ನಿವೇಶನ ರಹಿತರ ಪ್ರತಿಭಟನಾ ರ್ಯಾಲಿ

ಮನೆ ಹಂಚಿಕೆ ಮಾಡಲು ವಂತಿಗೆ ಹೆಸರಲ್ಲಿ ಬಡವರಿಂದ ಅಕ್ರಮ ಹಣ ವಸೂಲಿ ಆರೋಪ

Team Udayavani, Jun 27, 2019, 10:43 AM IST

27-June-8

ವಿಜಯಪುರ: ನಿವೇಶನ ರಹಿತರಿಂದ ಮನೆ ಹಂಚಿಕೆಗೆ ಅಕ್ರಮ ಹಣ ವಂತಿಗೆ ಸಂಗ್ರಹಿಸುತ್ತಿರುವುದನ್ನು ಖಂಡಿಸಿ ನಗರದಲ್ಲಿ ನಿವೇಶನ ರಹಿತರು ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ವಿಜಯಪುರ: ಜಿ ಪ್ಲಸ್‌ ಮನೆ ಹಂಚಿಕೆ ವಿಷಯದಲ್ಲಿ ಫ‌ಲಾನುಭವಿಗಳಿಂದ ನಿರ್ಮಾಣದಲ್ಲಿ ಟೆಂಡರ್‌ದಾರರ ಹಿತ ಕಾಪಾಡುವಲ್ಲಿ ಬಡ ಫಲಾನುಭವಿಗಳಿಂದ ವಂತಿಗೆ ಹೆಸರಿನಲ್ಲಿ ಅಕ್ರಮವಾಗಿ ಹಣ ಸುಲಿಗೆ ಮಾಡುತ್ತಿದೆ ಎಂದು ಆರೋಪಿಸಿ ನಿವೇಶನ ರಹಿತರ ಹೋರಾಟ ಸಮಿತಿ ನೇತೃತ್ವದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಯಿತು.

ಬುಧವಾರ ನಗರದಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳ ಕಚೇರಿಗೆ ಆಗಮಿಸಿ ಪ್ರತಿಭಟನೆ ಮುಂದುವರೆಸಿದರು. ಪ್ರಧಾನ ಮಂತ್ರಿ ಆವಾಸ್‌ ಯೋಜನೆಗೆ ಅರ್ಜಿ ಸಲ್ಲಿಸಿರುವ ಫಲಾನುಭವಿಗಳಿಗೆ ವಿತರಿಸಲು ವಿಜಯಪುರ ನಗರದಲ್ಲಿ ಜಿ ಪ್ಲಸ್‌ ಮಾದರಿ ಮನೆಗಳ ಕಾಮಗಾರಿ ಪ್ರಗತಿಯಲ್ಲಿದೆ. ಸದರಿ ಯೋಜನೆಗೆ ಕೇಂದ್ರ-ರಾಜ್ಯ ಸರಕಾರಗಳ ಅನುದಾನ ಪಡೆದು ಆಯ್ಕೆಯಾದ ಫಲಾನುಭವಿಗಳಿಂದ ವಂತಿಗೆ ಪಡೆದು ಮನೆಗಳ ಹಂಚಿಕೆ ಮಾಡುವಲ್ಲಿ ಅವ್ಯವಹಾರ ನಡೆದಿದೆ ಎಂದು ದೂರಿದರು.

