ಬಸವನಾಡಿನಲ್ಲಿ ಹೆಚ್ಚಿದ ಸಹಕಾರಿ ಸಿರಿ

ಅತ್ಯಂತ ಯಶಸ್ವಿ ಹಾದಿಯಲ್ಲಿವೆ 286 ಪಿಕೆಪಿಎಸ್‌2 ಲಕ್ಷ ಅನ್ನದಾತರಿಗೆ 822 ಕೋಟಿ ರೂ. ಕೃಷಿ ಸಾಲ

Team Udayavani, Nov 14, 2019, 11:57 AM IST

14-November-6

„ಜಿ.ಎಸ್‌. ಕಮತರ
ವಿಜಯಪುರ:
ಕನ್ನಡ ಸಾರಸ್ವತ ಲೋಕಕ್ಕೆ ವಚನ ಸಾಹಿತ್ಯ ಮೂಲಕ ಕೊಡುಗೆ ನೀಡಿರುವ ಬಸವನಾಡು ಸಹಕಾರಿ ರಂಗದಲ್ಲೂ ತನ್ನ ಛಾಪು ಮೂಡಿಸಿದೆ. ಜಿಲ್ಲೆಯಲ್ಲಿ ಹಲವು ಸಹಕಾರಿ ಬ್ಯಾಂಕ್‌ಗಳು ಶತಮಾನೋತ್ಸವ ಆಚರಿಕೊಂಡಿರುವುದೇ ಇದಕ್ಕೆ ಜೀವಂತ ನಿದರ್ಶನ.

ಜಿಲ್ಲೆಯಲ್ಲಿ ಆದರಲ್ಲೂ ಕೃಷಿ ವ್ಯವಸ್ಥೆಯಲ್ಲಿ ಅನ್ನದಾತರಿಗೆ ತುರ್ತು ಆರ್ಥಿಕ ಪರಿಸ್ಥಿತಿ ಸಂದರ್ಭದಲ್ಲಿ ಹಣಕಾಸು ಸಮಸ್ಯೆ ನೀಗಿಸುವಲ್ಲಿ ಪ್ರಮುಖ ಪಾತ್ರ ವಹಿಸಿದ್ದು, ವಚನ ಪಿತಾಮಹ ಎಂದೇ ಕೀರ್ತಿ ಪಡೆದ ರಾವ್‌ ಬಹಾದ್ದೂರ್‌ ಡಾ| ಫ.ಗು. ಹಳಕಟ್ಟಿ ಅವರ ಸಾರಥ್ಯದಲ್ಲಿ ಸ್ಥಾಪಿತವಾಗಿದ್ದ ಸಿದ್ದೇಶ್ವರ ಸಹಕಾರಿ ಬ್ಯಾಂಕ್‌ ಈಗಾಗಲೇ ಶತಮಾನೋತ್ಸವ ಆಚರಿಸಿಕೊಂಡಿದ್ದು, ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಶತಕದ ಹೊಸ್ತಿಲಲ್ಲಿ ನಿಂತಿರುವುದು ಬಸವನಾಡು ಸಹಕಾರಿ ರಂಗಕ್ಕೆ ನೀಡಿರುವ ಅನುಪಮ ಸೇವೆಯ ಪ್ರತೀಕ.

ಜಿಲ್ಲೆಯಲ್ಲಿ 288 ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ (ಪಿಕೆಪಿಎಸ್‌) ಬ್ಯಾಂಕ್‌ಗಳಲ್ಲಿ ಹಲವು ಕಾರಣಗಳಿಂದ ಹಿನ್ನಡೆ ಅನುಭವಿಸುತ್ತಿರುವ 2 ಸಂಸ್ಥೆಗಳನ್ನು ಹೊರತು ಪಡಿಸಿದರೆ ಜಿಲ್ಲೆಯ ಸಹಕಾರಿ ವ್ಯವಸ್ಥೆಯಲ್ಲಿ 286 ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಬ್ಯಾಂಕ್‌ಗಳು ಅತ್ಯಂತ ಯಶಸ್ವಿ ಹಾದಿಯಲ್ಲಿವೆ. 2 ಲಕ್ಷ ಅನ್ನದಾತರಿಗೆ ಪಿಕೆಪಿಎಸ್‌ ಬ್ಯಾಂಕ್‌ಗಳು ಈವರೆಗೆ 822 ಕೋಟಿ ರೂ. ಕೃಷಿ ಸಾಲ ನೀಡಿವೆ. ಬಹುತೇಕ ಸಹಕಾರಿ ಸಂಘಗಳು ಸ್ವಂತ ಕಟ್ಟಡ ಹಾಗೂ ದಾಸ್ತಾನು ಮಳಿಗೆ, ಗೋದಾಮು ಹೊಂದಿವೆ.

