ಇಂಡಿಗೆ ಸುಸಜ್ಜಿತ ಮೀನು ಮಾರುಕಟ್ಟೆ

ನವೆಂಬರ್‌ ಮೊದಲ ವಾರ ಅಡಿಗಲ್ಲು1 ಕೋಟಿ ರೂ. ವೆಚ್ಚದಲ್ಲಿ ಮಾರ್ಕೆಟ್‌ ನಿರ್ಮಾಣ

Team Udayavani, Oct 26, 2019, 4:09 PM IST

26-October-15

„ಜಿ.ಎಸ್‌.ಕಮತರ
ವಿಜಯಪುರ: ಕಳೆದ ಆರೇಳು ವರ್ಷಗಳಿಂದ ನನೆಗುದಿಗೆ ಬಿದ್ದಿದ್ದ ಜಿಲ್ಲೆಯಲ್ಲಿ ಆಧುನಿಕ ಸೌಲಭ್ಯಗಳ ಸುಸಜ್ಜಿತ ಮೀನು ಮಾರಾಟ ಘಟಕ ನಿರ್ಮಾಣಕ್ಕೆ ಸರ್ಕಾರ ಅಸ್ತು ಎಂದಿದೆ. ಮತ್ತೂಂದೆಡೆ ಜಿಲ್ಲೆಯ ಇಂಡಿ ತಾಲೂಕು ಕೇಂದ್ರದಲ್ಲಿ ಮೀನು ಮಾರಾಟ ಮಾರುಕಟ್ಟೆ ನಿರ್ಮಾಣಕ್ಕೆ ಸ್ಥಳ ಮೀಸಲಿರಿಸಿದ್ದು, 1 ಕೋಟಿ ರೂ. ವೆಚ್ಚದ ಈ ಸೌಲಭ್ಯಕ್ಕೆ ನವೆಂಬರ್‌ ಮೊದಲ ವಾರ ಅಡಿಗಲ್ಲು ಹಾಕುವ ಸಾಧ್ಯತೆ ಇದೆ.

ಕರ್ನಾಟಕ ಮೀನು ಅಭಿವೃದ್ಧಿ ನಿಗಮದಿಂದ ಉತ್ತರ ಕರ್ನಾಟಕದ ನಾಲ್ಕು ಜಿಲ್ಲೆಗಳ 4 ತಾಲೂಕುಗಳಿಗೆ ಈ ಸೌಲಭ್ಯ ದೊರಕಿದ್ದು, ಹಲವೆಡೆ ಯೋಜನೆಗೆ ಚಾಲನೆ ನೀಡಲಾಗಿದೆ. ರಾಯಚೂರು ಜಿಲ್ಲೆಯ ಸಿಂಧನೂರು, ಬಳ್ಳಾರಿ ಜಿಲ್ಲೆಯ ಸಿರಗುಪ್ಪ, ಯಾದಗಿರಿ ಜಿಲ್ಲೆಯ ಯಾದಗಿರಿ ಹಾಗೂ ಉಡುಪಿ ಜಿಲ್ಲೆಯ ಶಾಂತಾರು ಹಾಗೂ ವಿಜಯಪುರ ಜಿಲ್ಲೆಯ ಇಂಡಿ ತಾಲೂಕು ಕೇಂದ್ರದಲ್ಲಿ ಆಧುನಿಕ ಮೀನು ಮಾರಾಟ ಮಾರುಕಟ್ಟೆ ನಿರ್ಮಾಣಕ್ಕೆ ಸರ್ಕಾರ ತಲಾ 1 ಕೋಟಿ ರೂ. ವೆಚ್ಚದ ಯೋಜನೆಗೆ ಅಸ್ತು ಎಂದಿದೆ.

