ಜಲ ಸಂರಕ್ಷಣೆ ಖುದ್ದು ವೀಕ್ಷಿಸಿದ ಕೇಂದ್ರ ತಂಡ

ಇಂಡಿ ತಾಲೂಕಿನ ವಿವಿಧ ಗ್ರಾಮಗಳಿಗೆ ಭೇಟಿ

Team Udayavani, Jul 19, 2019, 10:49 AM IST

19-July-9

ವಿಜಯಪುರ: ಜಿಲ್ಲೆಯಲ್ಲಿ ಜಲ ಸಂರಕ್ಷಣೆಗೆ ಕೈಗೊಂಡಿರುವ ಯೋಜನಾ ಸ್ಥಳಗಳಿಗೆ ಭೇಟಿ ನೀಡಿದ ಕೇಂದ್ರ ಸರ್ಕಾರದ ಜಲಶಕ್ತಿ ಅಭಿಯಾನದ ಸಮನ್ವಯಾಧಿಕಾರಿ ಅಜಯ ಶ್ರೀವಾಸ್ತವ ಪರಿಶೀಲಿಸಿದರು.

ವಿಜಯಪುರ: ನೀರಿನ ಕೊರತೆ ಹಾಗೂ ಜಲಸಂರಕ್ಷಣಾ ಕ್ರಮಗಳ ಕುರಿತು ವಸ್ತುಸ್ಥಿತಿ ಅಧ್ಯಯನಕ್ಕೆ ಆಗಮಿಸಿರುವ ಕೇಂದ್ರದ ಜಲಶಕ್ತಿ ಅಭಿಯಾನದ ಸಮನ್ವಯ ಅಧಿಕಾರಿ ಅಜಯ ಶ್ರೀವಾಸ್ತವ ನೇತೃತ್ವದಲ್ಲಿ ಅಧಿಕಾರಿಗಳ ತಂಡ ಜಿಲ್ಲೆಯ ವಿವಿಧೆಡೆ ಕೈಗೊಂಡಿರುವ ಜಲ ಸಂರಕ್ಷಣೆ ಕ್ರಮಗಳನ್ನು ಖುದ್ದು ವೀಕ್ಷಣೆ ನಡೆಸಿತು.

ಕೃಷಿ, ತೋಟಗಾರಿಕೆ, ಜಲಾನಯನ ಇಲಾಖೆ ಸೇರಿದಂತೆ ಜಿಲ್ಲೆಯ ಮತ್ತು ಇಂಡಿ ತಾಲೂಕಿನ ಬರ ಪರಿಸ್ಥಿತಿ ಕುರಿತು ವಿವಿಧ ಇಲಾಖೆಗಳ ಅಧಿಕಾರಿಗಳೊಂದಿಗೆ ಜಿಲ್ಲೆಯಲ್ಲೇ ಅತಿ ಹೆಚ್ಚು ನೀರಿನ ಸಮಸ್ಯೆ ಎದುರಿಸುತ್ತಿರುವ ಇಂಡಿ ತಾಲೂಕಿನ ಅಥರ್ಗಾ, ತಡವಲಗಾ, ಗಣವಲಗಾ, ರೂಗಿ, ಬಬಲಾದ, ಹಳಗುಣಕಿ ಗ್ರಾಮಗಳಿಗೆ ಭೇಟಿ ನೀಡಿ ಕೃಷಿಹೊಂಡ, ಬಾವಿಗಳು ಹಾಗೂ ಜಲ ಸಂರಕ್ಷಣೆಗೆ ಕೈಗೊಂಡಿರುವ ಕ್ರಮಗಳ ಕುರಿತು ಪರಿಶೀಲನೆ ನಡೆಸಿದರು.

