ಹೊಸಪೇಟೆ: ಪುನೀತ್ ಪ್ರಥಮ ಪುಣ್ಯ ಸ್ಮರಣೆ: ಅಪ್ಪು ಅಭಿಮಾನಿಗಳಿಂದ ಅನ್ನಸಂತರ್ಪಣೆ
Team Udayavani, Oct 29, 2022, 11:36 AM IST
ಹೊಸಪೇಟೆ: ನಟ ಪುನೀತ್ ರಾಜಕುಮಾರ್ ಅವರ ಪ್ರಥಮ ವರ್ಷದ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಅಪ್ಪು ಅಭಿಮಾನಿಗಳು ಶನಿವಾರ ನಗರದ ಪುನೀತ್ ರಾಜಕುಮಾರ್ ಪುತ್ಥಳಿಗೆ ಮಾಲಾರ್ಪಣೆ ಗೈದು, ಗೌರವ ಸಲ್ಲಿಸಿದರು.
ಹಂಪಿ ಭುವನೇಶ್ವರಿ ದೇವಿ ದೇವಾಲಯದಿಂದ ಕನ್ನಡ ಜ್ಯೋತಿ ಹೊತ್ತು ತಂದ ಅಭಿಮಾನಿಗಳು, ಪುನೀತ್ ಭಾವಚಿತ್ರ ಪ್ರದರ್ಶನ ಮಾಡುತ್ತಾ ಅಪ್ಪು ಪರ ಜಯಘೋಷ ಮೊಳಗಿಸಿದರು. ಪ್ರವಾಸೋದ್ಯಮ ಆನಂದ ಸಿಂಗ್ ಮತ್ತು ಅವರ ಪುತ್ರ ಸಿದ್ದಾರ್ಥ್ ಸಿಂಗ್ ಅಪ್ಪು ಪ್ರತಿಮೆಗೆ ಮಾಲಾರ್ಪಣೆ ಮಾಡಿ ಗೌರವ ಸಲ್ಲಿಸಿದರು. ಕಾಂಗ್ರೆಸ್ ಮುಖಂಡ ಎಚ್.ಎನ್. ಮೊಹಮ್ಮದ್ ಇಮಾಮ್ ನಿಯಾಜಿ, ನದಾಪ್/ಪಿಂಜಾರ್ ಸಮುದಾಯ ಮುಖಂಡರು ಪುನೀತ್ ಪುತ್ಥಳಿಗೆ ಮಾಲಾರ್ಪಣೆ ಮಾಡಿದರು.
ಅನ್ನಸಂತರ್ಪಣೆ:
ನಟ ಪುನೀತ್ ರಾಜಕುಮಾರ್ ಅವರ ಪ್ರಥಮ ವರ್ಷದ ಪುಣ್ಯಸ್ಮರಣೆ ಹಿನ್ನೆಲೆಯಲ್ಲಿ ಅಪ್ಪು ಅಭಿಮಾನಿಗಳು ನಗರದ ಪುನೀತ್ ರಾಜಕುಮಾರ್ ವೃತ್ತ ಹಾಗೂ ಚಿತ್ತವಾಡ್ಗಿಯಲ್ಲಿ ಅನ್ನಸಂತರ್ಪಣೆ ನಡೆಯಲಿದೆ.
ಪುನೀತ್ ಪುತ್ಥಳಿಗೆ ನಿತ್ಯ ಪೂಜೆ:
ನಗರದಲ್ಲಿ ಪುನೀತ್ ರಾಜಕುಮಾರ್ ಅವರ ಪ್ರತಿಮೆಗೆ ಅವರ ಅಭಿಮಾನಿಯೊಬ್ಬರು ನಿತ್ಯ ಪೂಜೆ ಸಲ್ಲಿಸುವ ಮೂಲಕ ಗೌರವ ಸಲ್ಲಿಸುತ್ತಿದ್ದಾರೆ. ನಿತ್ಯ ಮಾಲಾರ್ಪಣೆ ಮಾಡುವ ಅಪ್ಪು ಅಭಿಮಾನಿ ಉಮೇಶ್ ಒಂದು ದಿನವೂ ಬಿಡದೇ ಪೂಜೆ ನೇರವೇರಿಸುವ ಮೂಲಕ ಅಭಿಮಾನ ಮೆರೆದಿದ್ದಾರೆ.
ಪ್ರತಿಮೆಯೊಂದಿಗೆ ಫೋಟೋ:
ನಗರದ ಬಸ್ ನಿಲ್ದಾಣದ ಹತ್ತಿರ ಇರುವ ಪುನೀತ್ ರಾಜಕುಮಾರ್ ಪ್ರತಿಮೆ ವೀಕ್ಷಣೆಗೆ ನಿತ್ಯ ಸಹಸ್ರಾರು ಜನರು ಆಗಮಿಸುತ್ತಿದ್ದಾರೆ. ಹಂಪಿಗೆ ಭೇಟಿ ನೀಡುವ ಪ್ರವಾಸಿಗರು, ಪುನೀತ್ ಪ್ರತಿಮೆಗೆ ಗೌರವ ಸಲ್ಲಿಸಿ, ಸೆಲ್ಪಿ ಕ್ಲಿಕ್ಕಿಸಿಕೊಂಡು ಖುಷಿ ಪಡುತ್ತಾರೆ.
ಸೈಕಲ್ ಕೊಡುಗೆ:
ನಟ ಪುನೀತ್ ಪ್ರಥಮ ವರ್ಷದ ಪುಣ್ಯಸ್ಮರಣೆ ನಿಮಿತ್ತ ಯುವ ಮುಖಂಡ ಸಿದ್ದಾರ್ಥ್ ಸಿಂಗ್, ಐದು ಬಡ ವಿದ್ಯಾರ್ಥಿನಿಯರಿಗೆ ಸೈಕಲ್ ಹಾಗೂ ಪುಸ್ತಕಗಳನ್ನು ಕೊಡುಗೆಯಾಗಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Ayodhya Ram Mandir ದೇಶದಲ್ಲಿ ಧರ್ಮ ಜಾಗೃತಿ ಪರ್ವ: ಪೇಜಾವರ ಶ್ರೀ
BJP ರೈತಮೋರ್ಚಾ ರಾಜ್ಯಾಧ್ಯಕ್ಷ ಭವಿಷ್ಯವಾಣಿ;ಎಂಪಿ ಚುನಾವಣೆ ನಂತರ ಕಾಂಗ್ರೆಸ್ ದೇಶದಲ್ಲಿರೊಲ್ಲ
Hosapete: ಮಕರ ಸಂಕ್ರಾತಿ: ದಕ್ಷಿಣಕಾಶಿ ಹಂಪಿಗೆ ಪ್ರವಾಸಿಗರ ದಂಡು!
Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ
MUST WATCH
ಹೊಸ ಸೇರ್ಪಡೆ
Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ
Father; ಚಂದ್ರು ನಿರ್ಮಾಣದ ‘ಫಾದರ್’ ಚಿತ್ರಕ್ಕೆ ಮುಹೂರ್ತ
Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