ರಫ್ತು ಉದ್ಯೋಗಕ್ಕಿದೆ ವಿಫುಲ ಅವಕಾಶ

ರಫ್ತು ಮಾಡುವ ಉದ್ಯಮಿಗಳಿಗಿದೆ ಸರ್ಕಾರದಿಂದ ವಿವಿಧ ಸೌಲಭ್ಯ: ಸಿದ್ದಣ್ಣ

Team Udayavani, Sep 15, 2019, 3:13 PM IST

15-Sepctember-21

ವಿಜಯಪುರ: ನಗರದಲ್ಲಿ ಹಮ್ಮಿಕೊಂಡಿದ್ದ ರಫ್ತ್ತು ಜಾಗೃತಿ ಕಾರ್ಯಕ್ರಮಕ್ಕೆ ಎಪಿಎಂಸಿ ಅಧ್ಯಕ್ಷ ಸಾಹೇಬಗೌಡ ಬಿರಾದಾರ ಚಾಲನೆ ನೀಡಿದರು.

ವಿಜಯಪುರ: ಈ ಭಾಗದಲ್ಲಿ ಕೃಷಿ ಹಾಗೂ ತೋಟಗಾರಿಕೆ ಉತ್ಪನ್ನಗಳನ್ನು ಸಂಸ್ಕರಿಸಿ ಆಕರ್ಷಕ ಪ್ಯಾಕೆಜಿನೊಂದಿಗೆ ರಫ್ತು ಮಾಡಲು ವಿಫುಲ ಅವಕಾಶಗಳಿದ್ದು ಇದರ ಸದುಪಯೋಗ ಪಡೆಯುವಂತೆ ಎಂದು ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಅಧ್ಯಕ್ಷ ಸಾಹೇಬಗೌಡ ಬಿರಾದಾರ ಸಲಹೆ ನೀಡಿದರು.

ನಗರದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಆವರಣದಲ್ಲಿ ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನ ಕೇಂದ್ರ ಬೆಂಗಳೂರು, ಡಿಜಿಎಫ್‌ಟಿ ಬೆಳಗಾವಿ, ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ಸಂಯುಕ್ತಾಶ್ರಯದಲ್ಲಿ ಹಮ್ಮಿಕೊಂಡಿದ್ದ ರಫ್ತು ಜಾಗೃತಿ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ವಿಜಯಪುರ ಜಿಲ್ಲೆಯಲ್ಲಿ ವಿವಿಧ ಕೃಷಿ ಉತ್ಪನ್ನಗಳನ್ನು ಬೆಳೆಸಲಾಗುತ್ತಿದ್ದು ಈ ಉತ್ಪನ್ನಗಳಿಗೆ ಮೌಲ್ಯವರ್ಧನೆ ಮಾಡಲು ರಫ್ತು ಬಹಳ ಅವಶ್ಯಕವಾಗಿದ್ದು, ರಫ್ತು ವ್ಯವಹಾರದ ಸದುಪಯೋಗ ಪಡೆಯುವಂತೆ ರೈತರು ಹಾಗೂ ಯುವ ಉದ್ಯಮಿಗಳಿಗೆ ಕಿವಿಮಾತು ಹೇಳಿದರು.

ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಟಿ. ಸಿದ್ದಣ್ಣ ಮಾತನಾಡಿ, ರಫ್ತು ಮಾಡುವ ಉದ್ಯಮಿಗಳಿಗೆ ಸರ್ಕಾರದಿಂದ ಅನೇಕ ಉತ್ತೇಜನಕಾರಿ ಸೌಲಭ್ಯಗಳಿವೆ. ಸರಕಾರದ ಸೌಲಭ್ಯಗಳ ಸದ್ಬಳಕೆ ಮೂಲಕ ಜಿಲ್ಲೆ ಹಾಗೂ ರಾಜ್ಯದ ಉದ್ಯಮ ಅಭಿವೃದ್ಧಿಗೆ ಕೊಡುಗೆ ನೀಡಿ ಎಂದರು.

ಜಿಲ್ಲಾ ಕೈಗಾರಿಕೆ ಮಾಲೀಕರ ಸಂಘದ ಅಧ್ಯಕ್ಷ ಎಸ್‌.ವಿ. ಪಾಟೀಲ ಮಾತನಾಡಿ, ಜಗತ್ತಿನಲ್ಲಿ ವೈವಿದ್ಯಮಯ ಕೃಷಿ ಉತ್ಪನ್ನಗಳಿಗೆ ಭಾರತ ಹೆಸರು ಪಡೆದಿದೆ. ಸಂಶೋಧನೆ, ತಾಂತ್ರಿಕ ಅಭಿವೃದ್ಧಿ ಹಾಗೂ ವಿದೇಶಗಳಿಗೆ ಬೇಕಾಗಿರುವಂತಹ ಪ್ಯಾಕೇಜಿಂಗ್‌ ಸೌಲಭ್ಯಗಳೊಂದಿಗೆ ರಫ್ತು ಮಾಡಲು ಇರುವ ಅವಕಾಶಗಳನ್ನು ಬಳಸಿಕೊಳ್ಳಬೇಕು ಎಂದು ಹೇಳಿದರು.

