ಚಡಚಣದಲ್ಲಿ 80 ಲಕ್ಷ ದರೋಡೆ ಪ್ರಕರಣ: ನಾಲ್ವರ ಬಂಧನ

ಪ್ರಕರಣ ಭೇದಿಸಿದ ಪೊಲೀಸರ ತಂಡಕ್ಕೆ ಲಕ್ಷ ರೂ. ಬಹುಮಾನ

Team Udayavani, May 26, 2019, 4:23 PM IST

26-May-33

ವಿಜಯಪುರ: ಚಡಚಣ ಜವಳಿ ವರ್ತಕರಿಂದ ದರೋಡೆ ಮಾಡಿದ್ದ ಹಣದ ಸಮೇತ ಜಿಲ್ಲೆಯ ಪೊಲೀಸರು ಆರೋಪಿಗಳನ್ನು ಬಂಧಿಸಿದ್ದಾರೆ.

ವಿಜಯಪುರ: ಜಿಲ್ಲೆಯ ಚಡಚಣ ಪಟ್ಟಣದಲ್ಲಿ ಜವಳಿ ವರ್ತಕರ ಮೇಲೆ ಹಲ್ಲೆ ನಡೆಸಿ 80 ಲಕ್ಷ ರೂ. ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳನ್ನು ಜಿಲ್ಲೆಯ ಪೊಲೀಸರು ಬಂಧಿಸಿದ್ದಾರೆ.ಪ್ರಕರಣವನ್ನು ತ್ವರಿತವಾಗಿ ಭೇದಿಸಿ, ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿರುವ ಪೊಲೀಸ್‌ ತಂಡಕ್ಕೆ 1 ಲಕ್ಷ ರೂ. ಬಹುಮಾನ ಘೋಷಿಸಲಾಗಿದೆ.

ಚಡಚಣ ಪಟ್ಟಣದಲ್ಲಿ ಮೇ 9ರಂದು ಜವಳಿ ಉದ್ಯಮಿ ಅಜೀತ ಮುತ್ತಿನ ಹಾಗೂ ಅವರ ಅಂಗಡಿ ವ್ಯವಸ್ಥಾಪಕ ಸಂತೋಷ ಕಾಮಗೊಂಡ ಮೇಲೆ ಹಲ್ಲೆ ನಡೆಸಿ 80 ಲಕ್ಷ ರೂ. ನಗದು ದರೋಡೆ ಮಾಡಿದ ಕೃತ್ಯ ಜರುಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಎಎಸ್ಪಿ ಬಿ.ಎಸ್‌. ನ್ಯಾಮಗೌಡ ನೇತೃತ್ವದ ಪೊಲೀಸ್‌ ತಂಡ ನಟೋರಿಯಸ್‌ ರವಿ ಶಾಂತಪ್ಪ ಶಿಂಧೆ ನೇತೃತ್ವದ ಕಿರಣ ಶ್ರೀಶೈಲ ವಾಳಖೀಂಡಿ, ಗಂಗಾರಾಮ ಮಾಳಪ್ಪ ಕೋಳಿ, ಭೀಮು ಶಾಂತಪ್ಪ ಶಿಂಧೆ ಅವರನ್ನು ಬಂಧಿಸಿದ್ದಾರೆ. ಕೃತ್ಯದಲ್ಲಿ ಭಾಗಿಯಾಗಿರುವ ಇನ್ನೂ ಇಬ್ಬರು ಆರೋಪಿಗಳು ತಲೆ ಮರೆಸಿಕೊಂಡಿದ್ದು ಬಂಧನಕ್ಕೆ ಬಲೆ ಬೀಸಲಾಗಿದೆ.

