ರಮೇಶ ಜಿಗಜಿಣಗಿ ಗೆಲುವು ಖಚಿತ

17 ಖಾತೆ ನಿಭಾಯಿಸಿದ ಜಿಗಜಿಣಗಿಗೆ ವಿಜಯಲಕ್ಷ್ಮೀಮತ್ತೆ ಮೋದಿ ಪ್ರಧಾನಿ ಆಗುವುದು ಜನರ ಆಶಯ

Team Udayavani, Apr 12, 2019, 3:24 PM IST

12-April-22

ವಿಜಯಪುರ: ಆಟೋದಲ್ಲಿ ಸಂಚರಿಸಿ ಪ್ರಚಾರ ನಡೆಸಿದ ನಟಿ ತಾರಾ.

ವಿಜಯಪುರ: ತಮ್ಮ ರಾಜಕೀಯ ಜೀವನದಲ್ಲಿ 17 ಖಾತೆಗಳನನ್ನು
ನಿಭಾಯಿಸಿರುವ ವಿಜಯಪುರ ಲೋಕಸಭೆ ಕ್ಷೇತ್ರದ ಬಿಜೆಪಿ ಅಭ್ಯರ್ಥಿ
ರಮೇಶ ಜಿಗಜಿಣಗಿ ಅವರು ವಿಜಯಪುರ ಕ್ಷೇತ್ರದಲ್ಲಿ ವಿಜಯ
ಸಾಧಿಸುವುದು ಖಚಿತ ಎಂದು ಮೇಲ್ಮನೆ ಸದಸ್ಯ-ಚಿತ್ರನಟಿ ತಾರಾ ಅನುರಾಧಾ
ಹೇಳಿದರು.

ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ ಅವರು, ವಿಜಯಪುರ
ಕ್ಷೇತ್ರ ಬಿಜೆಪಿ ಭದ್ರಕೋಟೆ ಎನಿಸಿರುವ ವಿಜಯ ಸಂದೇಶ ಹೊಂದಿರುವ
ವಿಜಯಪುರ ಕ್ಷೇತ್ರದಲ್ಲಿ ಈ ಬಾರಿಗೆ ವಿಜಯಲಕ್ಷ್ಮೀ ಬಿಜೆಪಿ-ಜಿಗಜಿಣಗಿ ಕೈ
ಹಿಡಿಯಲಿದ್ದಾರೆ ಎಂದರು.

ವಿಜಯಪುರ ಸಂಸದರಾಗಿ ರಮೇಶ ಜಿಗಜಿಣಗಿ ಅವರು ರಾಷ್ಟ್ರೀಯ
ಹೆದ್ದಾರಿಗಳ ಅಭಿವೃದ್ಧಿ ಮಾಡಿದ್ದಾರೆ. ಆದರೆ ಸ್ಥಳೀಯ ಶಾಸಕರು, ಸ್ಥಳೀಯ
ಸಂಸ್ಥೆಗಳು ಮಾಡುವ ಕೆಲಸಗಳನ್ನು ಸಂಸದರು ಮಾಡಲಿಲ್ಲ ಎಂದು
ಜನ ದೂರುವ ಸ್ಥಿತಿ ಇದೆ. ಜಾಗೃತಿ ಕೊರತೆಯೇ ಇದಕ್ಕೆ ಕಾರಣವಾಗಿದೆ.
ಸಂಸದರ ಇತಿ-ಮಿತಿಯ ಕುರಿತು ಮನವರಿಕೆ ಮಾಡಿಕೊಡುವ ಅಗತ್ಯವೂ
ಇದೆ ಎಂದರು.

