ಅಂಗವಿಕಲರಿಗೆ ಯೋಜನೆಗಳ ಲಾಭ ದೊರಕಿಸಿ: ಪಾಟೀಲ

ಕೃತಕ ಅಂಗಾಂಗ ಜೋಡಣೆ ಸಾಧನ ಸಲಕರಣೆಗಳ ವಿತರಣೆ

Team Udayavani, Jul 8, 2019, 4:30 PM IST

08-July-37

ವಿಜಯಪುರ: ಬಿಎಲ್ಡಿಇ ಆಸ್ಪತ್ರೆಯ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ಕೃತಕ ಅಂಗಾಂಗ ಜೋಡಣೆ ಉಚಿತ ಸಾಧನ ವಿತರಣಾ ಕಾರ್ಯಕ್ರಮ ಜರುಗಿತು.

ವಿಜಯಪುರ: ದಿವ್ಯಾಂಗ ಚೇತನರು ಎಲ್ಲರಂತೆ ಉತ್ತಮ ಜೀವನವನ್ನು ಹೊಂದಿ ಎಲ್ಲರೊಂದಿಗೆ ಸಹಬಾಳ್ವೆಯಿಂದ ತಮ್ಮ ಬದುಕನ್ನ ವೃದ್ಧಿಸಿಕೊಳ್ಳಲೆಂದೇ ರೂಪಿತವಾದ ಸರ್ಕಾರದ ಉತ್ತಮ ಯೋಜನೆಗಳ ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ ಹೇಳಿದರು.

ಜಿಲ್ಲಾಡಳಿತ, ಜಿಪಂ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಹಾನಗರ ಪಾಲಿಕೆ, ಬಿ.ಎಂ. ಪಾಟೀಲ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರ ಸಹಯೋಗದಲ್ಲಿ ನಗರದ ಬಿಎಲ್ಡಿಇ ಆಸ್ಪತ್ರೆಯ ಜಿಲ್ಲಾ ವಿಕಲಚೇತನರ ಪುನರ್ವಸತಿ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಕೃತಕ ಅಂಗಾಂಗ ಜೋಡಣೆ ಸಾಧನ ಸಲಕರಣೆಗಳ ಉಚಿತ ವಿತರಣಾ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ಸಲಕರಣೆ ವಿತರಿಸಿ ಅವರು ಮಾತನಾಡಿದರು.

ಅಧಿಕಾರಿಗಳು ಮತ್ತು ಸಾರ್ವಜನಿಕರ ನಡುವಿನ ಸಂಬಂಧ ವೃದ್ಧಿಯಾಗಿ ಸರ್ಕಾರಿ ಸೌಲಭ್ಯಗಳು ಜನರಿಗೆ ನೇರವಾಗಿ ತಲುಪುವಂತಾಗಬೇಕು. ಈ ನಿಟ್ಟಿನಲ್ಲಿ ಎಲ್ಲ ಅಧಿಕಾರಿ ವೃಂದದವರು ಸಂಘ ಸಂಸ್ಥೆಗಳ ಸಹಕಾರದಿಂದ ಕಾರ್ಯ ಪ್ರವೃತ್ತರಾಗುವಂತೆ ತಿಳಿಸಿದ ಅವರು, ಜಿಲ್ಲೆಯ ಎಲ್ಲ ತಾಲೂಕು ಮತ್ತು ಗ್ರಾಮಾಂತರ ಮಟ್ಟದಲ್ಲಿ ಸಮೀಕ್ಷೆ ನಡೆಸಿ ಸರ್ಕಾರಿ ಸೌಲಭ್ಯಗಳಿಂದ ವಂಚಿತರಾದ ದಿವ್ಯಾಂಗ ಚೇತನರಿಗೆ ವಿವಿಧ ಸೌಲಭ್ಯಗಳನ್ನು ಒದಗಿಸುವುದರ ಮೂಲಕ ಅವರನ್ನು ಮುಖ್ಯವಾಹಿನಿಗೆ ತರಬೇಕೆಂದು ಹೇಳಿದರು.

ಬಿಎಲ್ಡಿಇ ಸಂಸ್ಥೆ ಸೇರಿದಂತೆ ಹಲವು ಸಂಘ ಸಂಸ್ಥೆಗಳು ಹಾಗೂ ಸರ್ಕಾರದಿಂದ ಸಂಗ್ರಹಿಸಿದ ಹಣದಿಂದ ವಿವಿಧ ಸಲಕರಣೆಗಳನ್ನು ವಿತರಿಸುತ್ತಿದ್ದು ಈ ಉತ್ತಮ ಸಹಕಾರ ಮತ್ತು ಸೌಲಭ್ಯ ಪಡೆಯುವಲ್ಲಿ ವಂಚಿತರಾದ ದಿವ್ಯಾಂಗರು ಕಂಡು ಬಂದಲ್ಲಿ ಅಧಿಕಾರಿಗಳಿಗೆ ಮಾಹಿತಿ ಒದಗಿಸುವುದರ ಮೂಲಕ ಸಾರ್ವಜನಿಕರೂ ಸಹಕರಿಸಬೇಕು ಎಂದು ಮನವಿ ಮಾಡಿದರು.

