ಧೋ ಎಂದು ಸುರಿದ ಮಳೆರಾಯ

ಮನೆಗಳಿಗೆ ನೀರು ನುಗ್ಗಿ ಹಾನಿನಾಲ್ಕಾರು ಹಳ್ಳಿ ಹೊರತಾಗಿ ಜಿಲ್ಲೆಯಲ್ಲಿ ಬಹುತೇಕ ಉತ್ತಮ ಮಳೆ

Team Udayavani, Oct 5, 2019, 11:51 AM IST

5-0ctober-7

ವಿಜಯಪುರ: ವಿಜಯಪುರ ಜಿಲ್ಲೆಯಲ್ಲಿ ಗುರುವಾರ 23.13 ಮಿ.ಮೀ. ಮಳೆಯಾಗಿದೆ. ಮಳೆ ನೀರು ಮನೆಗಳಿಗೆ ನುಗ್ಗಿ ಹಾನಿ ಮಾಡಿದ್ದರಿಂದ ಬಬಲೇಶ್ವರ ನಾಕಾ ಪ್ರದೇಶದ ನಿವಾಸಿಗಳು ರಸ್ತೆಗೆ ಇಳಿದು ಪ್ರತಿಭಟನೆ ಮಾಡಿದ ಘಟನೆಯೂ ನಡೆಯಿತು.

ಜಿಲ್ಲೆಯ ಆಲಮಟ್ಟಿ, ಮಟ್ಟಿಹಾಳ, ಸಾಸಬಾಳ, ಬಬಲೇಶ್ವರ, ಮಮದಾಪುರ ಹೊರತು ಪಡಿಸಿದರೆ ಜಿಲ್ಲೆಯ ಬಹುತೇಕ ಎಲ್ಲ ಕಡೆ ಉತ್ತಮ ಮಳೆಯಾಗಿದೆ. ಗುರುವಾರ ಇಡಿ ದಿನ ಭಾರಿ ಬಿಸಿಲಿನ ಝಳ ಇದ್ದು, ಸಂಜೆ ವೇಳೆ ಇದ್ದಕ್ಕಿದ್ದಂತೆ ಮೋಡ ಕವಿದ ವಾತಾವರಣ ಸೃಷ್ಟಿಯಾಗಿ, ಧೋ ಎಂದು ಮಳೆ ಸುರಿಯಲಾರಂಭಿಸಿತು. ಹೀಗೆ ಸುರಿಯತೊಡಗಿದ ಮಳೆ ಶುಕ್ರವಾರ ಬೆಳಗಿನವರೆಗೂ ಸುರಿಯುತ್ತಲೇ ಇತ್ತು.

ಭೀಕರ ಮಳೆಗೆ ನಗರದ ಚಾಲುಕ್ಯ ನಗರ, ಶಾಪೇಟೆ, ಮನಗೂಳಿ ಅಗಸಿ, ಕೀರ್ತಿ ನಗರ, ಹುತಾತ್ಮರ ವೃತ್ತ, ಬಸವೇಶ್ವರ ವೃತ್ತ ಸೇರಿದಂತೆ ಹಲವು ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ, ಮನೆಗಳು, ವ್ಯಾಪಾರಿ ಮಳಿಗೆಗಳಲ್ಲಿನ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಹಾನಿಗೀಡಾಗಿವೆ. ಭೀಕರ ಮಳೆಗೆ ನಗರ ಎಲ್ಲ ರಸ್ತೆಗಳು ಕೂಡ ತುಂಬಿ ಹರಿಯತೊಡಗಿದ ಕಾರಣ ವಾಹನ ಸಂಚಾರರು, ಅದರಲ್ಲೂ ದ್ವಿಚಕ್ರ ವಾಹನ ಸವಾರರು ರಸ್ತೆಗಳ ಗುಂಡಿಗಳಲ್ಲಿನ ನೀರಿನ ಆಳ ತಿಳಿಯದೇ ಬೀಳುತ್ತಿದ್ದುದು ಸಾಮಾನ್ಯವಾಗಿತ್ತು.

