ಮೈತ್ರಿ ಅಭ್ಯರ್ಥಿ ಸುನೀತಾ ಶಕ್ತಿ ಪ್ರದರ್ಶನ
ಮತ್ತೊಮ್ಮೆ ಉಮೇದುವಾರಿಕೆ ಸಲ್ಲಿಸಿದ ಚವ್ಹಾಣ ಉಭಯ ಪಕ್ಷದ ನಾಯಕರ ಸಾಥ್-ಮೆರವಣಿಗೆ
Team Udayavani, Apr 5, 2019, 4:07 PM IST
ವಿಜಯಪುರ: ಡಾ| ಸುನೀತಾ ಚವ್ಹಾಣ ನಾಮಪತ್ರ ಸಲ್ಲಿಕೆಯ ಮೆರವಣಿಗೆಯಲ್ಲಿ ಪಾಲ್ಗೊಂಡ ಪಕ್ಷದ ಕಾರ್ಯಕರ್ತರು.
ವಿಜಯಪುರ: ಪರಿಶಿಷ್ಟ ಜಾತಿಗೆ ಮೀಸಲಾಗಿರುವ ವಿಜಯಪುರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್-ಜೆಡಿಎಸ್ ಮೈತ್ರಿ ಅಭ್ಯರ್ಥಿಯಾಗಿ ಡಾ| ಸುನೀತಾ ದೇವಾನಂದ ಚವ್ಹಾಣ ಗುರುವಾರ ನಾಮಪತ್ರ ಸಲ್ಲಿಸಿದರು.
ನಗರದ ಶ್ರೀ ಸಿದ್ದೇಶ್ವರ ದೇವಾಲಯದಲ್ಲಿ ವಿಶೇಷ ಪೂಜೆ ಸಲ್ಲಿಸಿ, ತೆರೆದ ವಾಹನದಲ್ಲಿ ಮಹಾತ್ಮಾ ಗಾಂಧೀಜಿ ವೃತ್ತ, ಬಸವೇಶ್ವರ ವೃತ್ತ, ಡಾ| ಬಿ.ಆರ್.ಅಂಬೇಡ್ಕರ್ ವೃತ್ತದ ಮಾರ್ಗವಾಗಿ ಬೃಹತ್ ಮೆರವಣಿಗೆಯಲ್ಲಿ ಜಿಲ್ಲಾ ಧಿಕಾರಿಗಳ ಕಚೇರಿಗೆ ತೆರಳಿ ಸುನಿತಾ ನಾಮಪತ್ರ ಸಲ್ಲಿಸಿದರು.
ಡಾ| ಸುನಿತಾ ಅವರು ನಾಮಪತ್ರ ಸಲ್ಲಿಕೆಯೆ ಮೆರವಣಿಗೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಗೃಹ ಸಚಿವ ಎಂ.ಬಿ. ಪಾಟೀಲ, ಆರೋಗ್ಯ ಸಚಿವ ಶಿವಾನಂದ ಪಾಟೀಲ, ಜೆಡಿಎಸ್ ಪಕ್ಷದ ತೋಟಗಾರಿಕಾ ಸಚಿವ ಎಂ.ಸಿ. ಮನಗೂಳಿ, ಸಚಿವ ಬಂಡೆಪ್ಪ ಕಾಶಂಪೂರ, ಉಭಯ ಪಕ್ಷಗಳ ಶಾಸಕರಾದ ಬಸವರಾಜ ಹೊರಟ್ಟಿ, ನಗರ ನೀರು ಸರಬರಾಜು ಮಂಡಳಿ ಅಧ್ಯಕ್ಷ ಯಶವಂತರಾಯಗೌಡ ಪಾಟೀಲ, ಶಿಕ್ಷಣ ಇಲಾಖೆ ಸಂಸದೀಯ ಕಾರ್ಯದರ್ಶಿದ ಜೆಡಿಎಸ್ ಅಭ್ಯರ್ಥಿ ಸುನಾತಾ ಅವರ ಪತಿ ಡಾ|ದೇವಾನಂದ ಚವ್ಹಾಣ, ಮೇಲ್ಮನೆ ಸದಸ್ಯರಾದ ಸುನಿಲಗೌಡ ಪಾಟೀಲ, ಪ್ರಕಾಶ ರಾಠೊಡ, ಮಾಜಿ ಸಚಿವ ಸಿ.ಎಸ್. ನಾಡಗೌಡ, ವಿಠಲ ಕಟಕಧೋಂಡ, ರಾಜು ಆಲಗೂರ, ಸೋಮನಗೌಡ ಪಾಟೀಲ ಮನವೂಳಿ, ರಾಜುಗೌಡ ಪಾಟೀಲ ಕುದರಿ ಸಾಲವಾಡಗಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ರವಿಗೌಡ ಪಾಟೀಲ, ನಾನಾಗೌಡ ಪಾಟೀಲ, ದಿಲಾವರ ಖಾಜಿ, ಚಂದ್ರಶೇಖರ ಹಿರೇಮಠ, ರಾಜು ಹಿಪ್ಪರಗಿ, ಮಲ್ಲಿಕಾರ್ಜುನ ಯಂಡಿಗೇರಿ ಇವರೆಲ್ಲ ಒಂದೇ ವಾಹನದಲ್ಲಿ ಮೆರವಣಿಗೆಯಲ್ಲಿ ಸಾಗುವ ಮೂಲಕ ಒಗ್ಗಟ್ಟು ಪ್ರದರ್ಶಿಸಿದರು.
ಮೆರವಣಿಗೆಯಲ್ಲಿ ಕಾಂಗ್ರೆಸ್-ಜೆಡಿಎಸ್ ಪಕ್ಷಗಳ ಜಂಟಿ ಧ್ವಜಗಳನ್ನು ಹಿಡಿದಿದ್ದ ಕಾರ್ಯಕರ್ತರು ಉಭಯ ಪಕ್ಷಗಳು ಹಾಗೂ ಅವುಗಳ ನಾಯಕರ ಪರವಾಗಿ ಘೋಷಣೆ ಕೂಗಿದರು. ಮೆರವಣಿಗೆಯಲ್ಲಿದ್ದ ಎರಡು ತೆರೆದ ವಾಹನಗಳ ಎಡ-ಬಲದಲ್ಲಿ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಜೆಡಿಎಸ್ ಅಧ್ಯಕ್ಷ ಎಚ್.ಡಿ. ದೇವೇಗೌಡ, ಸಿ.ಎಂ. ಎಚ್.ಡಿ. ಕುಮಾರಸ್ವಾಮಿ ಅವರ ಭಾವಚಿತ್ರಗಳಿದ್ದ ಕಟೌಟುಗಳು ರಾರಾಜಿಸುತ್ತಿದ್ದವು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ
Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..
T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?
ನರಗುಂದ: ಸಮಾಜದಲ್ಲಿ ದೇವಸ್ಥಾನಗಳು ಭಕ್ತಿಯ ಸಂಗಮ- ಶಾಂತಲಿಂಗ ಸ್ವಾಮೀಜಿ
ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