ಶನಿವಾರ ಸಂಜೆ ಮಾಧ್ಯಮಗಳಿಗೆ ಘಟನೆ ಕುರಿತು ಮಾಹಿತಿ ನೀಡಿದ ಎಸ್ಪಿ ಪ್ರಕಾಶ ನಿಕ್ಕಂ, ಚಡಚಣದ ಜವಳಿ ವರ್ತಕ ಅಜೀತ ನೇಮಿನಾಥ ಮುತ್ತಿನ ಹಾಗೂ ವ್ಯವಸ್ಥಾಪಕ ಸಂತೋಷ ಕಾಮಗೊಂಡ ಅವರ ಮೇಲೆ ಬಂಧಿತ ದರೋಡೆಕೋರರ ತಂಡ ಖಾರದ ಪುಡಿ ಎರಚಿ, ಹಲ್ಲೆ ನಡೆಸಿ 80 ಲಕ್ಷ ರೂ. ನಗದು ದೋಚಿ ಪರಾರಿಯಾಗಿದ್ದರು. ಕೃತ್ಯದ ತನಿಖೆಗೆ ರಚಿಸಲಾಗಿದ್ದ ಎಎಸ್ಪಿ ಬಿ.ಎಸ್‌. ನ್ಯಾಮಗೌಡ ನೇತೃತ್ವದ ತನಿಖಾ ತಂಡ ಆರೋಪಿಗಳ ಬಂಧನಕ್ಕಾಗಿ ಪುಣೆ, ಮುಂಬೈ, ಸೊಲ್ಲಾಪುರ ಸೇರಿದಂತೆ ಹಲವೆಡೆ ಸುತ್ತಿ, ಆರೋಪಿಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದೆ ಎಂದು ಸಂತಸ ವ್ಯಕ್ತಪಡಿಸಿದರು.

ಬಂಧಿತ ಆರೋಪಿಗಳಿಂದ ದರೋಡೆ ಮಾಡಿದ 80 ಲಕ್ಷ ರೂ. ನಗದು ಹಣದಲ್ಲಿ 54,85,500 ರೂ. ಹಣವನ್ನು ಮಾತ್ರ ವಶಕ್ಕೆ ಪಡೆಯಲಾಗಿದೆ. ದರೋಡೆ ಮಾಡಿದ ಹಣದಲ್ಲಿ ಆರೋಪಿ 9 ಲಕ್ಷ ರೂ. ಮೌಲ್ಯದ ಮಹೀಂದ್ರಾ ಎಕ್ಸ್‌ಯುವಿ 300 ವಾಹನ ಖರೀದಿಸಿದ್ದು ಇದನ್ನೂ ವಶಕ್ಕೆ ಪಡೆಯಲಾಗಿದೆ. ಕೃತ್ಯಕ್ಕೆ ಬಳಸಿದ ಮಾರಕಾಸ್ತ್ರ ಸೇರಿದಂತೆ ಒಟ್ಟು 63,85,500 ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಲಾಗಿದೆ ಎಂದು ವಿವರಿಸಿದರು.

ಬಂಧಿತರಲ್ಲಿ ಪ್ರಮುಖ ಆರೋಪಿ ರವಿ ಶಾಂತಪ್ಪ ಶಿಂಧೆ ನಟೋರಿಯಸ್‌ ವ್ಯಕ್ತಿಯಾಗಿದ್ದು, ಈತನ ಮೇಲೆ ಚಡಚಣ ಮಾತ್ರವಲ್ಲದೇ ಬೆಳಗಾವಿ ಜಿಲ್ಲೆಯ ಆಥಣಿ, ರಾಯಬಾಗ ಸೇರಿದಂತೆ ಹಲವು ಪೊಲೀಸ್‌ ಠಾಣೆಗಳಲ್ಲಿ ಪ್ರಕರಣ ದಾಖಲಾಗಿವೆ.

ಕೃತ್ಯ ನಡೆಸುವ ಮುನ್ನ ಸಾಕಷ್ಟು ಜವಳಿ ವ್ಯಾಪಾರಿಗಳ ದಿನಚರಿ ಕುರಿತು ಸಾಕಷ್ಟು ಮಾಹಿತಿ ಸಂಗ್ರಹಿಸಿ ಕೃತ್ಯ ಎಸಲಾಗಿದೆ. ಮುತ್ತಿನ ಜವಳಿ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ಕಿರಣ ವಾಳಖೀಂಡಿ ಹಾಗೂ ಗಂಗಾರಾಮ ಮಾಳಪ್ಪ ಅವರು ಪ್ರಮುಖ ಆರೋಪಿಗೆ ಎಲ್ಲ ಮಾಹಿತಿ ನೀಡುತ್ತಿದ್ದರು ಎಂಬ ಮಾಹಿತಿಯಿದೆ. ಈ ಹಿನ್ನೆಲೆಯಲ್ಲಿ ಈ ಇಬ್ಬರನ್ನೂ ಬಂಧಿಸಲಾಗಿದೆ ಎಂದು ವಿವರಿಸಿದರು.

