ಜಿಲ್ಲಾದ್ಯಂತ ಸಂಭ್ರಮದ ಕ್ರಿಸ್‌ಮಸ್‌ಆಚರಣೆ


Team Udayavani, Dec 26, 2019, 6:11 PM IST

26-December-25

ವಿಜಯಪುರ: ಎಲ್ಲಾ ಧರ್ಮಗಳ ಸಾರವೂ ಒಂದೇ ಆಗಿದ್ದು, ಮಾನವತೆಯ ಮೂಲಕ ಭಾವೈಕ್ಯತೆ ಸಂದೇಶದಡಿ ಎಲ್ಲರೂ ಸಮಾನವಾಗಿ ಶಾಂತಿಯುತವಾಗಿ ಬಾಳುವ ಗುಣ ಬೆಳೆಸಿಕೊಳ್ಳಬೇಕು ಎಂದು ಶಾಸಕ ನಿಸರ್ಗ ಎಲ್‌.ಎನ್‌.ನಾರಾಯಣಸ್ವಾಮಿ ತಿಳಿಸಿದರು.

ಪಟ್ಟಣದ 23 ನೇ ವಾರ್ಡ್‌ನ ರಹಮತ್‌ ನಗರದ ಇಮ್ಯಾನ್ಯುಯೆಲ್‌ ಚರ್ಚ್‌ನಲ್ಲಿ ಕ್ರಿಸ್‌ ಮಸ್‌ ಪ್ರಯುಕ್ತ ಹಮ್ಮಿಕೊಂಡಿದ್ದ ವಿಶೇಷ ಪೂಜಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.

ಪ್ರೀತಿ, ವಿಶ್ಪಾಸ, ಸೌಹಾರ್ಧತೆಯ ಬದುಕನ್ನು ಎಲ್ಲರೂ ಅನುಸರಿಸಬೇಕು. ಹಿರಿಯರ ಆದರ್ಶಗಳನ್ನು ಪಾಲಿಸುವ ಗುಣ ಬೆಳೆಸಿಕೊಳ್ಳಬೇಕು.ಯೇಸುಕ್ರಿಸ್ತನು ಮಾನವನ ಸಂಕಷ್ಟ ಮತ್ತು ಪಾಪವನ್ನು ಪರಿಹಾರ ಮಾಡಲು, ಬಡವರ ಕಣ್ಣೀರು ಒರೆಸಲು, ನಿಸ್ವಾರ್ಥ ಸೇವೆ ಸಲ್ಲಿಸಲು ಅವತರಿಸಿದ ಮಹಾನ್‌ ಮಾನವತಾವಾದಿ ಎಂದರು.

ಈ ವೇಳೆ ಪುರಸಭಾ ಮಾಜಿ ಸದಸ್ಯ ಎಸ್‌ .ಭಾಸ್ಕರ್‌, ಗೌಸ್‌ಖಾನ್‌, ಎಂ.ಮು ನಿನಾರಾಯಣ, ಮತ್ತಿತರರು ಇದ್ದರು. ಶಾಸಕ ನಿಸರ್ಗ ನಾರಾಯಣಸ್ವಾಮಿ ಅವರನ್ನು ಸನ್ಮಾನಿಸಲಾಯಿತು. ಅದ್ದೂರಿ ಆಚರಣೆ:ಪಟ್ಟಣದ ಎಲ್ಲಾಚರ್ಚ್ಗಳಲ್ಲಿ ಅದ್ಧೂರಿಯಾಗಿ ಸಂಭ್ರಮದ ಕ್ರಿಸ್‌ ಮಸ್‌ ಹಬ್ಬವನ್ನು ಆಚರಿಸಲಾಯಿತು.

