ಅನ್ನದಾತರ ಚಿತ್ತ ಮಳೆರಾಯನತ್ತ!

ಕೈ ಕೊಟ್ಟ ರೋಹಿಣಿ-ಮೃಗಶಿರದ ಮೇಲೆ ಭಾರಿ ನಿರೀಕ್ಷೆ•ದಯೆ ತೋರುತ್ತಾನಾ ವರುಣ ದೇವ?

Team Udayavani, Jun 9, 2019, 10:21 AM IST

09-June-6

ವಿಜಯಪುರ: ಮುಂಗಾರು ಬಿತ್ತನೆಗಾಗಿ ಜಮೀನು ಹದಗೊಳಿಸುತ್ತಿರುವ ಅನ್ನದಾತ.

ಜಿ.ಎಸ್‌. ಕಮತರ
ವಿಜಯಪುರ:
ಕಳೆದ ನಾಲ್ಕಾರು ವರ್ಷಗಳಿಂದ ನಿರಂತರ ಬರ ಪರಿಸ್ಥಿತಿ ಎದುರಿಸಿರುವ ವಿಜಯಪುರ ಜಿಲ್ಲೆಯಲ್ಲಿ ಪ್ರಸಕ್ತ ವರ್ಷವೂ ರೋಹಿಣಿ ಮಳೆ ಕೈಕೊಟ್ಟು ಹೆಸರು ಬಿತ್ತನೆಗೆ ಅನ್ನದಾತ ಹಿಂದೇಟು ಹಾಕುತ್ತಿದ್ದಾನೆ. ಇದರ ಹೊರತಾಗಿಯೂ ಪ್ರಸಕ್ತ ವರ್ಷದ ಮುಂಗಾರು ಪ್ರವೇಶ ವಿಳಂಬವಾದರೂ ಉತ್ತಮ ಮಳೆ ಸುರಿಯುವ ನೀರಿಕ್ಷೆ ಇದೆ. ಹೀಗಾಗಿ ಈ ವರ್ಷ ಜಿಲ್ಲೆಯಲ್ಲಿ ಮುಂಗಾರು ಹಂಗಾಮಿನಲ್ಲಿ 4.30 ಲಕ್ಷ ಹೆಕ್ಟೇರ್‌ ಬಿತ್ತನೆ ಗುರಿ ಹಾಕಿಕೊಂಡಿದ್ದು, ತೊಗರಿ ಬೆಳೆ ಈ ವರ್ಷವೂ ಅಗ್ರಸ್ಥಾನದಲ್ಲಿದೆ.

ವಿಜಯಪುರ ಜಿಲ್ಲೆಯಲ್ಲಿ ವಾರ್ಷಿಕ ಸರಾಸರಿ 594 ಎಂಎಂ ಮಳೆ ಆಗುವ ವಾಡಿಕೆ ಇದ್ದು, ಮುಂಗಾರು ಮಳೆ ಜೂನ್‌-85 ಮಿ.ಮೀ., ಜುಲೈ-73 ಮಿ.ಮೀ. ಆಗಸ್ಟ್‌-78 ಮಿ.ಮೀ. ಹಾಗೂ ಸೆಪ್ಟೆಂಬರ್‌ನಲ್ಲಿ 152 ಮಿ.ಮೀ. ಸೇರಿದಂತೆ ಒಟ್ಟು 388 ಮಿ.ಮೀ. ವಾಡಿಕೆ ಮಳೆ ಇದೆ. ಪ್ರಸಕ್ತ ವರ್ಷದ ಮುಂಗಾರು ಕರಾವಳಿ ಭಾಗಕ್ಕೆ ಜೂನ್‌ 6ಕ್ಕೆ ಪ್ರವೇಶ ಮಾಡಬೇಕಿದ್ದರೂ 8 ಅಥವಾ 10ರಂದು ಪ್ರವೇಶ ಮಾಡಲಿದೆ. ಕಾರಣ ವಿಜಯಪುರ ಜಿಲ್ಲೆಗೆ ಜೂ. 10ರಂದು ಪ್ರವೇಶಿಸಬೇಕಿದ್ದ ಮುಂಗಾರು ಸಹಜವಾಗಿ 3-4 ದಿನ ವಿಳಂಬವಾಗಲಿದೆ.