ದೇಶದಲ್ಲಿ ಎಲ್ಲಿಯೇ ಹೋಗಲಿ ನಾವು ಬಿಜೆಪಿಗೆ ಮತ ಹಾಕಿ ಎಂದು
ಕೇಳುವ ಮೊದಲೇ ಎಲ್ಲೆಡೆ ಜನರು ಮೋದಿ ಮೋದಿ ಎಂದು ಕೂಗುವ
ಮೂಲಕ ಸ್ವಯಂ ಪ್ರೇರಿತರಾಗಿ ಮೋದಿ ಮತ್ತೂಮ್ಮೆ, ಮಗದೊಮ್ಮೆ
ಎಂದು ಅಭಯ ನೀಡುತ್ತಿದ್ದಾರೆ. ದೇಶದ ಹಿತಕ್ಕಾಗಿ ಮೋದಿ ಅವರು
ಮತ್ತೂಮ್ಮೆ ಪ್ರಧಾನಿ ಆಗಲಿ ಎಂಬುದು ದೇಶದ ಜನರ ಆಶಯ ಹೊಂದಿದ್ದಾರೆ.
ಕಾರಣ 60 ವರ್ಷದಲ್ಲಿ ಮಾಡಲಾಗದ ಕೆಲಸವನ್ನು 5 ವರ್ಷದಲ್ಲಿ ಮಾಡಿಲ್ಲ
ಏಕೆ ಎಂದು ಕೇಳುವ ಮಟ್ಟಿಗೆ ಜನತೆ ಮೋದಿ ಅವರ ಮೇಲೆ ವಿಶ್ವಾಸ
ಇರಿಸಿರುವುದನ್ನು ಇದು ಮನವರಿಕೆ ಮಾಡಿಕೊಡುತ್ತದೆ ಎಂದರು.

ಬಿಜೆಪಿ ಮಹಿಳೆಯರ ಪರವಾಗಿದ್ದು, ಕೇಂದ್ರದಲ್ಲಿ ಮೊಟ್ಟ ಮೊದಲು
ಮಹಿಳೆಯನ್ನೇ ರಕ್ಷಣೆ, ವಿದೇಶಾಂಗ ಸೇರಿ ಮೋದಿ ಸರ್ಕಾರದಲ್ಲಿ 9
ಮಹಿಳೆಯರು ಸಚಿವರಾಗಿದ್ದಾರೆ. ಇದು ನಮ್ಮ ಪಕ್ಷದಲ್ಲಿ ಮಹಿಳೆಗೆ ರಾಜಕೀಯ
ಅಧಿಕಾರದ ಸಂದರ್ಭದಲ್ಲಿ ಆದ್ಯತೆ ನೀಡಿರುವುದಕ್ಕೆ ಸಾಕ್ಷಿ. ಇದಲ್ಲದೇ
ಸ್ಥಳೀಯ ಸಂಸ್ಥೆಗಳಲ್ಲಿ ಮಹಿಳೆಯರಿಗೆ ಶೇ.50 ರಷ್ಟು ಮೀಸಲಾತಿ ನೀಡಿದ್ದೇ
ಬಿಜೆಪಿ. ಹೀಗಾಗಿ ಮಹಿಳೆಯರು ಬಿಜೆಪಿ ಮಟ್ಟಿಗೆ ಮತ ಬ್ಯಾಂಕ್‌ ಮಾತ್ರವಲ್ಲ
ರಾಜಕೀಯ ಮುನ್ನೆಲೆಯಲ್ಲೂ ಅವಕಾಶ ಕಲ್ಪಿಸಿದೆ. ತೇಜಸ್ವಿನಿ ಅನಂತಕುಮಾರ ಅವರಿಗೆ ಟಿಕೆಟ್‌ ಕೊಡಬೇಕಾಗಿತ್ತು ಎನ್ನುವುದು ನನ್ನ
ಭಾವನೆಯೂ ಹೌದು. ಆದರೆ ಅದು ಹೈ-ಕಮಾಂಡ್‌ ನಿರ್ಧಾರ ಇರುವ
ಕಾರಣ ಈ ಕುರಿತು ಪ್ರತಿಕ್ರಿಯಿಸುವ ಮಿತಿ ನನ್ನದಲ್ಲ ಎಂದರು.

ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅವರು ನಮ್ಮ ಪಕ್ಷದ ಶಾಸಕರಾಗಿದ್ದು, ಮನೆ ಎಂದಮೇಲೆ ಸಣ್ಣ-ಪುಟ್ಟ ವ್ಯತ್ಯಾಸಗಳಿರುತ್ತವೆ. ಎಲ್ಲವೂ ಸರಿ ಹೋಗುತ್ತದೆ. ನರೇಂದ್ರ ಮೋದಿ ಅವರು ಮತ್ತೂಮ್ಮೆ ಪ್ರಧಾನಿ ಆಗಲೆಂಬ ಕನಸು ಹೊಂದಿದ್ದಾರೆ. ಹೀಗಾಗಿ ಅವರು ಕೂಡ ರಮೇಶ ಜಿಗಜಿಣಗಿ
ಪರವಾಗಿ ಕೆಲಸ ಮಾಡುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿ
ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಮಲ್ಲಮ್ಮ ಜೋಗೂರ, ಜಿಪಂ ಸದಸ್ಯೆ ದಾನಮ್ಮ ಅಂಗಡಿ, ಮಾಜಿ ಸದಸ್ಯೆ ಸೌಮ್ಯಾ ಕಲ್ಲೂರ, ಅಶ್ವಿ‌ನಿ ಪಟ್ಟಣಶೆಟ್ಟಿ,
ಮಂಜುಳಾ ಅಂಗಡಿ, ಅನುರಾಧಾ ಕಲಾಲ, ರಜನಿ ಸಂಬಣ್ಣಿ, ಗೀತಾ
ಕುಗನೂರ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Mishap: ಭೀಕರ ರಸ್ತೆ ಅಪಘಾತ: ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ 7 ಮಂದಿ ಸ್ಥಳದಲ್ಲೇ ಮೃತ್ಯು

Sensible voters know who to win: Yatnal

Vijayapura; ಯಾರನ್ನು ಗೆಲ್ಲಿಸಬೇಕೆಂದು ಪ್ರಜ್ಞಾವಂತ ಮತದಾರರಿಗೆ ಗೊತ್ತಿದೆ: ಯತ್ನಾಳ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Loksabha

Udupi Chikmagalur Lok Sabha Election: ಮಹಿಳಾ ಮತದಾರರೇ ಅಧಿಕ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

3-

ಕಾರ್ಯಕರ್ತರ ಸಭೆ; ಅಭ್ಯರ್ಥಿ ಜಯಪ್ರಕಾಶ್ ಹೆಗ್ಡೆಗೆ ಬೆಂಬಲ ನೀಡಿ ಗೆಲ್ಲಿಸುವಂತೆ ಮನವಿ

2-

ಸಂಸದರ ವಿರುದ್ಧ ಸುದ್ದಿ ಹರಿಬಿಟ್ಟು,ಪೊಲೀಸ್ ಪ್ರಕರಣ ಎದುರಿಸಿದ್ದವರಿಂದ ಪಾಠ ಕಲಿಯಬೇಕಾಗಿಲ್ಲ

MUST WATCH

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

ಹೊಸ ಸೇರ್ಪಡೆ

4-health

Nutritional Foods: ಹದಿಹರಯದಲ್ಲಿ ಪೌಷ್ಟಿಕಾಂಶ ಅಗತ್ಯಗಳು

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Loksabha

Udupi Chikmagalur Lok Sabha Election: ಮಹಿಳಾ ಮತದಾರರೇ ಅಧಿಕ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

ಮೂಡಿಗೆರೆ: ನೆಮ್ಮದಿ ಕಳೆದುಕೊಂಡ ಜನರಿಂದ ತಕ್ಕ ಉತ್ತರ- ಕೆ.ಜಯಪ್ರಕಾಶ್‌ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.