ಗಗನಕ್ಕೇರಿದ ಬೆಲೆಗಳ ನಡುವೆ ಸಂಕ್ರಾಂತಿಗೆ ಅದ್ದೂರಿ ಸ್ವಾಗತ
Team Udayavani, Jan 14, 2022, 8:26 PM IST
ದೊಡ್ಡಬಳ್ಳಾಪುರ: ಈ ಬಾರಿಯೂ ಹಬ್ಬಗಳಿಗೆ ಕೊರೊನಾ ಬಿಸಿ ತಟ್ಟುತ್ತಿದೆ. ಈ ನಡುವೆ ಸಂಕ್ರಾಂತಿ ಹಬ್ಬ ಆಗಮಿಸಿದ್ದು, ಹಬ್ಬದ ಆಚರಣೆಗೆ ಸಿದ್ಧತೆಗಳು ನಡೆಯುತ್ತಿವೆ. ದಿನೇ ದಿನೆ ಕೃಷಿಯಿಂದ ವಿಮುಖವಾಗುತ್ತಿರುವ ಇಂದಿನ ದಿನಗಳಲ್ಲಿ ಹಿಂದಿನ ಸಂಭ್ರಮಾ ಚರಣೆ ಇಲ್ಲದಿದ್ದರೂ, ಅಗತ್ಯ ಧಾನ್ಯ, ಹೂವು, ಹಣ್ಣುಗಳ ಗಗನಕ್ಕೇರಿರುವ ಬೆಲೆಗಳ ನಡುವೆ ಸಂಕ್ರಾಂತಿ ಹಬ್ಬವನ್ನು ಸ್ವಾಗತಿಸಬೇಕಿದೆ.
ಕೆ.ಜಿ. ಕಡಲೇಕಾಯಿ 80 ರೂ., ಎಳ್ಳು ಬೆಲ್ಲ ಕೆ.ಜಿ. ಗೆ 200ರೂ. ಗೆಣಸು 40 ರೂ., ಕಬ್ಬು ಜಳವೆಗೆ 60 ರೂ. ಅವರೇ ಕಾಯಿ ಕೆ.ಜಿ. ಗೆ 70 ರೂ., ಇದ್ದು ಬೆಲೆ ಹ ಬ್ಬ ಕ್ಕಾ ಗಿ ಹೆಚ್ಚಿವೆ. ಬೆಲೆ ಏರಿಕೆಯ ನಡುವೆಯೇ ನಗರದ ಮಾರುಕಟ್ಟೆ ಪ್ರದೇಶ ದಲ್ಲಿ ಕಬ್ಬು, ಗೆಣಸು, ಕಡಲೇ ಕಾಯಿ ಗಳ ಮಾರಾಟ ಭರದಿಂದ ಸಾಗಿತ್ತು. ಗಗನಕ್ಕೇರಿದ ಹೂವುಗಳ ಬೆಲೆ: ಸಂಕ್ರಾಂತಿ ಹಬ್ಬಕ್ಕೆ ಅಗತ್ಯವೆನಿಸಿದ ಅಕ್ಕಿ, ಬೇಳೆ, ಧಾನ್ಯಗಳ ಬೆಲೆಯೊಂದಿಗೆ ಹೂವು ಹಣ್ಣಿನ ಬೆಲೆ ಸಹ ಗಗನಕ್ಕೇರಿವೆ.
ಕಾಕಡ ಕೆ.ಜಿ.ಗೆ 500 ರೂ., ಕನಕಾಂಬರ ಕೆ.ಜಿ.ಗೆ ಸಾವಿರ ರೂ. ಇದ್ದರೆ ಶಾಮಂತಿಗೆ, ಗುಲಾಬಿ ಮೊದಲಾದ ಹೂವಿನ ಬೆಲೆ 200 ರೂ.ರವರೆಗೂ ಇವೆ. ತರಕಾರಿಗಳ ಬೆಲೆ ಸಹ ಹೆಚ್ಚಾಗಿವೆ. ತಾಲೂಕಿನಲ್ಲಿ ಇತ್ತೀಚಿನ ವರ್ಷಗಳಲ್ಲಿ ಕಬ್ಬು ಬೆಳೆಯುವುದೇ ಕಡಿಮೆಯಾ ಗಿದ್ದು, ಕಬ್ಬನ್ನು ಹೊರಗಿನಿಂದ ತಂದು ಮಾರಾಟ ಮಾಡಲಾಗುತ್ತಿದೆ.
ರಾಸುಗಳ ಮೆರವಣಿಗೆ: ಬೆಲೆಗಳ ಹೆಚ್ಚಳದ ನಡುವೆಯೂ ಸಂಕ್ರಾಂತಿ ಹಬ್ಬ ಮಾಡಲೇಬೇಕೆಂದು ನಾಗರಿಕರು ಹಬ್ಬದ ಅಗತ್ಯವಸ್ತುಗಳನ್ನು ಕೊಂಡು ಹೊಯ್ಯುತ್ತಿದ್ದ ದೃಶ್ಯ ಸಾಮಾನ್ಯವಾಗಿತ್ತು. ನಗರೀಕರಣದ ಪ್ರಭಾವವಿರುವ ಹಲವಾರು ಗ್ರಾಮೀಣ ಪ್ರದೇಶದಲ್ಲಿ ಕಿಚ್ಚು ಹಾಯಿಸುವುದು, ಸಂಕ್ರಾಂತಿಯ ರಾಸುಗಳ ಮೆರವಣಿಗೆ ಸಹ ಕೆಲ ವರ್ಷಗಳಿಂದ ಸ್ಥಗಿತಗೊಳ್ಳುತ್ತಿದ್ದು, ಸುಗ್ಗಿ ಸಂಭ್ರಮ ಕಳೆದುಕೊಳ್ಳುತ್ತಿರುವಂತೆ ಭಾಸವಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ayodhya Ram Mandir ದೇಶದಲ್ಲಿ ಧರ್ಮ ಜಾಗೃತಿ ಪರ್ವ: ಪೇಜಾವರ ಶ್ರೀ
BJP ರೈತಮೋರ್ಚಾ ರಾಜ್ಯಾಧ್ಯಕ್ಷ ಭವಿಷ್ಯವಾಣಿ;ಎಂಪಿ ಚುನಾವಣೆ ನಂತರ ಕಾಂಗ್ರೆಸ್ ದೇಶದಲ್ಲಿರೊಲ್ಲ
Hosapete: ಮಕರ ಸಂಕ್ರಾತಿ: ದಕ್ಷಿಣಕಾಶಿ ಹಂಪಿಗೆ ಪ್ರವಾಸಿಗರ ದಂಡು!
Hospet: ವೇಶ್ಯಾವಾಟಿಕೆ ಅಡ್ಡೆ ಮೇಲೆ ದಾಳಿ… ಲಾಡ್ಜ್ ಮಾಲೀಕ ಸೇರಿ ಇಬ್ಬರು ವಶಕ್ಕೆ
Ayodhya: ರಾಮಮಂದಿರ ಉದ್ಘಾಟನೆಗೆ ಕಾಂಗ್ರೆಸ್ ಬಹಿಷ್ಕಾರ: ಶ್ರೀರಾಮುಲು ಆಕ್ರೋಶ
MUST WATCH
ಹೊಸ ಸೇರ್ಪಡೆ
ಭಾರತದಲ್ಲಿ ರಿಲೀಸ್ಗೂ ಮುನ್ನ ʼಮಂಕಿ ಮ್ಯಾನ್ʼ ಹೆಚ್ ಡಿ ಕಾಪಿ ಲೀಕ್: ವಿಳಂಬ ಯಾಕೆ?
Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ
West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