ಗುಣಮಟ್ಟದ ಬೀಜ-ರಸಗೊಬ್ಬರ ಮಾರಾಟಕೆಕ್ಕೆ ಡಿಸಿ ಸೂಚನೆ

ರೈತರ ಬೇಡಿಕೆಗೆ ತಕ್ಕಂತೆ ಪೂರೈಸಿ

Team Udayavani, Sep 22, 2019, 5:02 PM IST

22-Sepectember-22

ವಿಜಯಪುರ: ಜಿಲ್ಲೆಯಲ್ಲಿ ಹಿಂಗಾರು ಹಂಗಾಮಿನಲ್ಲಿ ರೈತರು ಆತಂಕಪಡದ ರೀತಿಯಲ್ಲಿ ಉತ್ತಮ ಗುಣಮಟ್ಟದ ಬೀಜ ಹಾಗೂ ರಸಗೊಬ್ಬರ ಮಾರಾಟ ಮಾಡುವಂತೆ ಜಿಲ್ಲಾ ಧಿಕಾರಿ ವೈ. ಎಸ್‌. ಪಾಟೀಲ ರಸಗೊಬ್ಬರ-ಬೀಜ ಪೂರೈಕೆದಾರರು-ಮಾರಾಟಗಾರರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬೀಜ-ರಸಗೊಬ್ಬರ ಮಾರಾಟಗಾರರು ಹಾಗೂ ಪೂರೈಕೆದಾರರೊಂದಿಗೆ ಸಭೆ ನಡೆಸಿದ ಅವರು, ಜಿಲ್ಲೆ ಈಗಾಗಲೇ ಭೀಕರ ಬರ ಹಾಗೂ ನೆರ ಪರಿಸ್ಥಿತಿ ಎದುರಿಸಿದೆ. ಆದರೂ ಕೂಡ ರೈತರಿಗೆ ಸಕಾಲಕ್ಕೆ ಸ್ಪಂದಿಸುವ ಅಗತ್ಯವಿದ್ದು ರೈತರು ಬೀಜ ಮತ್ತು ರಸಗೊಬ್ಬರ ಪಡೆಯುವಲ್ಲಿ ಯಾವುದೇ ರೀತಿ ಆತಂಕ ಪಡದಂತೆ ಮುನ್ನೆಚ್ಚರಿಕೆ ವಹಿಸಲು ಮಾರಾಟಗಾರರು ಹಾಗೂ ಪೂರೈಕೆದಾರರಿಗೆ ಸೂಚಿಸಿದರು.

ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಾದ್ಯಂತ ಯಾವುದೇ ರೀತಿಯ ದೂರು ಬರದಂತೆ ಬೀಜ ಮತ್ತು ರಸಗೊಬ್ಬರ ಪೂರೈಕೆ ಮಾಡಿ ಕೃಷಿ ಇಲಾಖೆ ಉತ್ತಮ ಕೆಲಸ ಮಾಡಿದೆ. ಹಿಂಗಾರು ಹಂಗಾಮಿನಲ್ಲಿಯೂ ಕೂಡ ರೈತರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಬೀಜ ಮತ್ತು ರಸಗೊಬ್ಬರ ಪೂರೈಕೆ ಹಾಗೂ ಬೇಡಿಕೆಗೆ ತಕ್ಕಂತೆ ಪೂರೈಸಲು ಕ್ರಮ ಕೈಗೊಳ್ಳಬೇಕು. ಸರ್ಕಾರದ ಮಟ್ಟದಲ್ಲಿಯೂ ಕೂಡ ಬೇಡಿಕೆಗೆ ತಕ್ಕಂತೆ ಯೂರಿಯಾ ರಸಗೊಬ್ಬರ ಪೂರೈಸಲು ಕೋರಲಾಗಿದೆ. ಯಾವುದೇ ರೀತಿಯ ಅಪಕೀರ್ತಿ ಬರದಂತೆ ರೈತರು ಬೀಜ ರಸಗೊಬ್ಬರ ಪಡೆಯುವಲ್ಲಿ ಆತಂಕಕ್ಕೆ ಒಳಗಾಗದಂತೆ ಮುನ್ನೆಚ್ಚರಿಕೆ ವಹಿಸುವಂತೆ ಸೂಚಿಸಿದರು.

ಬೀಜ ಮತ್ತು ರಸಗೊಬ್ಬರ ಮಾರಾಟ ಹಾಗೂ ಪೂರೈಕೆ ಸಂದರ್ಭದಲ್ಲಿ ಯಾವುದೇ ರೀತಿ ಲೋಪಗಳಿಗೆ ಅವಕಾಶ ನೀಡಬಾರದು. ರೈತರಿಗೆ ಸಕಾಲಕ್ಕೆ ಸ್ಪಂದಿಸುವ ಮೂಲಕ ಅವರಿಗೆ ಸಿಗಬೇಕಾದ ತರದಲ್ಲಿ ಹಾಗೂ ಗುಣಮಟ್ಟದ ಬೀಜ ರಸಗೊಬ್ಬರ ಪೂರೈಕೆಗೆ ಕ್ರಮ ಕೈಗೊಳ್ಳಬೇಕು. ಯಾವುದೇ ರೀತಿಯ ಒಂದು ತಪ್ಪು ಜಿಲ್ಲೆಯ ಅಪಕೀರ್ತಿಗೆ ಕಾರಣವಾಗುವ ಜೊತೆಗೆ ತಮ್ಮ ವ್ಯಾಪಾರ ವಹಿವಾಟಿನಲ್ಲಿಯೂ ಕೂಡ ಪ್ರಭಾವ ಬೀರುವ ಸಾಧ್ಯತೆ ಇರುತ್ತದೆ. ಈ ಹಿನ್ನೆಲೆಯಲ್ಲಿ ರೈತರ ಬೇಡಿಕೆಗೆ ಅನುಗುಣವಾಗಿ ಬೀಜ ರಸಗೊಬ್ಬರ ಪೂರೈಸಬೇಕು. ಯಾವುದೇ ರೀತಿಯಲ್ಲಿ ರೈತರ ಮೇಲೆ ದಬ್ಟಾಳಿಕೆ ರೀತಿಯ ಕ್ರಮವಾಗದಂತೆ ಮುನ್ನೆಚ್ಚರಿಕೆ ಸಹ ವಹಿಸಲು ತಿಳಿಸಿದ ಅವರು, ಜಿಲ್ಲಾಡಳಿತ ಹಾಗೂ ಮಾರಾಟಗಾರರು ಕೂಡಿ ರೈತರ ಸಮಸ್ಯೆಗಳಿಗೆ ಸ್ಪಂದಿಸುವಂತೆ ಸಲಹೆ ನೀಡಿದರು.

ಕೃಷಿ ಇಲಾಖೆ ಜಂಟಿ ನಿರ್ದೇಶಕ ಶಿವಕುಮಾರ ಅವರು, ಈಗಾಗಲೇ ಯೂರಿಯಾ ರಸಗೊಬ್ಬರ ಸಾಕಷ್ಟು ಪ್ರಮಾಣದ ಪೂರೈಕೆಗೆ ಸಂಬಂಧಪಟ್ಟ ಕಂಪನಿಗಳಿಗೆ ಕೋರಲಾಗಿದೆ. ರಸಗೊಬ್ಬರ ಬಂದ ತಕ್ಷಣ ಶೇ. 10 ಫೆಡರೇಶನ್‌ ನಲ್ಲಿ ದಾಸ್ತಾನು ಮಾಡಲಾಗುವುದು. ಸಂಬಂಧಪಟ್ಟ ಮಳಿಗೆಗಳಲ್ಲಿ ಕಡ್ಡಾಯವಾಗಿ ಬೀಜ ರಸಗೊಬ್ಬರಗಳ ದರ ಪ್ರದರ್ಶನ ಹಾಗೂ ಬಿಲ್‌ ನೀಡಬೇಕು. ತನಿಖಾ ದಳಗಳಿಂದ ಸಹ ನಿರಂತರ ನಿಗಾ ಇಡಲಾಗುವುದೆಂದ ಅವರು, ಕಳಪೆ ಮಟ್ಟದ ಬೀಜ-ರಸಗೊಬ್ಬರ ಮಾರಾಟವಾಗದಂತೆ ಎಚ್ಚರಿಕೆ ವಹಿಸಲು ನಿರ್ದೇಶನ ನೀಡಿದರು.

ಯೂರಿಯಾ ಕಂಪನಿಗಳೊಂದಿಗೆ ಈಗಾಗಲೇ ಚರ್ಚಿಸಿದ್ದು, ಸಾಕಷ್ಟು ಪ್ರಮಾಣದಲ್ಲಿ ದೊರೆಯುವ ಸಾಧ್ಯತೆ ಇದೆ. ಅದರಂತೆ ಸಧ್ಯದಲ್ಲಿ ರಾಜ್ಯ ಮಟ್ಟದಲ್ಲಿ ಕೃಷಿ ಜಂಟಿ ನಿರ್ದೇಶಕರ ಸಭೆ ಸಹ ನಡೆಯಲಿದ್ದು, ಈಗಾಗಲೇ ಬೀಜ ರಸಗೊಬ್ಬರ ಮಾರಾಟಗಾರರಿಂದ ಬಂದಿರುವ ಅನಿಸಿಕೆ ಮತ್ತು ಸಲಹೆಗಳ ಬಗ್ಗೆ ಸೂಕ್ತ ಪರಿಹಾರ ಈ ಸಭೆಯಲ್ಲಿ ಪಡೆಯಲಾಗುವುದು. ಒಟ್ಟಾರೆ ಮುಂಗಾರು ಹಂಗಾಮಿನಲ್ಲಿ ಜಿಲ್ಲೆಯಾದ್ಯಂತ ಅತ್ಯುತ್ತಮವಾಗಿ ಬೀಜ-ರಸಗೊಬ್ಬರ ಮಾರಾಟ ಹಾಗೂ ನಿರ್ವಹಣೆಯಾಗಿದ್ದು, ಇದಕ್ಕಾಗಿ ಸ್ಪಂದಿಸಿದ ಎಲ್ಲ ಮಾರಾಟಗಾರರಿಗೆ ಹಾಗೂ ಪೂರೈಕೆದಾರರಿಗೆ ಅಭಿನಂದನೆ ಸಲ್ಲಿಸಿದರು.

ಟಾಪ್ ನ್ಯೂಸ್

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

3-mandya

Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು

2-bng-crime

Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

Kerala-ಕರ್ನಾಟಕ-ತಮಿಳುನಾಡು ತ್ರಿಜಂಕ್ಷನ್‌: ಮತ್ತೆ ನಕ್ಸಲರ ಸದ್ದು?

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

4-dandeli

Dandeli: ಯಂತ್ರದಡಿ ಸಿಲುಕಿದ ಕಾರ್ಮಿಕ: ಕಾಲುಗಳಿಗೆ ಗಂಭೀರ ಗಾಯ

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್‌ ಸೇದಿದ ಆಟಗಾರನ ವಿಡಿಯೋ ವೈರಲ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.