್ಲಾ ಉಸ್ತುವಾರಿ ಸಚಿವರು ಮೇ5 ರಂದು ಕ್ಯಾಬಿನೆಟ್‌ ಸಭೆಯಿದ್ದು, ಸಿಎಂ ಅವರೊಂದಿಗೆ ಚರ್ಚಿಸಿ ದಿನಾಂಕ ನಿಗದಿಪಡಿಸಲಾಗುವುದು ಎಂದರು.

ನಗರೋತ್ಥಾನ ಯೋಜನೆ ಅಡಿ ಜಿಲ್ಲೆಗೆ 90 ಕೋಟಿ ರೂ.ಗಳು ಮಂಜೂರಾಗಿದ್ದು, ಅದರಡಿ ಕೈಗೆತ್ತಿಕೊಳ್ಳಲಾಗಿರುವ ವಿವಿಧ ಕಾಮಗಾರಿಗಳಿಗೆ ಅನುಮೋದನೆ ನೀಡಲಾಯಿತು.

ಸಂಸದ ಜಿ.ಎಂ. ಸಿದ್ಧೇಶ್ವರ, ಶಾಸಕರಾದ ಪಿ.ಟಿ. ಪರಮೇಶ್ವರ ನಾಯಕ್‌, ಜಿ.ಕರುಣಾಕರರೆಡ್ಡಿ, ಎನ್‌. ವೈ. ಗೋಪಾಲಕೃಷ್ಣ, ಭೀಮಾನಾಯಕ್‌, ಎಸ್‌.ವಿ. ರಾಮಚಂದ್ರ, ವೈ.ಎಂ. ಸತೀಶ, ಎಸ್ಪಿ ಡಾ| ಅರುಣ ಕೆ, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

ಟಾಪ್ ನ್ಯೂಸ್

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

1-weewqewqe

LS Election; ದಿಂಗಾಲೇಶ್ವರ ಶ್ರೀ ಕೋಟ್ಯಧಿಪತಿ: 3 ಅಪರಾಧ ಪ್ರಕರಣಗಳು ಇವೆ

crime (2)

Bengaluru: ಪಾರ್ಕ್ ನಲ್ಲಿ ಹಾಡಹಗಲೇ ಜೋಡಿಯ ಬರ್ಬರ ಹತ್ಯೆ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Hubli; ಕಾಲೇಜಿನಲ್ಲಿ ಕಾರ್ಪೊರೇಟರ್ ಪುತ್ರಿಯನ್ನು ಇರಿದು ಕೊಲೆ; ಯುವಕನ ಬಂಧನ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Bidar; ನಾಮಪತ್ರ ಸಲ್ಲಿಸಲು ಓಡೋಡಿ ಬಂದ ಖೂಬಾ

Billionaire Priyanka; Here is the property details of Satish Jarakiholi’s daughter

Belagavi; ಕೋಟ್ಯಾಧೀಶೆ ಪ್ರಿಯಾಂಕಾ; ಸತೀಶ್ ಜಾರಕಿಹೊಳಿ ಮಗಳ ಆಸ್ತಿ ವಿವರ ಇಲ್ಲಿದೆ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ

Dharwad; ದಿಂಗಾಲೇಶ್ವರ ಸ್ವಾಮೀಜಿ ನಾಮಪತ್ರ ಸಲ್ಲಿಕೆ: ಸಚಿವ ಜೋಶಿ ವಿರುದ್ದ ಗಂಭೀರ ಆರೋಪ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ayodhya ದೇಶದಲ್ಲಿ ಧರ್ಮ ಜಾಗೃತಿ ಪರ್ವ: ಪೇಜಾವರ ಶ್ರೀ

Ayodhya Ram Mandir ದೇಶದಲ್ಲಿ ಧರ್ಮ ಜಾಗೃತಿ ಪರ್ವ: ಪೇಜಾವರ ಶ್ರೀ

4-

BJP ರೈತಮೋರ್ಚಾ ರಾಜ್ಯಾಧ್ಯಕ್ಷ ಭವಿಷ್ಯವಾಣಿ;ಎಂಪಿ ಚುನಾವಣೆ ನಂತರ ಕಾಂಗ್ರೆಸ್ ದೇಶದಲ್ಲಿರೊಲ್ಲ

10-hosapete

Hosapete: ಮಕರ ಸಂಕ್ರಾತಿ: ದಕ್ಷಿಣಕಾಶಿ ಹಂಪಿಗೆ ಪ್ರವಾಸಿಗರ ದಂಡು!

Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ

Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ

vij ramu

Ayodhya: ರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್ ಬಹಿಷ್ಕಾರ: ಶ್ರೀರಾಮುಲು ಆಕ್ರೋಶ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

11

ಆಲೆಟ್ಟಿ: ಅರಣ್ಯಕ್ಕೆ ತಗುಲಿದ ಬೆಂಕಿ

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

Payaswini river: ಪಯಸ್ವಿನಿ ನದಿಯಲ್ಲಿ ಮುಳುಗಿ ಓರ್ವ ಸಾವು

death

Kollegala: ಕಾಡಾನೆ ದಾಳಿಗೆ ವ್ಯಕ್ತಿ ಬಲಿ

Tiger

Ponnampet; ಹುಲಿ ದಾಳಿಗೆ ಅಸ್ಸಾಂ ಮೂಲದ ಕಾರ್ಮಿಕ ಬಲಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.