ಜಿಲ್ಲೆಯಲ್ಲಿ ಬಿರುಗಾಳಿ-ಸಿಡಿಲು, ಮಳೆಗೆ ಭಾರಿ ಪ್ರಮಾಣದ ನಷ್ಟ


Team Udayavani, Jun 5, 2019, 10:40 AM IST

5-June-10

ವಿಜಯಪುರ: ಜಿಲ್ಲೆಯಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಬಿರುಗಾಳಿ-ಗುಡುಗು-ಸಿಡಿಲು ಸಹಿತದ ಮಳೆಗೆ ಭಾರಿ ಪ್ರಮಾಣದ ನಷ್ಟ ಸಂಭವಿಸಿದೆ. ಹಲವು ಕಡೆಗಳಲ್ಲಿ ಮರಗಳು, ವಿದ್ಯುತ್‌ ಕಂಬಗಳು, ರ್ಯೆತರು ಬೆಳೆ ತೋಟಗಾರಿಕೆ ಬೆಳೆಗಳು, 16 ಮನೆಗಳು ನೆಲಕಚ್ಚಿ ಲಕ್ಷಾಂತರ ರೂ. ನಷ್ಟವಾಗಿದೆ. 7 ಜಾನುವಾರುಗಳು ಜೀವ ಕಳೆದುಕೊಂಡಿವೆ.

ಸೋಮವಾರ ರಾತ್ರಿ ಸುರಿದ ಮಳೆಗೆ ವಿಜಯಪುರ ತಾಲೂಕಿನ ಶಿವಣಗಿ 4 ಕುರಿ, ಮಂಗಳವಾರದ ಮಳೆಗೆ ವಿಜಯಪುರ ತಾಲೂಕಿನ ಧನವಾಡಹಟ್ಟಿ ಗ್ರಾಮದಲ್ಲಿ ಸಿಡಿಲಿಗೆ 1 ಎತ್ತು, 1 ಎಮ್ಮೆ ಬಲಿಯಾಗಿದ್ದರೆ, ಮುದ್ದೇಬಿಹಾಳ ತಾಲೂಕಿನ ಕೋಳೂರು ಗ್ರಾಮದಲ್ಲಿ 1 ಎತ್ತು ಸೇರಿ 3 ಜಾನುವಾರು ಸೇರಿ ಎರಡು ದಿನದಲ್ಲಿ ಸುರಿದ ಮಳೆ, ಬಿರುಗಾಳಿ, ಸಿಡಿಲಿಗೆ ಒಟ್ಟು 7 ಜಾನುವಾರುಗಳು ಜೀವ ಕಳೆದುಕೊಂಡಿವೆ.

ವಿಜಯಪುರ ತಾಲೂಕಿನ ಶಿವಣಗಿ, ಹಡಗಲಿ, ಮದಭಾವಿ ತಾಂಡಾ ದಲ್ಲಿ 12 ಕಚ್ಚಾ ಮನೆಗಳು ಹಾನಿಗೀಡಾಗಿವೆ. ಮುದ್ದೇಬಿಹಾಳ, ತಾಳಿಕೋಟೆ ತಾಲೂಕಿನ ಮಸ್ಕನಾಳ, ಮೂಕಿಹಾಳ ತಲಾ ಒಂದೊಂದು ಮನೆ ಹಾನಿಗೀಡಾಗಿವೆ. ಬಬಲೇಶ್ವರ ತಾಲೂಕಿನ ದೂಡಿಹಾಳ ಗ್ರಾಮದಲ್ಲಿ ರೈತರೊಬ್ಬರ ತೋಟದಲ್ಲಿನ ಸುಮಾರು 200 ಬಾಳೆ ಬೆಳೆ ನೆಲಕಚ್ಚಿದ್ದು ಲಕ್ಷಾಂತರ ರೂ. ನಷ್ಟವಾಗಿದೆ.

ಬಸವನಬಾಗೇವಾಡಿ ತಾಲೂಕಿನ ಮಸಬಿನಾಳ ಗ್ರಾಮದಲ್ಲಿ 4ರಿಂದ 5 ರೇಷ್ಮೆ ಶೆಡ್‌ಗಳು ಸಂಪೂರ್ಣ ಹಾಳಾಗಿದ್ದು ಜೈನಾಪುರ ಗ್ರಾಮದ ಹೊಲದಲ್ಲಿ ತೋಳಗಳ ದಾಳಿಯಿಂದ ಹತ್ತು ಕುರಿಗಳು ಸಾವಿಗಾಡ ಘಟನೆ ಕೂಡಾ ಜರುಗಿದೆ. ಕುರಿಗಳ ಮಾಲೀಕ ಶಿವಪ್ಪ ಸಂಕನಾಳ ರಾತ್ರಿ ಸುರಿದ ಮಳೆಯಿಂದಾಗಿ ಮನೆಯಲ್ಲಿ ಉಳಿದುಕೊಂಡಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ.

ಇದಲ್ಲದೇ ಜಿಲ್ಲೆಯ ಹಲವು ಕಡೆಗಳಲ್ಲಿ ಭಾರಿ ಬಿರುಗಾಳಿಗೆ ಹಲವು ಕಡೆಗಳಲ್ಲಿ ಹತ್ತಾರು ಮರಗಳು ಧರೆಗುರುಳಿದ್ದರೆ, ಹತ್ತಾರು ವಿದ್ಯುತ್‌ ಕಂಬಗಳು ನೆಲಕಚ್ಚಿ, ವಿದ್ಯುತ್‌ ಸಂಪರ್ಕ ಕಡಿತಗೊಂಡಿದೆ.

•ಹೂವಿನಹಿಪ್ಪರಗಿ: ಹೂವಿನಹಿಪ್ಪರಗಿ ಸುತ್ತ ಮುತ್ತಲಿನ ಗ್ರಾಮಗಳಲ್ಲಿ ಸುರಿದ ಭಾರಿ ಮಳೆಯಿಂದ ಹಲವಡೆ ಗಿಡ ಮರಗಳು ನೆಲಕ್ಕೆ ಉರುಳಿ ವಿದ್ಯುತ್‌ ಕಂಬಗಳು ಮುರಿದು ತಂತಿ ಹರಿದು ನೆಲಕ್ಕೆ ಬಿದ್ದಿವೆ.

ಸಮೀಪದ ಕುದರಿ ಸಾಲವಾಡಗಿ, ಬೂದಿಹಾಳ, ಕಾಮನಕೇರಿ, ದಿಂಡವಾರ, ಗುಳಬಾಳ, ಯಾಳವಾರ, ಹುಣಿಶ್ಯಾಳ ಪಿ.ಬಿ. ಕರಿಭಂಟನಾಳ, ಅಗಸಬಾಳ, ರಾಮನಹಟ್ಟಿ ಸೇರಿದಂತೆ ಸುತ್ತಲಿನ ಗ್ರಾಮಗಳಲ್ಲಿ ಈ ವರ್ಷದ ಮುಂಗಾರಿನ ರೋಹಿಣಿ ಮಳೆರಾಯ ಉತ್ತಮವಾಗಿ ಸುರಿದು ರೈತರ ಮುಖ ಅರಳುವಂತೆ ಮಾಡಿದ್ದಾನೆ.

ಸುಮಾರು ಮೂರು ತಿಂಗಳಿನಿಂದ ಬೇಸಿಗೆ ಬೀರು ಬಿಸಿಲಿಗೆ ರೋಷಿ ಹೋಗಿದ್ದ ಜನತೆಗೆ ಸ್ವಲ್ಪ ಮಟ್ಟಿನ ನೆಮ್ಮದಿ ಸಿಕ್ಕಿದೆ. ಮಳೆಯಿಂದ ಅಲ್ಲಲ್ಲಿ ದನ ಕರುಗಳಿಗೆ ಮೇಯಲು ಮೇವು ಜತೆಗೆ ಕುಡಿಯಲಿ ನೀರು ಸಿಗುವಂತಾಗಿದೆ. ಇನ್ನೂ ಕೃಷಿ ಚಟುವಟಿಕೆಗಳಾದ ಕುಂಟಿ, ಮಡಿಕೆ, ಹರಗುವದು, ಕಟ್ಟಿಗೆ ಆರಿಸಿ ಭೂಮಿ ಸ್ವಚ್ಛಗೊಳಿಸುವುದು ಸೇರಿದಂತೆ ಇತರೇ ಕಾರ್ಯ ನಡೆಯಲಿವೆ. ಮಳೆಯಿಂದ ಬೂದಿಹಾಳ ಹಾಗೂ ಕುದರಿ ಸಾಲವಾಡಗಿ ನಡುವಿನ ಜೀನ ಹಳ್ಳ ಮೈದುಂಬಿ ಹರಿಯುವಂತಾಯಿತು.

ಇಂಚಗೇರಿ: ಗುಡುಗು ಬಿರುಗಾಳಿ ಸಹಿತ ಸುರಿದ ರೋಹಿಣಿ ಮಳೆ ಭೂಮಿಗೆ ತಂಪೆರೆದಿದೆ. ಕಳೆದ ಎರಡು ತಿಂಗಳಿನಿಂದ ಕಾಯ್ದ ತವೆಯಂತಾಗಿದ್ದ ಇಳೆ ತಂಪನ್ನು ಹೊರಸೂಸುತ್ತಿದೆ. ಸುಮಾರು 3 ಗಂಟೆಗಳ ಕಾಲ ಮುಗಿಲು ಕಡಿದು ಬೀಳುವಂತೆ ಸುರಿದ ಮಳೆಯಿಂದ ಹೊಲ ಗದ್ದೆಗಳಲ್ಲಿ ನೀರು ನಿಂತಿವೆ. ಕೆರೆ ಕಟ್ಟೆಗಳಿಗೆ ನೀರು ಹರಿದು ಬಂದಿದೆ. ಬಿರುಗಾಳಿಗೆ ಹಲವಾರು ಪತ್ರಾಸ್‌ ಮನೆಗಳ ಪತ್ರಾಸ್‌ಗಳು ಹಾರಿ ಹೋಗಿದ್ದರೆ ಕೆಲವೆಡೆ ಗಿಡ ಮರಗಳು ಧರೆಗುರುಳಿವೆ. ದೇವರನಿಂಬರಗಿ, ತದ್ದೇವಾಡಿ, ಹೊರ್ತಿ ಗ್ರಾಮದ ಸುತ್ತಮುತ್ತಲು ಸುಮಾರು 6 ಸೆಂ.ಮೀ. ಮಳೆಯಾಗಿದೆ. ಎಂದು ತಿಳಿದು ಬಂದಿದೆ.

ಟಾಪ್ ನ್ಯೂಸ್

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೆಟಿಯಾದ ಜಗದೀಶ್ ಶೆಟ್ಟರ್

Belagavi; ಬಸವಜಯ ಮೃತ್ಯುಂಜಯ ಸ್ವಾಮೀಜಿ ಭೇಟಿಯಾದ ಜಗದೀಶ್ ಶೆಟ್ಟರ್

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.