7 ವರ್ಷಗಳಿಂದ ನನೆಗುದಿ: ವಿಜಯಪುರ ಜಿಲ್ಲೆಯ ಇಂಡಿ ಪಟ್ಟಣದಲ್ಲಿ ಆಧುನಿಕ ಮೀನು ಮಾರಾಟ ಮಾರುಕಟ್ಟೆ ನಿರ್ಮಾಣದ ಕುರಿತು ಕಳೆದ 6-7 ವರ್ಷಗಳ ಹಿಂದೆಯೇ ಪ್ರಸ್ತಾವನೆ ಸಲ್ಲಿಸಲಾಗಿತ್ತು. ಭೀಮಾ ನದಿ ಮಾತ್ರವಲ್ಲದೇ ಇಂಡಿ ತಾಲೂಕಿನ ವಿವಿಧ ಕಡೆಗಳಲ್ಲಿ ಹತ್ತಾರು ಬಾರಿ ವಿಸ್ತಾರದ ಕೆರೆಗಳಿದ್ದು, ಮೀನುಗಾರಿಕೆ ಸಹಕಾರಿ ವ್ಯವಸ್ಥೆಯ 7 ಸಂಘಗಳಿವೆ. ಇಂಡಿ ತಾಲೂಕಿನಲ್ಲಿ ಸುಮಾರು 500ಕ್ಕೂ ಹೆಚ್ಚು ಮೀನುಗಾರರು ಇದ್ದು, ಬೀದಿ ಬದಿಯಲ್ಲಿ ಮೀನುಗಳ ಮಾರಾಟದಿಂದ ರಸ್ತೆಗಳಲ್ಲಿ ಸುಳಿದಾಡುವ ಧೂಳು, ಕ್ರಿಮಿಕೀಟಗಳು ಹಾಗೂ ಸ್ವತ್ಛತೆ ಇಲ್ಲದ ಪರಿಸರದಿಂದಾಗಿ ಗುಣಮಟ್ಟದ ಮೀನು ಸಿಗುತ್ತಿರಲಿಲ್ಲ. ಇದಕ್ಕಾಗಿ ಇಂಡಿ ಪಟ್ಟಣದಲ್ಲಿ ಆಧುನಿಕ ವ್ಯವಸ್ಥೆಯ ಮೀನು ಮಾರುಕಟ್ಟೆ ನಿರ್ಮಾಣಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿತ್ತು.

ಇಂಡಿ ಸ್ಥಳ ಪರಿಶೀಲನೆ: ಇಂಡಿ ಪಟ್ಟಣದಲ್ಲಿ ಆಧುನಿಕ ಸೌಲಭ್ಯಗಳ ಸುಸಜ್ಜಿತ ಮೀನು ಮಾರುಕಟ್ಟೆ ನಿರ್ಮಾಣಕ್ಕಾಗಿ ಇಂಡಿ ಪುರಸಭೆ ನಿವೇಶನ ಒದಗಿಸಿದೆ. ಸುಮಾರು 10 ಸಾವಿರ ಚದರ ಮೀಟರ್‌ ವಿಸ್ತಾರದ ಸ್ಥಳ ನೀಡಿದ್ದು, ಯೋಜನೆ ಅನುಷ್ಠಾನದ ಸಾಧ್ಯತೆ ಇರುವ ಕುರಿತು ಕರ್ನಾಟಕ ಮೀನು ಅಭಿವೃದ್ಧಿ ನಿಮಗದ ವ್ಯವಸ್ಥಾಪಕ ನಿದೇಶಕ ಮಲ್ಲೇಶಪ್ಪ ದೊಡಮನಿ ಶುಕ್ರವಾರ ಸ್ಥಳ ಪರಿಶೀಲನೆ ನಡೆಸಿದ್ದಾರೆ.

ಮೀನು ಮಾರುಕಟ್ಟೆಯಿಂದೇನು ಲಾಭ?: ಜಿಲ್ಲೆಯಲ್ಲಿ ಮತ್ಸೋದ್ಯಮ ಅಭಿವೃದ್ಧಿಗೆ ಪೂರಕವಾದ ಜಲಸಂಪನ್ಮೂಲ ಇದ್ದರೂ ಮೀನು ಅಭಿವೃದ್ಧಿ ವಿಷಯದಲ್ಲಿ ನಿರ್ಲಕ್ಷ್ಯ ಇದೆ. ಮೀನು ಮಾರುಕಟ್ಟೆಗೆ ಸೂಕ್ತ ವ್ಯವಸ್ಥೆ ಇಲ್ಲದೇ ಮೀನುಗಾರರು ಬೀದಿಗಳಲ್ಲಿ ಮೀನುಗಳನ್ನು ಮಾರಾಟ ಮಾಡುತ್ತಾರೆ. ಇದರಿಂದ ರಸ್ತೆಬದಿಯ ಮೀನುಗಳಿಗೆ ಧೂಳು ಹಾಗೂ ಕ್ರಿಮಿಗಳು ಆವರಿಸಿ, ರೋಗಕಾರ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಇಂಥ ಸ್ಥಿತಿಯಲ್ಲಿ ಮಾರಾಟ ಮಾಡುವ
ಮೀನು ಸೇವಿಸುವ ಗ್ರಾಹಕರ ಆರೋಗ್ಯದ ಮೇಲೆ ಗಂಭೀರ ಪರಿಣಾಮ ಬೀರಲಿದೆ.

