ದಾಖಲೆ ಬರೆದ ಲೋಕ ಚುನಾವಣೆ

ಚಿಕ್ಕೋಡಿ-ವಿಜಯಪುರ ಕ್ಷೇತ್ರದಲ್ಲಿ ಸತತ ಎರಡು ಹ್ಯಾಟ್ರಿಕ್‌ ಗೆಲುವು ಸಾಧಿಸಿದ ರಮೇಶ ಜಿಗಜಿಣಗಿ

Team Udayavani, May 25, 2019, 11:01 AM IST

25-May-11

ವಿಜಯಪುರ: 2019ರ ಲೋಕಸಭೆ ಚುನಾವಣೆಯಲ್ಲಿ ವಿಜಯಪುರ ಕ್ಷೇತ್ರ ಹಲವು ದಾಖಲೆಗಳಿಗೆ ಸಾಕ್ಷಿಯಾಗಿದೆ. ಮೊಲದ ಬಾರಿ ಹಲವು ದಾಖಲೆ ಸೃ್ರಷ್ಟಿಯಾಗಿದ್ದರೆ, ಮತ್ತೆ ಕೆಲವು ದಾಖಲೆ ಮುರಿಯಲ್ಪಟ್ಟಿವೆ. ಕ್ಷೇತ್ರದ ಇತಿಹಾಸದಲ್ಲಿ ಹಲವು ವ್ಯೆಶಿಷ್ಟ್ಯಗಳೂ ಕಾಣಿಸಿಕೊಂಡಿವೆ.

ವಿಜಯಪುರ ಕ್ಷೇತ್ರದಲ್ಲಿ ಇಬ್ಬರು ಮಹಿಳೆಯರು ರಾಜಕೀಯ ಪಕ್ಷಗಳಿಂದ ಸ್ಪರ್ಧೆಗೆ ಇಳಿದಿದ್ದರೂ ಪ್ರಥಮ ಹಂತದಲ್ಲೇ ಸೋಲು ಅನುಭವಿಸಿದ್ದಾರೆ. ಓರ್ವ ಪಕ್ಷೇತರ ಮಹಿಳೆ ನಿರ್ಮಲಾ ಅರಕೇರಿ 2009ರಲ್ಲಿ ಸ್ಪರ್ಧಿಸಿ ಸೋತಿದ್ದಾರೆ. ಸಂಸದರಾಗಿ ಹೆಸರು ಮಾಡಿದ್ದ ಬಿ.ಕೆ. ಗುಡದಿನ್ನಿ ಅವರ ಪತ್ನಿ ಲಕ್ಷ್ಮೀಬಾಯಿ ಗುಡದಿನ್ನಿ 1999ರಲ್ಲಿ ಕಾಂಗ್ರೆಸ್‌ನಿಂದ ಕಣಕ್ಕಿಳಿದಿದ್ದರು. ಆದರೆ ಅವರ ಪ್ರತಿಸ್ಪರ್ಧಿ ಬಿಜೆಪಿ ಅಭ್ಯರ್ಥಿ ಬಸವನಗೌಡ ಪಾಟೀಲ ಯತ್ನಾಳ ಹೆಚ್ಚಿನ ಪ್ರಭಾವಿತರಾಗಿದ್ದ ಕಾರಣ ಸೋಲು ಅನುಭವಿಸಿದರು.

ಲಕ್ಷ್ಮೀಬಾಯಿ ಗುಡದಿನ್ನಿ ಅವರನ್ನು ಸೋಲಿಸುವ ಮೂಲಕ ವಿಜಯಪುರ ಕ್ಷೇತ್ರದಲ್ಲಿ ಮೊದಲ ಬಾರಿ ಕೇಸರಿ ಬಾವುಟ ಹಾರಿಸಿದ್ದ ಯತ್ನಾಳ, ನಂತರದ ಚುನಾವಣೆಯಲ್ಲಿ ಕ್ರಿಕೆಟಿಗ ಪ್ರಕಾಶ ರಾಠೊಡ ಅವರನ್ನು ಸೋಲಿಸಿ ಸತತ ಎರಡು ಬಾರಿ ಈ ಕ್ಷೇತ್ರದಲ್ಲಿ ವಿಜಯ ಸಾಧಿಸಿದ್ದರು.