ಸಮಿತಿ ಜಿಲ್ಲಾ ಸಂಚಾಲಕ ಬಾಳು ಜೇವೂರ ಮಾತನಾಡಿ, ನಗರದಲ್ಲಿ ಸುಮಾರು 25 ಸಾವಿರ ಜನ ವಸತಿ ಹೀನರಿದ್ದಾರೆ. ಸೂರಿಲ್ಲದ ಈ ಬಡವರಿಗೆ ಸರ್ಕಾರ ಸೂಕ್ತ ವಸತಿ ವ್ಯವಸ್ಥೆ ಕಲ್ಪಿಸಬೇಕು ಇಲ್ಲವೇ ನಿವೇಶನ ಒದಗಿಸಬೇಕು. ಆದರೆ ನಗರದಲ್ಲಿ ಬಡವರಿಂದ ಸರಕಾರ ನಿಗದಿ ಮಾಡಿದ ಹಣಕ್ಕಿಂತ ಹೆಚ್ಚಿಗೆ ಹಣ ಸಂಗ್ರಹಿಸುವ ಕೆಲಸ ನಡೆಯುತ್ತಿದೆ. ಈ ಕುರಿತು ಅಧಿಕಾರಿಗಳು ಸ್ಪಷ್ಟ ಮಾಹಿತಿ ನೀಡದ ಕಾರಣ ಫಲಾನುಭವಿಗಳಲ್ಲಿ ಗೊದಲ ಉಂಟಾಗಿದೆ. ಸೂರಿಲ್ಲದ ಜನರಿಗೆ ಮನೆ ಕೊಡಿಸುವುದಾಗಿ ಏಜೆಂಟರ ಹಾವಳಿಯೂ ಹೆಚ್ಚಿದೆ. ಕೂಡಲೇ ಈ ಕುರಿತು ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.

ಪ್ರತಿಭಟನಾಕಾರರಿಂದ ಮನವಿ ಸ್ವೀಕರಿಸಿ ಸ್ಪಷ್ಟೀಕರಣ ನೀಡಿದ ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ, ಫ‌ಲಾನುಭವಿಗಳಿಂದ ಸರ್ಕಾರ ನಿಗದಿಗಿಂತ ಹಣ ಸಂಗ್ರಹಿಸುತ್ತಿಲ್ಲ. ಬದಲಾಗಿ ಸರ್ಕಾರದ ನಿರ್ದೇಶನದಂತೆ ಸರಕಾರ ನಿಗದಿ ಮಾಡಿದ ಹಣಕ್ಕಿಂತ ಹೆಚ್ಚಿಗೆ ಟೆಂಡರ್‌ ಆಗಿದೆ. ಈ ಹಣ ಸರಿದೂಗಿಸಿಕೊಳ್ಳಲು ಪಲಾನುಭವಿಗಳಿಂದ ಸಂಗ್ರಹಿಸಲಾಗುತ್ತಿದೆ ಎಂದರು.

ಇದಕ್ಕೆ ಜೇವೂರ ಪ್ರತಿಕ್ರಿಯಿಸಿ ಟೆಂಡರ್‌ ಮೊತ್ತ ಹೆಚ್ಚಾಗಿದೆ ಎಂದು ಸೂರಿಲ್ಲದ ಬಡವರ ಪರಿಸ್ಥಿತಿ ದುರ್ಬಳಕೆ ಮಾಡಿಕೊಳ್ಳಲು ಬಡವರಿಂದಲೇ ಸುಲಿಗೆ ಇಳಿದಿರುವ ಕ್ರಮ ಸರಿಯಲ್ಲ. ಗುತ್ತಿಗೆದಾರರು, ಗೃಹ ನಿರ್ಮಾಣ ಮಾಲೀಕರು, ಉದ್ಯಮಿಗಳ ಜೊತೆ ಶಾಮೀಲಾಗಿ, ಉದ್ಯಮಿದಾರರ ಲಾಬಿ ಹಾಗೂ ಜನಪ್ರತಿನಿಧಿಗಳ ಕಮಿಷನ್‌ ದಂಧೆ ನಡೆಸಲಾಗುತ್ತಿದೆ. ಸರಕಾರಿ ಜಮಿನುಗಳಲ್ಲಿ ನಿವೇಶನ ತಯಾರಿಸಿ ಸೂರಿಲ್ಲದ ಎಲ್ಲ ಬಡವರಿಗೆ ನಿವೇಶನ ಹಂಚಿಕೆ ಮಾಡಲು ಲಭ್ಯ ಇರುವ ಸರಕಾರಿ ಜಮೀನಿನ ರಾಜ್ಯ ಸರಕಾರಕ್ಕೆ ಜಿಲ್ಲಾಡಳಿತ ವರದಿ ಸಲ್ಲಿಸಬೇಕು ಎಂದು ಆಗ್ರಹಿಸಿದರು.

ಈ ಮೊದಲು ಜಿಲ್ಲಾ ಉಸ್ತುವಾರಿ ಮಂತ್ರಿಗಳು, ಕಂದಾಯ ಹಾಗೂ ವಸತಿ ಮಂತ್ರಿಗಳಿಗೆ ಪತ್ರ ಬರೆದಿದ್ದಾರೆ. ಭೂತನಾಳ ಹತ್ತಿರ ಐಆರ್‌ಬಿ ಬಳಿ 30 ಎಕರೆ ಜಮಿನು ನಿವೇಶನಕ್ಕಾಗಿ ಮಂಜೂರಾಗಿದೆ. ಸದರಿ ಸ್ಥಳದಲ್ಲಿ ಜಿ ಪ್ಲಸ್‌ ಮನೆ ನಿರ್ಮಿಸಲು ಮುಂದಾಗಿರುವ ಸ್ಥಳೀಯ ಶಾಸಕರ ಯೋಜನೆ ಹಿಂದುಳಿದ ವಿಜಯಪುರ ನಗರದಲ್ಲಿ ಯಶಸ್ವಿಯಾಗಲು ಸಾಧ್ಯವಿಲ್ಲ ಎಂದು ವಿವರಿಸಿದರು.

ಪೀರಾ ಜಮಾದಾರ ಮಾತನಾಡಿದರು. ಜ್ಯೋತಿ ರೋಣಿಹಾಳ, ಸಂಗಿತಾ ದೊಡಮನಿ ಶಿವಗಂಗಾ ಕಟ್ಟಿಮನಿ, ಜಯಶ್ರೀ ಸುಧಾಕರ, ಪ್ರೇಮಾ ಗಸ್ತಿ, ಕೌಸರ್‌ ಶೇಖ್‌, ಶಬಾನಾ ಶೇಖ, ರೇಣುಕಾ ಸಾಳುಂಕೆ, ಶಕೆರಾ ಲೋಣಿ, ಹಣಮಂತ ಕಂಟಿ, ರಮೇಶ್‌ ಕದಂ, ನಜೀರ್‌ ಪಟೇಲ್, ಎಂ.ಎಸ್‌. ಟಿಕಾನದಾರ, ಮಮ್ತಾಜ್‌ ಮುಲ್ಲಾ, ಸೈನಾಜ್‌ ಇನಾಮದಾರ ಸೇರಿದಂತೆ ಇತರರು ಇದ್ದರು.

ಟಾಪ್ ನ್ಯೂಸ್

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ

ರಕ್ಷಣೆ: ಸ್ವಾವಲಂಬನೆಯತ್ತ ಭಾರತದ ದೃಢ ಹೆಜ್ಜೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Uppinangady ಬಸ್ಸಿನಲ್ಲಿ ಲೈಂಗಿಕ ಕಿರುಕುಳ: ಪ್ರತಿರೋಧಿಸಿದ ವಿದ್ಯಾರ್ಥಿನಿಯ ನಡೆಗೆ ಶ್ಲಾಘನೆ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

3-dinesh

33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್‌ ಗುಂಡೂರಾವ್‌

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Patna: ಪಾಟ್ನಾದಲ್ಲಿ ನಿತೀಶ್ ಕುಮಾರ್ ಪಕ್ಷದ ನಾಯಕನ ಗುಂಡಿಕ್ಕಿ ಹತ್ಯೆ… ಆರೋಪಿಗಳು ಪರಾರಿ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Ramakrishna Mission: ರಾಮಕೃಷ್ಣ ಮಠ, ಮಿಷನ್‌ನ ಅಧ್ಯಕ್ಷರಾಗಿ ಕನ್ನಡಿಗ ಸ್ವಾಮೀಜಿ ಆಯ್ಕೆ

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Sam Pitroda: ಪಿತ್ರೋಡಾ ಹೇಳಿಕೆ, ನಮ್ಮ ಅಭಿಪ್ರಾಯ ಅಲ್ಲ: ಕಾಂಗ್ರೆಸ್‌

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Lok Sabha Election: ಸೀನಿಯರ್‌ ಖೂಬಾಗೆ ಜ್ಯೂನಿಯರ್‌ ಖಂಡ್ರೆ ಸವಾಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.