ಇದಲ್ಲದೇ ಬೀದಿ ಬದಿಯಲ್ಲಿ ಮೀನುಗಳ ಮಾರಾಟದಿಂದ ಹಾಗೂ ಎಲ್ಲೆಂದರಲ್ಲಿ ತ್ಯಾಜ್ಯ ಎಸೆಯುವ ಕಾರಣ ಸಾರ್ವಜನಿಕರಿಂದ ಪ್ರತಿರೋಧ ವ್ಯಕ್ತವಾಗಿ ಮೀನುಗಾರರಿಗೆ ಮೀನು ಮಾರಾಟಕ್ಕೆ ಸಮಸ್ಯೆ ಆಗುತ್ತಿದೆ. ಅಲ್ಲದೇ ಮೀನುಗಳ ತ್ಯಾಜ್ಯದಿಂದ ಪರಿಸರ ಮಾಲಿನ್ಯ ಹಾಗೂ ಬೀದಿ ನಾಯಿಗಳ ಹಾವಳಿಗೆ ಕಾರಣವಾಗಿ, ಸಾರ್ವಜನಿಕರಿಂದ ಟೀಕೆಗಳಿಗೆ ಗುರಿಯಾಗುತ್ತಿದ್ದಾರೆ. ಇದರಿಂದಾಗಿ ಮೀನುಗಾರಿಕೆಯಲ್ಲಿ ತೊಡಗಲು ಈ ಭಾಗದ ಮೀನುಗಾರರು ಹಿಂದೇಟು ಹಾಕುತ್ತಿದ್ದಾರೆ.

ಇಂಥ ದುರವಸ್ಥೆಗೆ ಕಡಿವಾಣ ಹಾಕುವ ಜೊತೆಗೆ ಕಳಪೆ ಗುಣಮಟ್ಟದ ಸಂರಕ್ಷಿತವಲ್ಲದ ಮೀನು ಮಾರಾಟ ತಡೆಯಲು ಮೀನುಗಾರಿಕೆ ನಿಗಮದಿಂದ ಸುಸಜ್ಜಿತ ಮೀನು ಮಾರುಕಟ್ಟೆ ನಿರ್ಮಾಣಕ್ಕೆ ಮುಂದಾಗಿದೆ.

ಏನೇನು ಸೌಲಭ್ಯ?: ರಾಜ್ಯ ಸರ್ಕಾರ ನಬಾರ್ಡ್‌ ನೆರವಿನಲ್ಲಿ ರಾಷ್ಟ್ರೀಯ ಕೃಷಿ ಅಭಿವೃದ್ಧಿ ಯೋಜನೆ ಅಡಿಯಲ್ಲಿ ಪ್ರಸಕ್ತ ಸಾಲಿನ ಬಜೆಟ್‌ನಲ್ಲಿ ಈ ಯೋಜನೆ ರೂಪಿಸಿದೆ. ಮೀನುಗಾರರು
ಒಂದೇ ಕಡೆ ಕುಳಿತು ಮೀನು ಮಾರಾಟಕ್ಕೆ ವ್ಯವಸ್ಥೆ ಕಲ್ಪಿಸಲಾಗುತ್ತದೆ, ಮಾರುಕಟ್ಟೆಯಲ್ಲಿ 70 ಮೀನುಗಾರರು ಪ್ರತ್ಯೇಕವಾಗಿ ಕುಳಿತು ಮೀನು ಮಾರಾಟಕ್ಕೆ ಸುಸಜ್ಜಿತ ವ್ಯವಸ್ಥೆ ಮಾಡಲಾಗುತ್ತದೆ.

ಗ್ರಾಹಕರಿಗೆ ಮೀನುಗಳನ್ನು ಕತ್ತರಿಸಿ ಕೊಡಲು ಪ್ರತ್ಯೇಕ ಘಟಕ ಮಾಡಲಾಗಿದ್ದು, ಮಾರಾಟವಾಗದ ಮೀನುಗಳನ್ನು ಕೆಡದಂತೆ ಸಂಗ್ರಹಿಸಿ ಇಡಲು ಶೈತ್ಯಾಘಟಕ ಇರಲಿದೆ. ಪುರುಷ-ಮಹಿಳೆಯರಿಗೆ ಪ್ರತ್ಯೇಕ ಶೌಚಾಲಯ, ಕುಡಿಯುವ ನೀರು ಸೇರಿದಂತೆ ವಿವಿಧ ಸೌಲಭ್ಯಗಳು ಇಲ್ಲಿ ಲಭ್ಯವಾಗಲಿವೆ.

