ಬರ ನಿರ್ವಹಣೆಗೆ ನೆಪ ಹೇಳಬೇಡಿ

ಅಧಿಕಾರಿಗಳಿಗೆ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮೊಹ್ಮದ್‌ ಮೊಹಸೀನ್‌ ತಾಕೀತು

Team Udayavani, May 5, 2019, 2:46 PM IST

5-MAY-28

ವಿಜಯಪುರ: ಜಿಲ್ಲಾಧಿಕಾರಿ ಕಚೇರಿಯಲ್ಲಿ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮೊಹ್ಮದ್‌ ಮೊಹಸೀನ್‌ ಜಿಲ್ಲೆಯ ಬರ ಹಾಗೂ ಪ್ರಗತಿ ಪರಿಸ್ಥಿತಿ ಪರಿಶೀಸನೆ ನಡೆಸಿದರು.

ವಿಜಯಪುರ: ಬರಗಾಲ ಕಾಮಗಾರಿ ನಿರ್ವಹಣೆ ವಿಷಯದಲ್ಲಿ ಅಧಿಕಾರಿಗಳು ಕುಂಟು ನೆಪಗಳನ್ನು ಹೇಳದೇ ದಕ್ಷತೆಯಿಂದ ಕರ್ತವ್ಯ ನಿಭಾಯಿಸಬೇಕು. ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ನೀಗಿಸಲು ವಿಳಂಬ ಇಲ್ಲದಂತೆ ಟ್ಯಾಂಕರ್‌ ಮೂಲಕ ಕುಡಿಯುವ ನೀರು ಪೂರೈಸಬೇಕು ಎಂದು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಮೊಹ್ಮದ್‌ ಮೊಹಸೀನ್‌ ತಾಕೀತು ಮಾಡಿದ್ದಾರೆ.

ಶನಿವಾರ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಬರ ಕುರಿತು ನಿರ್ವಹಣಾ ಸಭೆ ಅಧ್ಯಕ್ಷತೆ ವಹಿಸಿದ್ದ ಅವರು, ಬರ ನಿರ್ವಹಣೆ ಹಾಗೂ ಕುಡಿಯುವ ನೀರು ಪೂರೈಕೆಗೆ ಯಾವುದೇ ಅನುದಾನದ ಕೊರತೆ ಇಲ್ಲ. ಬರದಂತಹ ಕ್ಲಿಷ್ಟಕರ ಪರಿಸ್ಥಿತಿಯಲ್ಲಿ ಅಧಿಕಾರಿಗಳು ನಿರ್ಲಕ್ಷ್ಯ ತೋರದೇ ಬರಗಾಲ ಕಾಮಗಾರಿಗಳನ್ನು ಕೈಗೊಳ್ಳಬೇಕು. ನೀರಿನ ಅವಶ್ಯಕತೆ ಇರುವ ಗ್ರಾಮಗಳಿಗೆ ಟ್ಯಾಂಕರ್‌ ಮೂಲಕ ನೀರು ಪೂರೈಸಬೇಕು ಎಂದು ಹೇಳಿದರು.

ಬರ ಕಾಮಗಾರಿ ಸೇರಿದಂತೆ ಕುಡಿಯುವ ನೀರಿನ ಪೂರೈಕೆಯ ಬಿಲ್ಲುಗಳನ್ನು ಯಾವುದೇ ಕಾರಣಕ್ಕೂ ಬಾಕಿ ಉಳಿಸಿಕೊಳ್ಳಬಾರದು. ತಾಲೂಕಾವಾರು ಟ್ಯಾಂಕರ್‌ಗಳಿಂದ ನೀರು ಪೂರೈಕೆ ಬಿಲ್ ಪಾವತಿಸಬೇಕು. ಯಾವುದೇ ಬಿಲ್ ಪಾವತಿ ಬಾಕಿ ಉಳಿಸಿಕೊಂಡಲ್ಲಿ ಸಂಬಂಧಿಸಿದ ಅಧಿಕಾರಿಗಳ ಮೇಲೆ ಕ್ರಮ ಕೈಗೊಳ್ಳಲಾಗುವುದು. ಯಾವುದೇ ಬಿಲ್ಗಳನ್ನು 7 ದಿನಗಳೊಳಗೆ ಪಾವತಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಗ್ರಾಪಂವಾರು ಅಧ್ಯಕ್ಷರನ್ನು ಸಂಪರ್ಕಿಸಿ ಬೋರ್‌ವೆಲ್ಗಳ ಲಭ್ಯತೆ, ಬೋರ್‌ವೆಲ್ಗಳ ಸ್ಥಿತಿಗತಿ ಕುರಿತು ಮಾಹಿತಿ ಪಡೆಯಬೇಕು. ವಿಫಲವಾದ ಕೊಳವೆಗಳನ್ನು ಕ್ರಮ ಬದ್ಧವಾಗಿ ಮುಚ್ಚಿಸಲು ಕ್ರಮ ಕೈಗೊಂಡು ಅವಘಡಗಳಿಗೆ ಅವಕಾಶ ನೀಡದಂತೆ ಎಚ್ಚರಿಕೆ ವಹಿಸಬೇಕು ಎಂದು ಹೇಳಿದರು.

