ರಾಗಿ ಖರೀದಿ ವಿಳಂಬ ಧೋರಣೆಗೆ ಆಕ್ರೋಶ

ಹರಪನಹಳ್ಳಿ-ಕೊಟ್ಟೂರು ರಸ್ತೆ ಬಂದ್‌ ಮಾಡಿ ಪ್ರತಿಭಟನೆ

Team Udayavani, Jun 3, 2022, 2:57 PM IST

harapanahalli

ಹರಪನಹಳ್ಳಿ: ಪಟ್ಟಣದ ಎಪಿಎಂಸಿಯಲ್ಲಿ ರಾಗಿ ಖರೀದಿಸಲು ವಿಳಂಬ ಧೋರಣೆ ಅನುಸರಿಸಲಾಗುತ್ತಿದ್ದು, ಕೂಡಲೇ ಈ ವಿಳಂಬ ನೀತಿ ಕೈಬಿಟ್ಟು ರಾಗಿ ಖರೀದಿಸಬೇಕೆಂದು ಆಗ್ರಹಿಸಿ ರಾಗಿ ಬೆಳೆಗಾರರು ಹರಪನಹಳ್ಳಿ-ಕೊಟ್ಟೂರು ರಸ್ತೆಯನ್ನು ಬಂದ್‌ ಮಾಡಿ ಗುರುವಾರ ಪ್ರತಿಭಟನೆ ನಡೆಸಿದರು.

ರಾಗಿ ಖರೀದಿಸಲು ನೋಂದಣಿ ಮಾಡಿಕೊಂಡ ರೈತರಿಗೆ ಟೋಕನ್‌ ನೀಡಿದ್ದಾರೆ. ಟೋಕನ್‌ ಪ್ರಕಾರ ರೈತರ ರಾಗಿಯನ್ನು ತೆಗೆದುಕೊಳ್ಳಲಾಗುತ್ತಿದೆ. ಆದರೂ ಸಮರ್ಪಕವಾದ ಲಾರಿಗಳು ಇಲ್ಲದ ಕಾರಣ ರಾಗಿ ಚೀಲಹೊತ್ತ ಟ್ರ್ಯಾಕ್ಟರ್‌ಗಳು ಎಪಿಎಂಸಿ ಪ್ರಾಂಗಣದಲ್ಲಿ ಸಾಲುಗಟ್ಟಿ ನಿಂತು ಸ್ಥಳ ಇಲ್ಲದಂತಾಗಿ ರೈತರು ಪರದಾಡುವಂತಾಗಿತ್ತು.

ರೈತರಿಗೆ ಬಿತ್ತನೆ ಕಾರ್ಯಗಳು ಇದ್ದು, ಬಿತ್ತನೆಗೆ ಸಿದ್ಧತೆಗೊಳಿಸಲು ಟ್ರ್ಯಾಕ್ಟರ್‌ ಯಂತ್ರಗಳು ಇಲ್ಲದೆ ಕಳೆದ ನಾಲ್ಕು ಐದು ದಿನಗಳಿಂದ ರಾಗಿಯನ್ನು ಟ್ರ್ಯಾಕ್ಟರ್‌ನಲ್ಲಿ ತುಂಬಿಕೊಂಡು ಬಂದಿದ್ದೇವೆ. ಆದರೆ ಸಮರ್ಪಕವಾದ ಲಾರಿಗಳು ಇಲ್ಲದೆ ಕಾಲಹರಣ ಮಾಡಬೇಕಾದ ಪರಿಸ್ಥಿತಿ ಎದುರಾಗಿದೆ. ಕೂಡಲೇ ಸಂಬಂಧಿಸಿದ ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿ ಕ್ರಮವಹಿಸಬೇಕು ಎಂದು ರೈತ ಸಂಘಟನೆಗಳು ಹಾಗೂ ರೈತರು ಪಟ್ಟು ಹಿಡಿದು ರಸ್ತೆಯಲ್ಲಿ ವಾಹನಗಳನ್ನು ತಡೆದು ಪ್ರತಿಭಟನೆ ನಡೆಸಿದರು.

ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿದ ತಹಶೀಲ್ದಾರ್‌ ಡಾ| ಶಿವಕುಮಾರ ಬಿರಾದಾರ, ಸಿಪಿಐ ನಾಗರಾಜ ಕಮ್ಮಾರ, ಪಿಎಸ್‌ಐ ಸಿ.ಪ್ರಕಾಶ್, ಆಹಾರ ನಿರೀಕ್ಷಕ ಸಂಜಯ ಸೇರಿದಂತೆ ಇತರೆ ಅಧಿಕಾರಿಗಳು ರೈತರನ್ನು ಮನವೊಲಿಸಿ ರಸ್ತೆಯಲ್ಲಿ ವಾಹನಗಳ ಓಡಾಟಕ್ಕೆ ತೆರವುಗೊಳಿಸಿದರು.