ಸಾಮಾನ್ಯವಾಗಿ ವಿಜಯಪುರ ಜಿಲ್ಲೆಯಲ್ಲಿ ಮೇ ಅಂತ್ಯಕ್ಕೆ 77.4 ಮಿ.ಮೀ. ಮಳೆ ಆಗಬೇಕಿದ್ದು, ಈ ವರ್ಷ ಕೇವಲ 36.7ರಷ್ಟು ಮಾತ್ರ ಸುರಿದಿರುವ ಕಾರಣ ಮೇ ತಿಂಗಳಲ್ಲಿ ಶೇ .65 ಮಳೆ ಕೊರತೆಯಾಗಿದೆ. ಆದರೆ ಜೂನ್‌ ಅಂತ್ಯಕ್ಕೆ 95 ಮಿ.ಮೀ. ಮಳೆ ಆಗಬೇಕಿದ್ದು, ಮೊದಲ ವಾರದಲ್ಲಿ ಜೂ. 4ರಂದು ಜಿಲ್ಲೆಯಾದ್ಯಂತ ಸುರಿದ ಮಳೆ 23 ಮಿ.ಮೀ. ದಾಖಲಾಗಿದ್ದು, ಜೂ. 3ರಂದು ಸುರಿದ 8 ಮಿ.ಮೀ. ಮಳೆ ಸುರಿದಿದೆ. ಈವರೆಗೆ 35.4 ರಷ್ಟು ಮಳೆಯಾಗಿದ್ದು, ಅನ್ನದಾತ ಭವಿಷ್ಯದಲ್ಲಿ ನಿರೀಕ್ಷಿತ ಮಳೆ ಸುರಿಯುವ ಆಶಾಭಾವ ಇರಿಸಿಕೊಂಡಿದ್ದಾನೆ. ಮೃಗಶಿರದ ಮೂಲಕ ಮುಂಗಾರು ಪ್ರವೇಶ ವಿಳಂಬವಾದರೂ ಪ್ರಸಕ್ತ ವರ್ಷ ಮುಂಗಾರು ಹಂಗಾಮಿನಲ್ಲಿ ಸುರಿಯಬೇಕಿದ್ದ ಮಳೆ ಪೂರ್ಣ ಪ್ರಮಾಣದಲ್ಲಿ ಬೀಳುವ ನಿರೀಕ್ಷೆ ಇದೆ ಎಂದು ಹವಾಮಾನ ತಜ್ಞರು ವಿಶ್ವಾಸ ವ್ಯಕ್ತಪಡಿಸುತ್ತಾರೆ.

ಇದರ ಮಧ್ಯೆ ರೋಹಿಣಿ ಮಳೆ ನಿರೀಕ್ಷಿತ ಪ್ರಮಾಣದಲ್ಲಿ ಸುರಿಯದ ಕಾರಣ ಪ್ರಸಕ್ತ ವರ್ಷದಲ್ಲಿ ಹೆಸರು-ಉದ್ದು ಬೆಳೆ ಬಿತ್ತನೆಗೆ ರೈತರು ಹಿಂದೇಟು ಹಾಕುತ್ತಿದ್ದಾರೆ. ಇದರ ಹೊರತಾಗಿಯೂ ಜಿಲ್ಲೆಯಲ್ಲಿ ಸುಮಾರು 5 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆ ನಿರೀಕ್ಷೆಯಲ್ಲಿ ಹೆಸರು-ಉದ್ದು ಬಿತ್ತನೆಗೆ 100 ಕ್ವಿಂಟಲ್ ಬೀಜ ದಾಸ್ತಾನು ಮಾಡಿಕೊಳ್ಳಲಾಗಿದೆ. ಇದಲ್ಲದೇ ಮುಂಗಾರು ತ್ತಮ ಎಂಬ ಕಾರಣಕ್ಕೆ ಇತರೆ ಬೆಳೆಗಳೂ ಕೂಡ ಈ ಬಾರಿ ಉತ್ತಮವಾಗಿಯೇ ಬರುವ ನಿರೀಕ್ಷೆಯಲ್ಲಿ ಅನ್ನದಾತ ಜಮೀನು ಹಸನು ಮಾಡಿಕೊಂಡು ವರುಣನ ಆಗಮನಕ್ಕೆ ಕಾಯುತ್ತಿದ್ದಾನೆ.

ಈ ವರ್ಷ ಕೃಷಿ ಇಲಾಖೆ ಮುಂಗಾರು ಹಂಗಾಮಿನಲ್ಲಿ 4.30 ಲಕ್ಷ ಹೆಕ್ಟೇರ್‌ ಬಿತ್ತನೆ ಗುರಿ ಇರಿಸಿಕೊಂಡಿದೆ. ಬಿತ್ತನೆಗಾಗಿ ಬೇಕಿರುವ ಬೀಜಕ್ಕಾಗಿ ಕರ್ನಾಟಕ ರಾಜ್ಯ ಬೀಜ ನಿಗಮ ಹಾಗೂ ರಾಷ್ಟ್ರೀಯ ಬೀಜ ನಿಮಗಮದ ಸಹಯೋಗದಲ್ಲಿ ಜಿಲ್ಲೆಯಲ್ಲಿ ಸುಮಾರು 7 ಸಾವಿರ ಕ್ವಿಂಟಲ್ ಬೀಜ ದಾಸ್ತಾನು ಮಾಡಿಕೊಂಡಿದೆ. ಇದರಲ್ಲಿ 2.75 ಲಕ್ಷ ಹೆಕ್ಟೇರ್‌ ಪ್ರದೇಶವನ್ನು ತೊಗರಿ ಆವರಿಸುವ ನಿರೀಕ್ಷೆ ಇದೆ, 4000 ಕ್ವಿಂಟಲ್ ತೊಗರಿ ಬೀಜ ದಾಸ್ತಾನು ಮಾಡಿಕೊಂಡಿದ್ದು, ಜಿಲ್ಲೆಯ 20 ರೈತ ಸಂಪರ್ಕ ಕೇಂದ್ರಗಳಿಗೆ ಬೀಜ ಪೂರೈಕೆ ಆರಂಭಗೊಂಡಿದೆ. ಜೂ. 10ರೊಳಗೆ ಎಲ್ಲ ರೈತ ಸಂಕರ್ಪ ಕೇಂದ್ರಗಳಿಗೆ ಸರಬರಾಜು ಕೆಲಸ ಮುಗಿಯಲಿದೆ.

ಒಟ್ಟು ಬಿತ್ತನೆ ಗುರಿಯಲ್ಲಿ 12 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಸೂರ್ಯಕಾಂತಿ ಬಿತ್ತನೆ ನಿರೀಕ್ಷೆಯಿಂದ 150 ಕ್ವಿಂಟಲ್ ಬೀಜ ಸಂಗ್ರಹ ಮಾಡಿಕೊಂಡಿದ್ದರೆ, 2 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಸಜ್ಜೆ ಬಿತ್ತನೆಗಾಗಿ 350 ಕ್ವಿಂಟಲ್ ಬೀಜ ಹಾಗೂ 5 ಸಾವಿರ ಹೆಕ್ಟೇರ್‌ ಪ್ರದೇಶದಲ್ಲಿ ಗೋವಿನ ಜೋಳ ಬಿತ್ತನೆ ಗುರಿಗಾಗಿ 2,500 ಕ್ವಿಂಟಲ್ ಬೀಜ ದಾಸ್ತಾನು ಮಾಡಿಕೊಂಡಿದೆ ಎಂದು ಕೃಷಿ ಇಲಾಖೆ ಬೀಜ ವಿಭಾಗದ ಅಧಿಕಾರಿ ಮಹಾದೇವ ಏವೂರ ವಿವರಿಸುತ್ತಾರೆ.

