ವರದಾನಿ ದರ್ಶನಕ್ಕೆ ಭಕ್ತರ ಕಾಲ್ನಡಿಗೆ

ಪಾದಯಾತ್ರಿಕರ ಸೇವೆಗೆ ಟೊಂಕ ಕಟ್ಟಿದ ಸ್ಥಳೀಯರುಮಾರ್ಗದುದ್ದಕ್ಕೂ ಅನ್ನ ಪ್ರಸಾದ ವ್ಯವಸ್ಥೆ

Team Udayavani, Nov 25, 2019, 11:55 AM IST

25-November-8

„ಜಿ.ಎಸ್‌.ಕಮತರ
ವಿಜಯಪುರ:
ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಎಲ್ಲ ರಾಜ್ಯಗಳಲ್ಲೂ ಆರಾಧ್ಯ ದೈವ ಎನಿಸಿರುವ 12ನೇ ಶತಮಾನದ ಮಹಾನ್‌ ಶರಣೆ ದಾನಮ್ಮದೇವಿ ದರ್ಶನಕ್ಕೆ ಭಕ್ತರು ಪರಿಸೆ ಆರಂಭಿಸಿದ್ದಾರೆ. ವರದಾನಿ ನೆಲೆಸಿರುವ ನೆರೆಯ ಮಹಾರಾಷ್ಟ್ರ ರಾಜ್ಯದ ಸಾಂಗ್ಲಿ ಜಿಲ್ಲೆಯ ಜತ್‌ ತಾಲೂಕಿನಲ್ಲಿರುವ ಗುಡ್ಡಾಪುರ ಕ್ಷೇತ್ರದ ಜಾತ್ರೆಗೆ ಲಕ್ಷಾಂತರ ಭಕ್ತರು ಪಾದಯಾತ್ರೆ ಹೊರಟಿದ್ದಾರೆ.

ರವಿವಾರ ಯತ್ನಾಳ ಮಾರ್ಗವಾಗಿ ಗುಡ್ಡಾಪುರ ವರದಾನಿ ದರ್ಶನಕ್ಕೆ ತೆರಳುತ್ತಿರುವ ಭಕ್ತರಿಂದ ವಿಜಯಪುರ-ಗುಡ್ಡಾಪುರ ರಸ್ತೆ ಭಕ್ತ ಸಾಗರೋಪಾದಿಯಲ್ಲಿ ಕಾಣಿಸುತ್ತಿದೆ. ವರದಾನಿ ಭಕ್ತರ ದಟ್ಟಣೆಯಿಂದಾಗಿ ವಿಜಯಪುರದಿಂದ ಮಹಾರಾಷ್ಟ್ರದ ಜತ್ತ, ಸಂಖ, ತಿಕ್ಕುಂಡಿ ಹೀಗೆ ಗುಡ್ಡಾಪುರ ಮಾರ್ಗ ಮಧ್ಯದ ಗ್ರಾಮಗಳಿಗೆ ತೆರಳುವ ಈ ರಸ್ತೆಗಳು ವಾಹನ ಮಾತ್ರವಲ್ಲ ದ್ವಿಚಕ್ರ ವಾಹನಗಳ ಸಂಚಾರಕ್ಕೂ ಅವಕಾಶವಿಲ್ಲದಂತೆ ಭಕ್ತರು ಇರುವೆ ಸಾಲಿನಂತೆ ಸಾಗುತ್ತಿದ್ದಾರೆ. ಶರಣೆ ದಾನಮ್ಮ ದೇವಿ ದರ್ಶನ ಪಡೆಯಲು ಕರ್ನಾಟಕ ರಾಜ್ಯದ ವಿವಿಧ ಭಾಗಗಳಿಂದ ಮಕ್ಕಳು, ಮಹಿಳೆಯರು, ಪುರುಷರು, ವೃದ್ಧರು ಮಾತ್ರವಲ್ಲ ಆರೇಳು ವರ್ಷದ ಮಕ್ಕಳು ಕೂಡ ವಯಸ್ಸಿನ ಮಿತಿ ಇಲ್ಲದಂತೆ ಎಲ್ಲ ವರ್ಗದ ಭಕ್ತರು ಗುಡ್ಡಾಪುರ ಶ್ರೀಕ್ಷೇತ್ರದತ್ತ ಹೆಜ್ಜೆ ಹಾಕಿದರು.

