ದೇಶದ ಏಳ್ಗೆ ಮಕ್ಕಳ ಕೈಯಲ್ಲಿದೆ: ಬೆಳಗಲಿ
ಮಕ್ಕಳ ಆಸೆ-ನಿರ್ಧಾರಕ್ಕೆ ಬೆಲೆ ಕೊಡಿಉತ್ತಮ ಸಮಾಜ ನಿರ್ಮಾಣಕ್ಕೆ ಶ್ರಮಿಸಲು ಕರೆ
Team Udayavani, Nov 16, 2019, 1:06 PM IST
ವಿಜಯಪುರ: ದೇಶದ ಏಳ್ಗೆ ಮಕ್ಕಳ ಕೈಯಲ್ಲಿದೆ. ನಾವೆಲ್ಲರೂ ಉತ್ತಮ ಸಮಾಜ ನಿರ್ಮಾಣಕ್ಕಾಗಿ ಶ್ರಮಿಸಬೇಕಾಗಿದೆ. ದೇಶದ ಅಭಿವೃದ್ಧಿಗೆ ಪ್ರತಿಜ್ಞೆ ಮಾಡಬೇಕಿದೆ ಎಂದು ಇಟ್ಟಂಗಿಹಾಳ ಎಕ್ಸಲಂಟ್ ಶಾಲೆ ವಿದ್ಯಾರ್ಥಿ ಪ್ರತಿನಿಧಿ ಅಭಿನಂದನ ಬೆಳಗಲಿ ಹೇಳಿದರು.
ಇಟ್ಟಂಗಿಹಾಳದ ಎಕ್ಸಲಂಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಹಮ್ಮಿಕೊಂಡಿದ್ದ ಮಕ್ಕಳ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದ ಅವರು, ಮಕ್ಕಳಿಗೂ ದೇಶವನ್ನು ಸುಭದ್ರವಾಗಿ ಕಟ್ಟುವ ಕನಸುಗಳಿದ್ದು, ಅವುಗಳ ಸಾಕಾರಕ್ಕೆ ಪರಿಶ್ರಮ ಅಗತ್ಯ ಎಂದರು.
ವಿದ್ಯಾರ್ಥಿ ಪ್ರತಿನಿಧಿ ವರದಾ ನೀಲಮಣಿಗಾರ ಮಾತನಾಡಿ, ದೇಶದ ಮೊದಲ ಪ್ರಧಾನಿಯಾಗಿದ್ದ ಜವಹಾರಲಾಲ್ ನೆಹರು ಅವರು ಮಕ್ಕಳ ಮೇಲಿದ್ದ ತಮ್ಮ ಅಪಾರ ಪ್ರೀತಿಯನ್ನು ಮಕ್ಕಳ ದಿನಾಚರಣೆಗೆ ಮೀಸಲಿಡುವ ಮೂಲಕ ಮಕ್ಕಳಿಗೆ ವಿಶೇಷ ಗೌರವ ನೀಡಿದ್ದು, ನಾವೆಲ್ಲ ಕೃತಜ್ಞರಾಗಿರಬೇಕು. ದೇಶದ ಭವಿಷ್ಯ ಮಕ್ಕಳ ಕೈಯಲ್ಲಿದೆ ಎಂಬ ವಿಶ್ವಾಸ ಇರಿಸಿಕೊಂಡಿದ್ದ ನೆಹರು ಅವರು, ಮಕ್ಕಳ ದಿನಾಚರಣೆ ಮೂಲಕ ಭವಿಷ್ಯದ ನಾಗರಿಕರಲ್ಲಿ ವಿಶೇಷವಾಗಿ ಆತ್ಮವಿಶ್ವಾಸ ತುಂಬುವ ಕೆಲಸ ಮಾಡಿದ್ದರು ಎಂದು ಬಣ್ಣಿಸಿದರು.