ನಂತರ ಎಪಿಎಂಸಿ ಆವರಣದಲ್ಲಿಯೇ ರೈತರ ಸಮ್ಮುಖದಲ್ಲಿ ಲಾರಿ ಏಜೆನ್ಸಿದಾರರು ಹಾಗೂ ಸಂಬಂಧಿಸಿದ ಮೇಲಾಧಿಕಾರಿಗಳೊಂದಿಗೆ ದೂರವಾಣಿ ಮೂಲಕ ಸಂಪರ್ಕಿಸಿ ಸಮಸ್ಯೆ ತಿಳಿಗೊಳಿಸಲು ಮುಂದಾದರು, ಆದರೂ ರೈತರು ನೀವು ಏನಾದರೂ ಮಾಡಿಕೊಳ್ಳಿ. ನಮ್ಮ ರಾಗಿಯನ್ನು ತ್ವರಿತವಾಗಿ ಖರೀದಿಸಿ, ಕೃಷಿ ಚಟುವಟಿಕೆಗಳಿಗೆ ಅನುವು ಮಾಡಿಕೊಡಬೇಕು ಎಂದು ಒತ್ತಾಯಿಸಿದರು.

ನಂತರ ರೈತರನ್ನು ಸಮಾಧಾನ ಪಡಿಸಲು ಮುಂದಾದ ತಹಶೀಲ್ದಾರರು, ದಾವಣಗೆರೆ ಖರೀದಿ ಮೇಲಾಧಿಕಾರಿಗಳೊಂದಿಗೆ ಸಂಪರ್ಕಿಸಿ ತಾತ್ಕಾಲಿಕವಾಗಿ ರೈತರ ರಾಗಿ ಖರೀದಿಸಿ ಗೋದಾಮಿನಲ್ಲಿ ಸಂಗ್ರಹಿಸಿ ನಂತರ ಲಾರಿಗಳ ಮೂಲಕ ಸಾಗಿಸಲು ಮನವಿ ಮಾಡಿಕೊಂಡರು. ಎಪಿಎಂಸಿ ಅಧಿಕಾರಿಗಳೊಂದಿಗೆ ಚರ್ಚಿಸಿ ಆವರಣದಲ್ಲಿರುವ ಗೋದಾಮಿಗೆ ತುಂಬಲು ಸೂಚಿಸಿ ರಾಗಿ ಖರೀದಿಸಲು ಆರಂಭಿಸಿದರು.

ಭೈರಾಪುರ ಗ್ರಾಮದಲ್ಲಿ ರಾಗಿಯನ್ನು ಶೇಖರಿಸುವ ಗೋದಾಮಿನಲ್ಲಿ ಅನ್‌ಲೋಡ್‌ ಮಾಡಲು ತಡವಾಗುತ್ತಿದ್ದು, ಈ ಹಿನ್ನೆಲೆ ಲೋಡ್‌ ತುಂಬಿದ ಲಾರಿಗಳು ಅಲ್ಲಿಯೇ ಬಿಡುಬಿಟ್ಟ ಕಾರಣ ಲಾರಿಗಳ ಕೊರತೆಯಾಗಿ ಹರಪನಹಳ್ಳಿ ಕೇಂದ್ರದಲ್ಲಿ ಲಾರಿಗಳು ಇಲ್ಲದೆ ರಾಗಿ ತೂಕದ ಕೆಲಸ ವಿಳಂಬವಾಗಿದೆ ಎಂದು ಖರೀದಿದಾರರು ತಿಳಿಸಿದರು.

ಈ ಸಂದರ್ಭದಲ್ಲಿ ಖರೀದಿದಾರರಾದ ವೆಂಕೋಬ್‌, ನವೀನ್‌, ಲಾರಿ ಏಜೆನ್ಸಿದಾರರಾದ ಬೇಲ್ದಾರ ಭಾಷುಸಾಬ್‌, ಎಎಸ್‌ಐ ನಿಂಗಪ್ಪ, ಜಾತಪ್ಪ, ರುದ್ರಪ್ಪ, ರೈತ ಸಂಘಟನೆಯ ಮುಖಂಡರಾದ ದ್ಯಾಮಜ್ಜಿ ಹನುಮಂತಪ್ಪ, ಗೌರಿಹಳ್ಳಿ ಹನುಮಂತಪ್ಪ, ರೈತರಾದ ನಾಗಪ್ಪ, ಓಬಾಳಪುರ ಸಿದ್ದೇಶ್‌, ಹಮಾಲರ ಸಂಘದ ಅಧ್ಯಕ್ಷ ಚಿಕ್ಕೇರಿ ಬಸಪ್ಪ, ಸೇರಿದಂತೆ ವಿವಿಧ ಭಾಗಗಳಿಂದ ಆಗಮಿಸಿದ ರೈತರು ಇದ್ದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ayodhya ದೇಶದಲ್ಲಿ ಧರ್ಮ ಜಾಗೃತಿ ಪರ್ವ: ಪೇಜಾವರ ಶ್ರೀ

Ayodhya Ram Mandir ದೇಶದಲ್ಲಿ ಧರ್ಮ ಜಾಗೃತಿ ಪರ್ವ: ಪೇಜಾವರ ಶ್ರೀ

4-

BJP ರೈತಮೋರ್ಚಾ ರಾಜ್ಯಾಧ್ಯಕ್ಷ ಭವಿಷ್ಯವಾಣಿ;ಎಂಪಿ ಚುನಾವಣೆ ನಂತರ ಕಾಂಗ್ರೆಸ್ ದೇಶದಲ್ಲಿರೊಲ್ಲ

10-hosapete

Hosapete: ಮಕರ ಸಂಕ್ರಾತಿ: ದಕ್ಷಿಣಕಾಶಿ ಹಂಪಿಗೆ ಪ್ರವಾಸಿಗರ ದಂಡು!

Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ

Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ

vij ramu

Ayodhya: ರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್ ಬಹಿಷ್ಕಾರ: ಶ್ರೀರಾಮುಲು ಆಕ್ರೋಶ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.