ಪ್ರಕೃತಿ ವೈಪರೀತ್ಯದಿಂದ ಸಂಕಷ್ಟಕ್ಕೆ ಸಿಲುಕಿದ ರೈತ: ಶಿವಕುಮಾರ

ಪ್ರಕೃತಿ ಸಮತೋಲನ ಕಾಯುವಲ್ಲಿ ಮಹಿಳೆಯರ ಪಾತ್ರ ಮಹತ್ತರ

Team Udayavani, Aug 19, 2019, 3:09 PM IST

19-Agust-33

ವಿಜಯಪುರ: ಆತ್ಮಾ ಯೋಜನೆಯಲ್ಲಿ ಹಮ್ಮಿಕೊಂಡಿದ್ದ ರೈತ ವಿಜ್ಞಾನಿಗಳ ಚರ್ಚಾಗೋಷ್ಠಿಗೆ ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕ ಡಾ| ಶಿವಕುಮಾರ ಚಾಲನೆ ನೀಡಿದರು.

ವಿಜಯಪುರ: ಜಿಲ್ಲೆಯಲ್ಲಿ ಒಂದೆಡೆ ಪ್ರವಾಹ ಪರಿಸ್ಥಿತಿ, ಮತ್ತೂಂದೆಡೆ ಮಳೆ ಇಲ್ಲದೇ ಅನಾವೃಷ್ಟಿ, ಪ್ರಕೃತಿ ಹವಾಮಾನ ವೈಪರಿತ್ಯದ ವಿಪರೀತತೆ ಮಧ್ಯೆ ಸಿಲುಕಿರುವ ರೈತರು ದುಸ್ತರ ಬದುಕು ಸಾಗಿಸುವಂತಾಗಿದೆ ಎಂದು ಕೃಷಿ ಇಲಾಖೆ ಜಂಟಿ ಕೃಷಿ ನಿರ್ದೇಶಕ ಡಾ| ಶಿವಕುಮಾರ ಆತಂಕ ವ್ಯಕ್ತಪಡಿಸಿದರು.

ಹಿಟ್ನಳ್ಳಿ ಕೃಷಿ ಮಹಾವಿದ್ಯಾಲಯದಲ್ಲಿ ಕೃಷಿ ಇಲಾಖೆಯ ಆತ್ಮಾ ಯೋಜನೆ, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರ, ಕೃಷಿ ವಿಜ್ಞಾನ ಕೇಂದ್ರ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಶಕ್ತಿ ಅಭಿಯಾನ ಹಾಗೂ ಪರ್ಯಾಯ ಬೆಳೆ ಪದ್ಧತಿ ಕುರಿತು ಜರುಗಿದ ರೈತ ವಿಜ್ಞಾನಿಗಳ ಚರ್ಚಾಗೋಷ್ಠಿಗೆ ಚಾಲನೆ ನೀಡಿ ಮಾತನಾಡಿದ ಅವರು, ಜಿಲ್ಲೆಯಲ್ಲಿ ಪ್ರಸಕ್ತ ವರ್ಷ ಶೇ. 30 ಮಳೆ ಕೊರತೆಯಾಗಿದ್ದು, ಶೇ. 60 ಪ್ರದೇಶದಲ್ಲಿ ಕೇವಲ 15 ದಿನಗಳಲ್ಲಿ ಶೇ. 40 ಬಿತ್ತನೆಯಾಗಿದೆ. ಹವಾಮಾನ ವೈಪರೀತ್ಯದಿಂದಾಗಿ ಇಂತಹ ಬದಲಾವಣೆ ಎದುರಾಗಲಿವೆ ಎಂದರು.

ಅಗತ್ಯ ಇಲ್ಲದ ಎಲ್ಲೋ ಸುರಿದ ಮಳೆ ಇನ್ನೆಲ್ಲೋ ಹರಿದು ತನ್ನ ಗಂಭೀರ ಪ್ರಭಾವ ಬೀರುತ್ತದೆ. ಪ್ರಕೃತಿಯ ಇಂತಹ ಬೆಳವಣಿಗೆ ರೈತರನ್ನು ಸಂಕಷ್ಟಕ್ಕೆ ತಳ್ಳುತ್ತದೆ ಎಂದರು.

ಭಾರತೀಯ ಕೃಷಿ ಅನುಸಂದಾನ ಪರಿಷತ್‌ ಸಲಹಾ ಮಂಡಳಿ ಸದಸ್ಯ ಬಸವರಾಜ ಕುಂಬಾರ ಮಾತನಾಡಿ, ಪ್ರತಿ ಮನುಷ್ಯನ ಬದುಕಿಗೆ ನೀರು ಎಷ್ಟು ಅಮೂಲ್ಯವೋ ಬೆಳೆಗಳ ಬೆಳವಣಿಗೆಗೂ ಕೂಡ ನೀರು ಅಷ್ಟೇ ಮುಖ್ಯ. ಪ್ರಕೃತಿ ವಿಕೋಪದಿಂದ ಒಂದೆಡೆ ನೆರೆ ಹಾವಳಿ, ಮತ್ತೂಂದೆಡೆ ಮಳೆ ಇಲ್ಲದೇ ಭೀಕರ ಬರ. ಕಳೆದ 30 ವರ್ಷದಲ್ಲಿ ಜಿಲ್ಲೆಯಲ್ಲಿ ಮೂರು ವರ್ಷ ಮಾತ್ರ ವಾಡಿಕೆ ಮಳೆಯಾಗಿರುವ ಕಾರಣ ನಿಸರ್ಗದೊಂದಿಗೆ ಹೊರಾಡುವ ಸಂಕಷ್ಟವನ್ನು ಕಣ್ಣಿಗೆ ಕಟ್ಟುತ್ತದೆ. ವ್ಯರ್ಥವಾಗಿ ಹರಿಯುವ ನೀರು ತಡೆಯಲು ಜಲಾಶಯಗಳನ್ನು ನಿರ್ಮಿಸಿದರೂ ಅನ್ನದಾತರ ಪಾಲಿಗೆ ಇಲ್ಲದಂತ ದುಸ್ಥಿತಿ. ಹೀಗಾಗಿ ಮನುಷ್ಯನಿಂದ ಸೃಷ್ಟಿಸಲು ಸಾಧ್ಯವಿಲ್ಲದ ನೀರು ಹಾಗೂ ಮಣ್ಣು ಸಂರಕ್ಷಣೆ ನಮ್ಮೆಲ್ಲರ ಹೊಣೆ ಎಂದರು.

ಅಧ್ಯಕ್ಷತೆ ವಹಿಸಿದ್ದ ಕೃಷಿ ಮಹಾವಿದ್ಯಾಲಯ ವಿದ್ಯಾಧಿಕಾರಿ ಡಾ| ಎಸ್‌.ಎಂ. ಮುಂದಿನಮನಿ, ರೈತರು ವಿಜ್ಞಾನಿಗಳ ಸಂಪರ್ಕಕ್ಕೆ ಬರುವ ರೈತ ವಿಜ್ಞಾನಿಗಳ ಚರ್ಚಾಗೋಷ್ಠಿ ಅನುಕೂಲವಾಗಿದೆ. ಇಂಥ ನಿರಂತರ ಇಂತಹ ಪ್ರಯತ್ನಗಳಿಂದ ರೈತರ ಆರ್ಥಿಕ ಸ್ಥಿತಿ ಸುಧಾರಿಸುವಲ್ಲಿ ನೆರವಾಗಲಿದೆ ಎಂದರು.

ಆತ್ಮಾ ಯೋಜನೆ ರಾಜ ಸಮಿತಿ ಸದಸ್ಯೆ ಮಹಾದೇವಿ ಗೋಕಾಕ ಮಾತನಾಡಿ, ಮಣ್ಣು ಮತ್ತು ನೀರು ಸಂರಕ್ಷಣೆ ಮೂಲಕ ಪ್ರಕೃತಿ ಸಮತೋಲನ ಕಾಯುವಲ್ಲಿ ಮಹಿಳೆಯ ಪಾತ್ರವೇ ಹಿರಿದಾಗಿದೆ. ಹೀಗಾಗಿ ಮಹಿಳೆಯರು ಪರಿಸರ ಸ್ನೇಹಿತ ಕಾರ್ಯಗಳಲ್ಲಿ ತಮ್ಮನ್ನು ತೊಡಗಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಕೃಷಿ ವಿಶ್ವವಿದ್ಯಾಲಯ ವ್ಯವಸ್ಥಾಪನಾ ಮಂಡಳಿ ಸದಸ್ಯ ಸುರೇಶ ಗೊಣಸಗಿ, ಸಹ ಸಂಶೋಧನಾ ನಿರ್ದೇಶಕ ಡಾ| ಎಸ್‌.ಬಿ. ಕಲಘಟಗಿ ಮಾತನಾಡಿದರು.

ಸಹ ವಿಸ್ತರಣಾ ನಿರ್ದೇಶಕ ಡಾ| ಎಚ್.ಬಿ. ಬಬಲಾದ, ಆತ್ಮಾ ಯೋಜನೆ ಜಿಲ್ಲಾ ಉಪ ನಿರ್ದೇಶಕ ಡಾ| ಎಂ.ಬಿ. ಪಟ್ಟಣಶೇಟ್ಟಿ, ಕೃಷಿ ವಿಸ್ತರಣಾ ಮುಂದಾಳು ಡಾ| ಆರ್‌.ಬಿ. ಬೆಳ್ಳಿ, ಕೃಷಿ ವಿಜ್ಞಾನ ಕೇಂದ್ರ ಮುಖ್ಯಸ್ಥ ಡಾ| ಎಸ್‌.ಎ. ಬಿರಾದಾರ, ಪಶು ವಿಭಾಗದ ಡಾ| ಸಂಗೀತಾ ಜಾಧವ ರೈತರೊಂದಿಗೆ ಸಂವಾದ ನಡೆಸಿ ನೈಸರ್ಗಿಕ ವಿಕೋಪ ನಿರ್ವಹಣೆ ಹಾಗೂ ಕೃಷಿಯಲ್ಲಿ ಪರಿಸರ ಸ್ನೇಹಿ ಕೆಲಸ ಮಾಡುವ ಕುರಿತು ವಿವರಿಸಿದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.