ಶಾಸಕರ ಮುತುವರ್ಜಿ: ಇಂಡಿ ಪಟ್ಟಣವನ್ನು ಜಿಲ್ಲಾ ಕೇಂದ್ರವಾಗಿಸಿ ಪ್ರತ್ಯೇಕ ಜಿಲ್ಲೆ ಮಾಡುವ ಉದ್ದೇಶ ಇರಿಸಿಕೊಂಡಿರುವ ಇಂಡಿ ಶಾಸಕ ಯಶವಂತರಾಯಗೌಡ ಪಾಟೀಲ ಅವರು ಆಧುನಿಕ ಸುಸಜ್ಜಿತ ಮೀನು ಮಾರಾಟ ಮಾರುಕಟ್ಟೆ ನಿರ್ಮಾಣಕ್ಕೆ ವಿಶೇಷ ಕಾಳಜಿ ವಹಿಸಿದ್ದಾರೆ.

ಜಿಲ್ಲೆಯಲ್ಲಿ ಮೀನು ಉತ್ಪಾದನೆಗೆ ಹೇರಳ ಜಲಸಂಪನ್ಮೂಲ ಇದ್ದರೂ ಮೀನು ಅಭಿವೃದ್ಧಿಗೆ ಆದ್ಯತೆ ನೀಡಿಲ್ಲ. ಜಿಲ್ಲೆಯಲ್ಲಿ ಮೀನುಗಾರಿಕೆ ಇದ್ದರೂ ಅಭಿವೃದ್ಧಿ ಪಡಿಸುವ ಹಾಗೂ ಕಡಿಮೆ ಬೆಲೆಯಲ್ಲಿ ಗರಿಷ್ಠ ಗುಣಮಟ್ಟದ ಹಾಗೂ ಪೌಷ್ಟಿಕ ಆಹಾರ ಎನಿಸಿರುವ ಮೀನು ಆಹಾರ ಸೇವನೆ ಕುರಿತು ಜನರಲ್ಲಿ ಜಾಗೃತೆ ಮೂಡಿಸಿಲ್ಲ. ಇದರಿಂದಾಗಿ ಜಿಲ್ಲೆಯಲ್ಲಿ ಮೀನುಗಾರಿಕೆ ವ್ಯಾಪಕತೆ ಪಡೆದಿಲ್ಲ. ಅಲ್ಲದೇ ಭೀಮಾ ನದಿಯಲ್ಲಿ ನೈಸರ್ಗಿಕವಾಗಿ ಮೀನುಗಳ ಸಂಪತ್ತು ಇದ್ದು, ಇದರ ಸದ್ಬಳಕೆ ಆಗಿಲ್ಲ. ಹೀಗಾಗಿ ಜಿಲ್ಲೆಯಲ್ಲಿ ಮೀನುಗಾರರಿಗೆ ಮೂಲಭೂತ ಸೌಲಭ್ಯಗಳಿಲ್ಲದೇ ಬೀದಿ ಬದಿಯಲ್ಲಿ ಮೀನು ಮಾರಾಟ ಮಾಡುತ್ತಿದ್ದಾರೆ.

ಮತ್ಸೋದ್ಯಮಕ್ಕೆ ಸಚಿವರ ಆಸಕ್ತಿ: ಜಿಲ್ಲೆಯಲ್ಲಿ ಮೊಟ್ಟ ಮೊದಲ ಬಾರಿಗೆ ಇಂಡಿ ಪಟ್ಟಣದಲ್ಲಿ ಮೀನುಗಳ ಮಾರಾಟಕ್ಕಾಗಿ ಪ್ರತ್ಯೇಕ ಹಾಗೂ ಸುಸಜ್ಜಿತ ಸೌಲಭ್ಯಗಳ ಸಹಿತ ಮೀನು ಮಾರುಕಟ್ಟೆ ನಿರ್ಮಾಣಕ್ಕೆ ಸರ್ಕಾರ ಅನುಮತಿ ನೀಡಿದೆ. ಕರಾವಳಿ ಭಾಗದವರೇ ಅಗಿರುವ ಕೋಟ ಶ್ರೀನಿವಾಸ ಪೂಜಾರಿ ಮೀನುಗಾರಿಕೆ ಸಚಿವರಾಗಿದ್ದು, ಮೀನು ಉದ್ಯಮವನ್ನು ಅದರಲ್ಲೂ ಒಳನಾಡು ಮೀನುಗಾರಿಕೆ ಬಲಪಡಿಸಲು ಉತ್ತರ ಕರ್ನಾಟಕದಲ್ಲಿ ಮೀನು ಮಾರಾಟಗಾರರಿಗೆ ಪ್ರತ್ಯೇಕ ಹಾಗೂ ಸುಸಜ್ಜಿತ ಮೀನು ಮಾರುಕಟ್ಟೆ
ನಿರ್ಮಿಸಿಕೊಡಲು ಮುಂದಾಗಿದ್ದಾರೆ.