ಜಿಲ್ಲೆಯ ಉಕ್ಕಲಿ, ತಿಕೋಟಾ, ಹೊರ್ತಿ, ಕುದರಿಸಾಲವಾಡಗಿ, ಹಿಟ್ನಳ್ಳಿ ಸೇರಿದಂತೆ ಹಲವು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘಗಳು ಗರಿಷ್ಠ ಮಟ್ಟದ ಆಡಳಿತ ನಿರ್ವಹಣೆಯಿಂದ ಮಾದರಿ ಎನಿಸಿವೆ. ಇದು ಜಿಲ್ಲೆಯಲ್ಲಿನ ಸಹಕಾರಿ ವ್ಯವಸ್ಥೆಯ ಬಲವರ್ಧನೆಯ ಜೀವಂತ ನಿದರ್ಶನ.

ಕೃಷಿ ಹೊರತಾಗಿ ಇತರೆ ಸಹಕಾರಿ ವಲಯದಲ್ಲಿರುವ 1,221 ವಿವಿಧ ಸಹಕಾರಿ ಬ್ಯಾಂಕ್‌ ಗಳಲ್ಲಿ ಕಾರಣಾಂತರಗಳಿಂದ 29 ಬ್ಯಾಂಕ್‌ಗಳು ಸ್ಥಗಿತಗೊಂಡಿದ್ದರೆ, 125 ಬ್ಯಾಂಕ್‌ಗಳು ಲಿಕ್ವಿಡೇಶನ್‌ ಆಗಿವೆ. 21 ಅರ್ಬನ್‌ ಬ್ಯಾಂಕ್‌ಗಳಲ್ಲಿ 19 ಬ್ಯಾಂಕ್‌ಗಳು ಅತ್ಯಂತ ಸುಸ್ಥಿತಿಯಲ್ಲಿ ವಹಿವಾಟು ನಡೆಸುತ್ತಿವೆ. ಇದರ ಹೊರತಾಗಿಯೂ 1,350 ಸಹಕಾರಿ ಬ್ಯಾಂಕ್‌ಗಳು ಜಿಲ್ಲೆಯ ಆರ್ಥಿಕ ಸ್ಥಿತಿ ಸುಧಾರಿಸುವಲ್ಲಿ ನೆರವಾಗಿವೆ.

ಕಳೆದ ಮಾರ್ಚ್‌ ಅಂತ್ಯಕ್ಕೆ ಜಿಲ್ಲೆಯ 19 ಅರ್ಬನ್‌ ಬ್ಯಾಂಕ್‌ಗಳು 1,49,841 ಸದಸ್ಯರನ್ನು ಹೊಂದಿದ್ದು, 1,763.88 ಕೋಟಿ ರೂ. ದುಡಿಯುವ ಬಂಡವಾಳ ಹೊಂದಿವೆ. 995.55 ಕೋಟಿ ರೂ. ಸಾಲ ನೀಡುವ ಮೂಲಕ ದುರ್ಬಲರ ಆರ್ಥಿಕ ಪ್ರಗತಿಗೆ ಸಹಕಾರ ನೀಡಿವೆ.

ಜಿಲ್ಲೆಯ ಸಹಕಾರಿ ವ್ಯವಸ್ಥೆಗೆ ಮಹಿಳಾ ಸ್ವಸಹಾಯ ಗುಂಪುಗಳ ಕೊಡುಗೆಯೂ ಅನನ್ಯವಾಗಿದೆ. ಜಿಲ್ಲೆಯಲ್ಲಿ ಈವರೆಗೆ 8552 ಸ್ವ-ಸಹಾಯ ಗುಂಪುಗಳ ರಚನೆಯಾಗಿದ್ದು, 2.56 ಕೋಟಿ ರೂ. ಉಳಿತಾಯ ಮಾಡಿವೆ. ಇದರಿಂದ 6,096 ಗುಂಪುಗಳಿಗೆ 66.98 ಕೋಟಿ ಸಾಲದ ಜೋಡಣೆ ಮಾಡಿದೆ. ಮತ್ತೂಂದೆಡೆ 3116 ಜಂಟಿ ಬಾಧ್ಯತೆಯೊಂದಿಗೆ ರಚನೆಯಾಗಿರುವ 3116 ಗುಂಪುಗಳಲ್ಲಿ 2782 ಗುಂಪುಗಳಿಗೆ 27.87 ಕೋಟಿ ರೂ. ಸಾಲದ ಜೋಡಣೆ ಕಲ್ಪಿಸಲಾಗಿದೆ.

