ಭಾರತ ಹಿಂದೂಸ್ತಾನ ಆಗುತ್ತೆ: ಯತ್ನಾಳ

ಛತ್ರಪತಿ ಶಿವಾಜಿ-ಪ್ರತಾಪ ಸಿಂಹರಿಂದ ಹಿಂದೂಗಳು ಹಣೆಗೆ ತಿಲಕ ಹಚ್ಚಿಕೊಳ್ಳಲು ಸಾಧ್ಯವಾಗಿದೆ

Team Udayavani, Jun 17, 2019, 10:56 AM IST

17-June-7

ವಿಜಯಪುರ: ನಗರದಲ್ಲಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ಡಾ| ಆನಂದ ಕುಲಕರ್ಣಿ ವಿರಚಿತ ಹಿಂದೂಸ್ತಾನವಾಗಲಿ ನಮ್ಮ ದೇಶ ಕೃತಿ ಲೋಕಾರ್ಪಣೆ ಮಾಡಿದರು.

ವಿಜಯಪುರ: ಭಾರತ ಹಿಂದೂಸ್ತಾನ ಆಗುವುದರಲ್ಲಿ ಎರಡು ಮಾತಿಲ್ಲ. ದೇಶದ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಯಾರೂ ಸಲಹೆ ಕೊಡುವ ಅಗತ್ಯವಿಲ್ಲ. ಈ ಬಗ್ಗೆ ಮೋದಿ ಅವರೇ ಸೂಕ್ತ ಸಂದರ್ಭದಲ್ಲಿ ಸೂಕ್ತ ನಿರ್ಧಾರ ಪ್ರಕಟಿಸಲಿದ್ದಾರೆ ಎಂದು ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.

ರವಿವಾರ ನಗರದ ಡಾ| ಫ.ಗು. ಹಳಕಟ್ಟಿ ಸಭಾಭವನದಲ್ಲಿ ಹಿಂದೂಸ್ಥಾನ ಮರು ನಾಮಕರಣ ಹೋರಾಟ ಸಮಿತಿ ಹಮ್ಮಿಕೊಂಡಿದ್ದ ಸಂಶೋಧಕ ಡಾ| ಆನಂದ ಕುಲಕರ್ಣಿ ವಿರಚಿತ ಅವರ ಹಿಂದೂಸ್ತಾ ನವಾಗಲಿ ನಮ್ಮ ದೇಶ ಎಂಬ ಕೃತಿ ಲೋಕಾರ್ಪಣೆ ಹಾಗೂ ಹಿಂದೂಸ್ತಾನ ಹೆಸರಿನ ಮಹಿಮೆ ವಿಷಯದ ಚಿಂತನಾಗೋಷ್ಠಿಗೆ ಚಾಲನೆ ನೀಡಿ ಮಾತನಾಡಿದ ಅವರು, ಛತ್ರಪತಿ ಶಿವಾಜಿ ಮಹಾರಾಜರು ಹಾಗೂ ಮಹಾರಾಣಾ ಪ್ರತಾಪಸಿಂಹ್‌ ಅವರು ದೇವರಲ್ಲದಿರಬಹುದು. ಆದರೆ ದೇವಾಲಯದ ಗುಡಿಗಳಲ್ಲಿ ದೇವರ ಪ್ರತಿಮೆಗಳು ಇರಲು ಸಾಧ್ಯವಾಗಿಸಿದ್ದೇ ಈ ಇಬ್ಬರು ಮಹನೀಯರು. ಈ ಇಬ್ಬರಿಂದಾಗಿ ಹಿಂದೂಗಳು ಹಣೆಗೆ ತಿಲಕ ಹಚ್ಚಿಕೊಳ್ಳಲು ಸಾಧ್ಯವಾಗಿದೆ ಎಂದು ಬಣ್ಣಿಸಿದರು.

ಕಾಶ್ಮೀರದ ಫಾರೂಕ್‌ ಅಬ್ದುಲ್ಲಾ ಜವಾಹರಲಾಲ್ ನೆಹರು ಅವರ ವಂಶಜರು. ಹೀಗಾಗಿ ಅವರ ಕೈಯಲ್ಲಿ ಆಡಳಿತವಿರಬೇಕು ಎಂಬ ಕಾರಣಕ್ಕೆ ಜವಾಹರಲಾಲ್ ನೆಹರು ಅವರು ಕುತಂತ್ರ ಮಾಡಿ ಅಲ್ಲಿ ಕ್ಷೇತ್ರಗಳನ್ನು ರೂಪಿಸಿದ್ದರು. ಫಾರೂಕ್‌ ಅಬ್ದುಲ್ಲಾ ಕುಟುಂಬ ಹಾಗೂ ನೆಹರು ಕುಟುಂಬ ಒಂದೇ ವಂಶಜರು ಎಂಬುದಕ್ಕೆ ಅವರ ಹೋಲಿಕೆ ಇದೆ. ಆದರೆ ಕಾಶ್ಮೀರದಲ್ಲಿ ಬದಲಾವಣೆ ಗಾಳಿ ಬೀಸುತ್ತಿರುವ ಕಾರಣ ಇನ್ನು ಇವರ ಆಟ ನಡೆಯುವುದಿಲ್ಲ. ಭವಿಷ್ಯದಲ್ಲಿ ಕಾಶ್ಮೀರದಲ್ಲೂ ಹಿಂದೂ ಮುಖ್ಯಮಂತ್ರಿ ಅಧಿಕಾರದ ಗದ್ದುಗೆ ಏರುವ ಕಾಲ ದೂರವಿಲ್ಲ ಎಂದು ಅಭಿಪ್ರಾಯಪಟ್ಟರು.