ಕೇಂದ್ರದ ವಾಣಿಜ್ಯ ಇಲಾಖೆಯ ಆರ್ಥಿಕ ಸಲಹೆಗಾರರೂ ಆಗಿರುವ ಶ್ರೀವಾಸ್ತವ ಅವರು, ರಾಷ್ಟ್ರದಲ್ಲಿ ತೀವ್ರ ಬರ ಎದುರಿಸುತ್ತಿರುವ ಜಿಲ್ಲೆಗಳ ಪೈಕಿ ಕರ್ನಾಟಕ ರಾಜ್ಯದ ಹಾಸನ, ಬಳ್ಳಾರಿ, ವಿಜಯಪುರ ಜಿಲ್ಲೆಗಳನ್ನು ಜಲಶಕ್ತಿ ಅಭಿಯಾನದಡಿ ಆಯ್ಕೆ ಮಾಡಲಾಗಿದೆ.

ಜಲಶಕ್ತಿ ಅಭಿಯಾನದ ಅನುಷ್ಠಾನಕ್ಕಾಗಿ ಜಿಲ್ಲೆಯ ಪರಿಸ್ಥಿತಿ ಅಧ್ಯಯನ ನಡೆಸಲು ಮುಂದಾಗಿದೆ. ಅಥರ್ಗಾ ಗ್ರಾಮದಲ್ಲಿ ನರೇಗಾ ಯೋಜನೆಯಡಿ ನಿರ್ಮಿಸಲಾದ ಕೃಷಿ ಹೊಂಡ ಪರಿಶೀಲನೆ ನಡೆಸಿ, ಅವಶ್ಯಕ ಮಾಹಿತಿ ಪಡೆದರು. ಕೃಷಿ ಭಾಗ್ಯ ಯೋಜನೆಯಡಿ ರೈತರಿಗೆ ನೀಡಲಾಗುತ್ತಿರುವ ಸೌಲಭ್ಯಗಳ ಬಗ್ಗೆ ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದರು.

ತಡವಲಗಾ ಗ್ರಾಮದಲ್ಲಿ ಬೇವಿನತೋಪು ವೀಕ್ಷಣೆ ನಡೆಸಿದರು. ಇಂಡಿ ಸೇರಿದಂತೆ ಜಿಲ್ಲಾದ್ಯಂತ 70 ಬೇವಿನತೋಪು ಬ್ಲಾಕ್ಸ್‌ ನಿರ್ಮಿಸಲಾಗಿದೆ. ಕೊಳವೆಬಾವಿ ತೋಡಲು ಅನುದಾನದ ಅವಶ್ಯಕತೆ ಇದೆ. ಇದಲ್ಲದೇ ತಡವಲಗಾ ಗ್ರಾಮದಲ್ಲಿ 27 ಹೆಕ್ಟೇರ್‌ ಜಮೀನಿನಲ್ಲಿ 5,400 ಬೇವಿನ ಸಸಿಗಳನ್ನು ನೆಡಲಾಗಿದೆ. ಅದರಂತೆ ಜಿಲ್ಲಾದ್ಯಂತ ಈ ಸಸಿಗಳನ್ನು ನೆಡಲಾಗುತ್ತಿದೆ ಎಂದು ಅರಣ್ಯ ಸಂರಕ್ಷಣಾಧಿಕಾರಿಗಳು ಮಾಹಿತಿ ನೀಡಿದರು.

ಅದರಂತೆ ಗಣವಲಗಾ ಗ್ರಾಮದಲ್ಲಿ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆ ಅಡಿಯಲ್ಲಿ ನಿರ್ಮಿಸಲಾಗಿರುವ ನಾಲಾ ಬಂಡಿಂಗ್‌ ಕಾಮಗಾರಿ ಪರಿಶೀಲಿಸಿದರು. ರೂಗಿ ಗ್ರಾಮದಲ್ಲಿ ಕೃಷಿಭಾಗ್ಯ ಯೋಜನೆಯಡಿ ರೈತರಿಗೆ ನೀಡಲಾದ ಸೌಲಭ್ಯಗಳ ಬಗ್ಗೆ ತೋಟಗಾರಿಕೆ ಅಧಿಕಾರಿಗಳಿಂದ ಮಾಹಿತಿ ಪಡೆದರು. ಬಬಲಾದ ಗ್ರಾಮದಲ್ಲಿ ಕೆರೆ ವೀಕ್ಷಣೆ ನಡೆಸುವ ಸಂದರ್ಭದಲ್ಲಿ ಭೀಮಾ ನದಿಯಿಂದ ನೀರಿನ ಸರಬರಾಜುವಿನಲ್ಲಿ ತೊಂದರೆ ಉಂಟಾಗುತ್ತಿದ್ದು, ಭೀಮಾ ನದಿ ನೀರಿನ ಕೊರತೆ ಉಂಟಾಗಿದೆ ಎಂದು ಸಂಬಂಧಪಟ್ಟ ಅಧಿಕಾರಿಗಳು ಮಾಹಿತಿ ನೀಡಿದರು. ಇದೇ ರೀತಿ ಬಬಲಾದ ಗ್ರಾಮದಲ್ಲಿ ಅರಣ್ಯ ಸಸಿಗಳ ರಕ್ಷಣೆಗಾಗಿ ನಿರ್ಮಿಸಲಾದ ನೀರಿನ ಹೊಂಡವನ್ನು ಪರಿಶೀಲಿಸಿದರು.

