ಮನೆಗಳ್ಳತನ: 4 ವರ್ಷ ಕಾರಾಗೃಹ ಶಿಕ್ಷೆ
Team Udayavani, Apr 13, 2022, 3:09 PM IST
ಹೊಸಪೇಟೆ: ಮನೆಗಳ್ಳತನ ಆರೋಪಿಗೆ ನಗರದ ಪ್ರಧಾನ ಸಿ.ಜೆ.(ಕಿ.ವಿ) ಮತ್ತು ಜೆ.ಎಂ. ಎಫ್.ಸಿ. ನ್ಯಾಯಾಲಯದ ನ್ಯಾಯಾಧೀಶರಾದ ಕಿಶನ್ ಬಿ. ಮಾಡಲಗಿ ಅವರು 4 ವರ್ಷ ಕಾರಾಗೃಹ ಶಿಕ್ಷೆ ಮತ್ತು 3 ಸಾವಿರ ದಂಡ ವಿಧಿಸಿ ಮಂಗಳವಾರ ತೀರ್ಪು ಪ್ರಕಟಿಸಿದರು.
ನಗರದ ನಿವಾಸಿ ಗಿಡ್ಡ ಜಂಬಯ್ಯ ಜೈಲು ಶಿಕ್ಷೆಗೆ ಗುರಿಯಾದ ಮನೆಗಳ್ಳತನ ಆರೋಪಿ. 2013ರಲ್ಲಿ ನಗರದ ಬಳ್ಳಾರಿ ರಸ್ತೆಯಲ್ಲಿರುವ ಎಂ.ಬಿ.ಟಿ. ಪೆಟ್ರೋಲ್ ಬಂಕ್ ಎದುರುಗಡೆ ಎಳವರ ಓಣಿಯಲ್ಲಿ ವಾಸವಿರುವ ಎಂ.ಜೆ.ಜ್ಞಾನೇಶ್ವರ್ರಾವ್ ಎಂಬುವವರ ಮನೆ ಬಾಗಿಲು ಮುರಿದು ಮನೆಯಲ್ಲಿದ್ದ 1,50000 ಬೆಲೆಬಾಳುವ ಬೆಳ್ಳಿ, ಬಂಗಾರದ ಸಾಮಾನುಗಳು ಮತ್ತು ನಗದು ಹಣ ಕಳ್ಳತನ ಮಾಡಿಕೊಂಡು ಪರಾರಿಯಾಗಿದ್ದನು. ಹೊಸಪೇಟೆ ಪಟ್ಟಣ ಪೋಲಿಸ್ ಠಾಣೆ ಆರಕ್ಷಕ ನಿರೀಕ್ಷಕ ಶ್ರೀಧರ ದೊಡ್ಡಿ ಅವರು ಆರೋಪಿ ವಿರುದ್ಧ ಪ್ರಕರಣ ದಾಖಲು ಮಾಡಿಕೊಂಡು ನ್ಯಾಯಾಲಯದ ದೋಷಾರೋಪಣ ಪಟ್ಟಿ ಸಲ್ಲಿಸಿದ್ದರು.
ವಿಚಾರಣೆ ಕೈಗೆತ್ತಿಕೊಂಡ ನಂತರ ಹೊಸಪೇಟೆಯ ಪ್ರಧಾನ ಸಿ.ಜೆ.(ಕಿ.ವಿ) ಮತ್ತು ಜೆಎಂಎಫ್ಸಿ ನ್ಯಾಯಾಲಯದ ನ್ಯಾಯಾಧೀಶರಾದ ಕಿಶನ್ ಬಿ.ಮಾಡಲಗಿ ವಿಚಾರಣೆ ನಡೆಸಿ ಆರೋಪಿ ಗಿಡ್ಡ ಜಂಬಯ್ಯನಿಗೆ 4 ವರ್ಷ ಕಾರಾಗೃಹ ಶಿಕ್ಷೆ ಮತ್ತು 3 ಸಾವಿರ ದಂಡ ಕಟ್ಟತಕ್ಕದ್ದು. ಆರೋಪಿತನು ದಂಡ ಕಟ್ಟಲು ವಿಫಲವಾದರೆ 2 ತಿಂಗಳು ಸಾದಾ ಶಿಕ್ಷೆಯನ್ನು ಅನುಭವಿಸತಕ್ಕದ್ದು ಎಂದು ತೀರ್ಪು ನೀಡಿದ್ದಾರೆ.
ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕರಾದ ಗೀತಾ ಎಸ್. ಮಿರಜಕರ ಅವರು ವಾದ ಮಂಡಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ayodhya Ram Mandir ದೇಶದಲ್ಲಿ ಧರ್ಮ ಜಾಗೃತಿ ಪರ್ವ: ಪೇಜಾವರ ಶ್ರೀ
BJP ರೈತಮೋರ್ಚಾ ರಾಜ್ಯಾಧ್ಯಕ್ಷ ಭವಿಷ್ಯವಾಣಿ;ಎಂಪಿ ಚುನಾವಣೆ ನಂತರ ಕಾಂಗ್ರೆಸ್ ದೇಶದಲ್ಲಿರೊಲ್ಲ
Hosapete: ಮಕರ ಸಂಕ್ರಾತಿ: ದಕ್ಷಿಣಕಾಶಿ ಹಂಪಿಗೆ ಪ್ರವಾಸಿಗರ ದಂಡು!
Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ
Ayodhya: ರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್ ಬಹಿಷ್ಕಾರ: ಶ್ರೀರಾಮುಲು ಆಕ್ರೋಶ