ಜಿಪಂ ಸಿಇಒ ವಿಕಾಸ್‌ ಸುರಳಕರ ಮಾತನಾಡಿ, ದಿವ್ಯಾಂಗರ ಜೀವನ ವೃದ್ಧಿಗಾಗಿಯೇ ರೂಪಿಸಲ್ಪಟ್ಟ ಅನೇಕ ಯೋಜನೆಗಳಿದ್ದು, ಇವುಗಳು ಜನರಿಗೆ ತಲುಪುವಲ್ಲಿ ಕಾರ್ಯ ಸಾಧುವಾಗಬೇಕಿದೆ. ಸಂಬಂಧಿಸಿದ ಇಲಾಖೆ ಅಧಿಕಾರಿಗಳು ಸಂಸ್ಥೆಗಳ ಸಹಕಾರ ಪಡೆದು ಸಮಿತಿಗಳನ್ನು ರಚಿಸಿಕೊಂಡು ಪ್ರತಿ ಹಳ್ಳಿಗಳಲ್ಲಿ ತೆರಳಿ ನೇರವಾಗಿ ಅವರ ಮಾಹಿತಿ ಪಡೆದು ಅವರಿಗೆ ದೊರಕುವ ಸರ್ಕಾರಿ ಸೌಲಭ್ಯ ಒದಗಿಸಬೇಕು ಎಂದು ಸಲಹೆ ನೀಡಿದರು.

ನೋಡಲ್ ಅಧಿಕಾರಿ ಡಾ| ಎಂ.ಸಿ. ಯದವಣ್ಣನವರ ಮಾತನಾಡಿ, 2013-14ರಲ್ಲಿ ಪ್ರಾರಂಭವಾದ ಈ ಸಂಸ್ಥೆ ಇಲ್ಲಿವರೆಗೆ 138 ವೈದ್ಯಕೀಯ ತಪಾಸಣಾ ಶಿಬಿರಗಳನ್ನು ಹಮ್ಮಿಕೊಂಡು ಒಟ್ಟು 18,654 ಜನರನ್ನು ತಪಾಸಣೆ ಮಾಡಿ 1,767 ಜನ ವಿಕಲಚೇತನರಿಗೆ ಗುರುತಿನ ಚೀಟಿ ವಿತರಿಸಿದೆ ಎಂದರು.

ಎನ್‌ಡಿಪಿಸಿ ಹಾಗೂ ಬಿಎಲ್ಡಿಇ ಸಂಸ್ಥೆ ಧನಸಹಾಯದಿಂದ ರೆಡ್‌ಕ್ರಾಸ್‌ ಸಂಸ್ಥೆ ಸಹಯೋಗದೊಂದಿಗಿನ 270 ವಿಕಲಚೇತನರಿಗೆ ಕೃತಕ ಅಂಗಾಂಗ ಸಾಧನಗಳನ್ನು ವಿತರಿಸಿ ಅವರನ್ನು ಮುಖ್ಯವಾಹಿನಿಗೆ ತರಲು ಶ್ರಮಿಸುತ್ತಿವೆ ಎಂದು ಹೇಳಿದರು.

ಸಿ.ಬಿ. ಕುಂಬಾರ, ವಿ.ಜಿ. ಉಪಾಧ್ಯಾಯ, ನಿರ್ಮಲಾ ಸುರಪುರ, ವಿ.ಜಿ. ವಾರದ, ಡಾ| ವಿಜಯಕುಮಾರ ಕಲ್ಯಾಣಪ್ಪಗೊಳ ಇದ್ದರು.

ಟಾಪ್ ನ್ಯೂಸ್

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Ra

Congress; ಇಂದು ರಾಜ್ಯಕ್ಕೆ ರಾಹುಲ್‌ ಗಾಂಧಿ

Kharge (2)

Letter; ನ್ಯಾಯಪತ್ರ ಬಗ್ಗೆ ವಿವರಿಸಲು ಪಿಎಂ ಮೋದಿ ಸಮಯ ಕೇಳಿದ ಖರ್ಗೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qeqqew

I.N.D.I.A;ಗಂಡೇ ವಿಧಾನಸಭೆ ಕ್ಷೇತ್ರದಿಂದ ಕಲ್ಪನಾ ಸೊರೇನ್‌ ಕಣಕ್ಕೆ?

Ashwin Vaishnav

Train ಪ್ರಯಾಣಿಕರಿಗೆ ಇನ್ನು 20 ರೂ.ಗಳಲ್ಲಿ ಊಟ!

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Reservation: ಜನಸಂಖ್ಯೆ ಆಧಾರದಲ್ಲಿ ಮೀಸಲು ನೀಡಲು ಸಿದ್ಧರೇ?

Supreme Court

Supreme Court; ಖಾಸಗಿ ಆಸ್ತಿಯನ್ನು ಸ್ವಾಧೀನ ಮಾಡಬಹುದೇ? 

1-sadguru

Sadhguru; ಕಾವೇರಿ ಕಾಲಿಂಗ್‌ ಮೂಲಕ 10.9 ಕೋಟಿ ಸಸಿಗಳ ನಾಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.