25 ಲಕ್ಷ ಸಸಿ ವಿತರಣೆಗೆ ಸಿದ್ಧ

ಆಲಮಟ್ಟಿ ನರ್ಸರಿಯಲ್ಲಿವೆ 150 ಜಾತಿ ಸಸಿ•ಕೋಟಿವೃಕ್ಷ ಅಭಿಯಾನದಡಿ 60 ಲಕ್ಷ ಸಸಿಗೆ ಜೀವ

Team Udayavani, Jun 2, 2019, 10:33 AM IST

2-June-6

ವಿಜಯಪುರ: ಅರಣ್ಯ ಪ್ರದೇಶ ಶೇಕಡಾವಾರು ಅತ್ಯಂತ ಕಡಿಮೆ ಶೇ 0. 17 ಇರುವ ವಿಜಯಪುರ ಜಿಲ್ಲೆಯಲ್ಲಿ ಗಿಡ-ಮರಗಳ ಸಂಖ್ಯೆ ಹೆಚ್ಚಿಸುವ ಉದ್ದೇಶದಿಂದ 3 ವರ್ಷಗಳ ಹಿಂದೆ ಆರಂಭಗೊಂಡ ಕೋಟಿವೃಕ್ಷ ಅಭಿಯಾನ ಈ ಬಾರಿ 4ನೇ ವರ್ಷಕ್ಕೆ ಕಾಲಿಟ್ಟಿದೆ. ಜಿಲ್ಲೆಯಲ್ಲಿ ಈ ವರೆಗೆ 60 ಲಕ್ಷ ಸಸಿಗಳನ್ನು ವಿತರಿಸಿ ನೆಡಲಾಗಿದೆ ಎಂದು ವೃಕ್ಷ ಅಭಿಯಾನ ಟ್ರಸ್ಟ್‌ ಸಂಯೋಜಕ ಪ್ರೊ| ಮುರುಗೇಶ ಪಟ್ಟಣಶೆಟ್ಟಿ ತಿಳಿಸಿದ್ದಾರೆ.

ವಿಶ್ವ ಮಾನದಂಡಗಳಿಗೆ ಅನುಸಾರವಾಗಿ ಭೌಗೊಳಿಕ ಪರಿಸರದಲ್ಲಿ ಶೇ. 33 ಅರಣ್ಯವಿರಬೇಕು ಎಂಬುದು ಸಮತೋಲಿತ ಪ್ರಕೃತಿಯ ಲಕ್ಷಣ. ಆದರೆ ವಿಜಯಪುರ ಜಿಲ್ಲೆ ಅತಿ ಕನಿಷ್ಠ ಮಾನದಂಡದ ಅರಣ್ಯ ಕೂಡ ಇಲ್ಲದ ಸ್ಥಿತಿಯಲ್ಲಿ ನಾವು ವಾಸಿಸುತ್ತಿದ್ದೇವೆ. ಹೀಗಾಗಿ ಕಳೆದ 100 ವರ್ಷಗಳ ಮಳೆ ಬೀಳುವ ಪ್ರಮಾಣ ನೋಡಿದಾಗ, ಅತ್ಯಂತ ಕಡಿಮೆ ಇದ್ದು ಮತ್ತು 3 ವರ್ಷಕ್ಕೊಮ್ಮೆ ತೀವ್ರ ಬರಗಾಲ ಎದುರಿಸಿದ್ದೇವೆ. ಪರಿಸ್ಥಿತಿ ಹೀಗೆ ಮುಂದುವರಿದರೆ ವಿಜಯಪುರ ಜಿಲ್ಲೆಯಲ್ಲಿ ಭವಿಷ್ಯದಲ್ಲಿ ಕೇವಲ ಬೇಸಿಗೆ ಹಾಗೂ ಕಡು ಬೇಸಿ‌ಗೆ ಕಾಲಗಳ ಜೊತೆಗೆ ಶಾಶ್ವತ ಬರಗಾಲ ಪರಿಸ್ಥಿತಿ ಎದುರಾಗಲಿದೆ ಎಂದು ಎಚ್ಚರಿಸಿದ್ದಾರೆ.

