ಪುರಾತತ್ವ ಇಲಾಖೆಯಿಂದ ಕಂದಕ ಸ್ವಚ್ಛತೆ

ಇಲಾಖೆ ಒಪ್ಪಿಗೆ ಇಲ್ಲದೆ ಬೋಟಿಂಗ್‌ ಆರಂಭಿಸದಂತೆ ಡಿಸಿಗೆ ಪತ್ರ ಬರೆದ ಎಎಸ್‌ಐ ಅಧಿಕಾರಿ

Team Udayavani, Sep 18, 2019, 3:22 PM IST

18-Sepctember-7

ವಿಜಯಪುರ: ಪತ್ರಿಕೆ ವರದಿಯಿಂದ ಎಚ್ಚೆತ್ತಿರುವ ಪುರಾತತ್ವ ಇಲಾಖೆ ಅಧಿಕಾರಿಗಳು ಗಗನಮಹಲ್ ಕಂದಕದಲ್ಲಿ ಸ್ವಚ್ಛತೆಗೆ ಮುಂದಾಗಿದ್ದಾರೆ.

ಜಿ.ಎಸ್‌.ಕಮತರ
ವಿಜಯಪುರ:
ತ್ಯಾಜ್ಯಗಳಿಂದಾಗಿ ಕೊಳಕು ನೀರಿನಿಂದ ದುರ್ವಾಸನೆ ಹರಡಿಕೊಂಡಿರುವ ನಗರದ ಅರೆಕಿಲ್ಲಾ ಪ್ರದೇಶದಲ್ಲಿರುವ ಐತಿಹಾಸಿಕ ಗಗನಮಹಲ್ ಕಂದಕದ ಕಡೆಗೆ ಕೊನೆಗೆ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆ ಕಣ್ತೆರೆದಿದೆ. ತ್ಯಾಜ್ಯಗಳಿಂದಾಗಿ ಮಾಲಿನ್ಯ ಸೃಷ್ಟಿಸಿ ಐತಿಹಾಸಿಕ ಗಗನಮಹಲ್ ಕಂದಕದ ಕಸ ತೆಗೆಯವುದಕ್ಕಾಗಿ ಸ್ವಚ್ಛತೆಗೆ ಕೈ ಹಾಕಿದೆ.

ವಿಜಯಪುರ ಜಿಲ್ಲೆಯ ಪ್ರವಾಸೋದ್ಯಮ ದುಸ್ಥಿತಿ ಕುರಿತು ಉದಯವಾಣಿ ಪತ್ರಿಕೆ ಆರಂಭಿಸಿರುವ ಸರಣಿ ವರದಿಗಳ ಪ್ರವಾಸೋದ್ಯಮ ಕಥೆ-ವ್ಯಥೆ ಅಭಿಯಾನಕ್ಕೆ ಸ್ಪಂದನೆ ವ್ಯಕ್ತವಾಗಿದೆ. ಸೆ. 2ರಂದು ಪತ್ರಿಕೆಯಲ್ಲಿ ‘ಸ್ಮಾರಕಗಳ ಮೌಲ್ಯ ಕಳೆಯುತ್ತಿರುವ ಕೊಳಕು’ ಶೀರ್ಷಿಕೆಯಲ್ಲಿ ವಿಶೇಷ ವರದಿ ಪ್ರಕಟಿಸಿತ್ತು.

ಕಂದಕದ ದುಸ್ಥಿತಿಗೆ ಪರಿಹಾರ ಕಂಡುಕೊಳ್ಳಲು ಹಾಗೂ ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಜಿಲ್ಲಾಡಳಿತ ಕಂದಕದಲ್ಲಿ ಬೋಟಿಂಗ್‌ ಆರಂಭಿಸುವುಕ್ಕೆ ಮುಂದಾಗಿದೆ. ಇದಕ್ಕೆ ಪ್ರತಿರೋಧ ಒಡ್ಡಿರುವ ಭಾರತೀಯ ಪುರಾತತ್ವ ಇಲಾಖೆಯ ವಿಜಯಪುರ ಪೂರ್ವ ವಿಭಾಗದ ಸ್ಮಾರಕ ಸಂರಕ್ಷಣಾಧಿಕಾರಿ ಜಿಲ್ಲಾಡಳಿತಕ್ಕೆ ಬೋಟಿಂಗ್‌ ಆರಂಭಿಸದಂತೆ ಜಿಲ್ಲಾಧಿಕಾರಿಗಳಿಗೆ ಪತ್ರ ಬರೆದು ತಕರಾರು ತೆಗೆದಿದ್ದಾರೆ.

ಇದರ ಮಧ್ಯೆ ಜಿಲ್ಲಾಡಳಿತದ ನಡೆಗೆ ಸಾರ್ವಜನಿಕರಿಂದ ಸ್ಪಂದನೆ ವ್ಯಕ್ತವಾಗಿದ್ದು, ಬೋಟಿಂಗ್‌ ನಡೆಸಲು ತಕರಾರು ತೆಗೆದಿರುವ ಪುರಾತತ್ವ ಇಲಾಖೆ ಅಧಿಕಾರಿಗಳ ವರ್ತನೆಗೆ ಆಕ್ರೋಶ ವ್ಯಕ್ತವಾಗಿದೆ. ತನ್ನ ಸ್ಮಾರಕ ಇರುವ ಕಂದಕದಲ್ಲಿ ಬೋಟಿಂಗ್‌ ಆರಂಭಿಸಲು ತಕರಾರು ಮಾಡುವ ಪುರಾತತ್ವ ಇಲಾಖೆ ಅಧಿಕಾರಿಗಳು, ಗಗನಮಹಲ್ ಸುತ್ತಲಿನ ಕಂದಕ ಪ್ರದೇಶದಲ್ಲಿ ಮಾಲಿನ್ಯ ತಡೆಗೆ ಮುಂದಾಗಿಲ್ಲ. ಸದರಿ ಪ್ರದೇಶದಲ್ಲಿ ನಡೆಯುವ ನಿಯಮ ಬಾಹಿರ ಕೆಲಸಗಳಿಗೆ ಕಡಿವಾಣ ಹಾಕಲು ಮುಂದಾಗಿಲ್ಲ. ಕನಿಷ್ಠ ಕಂದಕದಲ್ಲಿನ ಕೊಳೆ ತೆಗೆದು, ದುರ್ವಾಸನೆಗೆ ಮುಕ್ತಿ ಕಂಡುಕೊಂಡಿಲ್ಲ ಎಂದು ಆಕ್ರೋಶ ಹೊರ ಹಾಕಿದ್ದರು.

ಪತ್ರಿಕೆಯಲ್ಲಿ ವರದಿ ಆಗುತ್ತಲೇ ಎಚ್ಚೆತ್ತಿರುವ ಪುರಾತತ್ವ ಇಲಾಖೆಯ ವಿಜಯಪುರ ಪೂರ್ವ ವಿಭಾಗದ ಅಧಿಕಾರಿಗಳು ತನ್ನ ಇಲಾಖೆಯ ಸ್ವಚ್ಛತಾ ಸಿಬ್ಬಂದಿಯನ್ನು ಸೋಮವಾರ ಏಕಾಏಕಿ ಗಗನಮಹಲ್ ಸ್ಥಳ ಸ್ವಚ್ಛತೆಗೆ ಕರೆ ತಂದಿದೆ. ಗಗನಮಹಲ್ ಸುತ್ತಲಿನ ಮುಳ್ಳುಕಂಟಿ, ಕಸದಂಥ ತ್ಯಾಜ್ಯ ವಿಲೆವಾರಿ ಮಾಡಲು ಆಸಕ್ತಿ ತೋರುವ ಮೂಲಕ ತುಕ್ಕು ಹಿಡಿದಿದ್ದ ಸಲಿಕೆ-ಗುದ್ದಲಿಗೆಗಳಿಗೆ, ಕೊಡಲಿ-ಕುಡಗೋಲುಗಳಿಗೆ ಹೊಳಪು ನೀಡಲು ಮುಂದಾಗಿದ್ದಾರೆ.

ಇಲಾಖೆ 15 ಸಿಬ್ಬಂದಿ ಅಲ್ಲದೇ ದಿನಗೂಲಿಯ 25 ಕಾರ್ಮಿಕರನ್ನು ಬಳಸಿಕೊಂಡು ಸ್ವಚ್ಛತೆಗೆ ಇಳಿದಿದೆ. ಅರೆಕಿಲ್ಲಾ ಕಂದಕ ಮಾತ್ರವಲ್ಲ ಗೋಲಗುಂಬಜ್‌ ಪ್ರದೇಶದಲ್ಲೂ ಬರುವ 15 ದಿನಗಳ ಕಾಲ ನಿರಂತರ ಸ್ವಚ್ಛತೆ ಅಭಿಯಾನ ಹಮ್ಮಿಕೊಂಡಿದ್ದೇವೆ. ಸ್ಮಾರಕಗಳ ಪರಿಸರದಲ್ಲಿ ಸ್ವಚ್ಛತೆಗೆ ಆದ್ಯತೆ ನೀಡುವಲ್ಲಿ ವಿಶೇಷ ಕಾರ್ಯಾಚರಣೆ ನಡೆಸಿದ್ದೇವೆ ಎಂದು ಪುರಾತತ್ವ ಇಲಾಖೆ ಸಿಬ್ಬಂದಿ ಪ್ರತಿಕ್ರಿಯಿಸಿದ್ದಾರೆ.

ಈ ಮಧ್ಯೆ ಉದಯವಾಣಿ ಪತ್ರಿಕೆ ಪ್ರವಾಸೋದ್ಯಮ ಅಭಿವೃದ್ಧಿ ಹಾಗೂ ಐತಿಹಾಸಿಕ ಸ್ಮಾರಕಗಳ ದುಸ್ಥಿತಿ ಕುರಿತು ವಿಶೇಷ ಸರಣಿ ವರದಿಗಳ ಮೂಲಕ ಬೆಳಕು ಚೆಲ್ಲುತ್ತಲೇ ಪುರಾತತ್ವ ಇಲಾಖೆ ಮೇಲಧಿಕಾರಿಗಳ ಕಣ್ಣು ಕೆಂಪಾಗಿವೆ. ಈ ಕುರಿತು ಸುತ್ತೋಲೆ ಹೊರಡಿಸಿರುವ ಭಾರತೀಯ ಪುರಾತತರ್ವ ಇಲಾಖೆಯ ಧಾರವಾಡ ವಲಯದ ಅಧೀಕ್ಷಕರು, ಇಲಾಖೆಯ ಯಾವುದೇ ಅಧಿಕಾರಿ, ಸಿಬ್ಬಂದಿ ಮಾಧ್ಯಮಗಳಿಗೆ ಮಾಹಿತಿ ನೀಡದಂತೆ ಕಟ್ಟುನಿಟ್ಟಾಗಿ ತಾಕೀತು ಮಾಡಿ ಬಾಯಿ ಮುಚ್ಚಿಸಿದೆ.

ಧಾರವಾಡ ವಲಯದ ಅಧಿಕಾರಿಗಳು ಸುತ್ತೋಲೆ ಮೂಲಕ ತನ್ನ ಕೆಳ ಹಂತದ ಅಧಿಕಾರಿ-ಸಿಬ್ಬಂದಿಗಳ ಬಾಯಿಗೆ ಬೀಗ ಹಾಕುವುದಕ್ಕೆ ತೋರಿದ ಆಸಕ್ತಿ ಹಾಗೂ ಕಾಳಜಿಯನ್ನು ಸ್ಥಳೀಯವಾಗಿ ಇರುವ ಸಮಸ್ಯೆಗಳ ಪರಿಹಾರಕ್ಕೆ ತೋರಬೇಕು. ಸ್ಮಾರಕಗಳನ್ನು ದುಸ್ಥಿತಿಯಿಂದ ಕಾಪಾಡಲು ಸ್ಥಳೀಯರ ಸಹಕಾರದಿಂದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವ ಕೆಲಸ ಮಾಡಬೇಕು ಎಂದು ಸಾರ್ವಜನಿಕರಿಂದ ಆಗ್ರಹಗಳು ಕೇಳಿ ಬರತೊಡಗಿದೆ.

ಟಾಪ್ ನ್ಯೂಸ್

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

Chamarajanagar: ಕೊಳ್ಳೇಗಾಲ ಶಾಸಕ ಎ ಆರ್ ಕೃಷ್ಣಮೂರ್ತಿ ಕಾರು ಅಪಘಾತ, ಅಪಾಯದಿಂದ ಪಾರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

8-uv-fusion

Photography: ನಿಮ್ಮ ಬೊಗಸೆಯಲ್ಲಿ ಇರಲಿ ನೆನಪುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.