ಇದಕ್ಕಾಗಿ ಕರ್ನಾಟಕ ಮೀನುಗಾರಿಕೆ ಅಭಿವ್ರದ್ದಿ ನಿಗಮದಿಂದ ಉತ್ತರ ಕರ್ನಾಟಕದಲ್ಲಿ ಹಲವು ಅಭಿವೃದ್ಧಿ ಪರ ಕಾರ್ಯಕ್ರಮಗಳನ್ನು ರೂಪಿಸಿದ್ದು, ಇದಕ್ಕಾಗಿ ಅಗತ್ಯ ಇರುವ ಅನುದಾನವನ್ನೂ ನೀಡಿದ್ದಾರೆ. ಈಗಾಗಲೇ ಮಂಜೂರಾಗಿರುವ ಹಲವು ಕಡೆಗಳಲ್ಲಿ ಮೀನು ಮಾರಾಟ ಮಾರುಕಟ್ಟೆ ಕಾಮಗಾರಿಗೆ ಚಾಲನೆ ನೀಡಿದ್ದು, ಇಂಡಿ ಪಟ್ಟಣದ ಕಾಮಗಾರಿಯನ್ನು ಕರ್ನಾಟಕ ಭೂಸೇನಾ ನಿಗಮಕ್ಕೆ ವಹಿಸಲು ನಿಗಮದ ಆಡಳಿತ ಮಂಡಳಿ ಸಭೆಯಲ್ಲಿ ನಿರ್ಧರಿಸಲಾಗಿದೆ.

ಇದರ ಭಾಗವಾಗಿ ನಿಗಮದ ವ್ಯವಸ್ಥಾಪಕ ನಿರ್ದೇಶಕ ಎಂ.ಎಲ್‌.ದೊಡಮನಿ ಇವರು ಇಂಡಿ ಪಟ್ಟಣದಲ್ಲಿ ಮೀನು ಮಾರುಕಟ್ಟೆ ನಿರ್ಮಾಣಕ್ಕೆ ಪುರಸಭೆ ನೀಡಿರುವ ಮೀನು ಮಾರುಕಟ್ಟೆ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಇಲಾಖೆ ಸಹಾಯಕ ನಿರ್ದೇಶಕ ಶ್ರೀಶೈಲ ಗಂಗನಹಳ್ಳಿ ಹಾಗೂ ಪುರಸಭೆ ಮುಖ್ಯಾಧಿಕಾರಿ ವಾಲಿ ಅವರೊಂದಿಗೆ ಚರ್ಚಿಸಿದ್ದು, ಬರುವ ನವೆಂಬರ್‌ ಮೊದಲ ವಾರದಲ್ಲಿ ಯೋಜನೆಯ ಕಾಮಗಾರಿಗೆ ಚಾಲನೆ ನೀಡಲು ಸಿದ್ಧತೆ ನಡೆಸಿದ್ದಾರೆ.

ಟಾಪ್ ನ್ಯೂಸ್

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Boat Capsizes In Odisha’s Mahanadi River

Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ

Tamil Nadu BJP chief Annamalai demands re-poll due to missing voter names

Loksabha Election; ತಮಿಳುನಾಡಿನಲ್ಲಿ ಮರು ಮತದಾನಕ್ಕೆ ಬಿಜೆಪಿ ಅಧ್ಯಕ್ಷ ಅಣ್ಣಾಮಲೈ ಆಗ್ರಹ

3-blthngady

ತಾಲೂಕಿನೆಲ್ಲೆಡೆ ಮುಂಜಾನೆ ಭಾರಿ ಮಳೆ;ಕೆಸರುಮಯ ರಾಷ್ಟ್ರೀಯ ಹೆದ್ದಾರಿಯಾಗಿಸಿದ ಗುತ್ತಿಗೆದಾರರು

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.