ಈ ದುಸ್ಥಿತಿಯಿಂದ ಜಿಲ್ಲೆಯನ್ನು ರಕ್ಷಿಸಲು ಹಾಗೂ ದೂರದೃಷ್ಟಿಯಿಂದ ಅರಣ್ಯೀಕರಣ ಮಾಡಲು ಇಂದಿನ ಗೃಹ ಸಚಿವ ಎಂ.ಬಿ. ಪಾಟೀಲ ಅವರು ಜಲ ಸಂಪನ್ಮೂಲ ಸಚಿವರಾಗಿದ್ದ ಸಂದರ್ಭದಲ್ಲಿ 5 ವರ್ಷಗಳ ಕಾಲ ಮಿತಿಯಲ್ಲಿ ಕೋಟಿ ವೃಕ್ಷ ಅಭಿಯಾನ ರೂಪಿಸಿದ್ದು, ಪ್ರತಿ ವರ್ಷವೂ 25 ಲಕ್ಷ ಸಸಿ ನೆಟ್ಟು ಪೋಷಿಸುವ ಗುರಿ ಹಾಕಿಕೊಂಡಿದ್ದರು. ಇದಕ್ಕೆ ತಕ್ಕಂತೆ ಅಭಿಯಾನ ಈ ನಿಟ್ಟಿನಲ್ಲಿ ಯಶಸ್ಸಿನತ್ತ ಸಾಗಿದೆ ಎಂದು ವಿವರಿಸಿದ್ದಾರೆ.

ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಜೂನ್‌ 5ರಂದು ಜಿಲ್ಲೆಯಾದ್ಯಂತ ಸರ್ಕಾರಿ ಇಲಾಖೆಗಳು, ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಬೃಹತ್‌ ಪ್ರಮಾಣದಲ್ಲಿ ಸಸಿ ನೆಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ವೃಕ್ಷ ಅಭಿಯಾನದಿಂದ ಸೈನಿಕ ಸ್ಕೂಲ್ ಆವರಣದಲ್ಲಿ, ಅರಣ್ಯ ಇಲಾಖೆಯಿಂದ ಜಿಲ್ಲಾಸ್ಪತ್ರೆ ಆವರಣದಲ್ಲಿ, ಕೃಷ್ಣಾ ಭಾಗ್ಯ ಜಲ ನಿಗಮದಿಂದ ಆಲಮಟ್ಟಿಯಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿಗಳನ್ನು ನೆಡಲಾಗುವದು. ಅಲ್ಲದೇ ಜಿಲ್ಲೆಯ ವಿವಿಧ ಇಲಾಖೆಗಳು, ಶಿಕ್ಷಣ ಸಂಸ್ಥೆಗಳು ಸೇರಿದಂತೆ ಜಿಲ್ಲಾಯಾದ್ಯಂತ ಇರುವ ಹಲವಾರು ಸಂಘ ಸಂಸ್ಥೆಗಳು, ಸಾರ್ವಜನಿಕರು ಅಂದು ಸಸಿಗಳನ್ನು ನೆಟ್ಟು, ಪೋಷಿಸಲು ಮುಂದೆ ಬಂದಿದ್ದಾರೆ.

ಪ್ರಸಕ್ತ ವರ್ಷವೂ ವಿವಿಧ 150 ಜಾತಿಗೆ ಸೇರಿದ 25 ಲಕ್ಷ ಸಸಿಗಳನ್ನು ನರ್ಸರಿಯಲ್ಲಿ ಸಾರ್ವಜನಿಕರಿಗೆ ವಿತರಿಸಲು ಸಿದ್ಧವಾಗಿವೆ. ರೈತರಿಗೆ ಆರ್ಥಿಕವಾಗಿ ಲಾಭ ತಂದು ಅನುಕೂಲ ಕಲ್ಪಿಸುವ ಹಣ್ಣು-ಹಂಪಲು ನೀಡುವ ಹಾಗೂ ನೆರಳು ನೀಡುವ ಸಸಿಗಳನ್ನು ಬೆಳೆಸಲಾಗಿದೆ. ಇದಲ್ಲದೇ ವಿಜಯಪುರ ಪರಿಸರದ ಕಲ್ಲು ಭೂಮಿಯಲ್ಲೂ ನೀರಿಲ್ಲದೇ ಬೆಳೆಯುವ ಸಸಿಗಳನ್ನೂ ಬೆಳೆಸಿದ್ದು ವಿತರಣೆಗೆ ಸಿದ್ಧವಾಗಿವೆ.