ಇದಾದ ಬಳಿಕ ವಿಜಯಪುರ ಕ್ಷೇತ್ರ ಮರು ವಿಂಗಡಣೆ ಬಳಿಕ 2009ರಲ್ಲಿ ವಿಜಯಪುರ ಕ್ಷೇತ್ರ ಪರಿಶಿಷ್ಟ ಜಾತಿಗೆ ಮೀಸಲಾಗಿ ನಡೆದ ಮೊದಲ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ರಮೇಶ ಜಿಗಜಿಣಗಿ ಆಯ್ಕೆಯಾದರೆ, ಪ್ರತಿ ಸ್ಪರ್ಧಿ ಪ್ರಕಾಶ ರಾಠೊಡ ಎರಡನೇ ಸೋಲು ಅನುಭವಿಸಿದ್ದರು. ಕಳೆದ ಚುನಾವಣೆಯಲ್ಲಿ ಮತ್ತೆ ಮುಖಾಮುಖೀ ಅಗಿದ್ದ ರಮೇಶ-ಪ್ರಕಾಶ ಇಬ್ಬರಲ್ಲಿ ರಮೇಶ ವಿಜಯ ಸಾಧಿಸಿದರೆ, ಪ್ರಕಾಶ ಮೂರನೇ ಸೋಲು ಕಂಡಿದ್ದರು.

ಪರಿಶಿಷ್ಟ ಜಾತಿಗೆ ಮೀಸಲಾಗಿರುವ ಈ ಕ್ಷೇತ್ರದಲ್ಲಿ ತಮ್ಮ ಸಮುದಾಯದ ಖಾತೆ ತೆರೆಯಬೇಕು ಎಂಬ ಕನಸು ಬಂಜಾರ ಸಮುದಾಯಕ್ಕೆ ಸಾಧ್ಯವಾಗಿಲ್ಲ. ಈ ಬಾರಿ ಡಾ| ಸುನೀತಾ ಚವ್ಹಾಣ ಅವರ ಸೋಲು ಹಾಗೂ ಈ ಹಿಂದೆ ಸತತ ಮೂರು ಬಾರಿ ಸ್ಪರ್ಧಿಸಿ ಸೋತಿರುವ ಪ್ರಕಾಶ ರಾಠೊಡ ಅವರ ಸೋಲು ಸೇರಿದಂತೆ ಬಂಜಾರಾ ಸಮುದಾಯದ ಅಭ್ಯರ್ಥಿಗಳು ಸತತ ನಾಲ್ಕನೇ ಪ್ರಯತ್ನದಲ್ಲೂ ತಮ್ಮ ಕನಸು ನನಸಾಗಿಸಿಕೊಳ್ಳಲು ಸಾಧ್ಯವಾಗಿಲ್ಲ.

ರಮೇಶ ಜಿಗಜಿಣಗಿ ಅವರು ವಿಜಯಪುರ ಕ್ಷೇತ್ರದಲ್ಲಿ ಸತತ ಮೂರು ಬಾರಿ ಗೆದ್ದು ಹ್ಯಾಟ್ರಿಕ್‌ ಮಾಡಿದ್ದರೆ, ಸತತ 5ನೇ ಬಾರಿಗೆ ಬಿಜೆಪಿ ಇಲ್ಲಿ ವಿಜಯ ಸಾಧಿಸಿ ಕೇಸರಿ ಭದ್ರಕೋಟೆ ಎಂಬ ಹಿರಿಮೆ ಸಂಪಾದಿಸಿದೆ. ಜಿಗಜಿಣಗಿ ಅವರು 2009, 2014 ಹಾಗೂ 2019 ಸ್ಪರ್ಧೆಗೆ ಮುನ್ನ ಸತತ ಎರಡು ಬಾರಿ ಗೆದ್ದಿದ್ದ ಯತ್ನಾಳ ಈ ಕ್ಷೇತ್ರದಲ್ಲಿ ಕೇಸರಿ ಬುನಾದಿ ಹಾಕಿದ್ದಾರೆ.

ವಿಜಯಪುರ ಕ್ಷೇತ್ರದಲ್ಲಿ ಮೂರನೇ ಬಾರಿಗೆ ವಿಜಯ ಮಾಲೆ ಧರಿಸಿರುವ ರಮೇಶ ಜಿಗಜಿಣಗಿ ತಮ್ಮ ರಾಜಕೀಯ ಜೀವನದಲ್ಲಿ ಸತತ 6 ಬಾರಿ ಲೋಕಸಭೆ ಚುನಾವಣೆಯಲ್ಲಿ ಗೆದ್ದು ಸಂಸತ್‌ ಪ್ರವೇಶ ಮಾಡಿದ್ದಾರೆ. ಇದರೊಂದಿಗೆ ಜಿಲ್ಲೆಯಲ್ಲಿ ಈ ಸಾಧನೆ ಮಾಡಿದ ಮೊದಲಿಗ ಎಂಬ ಹಿಮೆಯ ದಾಖಲೆ ಬರೆದಿದ್ದಾರೆ.