ಅಧ್ಯಕ್ಷತೆ ವಹಿಸಿದ್ದ ವಿದ್ಯಾರ್ಥಿ ಪ್ರತಿನಿಧಿ ಸ್ನೇಹಾ ಯೆಚ್ಚಿ ಮಾತನಾಡಿ, ಮಕ್ಕಳು ತಂದೆ-ತಾಯಿ ಹಾಗೂ ಗುರುವಿನ ಮಾರ್ಗದರ್ಶನದಲ್ಲಿ ನಡೆಯಬೇಕು. ಉತ್ತಮ ಗುರಿ ಹೊಂದಿ ಸತತ ಪ್ರಯತ್ನದೊಂದಿಗೆ ಮುನ್ನಡೆಯಬೇಕು ಎಂದರು.
ವಿದ್ಯಾರ್ಥಿ ಪ್ರತಿನಿಧಿಗಳಾದ ಶ್ರೀಮಂತ ಪಡಸಲಗಿ, ಪ್ರತೀಕ್ಷಾ ಗದ್ದಿಗಿಮಠ, ಅಭಿಷೇಕ ಹಡಲಸಂಗ, ಚೇತನಾ ಬಗಲಿ, ಪೂರ್ವಿ ತಳವಾರ, ಸಾಕ್ಷಿ ಹಿರೇಮಠ, ನೇಹಾ ಭುಯ್ನಾರ ಉಪಸ್ಥಿತರಿದ್ದರು.
ಆದರ್ಶ ನಗರ: ಮಕ್ಕಳು ಈ ದೇಶದ ಆಸ್ತಿ. ದೇಶದ ಅಭಿವೃದ್ಧಿ ಇಂದಿನ ಯುವಕರು ಮತ್ತು ಮಕ್ಕಳ ಮೇಲೆ ನಿಂತಿದೆ ಎಂದು ಅಮ್ಮನ ಮಡಿಲು ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ ಸಂಗಮೇಶ ಬಬಲೇಶ್ವರ ಹೇಳಿದರು. ಆದರ್ಶನಗರದ ಎಕ್ಸಲಂಟ್ ಕನ್ನಡ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢಶಾಲೆಯಲ್ಲಿ ಮಕ್ಕಳ ದಿನಾಚರಣೆ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮಕ್ಕಳು ಧನಾತ್ಮಕ ವಿಚಾರ ಮೈಗೂಡಿಸಿಕೊಳ್ಳಬೇಕು. ಪ್ರತಿಯೊಬ್ಬರಿಂದ ಒಳ್ಳೆಯ ಅಂಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದರು.
ವೈದ್ಯಕೀಯ ವಿದ್ಯಾರ್ಥಿನಿ ಸೌಮ್ಯಾ ಬಿರಾದಾರ, ವಿಕಾಸ ಶಿಕ್ಷಣ ಸಂಸ್ಥೆ ಸಂಸ್ಥಾಪಕ ಪ್ರಧಾನ ಕಾರ್ಯದರ್ಶಿ ಶಿವಾನಂದ ಕೆಲೂರ, ವಿಕಾಸ ಶಿಕ್ಷಣ ಸಂಸ್ಥೆ ಗೌರವ ಸದಸ್ಯ ರಾಜಶೇಖರ ಕೌಲಗಿ, ದಯಾನಂದ ಕೆಲೂರ ಮಾತನಾಡಿದರು.
ಶಿಕ್ಷಣ ಸಂಸ್ಥೆ ಅಧ್ಯಕ್ಷ ಬಸವರಾಜ ಕೌಲಗಿ ಅಧ್ಯಕ್ಷತೆ ವಹಿಸಿದ್ದರು. ಮುಖ್ಯೋಪಾಧ್ಯಾಯ ಎಂ.ಐ. ಬಿರಾದಾರ, ಮೇಲ್ವಿಚಾರಕ ಎಂ.ಎಚ್. ಹುಗ್ಗೇನವರ, ಜೆ.ಆರ್. ಗುಡ್ಡದ, ಸುಜಾತಾ ಹ್ಯಾಳದ, ಪಿ.ಬಿ. ಕೊಳಮಲಿ ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA
LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ
ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು
MUST WATCH
ಹೊಸ ಸೇರ್ಪಡೆ
Yathindra Siddaramaiah ಗೂಂಡಾ, ರೌಡಿ ಹೇಳಿಕೆ : EC ಗೆ ದೂರು ನೀಡಿದ ಬಿಜೆಪಿ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?