ಡಿಜಿಎಫ್‌ಟಿ ಬೆಳಗಾವಿಯ ವಿದೇಶ ವ್ಯಾಪಾರ ಅಭಿವೃದ್ಧಿ ಅಧಿಕಾರಿ ಪಿ.ಎಸ್‌.ಬಿ. ಶಾಸ್ತ್ರಿ ಮಾತನಾಡಿ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಮಾರುಕಟ್ಟೆ ಕಲ್ಪಿಸಲು ಜಾರಿಗೆ ತಂದ ವಿದೇಶಿ ರಫ್ತು ನೀತಿ 2015-20 ತುಂಬಾ ಅನುಕೂಲಕರವಾಗಿದ್ದು, ವಿದೇಶಿ ವ್ಯಾಪಾರ ನೀತಿ, ರಫ್ತು ಮಾಡಲು ಬೇಕಾಗಿರುವ ಪರವಾನಿಗೆಗಳು, ಬೇರೆ ಬೇರೆ ದೇಶಗಳಿಗಿರುವ ಆಮದು ನೀತಿ ಮುಂತಾದವುಗಳ ಬಗ್ಗೆ ಮಾಹಿತಿ ನೀಡಿದರು.

ಜಿಲ್ಲಾ ವಾಣಿಜ್ಯ, ಉದ್ಯಮ ಮತ್ತು ಕೃಷಿ ಸಂಸ್ಥೆ ಅಧ್ಯಕ್ಷ ಡಿ.ಎಸ್‌. ಗುಡ್ಡೋಡಗಿ ಮಾತನಾಡಿದರು. ಕಾರ್ಯಕ್ರಮದಲ್ಲಿ 100ಕ್ಕಿಂತ ಹೆಚ್ಚು ಕೈಗಾರಿಕೋದ್ಯಮಿಗಳು, ವರ್ತಕರು ಹಾಗೂ ಪ್ರಗತಿಪರ ರೈತರು ಭಾಗವಹಿಸಿದ್ದರು.

ಧಾರವಾಡ ವಿಶ್ವೇಶ್ವರಯ್ಯ ವ್ಯಾಪಾರ ಉತ್ತೇಜನ ಕೇಂದ್ರದ ಸಹಾಯಕ ನಿರ್ದೇಶಕ ಪದ್ಮಕಾಂತ ಸ್ವಾಗತಿಸಿದರು. ಜಿಲ್ಲಾ ಕೈಗಾರಿಕಾ ಕೇಂದ್ರದ ಸಹಾಯಕ ನಿರ್ದೇಶಕ ಅರ್ಜುನ ಭಜಂತ್ರಿ ವಂದಿಸಿದರು.

ಟಾಪ್ ನ್ಯೂಸ್

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

4-naxal-

Mangaluru: ಶರಣಾಗುವ ನಕ್ಸಲರಿಗೆ ಸಿಗಲಿದೆ 7.50 ಲ.ರೂ. ಪ್ರೋತ್ಸಾಹಧನ

3-blthgdy

Belthangady: ತುಮಕೂರು ತ್ರಿಬ್ಬಲ್ ಮರ್ಡರ್ ಪ್ರಕರಣ;ಮನೆಮಂದಿಗೆ ಇಂದು ತಲುಪಿದ ಮೃತದೇಹ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Jammu-Srinagar National Highway; A taxi rolled into a gorge

Jammu-Srinagar National Highway; ಕಮರಿಗೆ ಉರುಳಿದ ಟ್ಯಾಕ್ಸಿ; ಹತ್ತು ಜನರು ಸಾವು

7-brijesh

Brijesh Chowta; ಎ.4: ಅಧಿಕೃತ ನಾಮಪತ್ರ ಸಲ್ಲಿಕೆ; ಕ್ಯಾ| ಚೌಟರ ಆಸ್ತಿ ಇಷ್ಟು !

Son claims Mukhtar Ansari was given ‘slow poison’

Banda; ಗ್ಯಾಂಗ್‌ಸ್ಟರ್‌ ಮುಖ್ತಾರ್ ಅನ್ಸಾರಿಗೆ ವಿಷಪ್ರಾಶನ: ಪುತ್ರನ ಆರೋಪ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

Kannada Cinema: ತೆರೆಗೆ ಬಂತು ಯುವ, ತಾರಿಣಿ

Kannada Cinema: ತೆರೆಗೆ ಬಂತು ಯುವ, ತಾರಿಣಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.