ಸಾಮಾನ್ಯವಾಗಿ ಮಾರಾಟವಾಗುತ್ತಿದ್ದ ಕ್ವಿಂಟಲ್ಗೆ 1,300 ರೂ. ಬೆಲೆ ಇದ್ದ ಗೋವಿನಜೋಳ ಕಳೆದ ವರ್ಷ ಸರ್ಕಾರದ ಬೆಂಬಲ ಬೆಲೆಯಲ್ಲಿ ಸರ್ಕಾರ ಖರೀದಿಗೆ ಮುಂದಾಗಿತ್ತು. ಕಾರಣ ಈ ವರ್ಷ ಗೋವಿನಜೋಳದ ಬಿತ್ತನೆ ಪ್ರದೇಶ ಹೆಚ್ಚಳವಾಗುವ ನಿರೀಕ್ಷೆ ಇರಿಸಿಕೊಂಡಿದೆ.

ಪ್ರಸಕ್ತ ವರ್ಷದಲ್ಲಿ ಮುಂಗಾರು ಪ್ರವೇಶ ವಿಳಂಬವಾದರೂ, ವಾಡಿಕೆಯಂತೆ ಮಳೆ ಸುರಿಯುವ ನಿರೀಕ್ಷೆ ಇದೆ. ಕರಾವಳಿ ಭಾಗಕ್ಕೆ ಸುಮಾರು 4 ದಿನ ತಡವಾಗಿ ಮುಂಗಾರು ಪ್ರವೇಶುತ್ತಿರುವುದರಿಂದ ವಿಜಯಪುರ ಜಿಲ್ಲೆಗೂ ಸಹಜವಾಗಿ ವಿಳಂಬವಾಗಿ ಪ್ರವೇಶ ಮಾಡಲಿದೆ.
ಡಾ| ಶಂಕರ ಕುಲಕರ್ಣಿ,
ತಾಂತ್ರಿಕ ಅಧಿಕಾರಿ, ಹವಾಮಾನ ಶಾಸ್ತ್ರ ವಿಭಾಗ, ಕೃಷಿ ಮಹಾ ವಿದ್ಯಾಲಯ, ಹಿಟ್ನಳ್ಳಿ

ಜಿಲ್ಲೆಯಲ್ಲಿ 4.30 ಲಕ್ಷ ಹೆಕ್ಟೇರ್‌ ಮುಂಗಾರು ಬಿತ್ತನೆ ಗುರಿ ಇರುವ ಕಾರಣ ವಿಜಯಪುರ ಜಿಲ್ಲೆಯಲ್ಲಿ ಈಗಾಗಲೇ ಸುಮಾರು 7 ಸಾವಿರ ಕ್ವಿಂಟಲ್ ಬೀಜ ದಾಸ್ತಾನು ಮಾಡಿಕೊಂಡಿದ್ದೇವೆ. ಈಗಾಗಲೇ ರೈತ ಸಂಪರ್ಕ ಕೇಂದ್ರಗಳಿಗೆ ಬೀಜ ಪೂರೈಕೆ ಆರಂಭಗೊಂಡಿದೆ.
ಮಹದೇವ ಏವೂರ
ಬೀಜ ವಿಭಾಗದ ಅಧಿಕಾರಿ, ಕೃಷಿ ಇಲಾಖೆ, ವಿಜಯಪುರ

ಟಾಪ್ ನ್ಯೂಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.