ಶುಕ್ರವಾರ ಬೆಳಗಿನವರೆಗೂ ನಗರದ ಬಹುತೇಕ ತಗ್ಗು ಪ್ರದೇಶಗಳಲ್ಲಿ ನೀರು ನಿಂತಿದ್ದು, ಮನೆಗಳಲ್ಲಿ ತುಂಬಿದ್ದ ನೀರು ಹೊರ ಹಾಕಲು ಕೂಡ ಆಗದ ಸ್ಥಿತಿ ನಿರ್ಮಾಣವಾಗಿತ್ತು. ಇದಲ್ಲದೇ ಶುಕ್ರವಾರ ಮಧ್ಯಾಹ್ನವಾದರೂ ಹಲವು ಬಡಾವಣೆಗಳಲ್ಲಿ ತುಂಬಿಕೊಂಡಿದ್ದ ಮಳೆ ಹಾಗೂ ಕೊಳಚೆ ನೀರು ಹೊರ ಹೋಗಲು ಅನುವಾಗದೇ ನಿಂತಿದ್ದರಿಂದ ಜನರು ಪರಿತಪಿಸುವಂತಾಯಿತು.

ನಗರದ ಲಕ್ಷ್ಮೀ ಚಿತ್ರ ಮಂದಿರದಲ್ಲಿ ಮಳೆ ನೀರಿನಿಂದ ಜಲಾವೃತವಾಗಿದ್ದು, ಶುಕ್ರವಾರ ಬೆಳಗಿನ ಪ್ರಸಾರಕ್ಕೆ ಸಮಸ್ಯೆ ಉಂಟು ಮಾಡಿತ್ತು. ಈ ಮಧ್ಯೆ ಮಳೆ ನೀರಿನಿಂದ ತಮ್ಮ ಮನೆಗಳಿಗೆ ನೀರು ನುಗ್ಗಿ ಹಾನಿ ಮಾಡಿದ್ದರಿಂದ ರೊಚ್ಚಿಗೆದ್ದ ಬಬಲೇಶ್ವರ ನಾಕಾ ಪ್ರದೇಶದ ವಿವಿಧ ಬಡಾವಣೆಗಳ ಜನರು ಶುಕ್ರವಾರ ದಿಢೀರ್‌ ರಸ್ತೆ ಸಂಚಾರ ತಡೆ ನಡೆಸಿ ಪ್ರತಿಭಟನೆ ಮಾಡಿದರು. ಕೂಡಲೇ ಸ್ಥಳಕ್ಕೆ ಧಾವಿಸಿದ ಪೊಲೀಸರು ಪರಿಸ್ಥಿತಿ ತಿಳಿಗೊಳಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಇಂತಹ ಸಮಸ್ಯೆಗಳ ಹೊರತುಪಡಿಸಿ ಜಿಲ್ಲೆಯಲ್ಲಿ ಸುರಿದ ಮಳೆ ಹಿಂಗಾರು ಹಂಗಾಮಿನ ಬಿತ್ತನೆಗೆ ಉತ್ತಮವಾಗಿದೆ. ಹಿಂಗಾರು ಹಂಗಾಮಿನ ಜೋಳ, ಗೋಧಿ, ಕಡಲೆ, ಹತ್ತಿಯಂಥ ಬಿತ್ತನೆಗೆ ಸೂಕ್ತವಾಗಿದ್ದು, ಮಳೆ ಇಲ್ಲದೇ ಕಂಗಾಗಲಾಗಿದ್ದ ಅನ್ನದಾತನ ಮೊಗದಲ್ಲಿ ಮಂದಹಾಸ ಮೂಡಿಸಿದೆ.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Kundapur: ಕುಸಿದು ಬಿದ್ದು ಸಾವು

Kundapur: ಕುಸಿದು ಬಿದ್ದು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.