ವಿಜಯಪುರ ನಗರದ ಮಹಾನಗರ ಪಾಲಿಕೆ ವ್ಯಾಪ್ತಿಯ 15 ವಾರ್ಡ್‌ಗಳಲ್ಲಿ ಅಮೃತ್‌ ಯೋಜನೆಯಡಿ 24×7 ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ. ಈ ಪ್ರದೇಶದಲ್ಲಿ ಕುಡಿಯುವ ನೀರಿನ ಯಾವುದೇ ಸಮಸ್ಯೆ ಇಲ್ಲ. ಈ ಪ್ರದೇಶದಲ್ಲಿ ಟ್ಯಾಂಕರ್‌ ಮೂಲಕ ನೀರು ಪೂರೈಸುವ ಅಗತ್ಯವಿಲ್ಲ. ಉಳಿದಂತೆ ನೀರಿನ ಅವಶ್ಯಕತೆ ಇರುವ ಕಡೆಗಳಲ್ಲಿ ಟ್ಯಾಂಕರ್‌ ಮೂಲಕ ನೀರು ಪೂರೈಸಬೇಕು. ಕುಡಿಯಲು ಯೋಗ್ಯವಾದ ಹಳ್ಳದ ನೀರನ್ನು ಕುಡಿಯಲು ಮಾತ್ರ ಬಳಸಬೇಕು. ಕೃಷಿ ಕೆಲಸಗಳಿಗೆ ಮಾತ್ರ ಉಪಯೋಗಿಸುವಂತೆ ಅಗತ್ಯ ಕ್ರಮ ಕೈಗೊಳ್ಳುವಂತೆ ಕೆಬಿಜೆಎನ್‌ಎಲ್ ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲೆಯಲ್ಲಿರುವ ಮೇವು ಬ್ಯಾಂಕ್‌ಗಳಿಂದ ಜಾನುವಾರುಗಳಿಗೆ ಟಾಂಗಾ ಮಾಲೀಕರ ಕುದುರೆಗಳಿಗೂ ಮೇವು ಒದಗಿಸಲು ಕ್ರಮ ಕೈಗೊಳ್ಳಬೇಕು. ಬರ ಪರಿಸ್ಥಿತಿ ಇರುವ ಹಿನ್ನಲೆಯಲ್ಲಿ ನರೇಗಾ ಯೋಜನೆಯಡಿ ಮಾನವ ದಿನಗಳನ್ನು ಸೃಷ್ಟಿಸಿ ಜನರಿಗೆ ಉದ್ಯೋಗ ನೀಡಿ ನೆರವಾಗಬೇಕು. ವೇತನ ಬಾಕಿ ಸಮಸ್ಯೆಯನ್ನು ಶೀಘ್ರವಾಗಿ ಪರಿಹರಿಸಿಕೊಂಡು ಜನರ ನೆರವಿಗೆ ಧಾವಿಸಬೇಕು ಎಂದು ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಎಂ.ಕನಗವಲ್ಲಿ ಮಾತನಾಡಿ, ವಸತಿ ಶಾಲೆಗಳ ನಿವೇಶನ, ಸ್ಮಶಾನ ಭೂಮಿ ಕುರಿತು ನ್ಯಾಯಾಲಯಗಳ ವ್ಯಾಜ್ಯಗಳನ್ನು 20 ದಿನಗಳಲ್ಲಿ ಪೂರ್ಣಗೊಳಿಸಲು ಸೂಚಿಸಿದರು.