ವಿಜಯಪುರ ಕ್ಷೇತ್ರ ಪರಿಶಿಷ್ಟ ಜಾತಿಗೆ ಮೀಸಲಾಗುವ ಮುನ್ನ ಪರಿಶಿಷ್ಟ ಜಾತಿಗೆ ಮೀಸಲಾಗಿದ್ದ ಚಿಕ್ಕೋಡಿ ಕ್ಷೇತ್ರದಲ್ಲಿ ಸತತ ಮೂರು ಬಾರಿ ಗೆದ್ದು ಮೊದಲ ಹ್ಯಾಟ್ರಿಕ್‌ ಸಾಧನೆ ಮಾಡಿದ್ದರು. ಇದಷ್ಟೇ ಅಲ್ಲದೇ ವಿಜಯಪುರ ಕ್ಷೇತ್ರದಲ್ಲಿ ಬಿ.ಕೆ.ಗುಡದಿನ್ನಿ ಅವರು ಮೂರು ಬಾರಿ ಗೆದ್ದಿದ್ದರೂ ಮಧ್ಯದಲ್ಲಿ ಒಂದು ಬಾರಿ ಸೋತಿದ್ದ ಕಾರಣ ಅವರಿಂದ ಹ್ಯಾಟ್ರಿಕ್‌ ಸಾಧನೆ ಸಾಧ್ಯವಾಗಿರಲಿಲ್ಲ.

ಆದರೆ ಈ ಕ್ಷೇತ್ರದಲ್ಲಿ ಮೊದಲ ಬಾರಿಗೆ ಸತತ ಮೂರು ಬಾರಿ ಗೆದ್ದು ರಮೇಶ ಜಿಗಜಿಣಗಿ ಹ್ಯಾಟ್ರಿಕ್‌ ಸಾಧಿಸಿದ್ದಾರೆ. ಇದರೊಂದಿಗೆ ಚಿಕ್ಕೋಡಿ ಹಾಗೂ ವಿಜಯಪುರ ಎರಡೂ ಕ್ಷೇತ್ರದಲ್ಲಿ ಸತತ ಎರಡು ಹ್ಯಾಟ್ರಿಕ್‌ ವಿಜಯದ ಮೂಲಕ 6ನೇ ಬಾರಿಗೆ ಸಂಸತ ಭವನ ಪ್ರವೇಶಿಸಿ ದಾಖಲೆ ಬರೆದಿದ್ದಾರೆ. ಜಿಗಜಿಣಗಿ ಡಬಲ್ ಹ್ಯಾಟ್ರಿಕ್‌ ಮಾಡಿರುವ ಎರಡೂ ಕ್ಷೇತ್ರಗಳು ಮೀಸಲು ಕ್ಷೇತ್ರಗಳೇ ಎಂಬುದು ಗಮನೀಯ.

ಸತತ 6 ಬಾರಿ ಲೋಕಸಭೆ ಚುನಾವಣೆಗೆ ಸ್ಪರ್ಧಿಸಿ ವಿಶಿಷ್ಟ ಸಾಧನೆಯ ದಾಖಲೆ ಬರೆದಿದ್ದರೂ ರಮೇಶ ಜಿಗಜಿಣಗಿ ಎರಡು ಬಾರಿ ವಿಧಾನಸಭೆ ಚುನಾವಣೆಯಲ್ಲಿ ಸೋಲು ಅನುಭವಿಸಿದ್ದಾರೆ. ವಿಜಯಪುರ ಜಿಲ್ಲೆಯ ಪರಿಶಿಷ್ಟ ಜಾತಿಗೆ ಮೀಸಲಿದ್ದ ತವರು ಕ್ಷೇತ್ರ ಬಳೊಳ್ಳಿ ಬಂಜಾರಾ ಸಮುದಾಯದ ಮನೋಹರ ಐನಾಪುರ ವಿರುದ್ಧ ಸೋಲು ಅನುಭವಿಸಿದ್ದರು. ಆಗ ಜಿಗಜಿಣಗಿ ರಾಜ್ಯ ಸರ್ಕಾರದಲ್ಲಿ ಗೃಹ ಮಂತ್ರಿಯಾಗಿದ್ದರು.

ಇದಲ್ಲದೇ ಬೆಳಗಾವಿ ಜಿಲ್ಲೆಯಲ್ಲಿ ಸಾಮಾನ್ಯ ಕ್ಷೇತ್ರವಾಗಿರುವ ಚಿಕ್ಕೋಡಿ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿ ರಾಜಕೀಯ ಪ್ರಯೋಗದಲ್ಲಿ ಪರಾಭವಗೊಂಡಿದ್ದರು. ಆಗ ಜಿಗಜಿಣಗಿ ಚಿಕ್ಕೋಡಿ ಲೋಕಸಭೆ ಕ್ಷೇತ್ರದ ಸದಸ್ಯರಾಗಿದ್ದರು.

ಜನತಾ ಪರಿವಾರದ ಹಿನ್ನೆಲೆಯ ರಮೇಶ ಜಿಗಜಿಣಗಿ ಚಿಕ್ಕೋಡಿ ಕ್ಷೇತ್ರದಲ್ಲಿ ರಾಮಕೃಷ್ಣ ಹೆಗಡೆ ಅವರ ಲೋಕಶಕ್ತಿ ಪಕ್ಷದಿಂದ ಎರಡು ಬಾರಿ ಲೋಕಸಭೆಗೆ ಆಯ್ಕೆಯಾಗಿದ್ದರೆ, ಹೆಗಡೆ ಅವರ ನಿಧನಾನಂತರ ಆದೇ ಕ್ಷೇತ್ರದಲ್ಲಿ ಬಿಜೆಪಿ ಪಕ್ಷದಿಂದ ಸ್ಪರ್ಧಿಸಿ ಗೆದ್ದಿದ್ದರು. ನಂತರ ವಿಜಯಪುರ ಮೀಸಲು ಕ್ಷೇತ್ರಕ್ಕೆ ವಲಸೆ ಬಂದು ಸತತ 4ನೇ ಬಾರಿಗೆ ಬಿಜೆಪಿ ಸಂಸದರಾಗಿದ್ದಾರೆ.

ವಿಜಯಪುರ ಕ್ಷೇತ್ರದಲ್ಲಿ ಮೊದಲ ಬಾರಿಗೆ ಕಮಲ ಆರಳಿಸಿ, ಎರಡನೇ ಬಾರಿಗೆ ಗೆದ್ದಿದ್ದ ಬಸನಗೌಡ ಪಾಟೀಲ ಯತ್ನಾಳ ಅವರು ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ರೈಲ್ವೆ, ಜವಳಿ ಸಚಿವರಾಗಿದ್ದರು. ರಮೇಶ ಜಿಗಜಿಣಗಿ ಈ ಕ್ಷೇತ್ರದಿಂದ ಕಳೆದ ಸಲ ಎರಡನೇ ಬಾರಿ ವಿಜಯ ಸಾಧಿಸಿ, ಮೊದಲ ಬಾರಿಗೆ ನರೇಂದ್ರ ಮೋದಿ ಸರ್ಕಾರದಲ್ಲಿ ಮಂತ್ರಿಯೂ ಆಗಿದ್ದಾರೆ. ಹ್ಯಾಟ್ರಿಕ್‌ ಬಾರಿಸಿರುವ ಈ ಬಾರಿಯೂ ಮೋದಿ ನೇತೃತ್ವದಲ್ಲಿ ಎರಡನೇ ಬಾರಿಗೆ ಆಸ್ತಿತ್ವಕ್ಕೆ ಬರುತ್ತಿರುವ ಕೇಂದ್ರ ಸಂಪುಟದಲ್ಲಿ ಸ್ಥಾನ ಪಡೆಯುವ ನಿರೀಕ್ಷೆ ಇದೆ. ಈ ನಿರೀಕ್ಷೆಯೂ ಕೈಗೂಡಿದರೆ ಸತತ ಎರಡು ಬಾರಿ ಕೇಂದ್ರದಲ್ಲಿ ಸಚಿವರಾದ ಜಿಲ್ಲೆಯ ಮೊದಲಿಗ ಎಂಬ ಕೀರ್ತಿಯೂ ಜಿಗಜಿಣಗಿ ಮುಡಿಗೆ ಏರಲಿದೆ.

ಜಿ.ಎಸ್‌. ಕಮತರ

ಟಾಪ್ ನ್ಯೂಸ್

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.