ಈ ವೇಳೆ ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ ಮಾತನಾಡಿ, ಜಿಲ್ಲೆಯಲ್ಲಿ ಬರ ನಿರ್ವಹಣಾ ಚಟುವಟಿಕೆಗಳು ಹಾಗೂ ತೀವ್ರ ಬರ ಎದುರಿಸುತ್ತಿರುವ ಇಂಡಿ ತಾಲೂಕಿನ ಬರ ಪರಿಸ್ಥಿತಿ, ಕೈಗೊಂಡಿರುವ ಬರ ನಿರ್ವಹಣಾ ಕ್ರಮಗಳ ಬಗ್ಗೆ ವಿವರಿಸಿದರು. ಅದರಂತೆ ಕೃಷ್ಣಾ ನದಿಯ ನೀರನ್ನು ಆಲಮಟ್ಟಿ ಜಲಾಶಯಕ್ಕೆ ಸೀಮಿತವಾಗಿ ಜಿಲ್ಲೆಯ ಪ್ರತಿ ಮನೆಗೆ ಪೈಪ್‌ಲೈನ್‌ ಮೂಲಕ ನೀರು ಸರಬರಾಜು ಮಾಡುವ ಜಲಧಾರೆ ಯೋಜನೆ ಜಾರಿಗೊಂಡಲ್ಲಿ ಬಹುತೇಕ ಕುಡಿಯುವ ನೀರಿನ ಸಮಸ್ಯೆ ಪರಿಹರಿಸಲು ಸಾಧ್ಯವಿದೆ. ಈ ಯೋಜನೆ ಜಾರಿಗೆ ಜನಪ್ರತಿನಿಧಿಗಳು ಸಕಾರಾತ್ಮಕವಾಗಿ ಸ್ಪಂದಿಸಿದ್ದು, ಮುಂಬರುವ ವರ್ಷಗಳಲ್ಲಿ ಈ ಯೋಜನೆ ಜಾರಿಗೊಳ್ಳಲಿದೆ ಎಂದು ವಿವರ ನೀಡಿದರು.

ಟಾಪ್ ನ್ಯೂಸ್

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

1-qweqewqe

Congress ಕೊಟ್ಟಿದ್ದ ಖಾಲಿ ಚೊಂಬನ್ನು ಅಕ್ಷಯಪಾತ್ರೆ ಮಾಡಿದ್ದು ಮೋದಿ: ಎಚ್ ಡಿಡಿ ಕಿಡಿ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ

Tollywood: ಈ ತಿಂಗಳಿನಲ್ಲಿ ಸೆಟ್ಟೇರಲಿದೆ ಜೂ.ಎನ್‌ ಟಿಆರ್‌ – ಪ್ರಶಾಂತ್‌ ನೀಲ್‌ ಸಿನಿಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

ಸರ್ವರಿಗೂ ಸಮಪಾಲು ಸಮಬಾಳು ನೀಡಿದ ಕಾಂಗ್ರೆಸ್ ಪಕ್ಷಕ್ಕೆ ಮತ ನೀಡಿ: ಗೀತಾ ಶಿವರಾಜ್ ಕುಮಾರ್

1-qeweqwe

Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-sdssd

Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು

1-asasa

PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-aaaa

Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು

1-wewqeqwe

Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.