ಜಿಪಂ ಸಿಇಒ ವಿಕಾಸ್‌ ಸುರಳಕರ ಮಾತನಾಡಿ, ಬರಗಾಲದ ಸಂದರ್ಭದಲ್ಲಿ ಅಧಿಕಾರಿಗಳು ಪರಸ್ಪರ ಸಮನ್ವಯ ಹಾಗೂ ಜನರಿಗೆ ಅನುಕೂಲ ಆಗುವಂತೆ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು. ಅಧಿಕಾರಿಗಳ ಮಧ್ಯೆ ಸಮನ್ವಯತೆ ಕೊರತೆಯಿಂದ ಕಾರ್ಯ ನಿರ್ವಹಿಸಲು ಸಾಧ್ಯವಾಗುವುದಿಲ್ಲ. ಹೀಗಾಗಿ ಅಧಿಕಾರಿಗಳು ಸಮನ್ವಯತೆ ಸಾಧಿಸಬೇಕು. ಜಿಪಿಎಸ್‌ ಡಾಟಾ ಇಲ್ಲದ ಕಡೆ ಸ್ಥಳಕ್ಕೆ ಖುದ್ದಾಗಿ ಭೇಟಿ ನೀಡಿ ವಸ್ತುಸ್ಥಿತಿ ಕುರಿತು ಪರಿಶೀಲನೆ ನಡೆಸಲು ಈಗಾಗಲೇ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಹೇಳಿದರು.

ಜಿಲ್ಲೆಯ ಎಸ್ಸೆಸ್ಸೆಲ್ಸಿ ಫಲಿತಾಂಶಧದಲ್ಲಿ ಭಾರಿ ಕುಸಿತವಾಸಗಿದೆ. ಹೀಗಾಗಿ ಫ‌ಲಿತಾಂಶ ಸುಧಾರಣೆಗೆ ಖಾಸಗಿ ಅನುದಾನಿತ ಶಾಲೆಗಳಲ್ಲಿ ಶಿಕ್ಷಕರ ನೇಮಕಾತಿಗೆ ಶಿಕ್ಷಣ ಇಲಾಖೆ ಮಾನದಂಡ, ನಿಯಮ ಪರಿಶೀಲನೆ ನಡೆಸಿ ಕ್ರಮ ಕೈಗೊಳ್ಳುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಸಭೆಯಲ್ಲಿ ಕೃಷಿ ಇಲಾಖೆ, ತೋಟಗಾರಿಕೆ ಇಲಾಖೆ ಸೇರಿದಂತೆ ವಿವಿಧ ಇಲಾಖೆ, ವಿವಿಧ ನಿಗಮಗಳ ಪ್ರಗತಿ ಪರಿಶೀಲನೆ ನಡೆಸಲಾಯಿತು. ಅಪರ್‌ ಜಿಲ್ಲಾಧಿಕಾರಿ ಎಚ್.ಪ್ರಸನ್ನ, ಜಿಪಂ ಉಪ ಕಾರ್ಯದರ್ಶಿ ಅಮರೇಶ ನಾಯಕ ಸೇರಿದಂತೆ ಜಿಲ್ಲೆಯ ಉಪ ವಿಭಾಗಾಧಿಕಾರಿಗಳು, ಆಯಾ ತಾಲೂಕು ತಹಶೀಲ್ದಾರ್‌ರು ಸೇರಿದಂತೆ ಜಿಲ್ಲಾಮಟ್ಟದ ವಿವಿಧ ಅಧಿಕಾರಿಗಳು ಇದ್ದರು.

ಬರಗಾಲದ ಸಂದರ್ಭದಲ್ಲಿ ಅಧಿಕಾರಿಗಳು ಪರಸ್ಪರ ಸಮನ್ವಯ ಹಾಗೂ ಜನರಿಗೆ ಅನುಕೂಲ ಆಗುವಂತೆ ಎಚ್ಚರಿಕೆಯಿಂದ ಕಾರ್ಯ ನಿರ್ವಹಿಸಬೇಕು. ಅಧಿಕಾರಿಗಳ ಮಧ್ಯೆ ಸಮನ್ವಯತೆ ಕೊರತೆಯಿಂದ ಕಾರ್ಯ ನಿರ್ವಹಿಸಲು ಸಾಧ್ಯವಾಗುವುದಿಲ್ಲ. ಹೀಗಾಗಿ ಅಧಿಕಾರಿಗಳು ಸಮನ್ವಯತೆ ಸಾಧಿಸಬೇಕು. ಜಿಪಿಎಸ್‌ ಡಾಟಾ ಇಲ್ಲದ ಕಡೆ ಸ್ಥಳಕ್ಕೆ ಖುದ್ದಾಗಿ ಭೇಟಿ ನೀಡಿ ವಸ್ತುಸ್ಥಿತಿ ಕುರಿತು ಪರಿಶೀಲನೆ ನಡೆಸಲು ಈಗಾಗಲೇ ಅಧಿಕಾರಿಗಳಿಗೆ ಸೂಚಿಸಲಾಗಿದೆ.
ವಿಕಾಸ್‌ ಸುರಳಕರ,ಜಿಪಂ ