ಓದು-ಬರಹವೇ ಜೀವನಕ್ಕೆ ಭದ್ರ ಬುನಾದಿ

ಗುರು-ಹಿರಿಯರ ಗೌರವಿಸಿದರೆ ಬದುಕು ಹಸನು

Team Udayavani, Apr 4, 2022, 4:05 PM IST

reading

ಹೂವಿನಹಡಗಲಿ: ವಿದ್ಯಾರ್ಥಿಗಳು ವಾಸ್ತವಿಕ ಪ್ರಜ್ಞೆ ಬೆಳೆಸಿಕೊಂಡು ಗುರು-ಹಿರಿಯರನ್ನು ಗೌರವಿಸಿ ಬದುಕು ಹಸನಾಗುತ್ತದೆ ಎಂದು ನಿವೃತ್ತ ಪ್ರಾಧ್ಯಾಪಕರಾದ ಎಂ.ಪಿ.ಎಂ. ದಯಾನಂದಸ್ವಾಮಿ ಹೇಳಿದರು. ಪಟ್ಟಣದ ಜಿಬಿಆರ್‌ ಪದವಿಪೂರ್ವ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಕರ್ನಾಟಕ ಸಂಘದ ಸಾಂಸ್ಕ್ರತಿಕ ಕಾರ್ಯಕ್ರಮಗಳ ಸಮಾರೋಪ ಹಾಗೂ ದತ್ತಿನಿಧಿ ಪುರಸ್ಕಾರ ವಿತರಣೆ ಕಾರ್ಯಕ್ರಮದಲ್ಲಿ ಅವರು ಉಪನ್ಯಾಸ ನೀಡಿದರು.

ವಿದ್ಯಾರ್ಥಿಗಳು ನಮ್ಮ ನೆಲ-ಜಲ ಪರಿಸರ, ಸಾಂಸ್ಕೃತಿಕ ಹಿರಿಮೆ ಅರಿಯಬೇಕು. ಬದಲಾದ ಕಾಲಘಟ್ಟಕ್ಕೆ ತಕ್ಕಂತೆ ಓದು ಮತ್ತು ಬರಹ ಕೌಶಲ ರೂಢಿಸಿಕೊಳ್ಳಬೇಕು. ನಿರ್ದಿಷ್ಟ ಗುರಿ ತಲುಪಲು ಕಠಿಣ ಪರಿಶ್ರಮದ ಅಭ್ಯಾಸವಿಲ್ಲದಿದ್ದರೆ ಗುರಿ ಮುಟ್ಟುವುದು ಕಷ್ಟ ಎಂದರು. ಆಧುನಿಕ ಬದುಕಿನ ಎಲ್ಲ ಸೌಲತ್ತುಗಳನ್ನು ಬಳಸಿಕೊಳ್ಳಬೇಕು. ಹೊರತು ಅವುಗಳ ದಾಸರಾಗಬಾರದು. ಸಂಸ್ಕಾರವಿಲ್ಲದ ಜೀವನಕ್ಕೆ ಅರ್ಥವಿಲ್ಲ, ಒಳ್ಳೆಯ ನಡೆ-ನುಡಿ ಮನೆಯಿಂದ, ಶಾಲೆಗಳಿಂದ ಆರಂಭವಾಗುತ್ತವೆ. ಏನೂಯಿಲ್ಲದ ಜನರು ಏನೆಲ್ಲ ಸಾಧನೆ ಮಾಡಿದ್ದಾರೆ. ಅಂತವರು ನಿಮಗೆ ದಾರಿದೀಪವಾಗಬೇಕು. ಓದು ಬರಹ ನಿಮ್ಮ ಜೀವನಕ್ಕೆ ಭದ್ರ ಬುನಾದಿಯಾಗಲಿ ಎಂದರು.

ವೀ.ವಿ ಸಂಘದ ಮಾಜಿ ಸಹಕಾರ್ಯದರ್ಶಿ ಐಗೋಳ ಚಿದಾನಂದ ಮಾತನಾಡಿ, ಪಠ್ಯಕ್ಕೆ ನೀಡುವ ಆದ್ಯತೆಯನ್ನು ಪಠ್ಯೇತರ ಚಟುವಟಿಕೆಗಳಿಗೂ ನೀಡಬೇಕು. ಗ್ರಾಮೀಣ ವಿದ್ಯಾರ್ಥಿಗಳ ಕಲಿಕೆಗೆ ಪೂರಕವಾಗಿ ವೀ.ವಿ. ಸಂಘ ಎಲ್ಲ ರೀತಿಯ ಆಧುನಿಕ ಸೌಕರ್ಯ ಕಲ್ಪಿಸಿದೆ. ಅವುಗಳನ್ನು ಬಳಸಿ ಕೊಂಡು ಶೈಕ್ಷಣಿಕ ಸಾಧನೆ ಮಾಡಬೇಕು ಎಂದು ಹೇಳಿದರು.

ಕಾಲೇಜು ಆಡಳಿತ ಮಂಡಳಿ ಅಧ್ಯಕ್ಷ ಅಕ್ಕಿ ಶಿವಕುಮಾರ್‌ ಅಧ್ಯಕ್ಷತೆ ವಹಿಸಿ ಮಾತನಾಡಿ, ಮಹಾವಿದ್ಯಾಲಯದಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಸೌಕರ್ಯ ಕಲ್ಪಿಸಿದ್ದೇವೆ. ಉತ್ತಮ ಅಭ್ಯಾಸದಿಂದ ಕಾಲೇಜಿಗೆ ಮತ್ತು ನಿಮ್ಮ ಕುಟುಂಬಕ್ಕೆ ಒಳ್ಳೆಯ ಹೆಸರನ್ನು ತರಲು ಶ್ರಮಿಸಿ ಎಂದರು.

ಕಾಲೇಜು ಆಡಳಿತ ಮಂಡಳಿ ಮಾಜಿ ಅಧ್ಯಕ್ಷ ಸಿ.ಮೋಹನರೆಡ್ಡಿ, ಪ್ರಾಚಾರ್ಯರಾದ ಎಸ್‌.ಎಸ್‌.ಪಾಟೀಲ್‌, ಶ್ರೀನಿವಾಸ ನಾಯಕ, ಆಡಳಿತ ಮಂಡಳಿ ಸದಸ್ಯರಾದ ಸಿ.ಕೆ. ಎಂ. ಬಸವಲಿಂಗಸ್ವಾಮಿ, ಕೋಡಿಹಳ್ಳಿ ಮುದುಕಪ್ಪ, ಎಸ್‌ .ಜಯಶೀಲ, ಎಂ.ಪಿ.ಎಂ. ವೀರಭದ್ರದೇವರು, ಕನ್ನಿಹಳ್ಳಿ ಮುದುಕಪ್ಪ, ಡಾ| ಪ್ರಕಾಶ ಅಟವಾಳಗಿ, ಉಪನ್ಯಾಸಕ ಅಮರೇಗೌಡ ಪಾಟೀಲ್‌ ಉಪಸ್ಥಿತರಿದ್ದರು.

ಕಳೆದ ಸಾಲಿನ ದ್ವಿತೀಯ ಪಿಯುಸಿಯಲ್ಲಿ ಅತೀಹೆಚ್ಚು ಅಂಕ ಗಳಿಸಿದ ರಿಯಾನಾ ಬೀಬಿ, ಹಾಲಿಯಾಸೌದಿ, ಜೆ.ರಾಜು, ನಯನಾ, ಕಾವ್ಯ, ಗಾಯಿತ್ರಿ, ಕೆ.ವಿಜಯಲಕ್ಷ್ಮೀ ಅವರಿಗೆ ದತ್ತಿ ಬಹುಮಾನ ನೀಡಿ ಗೌರವಿಸಲಾಯಿತು. ಉಪನ್ಯಾಸಕ ಎಂ.ಪಿ.ಎಂ. ಶಿವಪ್ರಕಾಶ ಸ್ವಾಗತಿಸಿದರು. ಪ್ರಾಚಾರ್ಯ ಶ್ರೀನಿವಾಸ ನಾಯಕ ಪ್ರಾಸ್ತಾವಿಕ ಮಾತನಾಡಿ ದರು. ಉಪನ್ಯಾಸಕ ಸೋಮಶೇಖರ ಅಥಿತಿ ಪರಿಚಯ ಮಾಡಿದರು. ಉಪನ್ಯಾಸಕ ಪಿ.ಎಂ. ಬಸವಲಿಂಗಯ್ಯ ನಿರೂಪಿಸಿದರು. ಉಪನ್ಯಾಸಕ ಪರಶುರಾಮ ವಂದಿಸಿದರು.

ಟಾಪ್ ನ್ಯೂಸ್

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ

Lok Sabha Election 2024; ನಿಮ್ಮ ಮತವನ್ನು ಮಾರಿಕೊಳ್ಳಬೇಡಿ: ಗಣ್ಯರ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ayodhya ದೇಶದಲ್ಲಿ ಧರ್ಮ ಜಾಗೃತಿ ಪರ್ವ: ಪೇಜಾವರ ಶ್ರೀ

Ayodhya Ram Mandir ದೇಶದಲ್ಲಿ ಧರ್ಮ ಜಾಗೃತಿ ಪರ್ವ: ಪೇಜಾವರ ಶ್ರೀ

4-

BJP ರೈತಮೋರ್ಚಾ ರಾಜ್ಯಾಧ್ಯಕ್ಷ ಭವಿಷ್ಯವಾಣಿ;ಎಂಪಿ ಚುನಾವಣೆ ನಂತರ ಕಾಂಗ್ರೆಸ್ ದೇಶದಲ್ಲಿರೊಲ್ಲ

10-hosapete

Hosapete: ಮಕರ ಸಂಕ್ರಾತಿ: ದಕ್ಷಿಣಕಾಶಿ ಹಂಪಿಗೆ ಪ್ರವಾಸಿಗರ ದಂಡು!

Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ

Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ

vij ramu

Ayodhya: ರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್ ಬಹಿಷ್ಕಾರ: ಶ್ರೀರಾಮುಲು ಆಕ್ರೋಶ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.