ಮತದಾನ ಜಾಗೃತಿಗಾಗಿ ಗೋಲಗುಮ್ಮಟ ಆವರಣದಲ್ಲಿ ಜಾಥಾ
ಸಾಂವಿಧಾನಿಕ ಹಕ್ಕನ್ನು ತಪ್ಪದೇ ಚಲಾಯಿಸಿ ಆಸೆ-ಆಮಿಷಗಳಿಗೆ ಬಲಿಯಾಗಿ ಮತ ಮಾರಿಕೊಳ್ಳಬೇಡಿ ವಿದ್ಯಾರ್ಥಿಗಳಿಂದ ಸಾರ್ವಜನಿಕರಿಗೆ ಕರ ಪತ್ರ ವಿತರಣೆ
Team Udayavani, Apr 21, 2019, 3:04 PM IST
ವಿಜಯಪುರ: ಗೋಲಗುಮ್ಮಟ ಆವರಣದಲ್ಲಿ ಮತದಾನ ಜಾಗೃತಿ ಜಾಥಾಕ್ಕೆ ಚಾಲನೆ ನೀಡಲಾಯಿತು.
ವಿಜಯಪುರ: ಲೋಕಸಭ ಚುನಾವಣೆ ಅಂಗವಾಗಿ ಏ.23ರಂದು ಜಿಲ್ಲೆಯಲ್ಲಿ ನಡೆಯಲಿರುವ ಮತದಾನದಲ್ಲಿ ಅರ್ಹ ಪ್ರತಿಯೊಬ್ಬರು ತಪ್ಪದೇ ಮತದಾನ ಮಾಡುವ ಜಾಗೃತಿಗಾಗಿ ಸಮೂಹ ಜಾಥಾಕ್ಕೆ ಚಾಲನೆ ನೀಡಲಾಯಿತು. ಶನಿವಾರ ನಗರದ ಐತಿಹಾಸಿಕ ಗೋಲಗುಮ್ಮಟ ಆವರಣದಲ್ಲಿ ಜಾಗೃತಿ ಜಾಥಕ್ಕೆ ಜಿಪಂ ಮುಖ್ಯ ಯೋಜನಾಧಿಕಾರಿ ಸಿ.ಬಿ. ಕುಂಬಾರ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕ ಮಹೇಶ ಪೋತದಾರ ಚಾಲನೆ ನೀಡಿದರು.
ಮೆಟ್ರಿಕ್ ನಂತರದ ಬಾಲಕಿಯರು ಹಾಗೂ ವೃತ್ತಿಪರ ಬಾಲಕಿಯರ ವಸತಿ ನಿಲಯಗಳ ವಿದ್ಯಾರ್ಥಿನಿಯರು, ಮತದಾನದ ಜಾಗೃತಿಗಾಗಿ ಕರಪತ್ರ ಹಂಚಿದರು. ಇದಲ್ಲದೇ ಐತಿಹಾಸಿಕ ಗೋಳಗುಮ್ಮಟದ ಮಾರ್ಗವಾಗಿ ಡಾ| ಬಿ.ಆರ್.
ಅಂಬೇಡ್ಕರ್ ವೃತ್ತ, ಬಸವೇಶ್ವರ ವೃತ್ತ, ಮಹಾತ್ಮ ಗಾಂಧೀಜಿ ವೃತ್ತದವರೆಗೆ ಜಾಥ ಮೂಲಕ ಜಾಗೃತಿ ಜಾಥಾ ನಡೆಯಿತು.
ಜಾಥಾದಲ್ಲಿ ವಿದ್ಯಾರ್ಥಿನಿಯರು ಉತ್ಸಾಹದಿಂದ
ಭಾಗವಹಿಸಿ ತಪ್ಪದೇ ಮತದಾನ ಮಾಡುವಂತೆ
ಮತದಾರರಲ್ಲಿ ಮನವಿ ಮಾಡಿದರು. ಜಾಥಾದಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸಹಾಯಕ ನಿರ್ದೇಶಕ ಸುಲೇಮಾನ್ ನದಾಫ್, ಎನ್.ಎಸ್.ಭೂಸಗೊಂಡ ಸೇರಿದಂತೆ ವಸತಿ ನಿಲಯಗಳ ವಾರ್ಡನ್ ಗಳು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ
ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ
Puttur ಎಲೆಕ್ಷನ್ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !
MUST WATCH
ಹೊಸ ಸೇರ್ಪಡೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ
Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ
ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು