ಜಿಮಖಾನಾ ಕ್ಲಬ್‌ನಿಂದ ಅಧಿಕಾರಿಗಳ ಕುಟುಂಬಕ್ಕೆ ಅನುಕೂಲ

ನಗರದಲ್ಲಿ ಆಫೀಸರ್ ಜಿಮಖಾನಾ ಕ್ಲಬ್‌ ಸಮಿತಿ ಅಸ್ತಿತ್ವಕ್ಕೆ

Team Udayavani, Sep 19, 2019, 6:14 PM IST

19-Sepctember-29

ವಿಜಯಪುರ: ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ ಅಧ್ಯಕ್ಷತೆಯಲ್ಲಿ ಜಿಮಖಾನಾ ಕ್ಲಬ್‌ ಸಾಮಾನ್ಯ ಸಭೆ ಜರುಗಿತು.

ವಿಜಯಪುರ: ಸರ್ಕಾರಿ ಅಧಿಕಾರಿಗಳು ಹಾಗೂ ಅವರ ಕುಟುಂಬಸ್ಥರಿಗೆ ಸಾಂಸ್ಕೃತಿಕ ಹಾಗೂ ಮನರಂಜನಾ ಚಟುವಟಿಕೆಗಳ ಅನುಕೂಲಕ್ಕಾಗಿ ನಗರದಲ್ಲಿ ಆಫೀಸರ್ ಜಿಮಖಾನಾ ಕ್ಲಬ್‌ ಆರಂಭಿಸಲಾಗಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ ಹೇಳಿದರು.

ನಗರದ ನಿರ್ಮಿತಿ ಬಜಾರ್‌ನಲ್ಲಿ ತಮ್ಮ ಅಧ್ಯಕ್ಷತೆಯಲ್ಲಿ ಜರುಗಿದ ಜಿಮಖಾನಾ ಕ್ಲಬ್‌ ಸಾಮಾನ್ಯ ಸಭೆಯಲ್ಲಿ ಮಾತನಾಡಿದ ಅವರು, ಐತಿಹಾಸಿಕ ವಿಜಯಪುರ ನಗರದಲ್ಲಿ ಜಿಮಖಾನಾ ಕ್ಲಬ್‌ ಕೂಡ ಐತಿಹಾಸಿಕ ಹಿನ್ನೆಲೆ ಹೊಂದಿದೆ. ಅಧಿಕಾರಿಗಳು ಹಾಗೂ ಅವರ ಕುಟುಂಬಗಳ ಸದಸ್ಯರ ಒತ್ತಡ ನಿವಾರಣೆ, ವಿವಿಧ ಮನರಂಜನಾ ಚಟುವಟಿಕೆಗಳಿಗೆ ಸೌಕರ್ಯ ಕಲ್ಪಿಸಬೇಕು. ಜೊತೆಗೆ ಅಧಿಕಾರಿಗಳಿಗೆ ವಿಶೇಷ ಸಮಯಾವಕಾಶ ದೊರೆಯುವಂತೆ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ ಎಂದರು.

ಬೆಂಗಳೂರಿನಲ್ಲಿ ಸ್ಥಾಪಿಸಲಾದ ಆಫೀಸರ್ ಕ್ಲಬ್‌ ಅತ್ಯಂತ ಹೆಸರುವಾಸಿಯಾಗಿದ್ದು, ಈ ಕ್ಲಬ್‌ ಸದಸ್ಯರಾಗುವುದೇ ಗೌರವ-ಪ್ರತಿಷ್ಠೆ ವಿಷಯ. ಈ ದಿಸೆಯಲ್ಲಿ ವಿಜಯಪುರ ನಗರದಲ್ಲಿ ಆರಂಭಗೊಂಡಿರುವ ಸುಸಜ್ಜಿತ ಆಫೀಸರ್ ಕ್ಲಬ್‌ನಲ್ಲಿ ಅಧಿಕಾರಿಗಳಿಗೆ ಅಮೂಲ್ಯ ಸಮಯಾವಕಾಶ ಕಲ್ಪಿಸುವ ಉದ್ದೇಶ ಹೊಂದಲಾಗಿದೆ. ವಿಚಾರ-ವಿನಿಮಯ, ಮಕ್ಕಳಿಗೆ ವಿವಿಧ ಕ್ರೀಡಾಕೂಟ ಮತ್ತು ಪರಸ್ಪರ ಪರಿಚಯ ಮತ್ತು ಕಷ್ಟ ಸುಖಗಳನ್ನು ಹಂಚಿಕೊಳ್ಳಲು ಇದು ಉತ್ತಮ ವೇದಿಕೆಯಾಗಲಿದೆ. ಹಂತ ಹಂತವಾಗಿ ಕ್ಲಬ್‌ ಅಭಿವೃದ್ಧಿಗೊಳಿಸುವ ಉದ್ದೇಶ ಹೊಂದಿದ್ದು, ಇಂದು ತಾತ್ಕಾಲಿಕವಾಗಿ ಕಾರ್ಯಕಾರಿ ಮಂಡಳಿ ರಚಿಸಲಾಗಿದೆ ಎಂದು ಹೇಳಿದರು.

ಜಿಪಂ ಸಿಇಒ ವಿಕಾಸ ಸುರಳಕರ ಮಾತನಾಡಿ, ಆಫಿಸರ್ ಕ್ಲಬ್‌ ಸ್ಥಾಪನೆಯಿಂದ ಸಾಂಸ್ಕೃತಿಕ ಹಾಗೂ ಇದಕ್ಕೆ ಪೂರಕವಾಗಿರುವ ಚಟುವಟಿಕೆಗಳಿಗೆ ಉತ್ತಮ ವೇದಿಕೆಯಾಗಲಿದೆ. ಕ್ಲಬ್‌ ವ್ಯಾಪ್ತಿಯಲ್ಲಿ ಮೂಲ ಸೌಕರ್ಯ ಅಭಿವೃದ್ಧಿ ಮಾಡಬೇಕಿದೆ. ವಿಶೇಷವಾಗಿ ತಕ್ಷಣಕ್ಕೆ ರೆಸ್ಟೋರೆಂಟ್ ತೆರೆಯುವುದು ತುರ್ತು ಅವಶ್ಯವಾಗಿದೆ. ಈ ಹಿನ್ನೆಲೆಯಲ್ಲಿ ಅಧಿಕಾರಿಗಳು ಸೂಕ್ತ ಸಲಹೆ-ಸೂಚನೆ ನೀಡುವಂತೆ ಹೇಳಿದರು.

ಎಸ್ಪಿ ಪ್ರಕಾಶ ನಿಕ್ಕಂ ಮಾತನಾಡಿ, ವಿಜಯಪುರ ನಗರದಲ್ಲಿ ಬ್ರಿಟಿಷ್‌ ಕಾಲದಿಂದಲೂ ಆಫೀಸರ್ ಕ್ಲಬ್‌ ಇದ್ದು, ಸದ್ಯಕ್ಕೆ 1.5 ಎಕರೆ ಪ್ರದೇಶ ಸ್ಥಿರಾಸ್ತಿಯಾಗಿದೆ. ಸ್ವಾತಂತ್ರ್ಯ ದಿನಾಚರಣೆ, ಹೊಸ ವರ್ಷಾಚರಣೆ ಸೇರಿದಂತೆ ಮಹತ್ವದ ದಿನಗಳಂದು ಅಧಿಕಾರಿಗಳ ಕುಟುಂಬಸ್ಥರು ಅಮೂಲ್ಯ ಸಮಯ ಕಳೆಯಲು ಅವಕಾಶ ಲಭ್ಯವಾಗಲಿದೆ. ಅದರಂತೆ ವಿವಿಧ ಜಿಲ್ಲೆಗಳ ಅಧಿಕಾರಿಗಳ ಕ್ಲಬ್‌ಗಳ ಸಹಯೋಗದೊಂದಿಗೆ ಇಲ್ಲಿನ ಚಟುವಟಿಕೆ ಮುಂದುವರಿಸಲು ಸಲಹೆ ನೀಡಿ ವಿವಿಧ ಸ್ಪರ್ಧೆಗಳಿಗೂ ಅವಕಾಶ ಕಲ್ಪಿಸುವಂತಾಗಲಿ ಎಂದರು.

ಅಪರ ಜಿಲ್ಲಾಧಿಕಾರಿ ಎಚ್.ಪ್ರಸನ್ನ ಮಾತನಾಡಿ, ವಿಜಯಪುರ ನಗರದ ಜಿಮಖಾನಾ ಕ್ಲಬ್‌ ಐತಿಹಾಸಿಕ ಹಿನ್ನೆಲೆ ಹೊಂದಿದೆ. ಈ ಹಿಂದೆ ಆನಂದ ಮಹಲ್ನಲ್ಲಿ ಕ್ಲಬ್‌ನ ಕಚೇರಿ ಹೊಂದಿದ್ದು ಈಗ ನಿರ್ಮಿತಿ ಬಜಾರದಲ್ಲಿ ಈ ಕ್ಲಬ್‌ ಆರಂಭಿಸಲಾಗಿದೆ. ಗ್ರೂಪ್‌-ಎ, ಗ್ರೂಪ್‌-ಬಿ ಮತ್ತು ನಿವೃತ್ತ ಅಧಿಕಾರಿಗಳು ಮುಂದಿನ ದಿನಗಳಲ್ಲಿ ಕ್ಲಬ್‌ ಸದಸ್ಯರಾಗಲು ಅವಕಾಶವಿದೆ ಎಂದು ಹೇಳಿದರು.

ಕ್ಲಬ್‌ನ 2019-20ನೇ ಸಾಲಿನ ತಾತ್ಕಾಲಿಕ ಕಾರ್ಯಕಾರಿ ಮಂಡಳಿ ರಚಿಸಲಾಯಿತು. ಜಿಲ್ಲಾಧಿಕಾರಿಗಳು ಕ್ಲಬ್‌ ಶಾಶ್ವತ ಅಧ್ಯಕ್ಷರಾಗಿದ್ದು, ಎಸ್ಪಿ ಶಾಶ್ವತ ಉಪಾಧ್ಯಕ್ಷರಾಗಿರುತ್ತಾರೆ. ಜಿಪಂ ಸಿಇಓ ಸಹ- ಅಧ್ಯಕ್ಷರಾಗಿರಲಿದ್ದಾರೆ. ಇದಲ್ಲದೇ ಅಪರ ಜಿಲ್ಲಾಧಿಕಾರಿಗಳು, ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿಗಳು, ಜಿಪಂ ಉಪ ಕಾರ್ಯದರ್ಶಿಗಳು, ಉಪ ವಿಭಾಗಾಧಿಕಾರಿಗಳು, ಮಹಾನಗರ ಪಾಲಿಕೆ ಆಯುಕ್ತರು, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕರು, ಅಬಕಾರಿ ಆಯುಕ್ತರು, ಉಪ ನಿಬಂಧಕರು ಸಹಕಾರ ಇಲಾಖೆ ಹಾಗೂ ಆರೋಗ್ಯ ಇಲಾಖೆಯ ಓರ್ವ ಅಧಿಕಾರಿ ಒಂಬತ್ತು ಸದಸ್ಯರ ಕಾರ್ಯಕಾರಿ ಸದಸ್ಯರನ್ನೂ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯ ಸಮಿತಿ ರಚನೆ ಮಾಡಿತು. ಎಎಸ್ಪಿ ನೇಮಗೌಡ, ಜಿಪಂ ಉಪ ಕಾರ್ಯದರ್ಶಿ ಅಮರೇಶ ನಾಯಕ ಸೇರಿದಂತೆ ಜಿಲ್ಲಾಮಟ್ಟದ ಅಧಿಕಾರಿಗಳು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.