ಕಳೆದ ಮಾರ್ಚ್‌ ಅಂತ್ಯಕ್ಕೆ 1025 ಸ್ವ-ಸಹಾಯ ಗುಂಪುಗಳಿಂದ 8.21 ಕೋಟಿ ರೂ., 883 ಜಂಟಿ ಬಾಧ್ಯತಾ ಗುಂಪುಗಳಿಂದ 7.24 ಕೋಟಿ ರೂ. ಸಾಲ ಬಾಕಿ ಇದೆ. ಇದಲ್ಲದೇ ಜಿಲ್ಲೆಯ ಸಹಕಾರಿ ವ್ಯವಸ್ಥೆ ಬಲವರ್ಧನೆಗೆ ಶತಮಾನದಿಂದ ಟೊಂಕ ಕಟ್ಟಿರುವ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್‌ ಸಂಪೂರ್ಣವಾಗಿ ಕೋರ್‌ ಬ್ಯಾಂಕಿಂಗ್‌ ವ್ಯವಸ್ಥೆಯಡಿ ಕಾರ್ಯ ನಿರ್ವಹಿಸುತ್ತಿದ್ದು, ಡಿಜಿಟಲ್‌ ಬ್ಯಾಂಕಿಂಗ್‌ನ ವಿವಿಧ ಸೇವೆ ಸೇರಿದಂತೆ ತನ್ನ ಎಲ್ಲ ಆರ್ಥಿಕ ವಹಿವಾಟನ್ನು ಗಣಕೀಕೃತ ವ್ಯವಸ್ಥೆಯಡಿ ಜಾರಿಗೊಳಿಸುವ ಮೂಲಕ ಆಧುನಿಕ ತಂತ್ರಜ್ಞಾನಕ್ಕೆ ತನ್ನನ್ನು ಒಗ್ಗಿಸಿಕೊಂಡು ಯಶಸ್ವಿಯಾಗಿ ಮುನ್ನಡೆಯುತ್ತಿವೆ.

ಟಾಪ್ ನ್ಯೂಸ್

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

1-a-DK-SHI

D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ

1-wewqeqwe

Lok Sabha Polls: ಶಿಂಧೆ ಸೇನೆ ಸೇರ್ಪಡೆಯಾದ ಖ್ಯಾತ ನಟ ಗೋವಿಂದ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

Lok Sabha Polls: ಚುನಾವಣೆಯಲ್ಲಿ 238 ಬಾರಿ ಸೋತರೂ ಛಲಬಿಡದ ಸರದಾರ.. ಈ ಬಾರಿ ಮತ್ತೆ ಕಣಕ್ಕೆ

1—-wewqe

Punjab ಮುಖ್ಯಮಂತ್ರಿ ಭಗವಂತ್ ಮಾನ್ ಅವರಿಗೆ ಹೆಣ್ಣು ಮಗುವಿನ ಜನನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಲೋಕಸಭೆ ಅಖಾಡ 2024: ಸವಾಲು ಗೆದ್ದ ಶೆಟ್ಟರ್‌ ಮುಂದಿದೆ ಅಗ್ನಿ ಪರೀಕ್ಷೆ

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

10

Missing: ಚುನಾವಣಾ ಕರ್ತವ್ಯದಲ್ಲಿದ್ದ ಸರಕಾರಿ ನೌಕರ ನಾಪತ್ತೆ

1-qqwewqe

Congress ಹಾಸನ, ಮಂಡ್ಯದಲ್ಲೂ ಗೆಲ್ಲಲಿದೆ : ಸಚಿವ ಎಂ.ಬಿ.ಪಾಟೀಲ್

1-eewqe

BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ

9

6.69 ಕೋಟಿ ರೂ. ಖೋಟಾನೋಟು ವಶಕ್ಕೆ: ಕೇಂದ್ರ ಏಜೆನ್ಸಿ ತನಖೆ ಆರಂಭ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.