ಆಲಮಟ್ಟಿಯ ಕೃಷ್ಣಾ ಭಾಗ್ಯ ಜಲ ನಿಗಮದ ನರ್ಸರಿಯಲ್ಲಿ ಮಾವು, ತೆಂಗು, ಪೇರು, ಚಿಕ್ಕು, ದಾಳಿಂಬೆ, ಸಿತಾಫಲ, ಬಾರಿ, ನಿಂಬು, ಶ್ರೀಗಂಧ, ರಕ್ತಚಂದನ, ಹೆಬ್ಬೆವು ಸೇರಿದಂತೆ ಹಣ್ಣು ಹಾಗೂ ವಾಣಿಜ್ಯ ಸಸಿಗಳನ್ನು ವಿಶೇಷವಾಗಿ ತಯಾರಿಸಲಾಗಿದೆ.

ಹೀಗಾಗಿ ಜಿಲ್ಲೆಯ ಸಂಘ-ಸಂಸ್ಥೆಗಳು, ಸಾರ್ವಜನಿಕರು ತಾವು ಸಸಿ ನೆಡುವ ಜಮೀನಿನ ಉತಾರಿ ಹಾಗೂ ತಮ್ಮ ಗುರುತಿನ ಚೀಟಿ ನೀಡಿ, ಸಸಿಗಳಿಗೆ ನಿಗದಿಪಡಿಸಿದ ಅತಿ ಕನಿಷ್ಠ ಮೊತ್ತ ಪಾವತಿಸಿ ತಮಗೆ ಬೇಕಾದ ಸಸಿಗಳನ್ನು ಪಡೆದು ಸದುಯೋಗ ಪಡಿಸಿಕೊಂಡು ಕೋಟಿ ವೃಕ್ಷ ಅಭಿಯಾನ ಯಶಸ್ವಿಯಾಗಿಸಿಬೇಕು ಎಂದು ಪ್ರೊ| ಮುರುಗೇಶ ಪಟ್ಟಣಶೆಟ್ಟಿ ಮನವಿ ಮಾಡಿದ್ದಾರೆ.

ಸಂಘ-ಸಂಸ್ಥೆಗಳು, ಸಾರ್ವಜನಿಕರು ತಾವು ಸಸಿ ನೆಡುವ ಜಮೀನಿನ ಉತಾರಿ ಹಾಗೂ ತಮ್ಮ ಗುರುತಿನ ಚೀಟಿ ನೀಡಿ, ಸಸಿಗಳಿಗೆ ನಿಗದಿಪಡಿಸಿದ ಅತಿ ಕನಿಷ್ಠ ಮೊತ್ತ ಪಾವತಿಸಿ ತಮಗೆ ಬೇಕಾದ ಸಸಿಗಳನ್ನು ಪಡೆದು ಸದುಯೋಗ ಪಡಿಸಿಕೊಂಡು ಕೋಟಿ ವೃಕ್ಷ ಅಭಿಯಾನ ಯಶಸ್ವಿಯಾಗಿಸಿ.
ಪ್ರೊ| ಮುರುಗೇಶ ಪಟ್ಟಣಶೆಟ್ಟಿ
ವೃಕ್ಷ ಅಭಿಯಾನ ಟ್ರಸ್ಟ್‌ ಸಂಯೋಜಕ

ಟಾಪ್ ನ್ಯೂಸ್

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.