ದೇಶದಲ್ಲಿ ತ್ರಿಭಾಷಾ ಸೂತ್ರ ಅನಿವಾರ್ಯ, ಆದರೆ ಹಿಂದಿ ಬಗ್ಗೆ ವಿನಾಕಾರಣ ದ್ವೇಷ ಸಾಧಿಸುವ ಕೆಲಸ ನಡೆಯುತ್ತಿದೆ. ಹಿಂದಿ ಭಾಷಿಕರು ರಾಜ್ಯ ಬಿಟ್ಟು ಹೋಗಿ ಎಂದು ಪಶ್ಚಿಮ ಬಂಗಾಳದ ಸಿಎಂ ಮಮತಾ ಬ್ಯಾನರ್ಜಿ ಹೇಳಿರುವುದು ಸರಿಯಾದ ಕ್ರಮವಲ್ಲ. ಪಶ್ಚಿಮ ಬಂಗಾಳ ಮಮತಾ ಬ್ಯಾನರ್ಜಿ ಅವರ ಪಿತ್ರಾರ್ಜಿತ ಆಸ್ತಿಯಲ್ಲ ಎಂಬುದನ್ನು ಅರಿಯಬೇಕು ಎಂದು ವಾಗ್ಧಾಳಿ ನಡೆಸಿದರು.

ರಾಜೇಂದ್ರಕುಮಾರ ಬಿರಾದಾರ ಕೃತಿ ಪರಿಚಯಿಸುತ್ತ, ಮಾಯಾವತಿ ಅವರು ಉತ್ತರ ಪ್ರದೇಶದ ಅಕ್ಬರಪುರ ಶಹರವನ್ನು ಅಂಬೇಡ್ಕರಪುರ ಎಂದು ಬದಲಾಯಿಸಿದಾಗ ಕಂಡುಬರದ ವಿರೋಧ, ಹಾಲಿ ಸಿಎಂ ಯೋಗಿ ಆದಿತ್ಯನಾಥ ಅವರು ಅಲಹಾಬಾದ್‌ ನಗರಕ್ಕೆ ಪ್ರಯಾಗರಾಜ್‌ ಎಂದು ಮರುನಾಮಕರಣ ನಡೆಸಿದಾಗ ವಿವಾದ ಆಯ್ತು. ನಮ್ಮ ಸಂಸ್ಕೃತಿಯ ಬಗ್ಗೆ ನಾವೇ ತಾತ್ಸಾರ ತೋರುತ್ತಿದ್ದೇವೆ. ಭಾರತ ದೇಶವನ್ನು ಹಿಂದೂಸ್ತಾನವಾಗಿ ಘೋಷಣೆ ಮಾಡಲು ಮುಸ್ಲಿಮರ ವಿರೋಧವಿಲ್ಲ. ಬದಲಾಗಿ ಹಿಂದೂಗಳೇ ಇದನ್ನು ವಿರೋಧಿಸುತ್ತಿರುವುದು ಅಚ್ಚರಿ ಮೂಡಿಸುತ್ತಿದೆ ಎಂದರು.

ಶಿವಬಸವ ಯೋಗಾಶ್ರಮದ ಶಂಭುಲಿಂಗ ಶ್ರೀಗಳು ಸಾನ್ನಿಧ್ಯ ವಹಿಸಿದ್ದರು. ಸಿದ್ದೇಶ್ವರ ಸಂಸ್ಥೆಯ ಸಿದ್ರಾಮಪ್ಪ ಉಪ್ಪಿನ, ಎಸ್‌.ಎಚ್. ನಾಡಗೌಡ, ಪತ್ರಕರ್ತ ಸಂಗಮೇಶ ಚೂರಿ, ಶ್ರೀರಾಮ ಸೇನೆ ಹಿರಿಯ ಮುಖಂಡ ನೀಲಕಂಠ ಕಂದಗಲ್, ಯು.ಎನ್‌. ಕುಂಟೋಜಿ, ಶರಣಗೌಡ ಪಾಟೀಲ, ವಿಶ್ವನಾಥ ಕುಲಕರ್ಣಿ ಇದ್ದರು.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.