ಪಟ್ಟಣದ ಶಿಡ್ಲಘಟ್ಟ ರಸ್ತೆಯಲ್ಲಿರುವ ಬಾಲಯೇಸು ಕ್ರೆçಸ್ಟ್‌ ಚರ್ಚ್‌, ಮಂಡಿಬೆಲೆ ರಸ್ತೆಯಲ್ಲಿರುವ ಚರ್ಚ್‌ಗಳಲ್ಲಿ ಕ್ರಿಸ್‌ಮಸ್‌ ಪ್ರಯುಕ್ತ ಯೇಸುವಿನ ಪ್ರತಿಮೆಗೆ ಅಲಂಕಾರ ಮಾಡಿದ್ದು ಭಕ್ತರ ಗಮನ ಸಳೆಯಿತು. ಚರ್ಚ್‌ಗಳಿಗೆ ಕ್ರಿಸ್‌ಮಸ್‌ ಈವ್‌ ಪ್ರಯುಕ್ತ ವಿದ್ಯುತ್‌ ದೀಪಾಲಂಕಾರ ಮಾಡಲಾಗಿತ್ತು. ಯೇಸುವಿನ ಬಾಲ್ಯ ಮತ್ತು ಜೀವನಚರಿತ್ರೆಯನ್ನು ಬಿಂಬಿಸುವ ವಸ್ತುಪ್ರದರ್ಶನವನ್ನು ಏರ್ಪಡಿಸಲಾಗಿತ್ತು.

ಯೇಸುವಿನ ಸಂದೇಶಗಳು: ಧಾರ್ಮಿಕ ಸಭೆಗಳನ್ನು ಆಯೋಜಿಸಿ ಯೇಸುವಿನ ಸಂದೇಶಗಳನ್ನು ಸಾರಲಾಯಿತು.ಬೆಳಿಗ್ಗೆಯಿಂದಲೇ ಚರ್ಚ್‌ಗಳಿಗೆ ಕುಟುಂಬ ಸಮೇತ ತೆರಳಿದ ಕ್ರೈಸ್ತರು, ಯೇಸು ಕ್ರಿಸ್ತನ ಶಿಲುಬೆ ಮುಂದೆ ನಿಂತು ಶ್ರದ್ಧಾ ಭಕ್ತಿಯಿಂದ ಪಾದ್ರಿಗಳ ನೇತೃತ್ವದಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಿದರು.

ಬಣ್ಣದ ಕಾಗದಗಳಿಂದ ಅಲಂಕಾರ: ಪಟ್ಟಣದ ಇಮ್ಮಾನುವೇಲ್‌ ಚರ್ಚ್‌, ಚಂದೇನಹಳ್ಳಿ ಗೇಟ್‌ ನಲ್ಲಿರುವ ಯೇಸು ಪ್ರೇಮಾಲಯ ಬ್ಯಾಪ್ಟಿಸ್ಟ್‌ ಚರ್ಚ್‌, ಬುಳ್ಳಹಳ್ಳಿ ಗ್ರಾಮದ ಒಳ್ಳೆಯ ಕುರುಬನ ಸಭೆ, ಇಮ್ಮಾನುಯೆಲ್‌ ಬ್ಯಾಸ್ಟಿಸ್ಟ್‌ ಚರ್ಚ್‌, ಸಿ. ಎನ್‌. ಹೊಸೂರು ಚರ್ಚ್‌, ಬಿಜ್ಜವಾರ ಗ್ರಾಮದ ಚರ್ಚ್‌ ಸೇರಿದಂತೆ ವಿವಿಧೆಡೆ ಚರ್ಚ್ಗಳ ಆವರಣಗಳನ್ನು ಬಣ್ಣದ ಕಾಗದಗಳಿಂದ ಅಲಂಕರಿಸಲಾಗಿತ್ತು.ಬಾಲ ಯೇಸು ದೇವಾಲಯದಲ್ಲಿ ನಿರ್ಮಿಸಿದ್ದ ಯೇಸು ಜೀವನ ವೃತ್ತಾಂತದ ಗೋದಲಿಯ ಪ್ರದರ್ಶನವು ಎಲ್ಲರ ಗಮನಸೆಳೆಯಿತು.ಏಸು ಕ್ರಿಸ್ತನ ಜನ್ಮ ದಿನದ ಪ್ರಯುಕ್ತ ಶ್ರದ್ದಾ ಭಕ್ತಿಯಿಂದ ಕೇಕ್‌ ಕತ್ತರಿಸಲಾಯಿತು.

ಟಾಪ್ ನ್ಯೂಸ್

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

1-asaa

Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.