ಪಾದಯಾತ್ರೆ ಹೊರಟ ದಾನಮ್ಮದೇವಿ ಭಕ್ತರು ಬಿಸಿಲಿಗೆ ದಣಿದು ಹೈರಾಣು ಆಗಬಾರದೆಂದು ಪಾದಯಾತ್ರಿ ಭಕ್ತರು ಬಳಲಿಕೆ ನೀಗಲು ಸ್ಥಳೀಯ ಭಕ್ತರು ವಿಜಯಪುರ ನಗರದ ವಿವಿಧ ರಸ್ತೆಗಳಲ್ಲಿ ಸ್ವಯಂ ಪ್ರೇರಿತರಾಗಿ ಹತ್ತಾರು ಸಾವಿರ ರೂ. ಖರ್ಚು ಮಾಡಿ ಸ್ವಯಂ ಸೇವೆ ನೀಡುತ್ತಿದ್ದಾರೆ. ವಿಜಯಪುರ ಜಿಲ್ಲೆ ವಿವಿಧ ಭಾಗಗಳ ರಸ್ತೆಗಳಲ್ಲಿ ಭಕ್ತರ ಅನುಕೂಲಕ್ಕಾಗಿ ಟೆಂಟ್‌ ಹಾಕಿಕೊಂಡು ಪಾದಯಾತ್ರಿ ಭಕ್ತರಿಗೆ ಶ್ರದ್ಧಾ ಭಕ್ತಿಯ ಸೇವೆ ನೀಡುತ್ತಿದ್ದಾರೆ.

ಸ್ಥಳೀಯ ಮಹಿಳೆಯರು ಪಾದಯಾತ್ರಿ ಸುಮಂಗಲೆಯರಿಗೆ ಅರಿಶಿಣ-ಕುಂಕುಮ, ಎಲೆ-ಅಡಿಕೆ, ಉತ್ತುತ್ತಿ, ಕಲ್ಲು ಸಕ್ಕರೆ, ಹಸಿರು ಬಳೆ, ಹೂ, ಹಣ್ಣು, ಖಣ ಸಹಿತ ಉಡಿ ತುಂಬುವ ಮೂಲಕ ಶುಭಾಶಯ ವರದಾನಿ ದರ್ಶನಕ್ಕೆ ತೆರಳುವ ಭಕ್ತರಿಗೆ ಶುಭಾಶಯ ಕೋರುತ್ತಿದ್ದಾರೆ.

ಪಾದಯಾತ್ರೆ ಬಾಲ ಭಕ್ತರಿಗೆ, ಮಕ್ಕಳಿಗೆ ಹಾಲು-ಮಜ್ಜಿಗೆ, ತಂಪು ಪಾನೀಯ, ಖರ್ಜೂರ, ಗೋಡಂಬಿ, ಒಣದ್ರಾಕ್ಷಿಯಂಥ ಪೌಷ್ಟಿಕ ಆಹಾರ, ಬಾಳೆ, ಸೇಬು, ಮೋಸಂಬಿಯಂಥ ಹಣ್ಣುಗಳು, ಕುಡಿಯಲು ಶುದ್ಧ ನೀರು, ಚಿತ್ರಾನ್ನ, ಮೊಸರನ್ನ, ಅನ್ನ-ಸಾಂಬಾರ, ಸಿಹಿ ತಿಂಡಿಗಳಾದ ಬೂಂದಿ, ಜಿಲೇಬಿ, ಬಾದೂಶಾ, ಮೈಸೂರು ಪಾಕ್‌ ಹೀಗೆ ಬಗೆ ಬಗೆಯ ಖಾದ್ಯ ಸಹಿತ ಅನ್ನಸಂತರ್ಪಣೆ ನಡೆಯುತ್ತಿದೆ.

ಮತ್ತೂಂದೆಡೆ ಹಗಲು-ರಾತ್ರಿ ಎನ್ನದೇ ಪಾದಯಾತ್ರೆಯಿಂದ ಬಳಲಿರುವ ಭಕ್ತರಿಗೆ ವಿಶ್ರಾಂತಿಗೂ ಅಲ್ಲಲ್ಲಿ ವ್ಯವಸ್ಥೆ ಮಾಡಿದೆ. ಪಾದಯಾತ್ರಿಗಳ ಕಾಲು ನೋವು ನಿವಾರಿಸಲು ಕೈ-ಕಾಲು ಮಸಾಜ್‌ ಮಾಡುತ್ತಿದ್ದಾರೆ. ದಣಿದ ಪಾದಯಾತ್ರಿಗಳಿಗೆ ಅಲ್ಲಲ್ಲಿ ಉಚಿತ ಆರೋಗ್ಯ ತಪಾಸಣೆ, ಮಸಾಜ್‌ ಸಹಿತ ಉಚಿತ ಚಿಕಿತ್ಸೆಯ ವೈದ್ಯಕೀಯ ಸೇವೆ ನೀಡುತ್ತಿದ್ದಾರೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.