ಅತ್ಯಂತ ಗಂಭೀರ ಪ್ರಕರಣವಾಗಿದ್ದ ಇದನ್ನು ತ್ವರಿತ ಗತಿಯಲ್ಲಿ ಭೇದಿಸಿ, ಆರೋಪಿಗಳನ್ನು ಬಂಧಿಸುವಲ್ಲಿ ಎಎಸ್‌ಪಿ ಬಿ.ಎಸ್‌. ನೇಮಗೌಡ ಅವರ ತಂಡ ಯಶಸ್ವಿಯಾಗಿದ್ದು, ತನಿಖಾ ತಂಡಕ್ಕೆ 1 ಲಕ್ಷ ರೂ. ಬಹುಮಾ ಘೋಷಿಸಲಾಗಿದೆ ಎಂದು ಮಾಹಿತಿ ನೀಡಿದರು,

ತನಿಖಾ ತಂಡದಲ್ಲಿ ಡಿವೈಎಸ್‌ಪಿ ಎಂ.ಬಿ. ಸಂಕದ, ಡಿವೈಎಸ್‌ಪಿ ಅಶೋಕ, ಸಿಪಿಐ ಭೀಮನಗೌಡ ಪಾಟೀಲ, ಎಚ್.ಆರ್‌. ಪಾಟೀಲ, ಎಸ್‌.ಎಸ್‌. ಶಿಮಾನಿ, ಕುಮಾರ ಹಿತ್ತಲಮನಿ, ರವಿ ಯಡವಣ್ಣವರ, ಆರ್‌.ಎಚ್. ಡೋಣಗಿ, ಬಿ.ಎಚ್. ಅಂಬಿಗೇರ, ಎಸ್‌.ಡಿ. ದೊಡಮನಿ, ಬಿ.ಎನ್‌. ಚಿಂಚೋಳಿ, ಎಂ.ಎ. ಹಳ್ಳಿ, ಕೆ.ಬಿ. ಪಾಟೀಲ, ಎಸ್‌.ಡಿ.ಚಾವರ, ಎಂ.ಎನ್‌. ಹೊನಕಟ್ಟಿ, ಜಿ.ಕೆ. ಕೋರೆ, ಎಂ.ಡಿ. ಕಕಮರಿ, ಆರ್‌.ಎಸ್‌. ಪಡಗನ್ನವರ, ಎಸ್‌.ಜಿ. ಗುಂಡಣ್ಣ, ಸಿ.ಡಿ. ಹತ್ತರಕಿ, ಸುನೀಲ ಗವಳಿ ತನಿಖಾ ತಂಡದಲ್ಲಿದ್ದರು ಎಂದು ವಿವರಿಸಿದರು.

ಟಾಪ್ ನ್ಯೂಸ್

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

Rajeev Chandrashekhar

Corrupt ಡಿಕೆಶಿ ಸರ್ಟಿಫಿಕೆಟ್‌ ಬೇಕಾಗಿಲ್ಲ: ಕೇಂದ್ರ ಸಚಿವ ರಾಜೀವ್‌ ತಿರುಗೇಟು

1-wqewqe

2014 ಭರವಸೆ, 2019 ನಂಬಿಕೆ, 2024ರಲ್ಲಿ ಗ್ಯಾರಂಟಿ: ಮೋದಿ

mamata

CAA, NRC ರದ್ದು: ದೀದಿ ಶಪಥ ಪ್ರಣಾಳಿಕೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

CAR-D

Sullia: ರಸ್ತೆ ಬದಿ ನಿಲ್ಲಿಸಿದ್ದ ಕಾರಿಗೆ ಕಂಟೈನರ್‌ ಢಿಕ್ಕಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಚುನಾವಣ ಬಾಂಡ್‌ ವಿಶ್ವದ ಅತಿದೊಡ್ಡ ಹಗರಣ: ರಾಹುಲ್‌

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಕೋಟ ಅವರನ್ನು 2 ಲಕ್ಷ ಮತಗಳ ಅಂತರದಿಂದ ಗೆಲ್ಲಿಸಿ: ದೇವೇಗೌಡ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Supreme Court

Supreme Courtನಲ್ಲಿ ಪಿವಿಎನ್‌, ಮನಮೋಹನ್‌ ಸಿಂಗ್‌ಗೆ ಕೇಂದ್ರ ಸರಕಾರ ಶ್ಲಾಘನೆ

suicide

ಕಾಶ್ಮೀರದಲ್ಲಿ ಗುಂಡು ಹಾರಿಸಿ ಬಿಹಾರ ಕಾರ್ಮಿಕನ ಹತ್ಯೆ  

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.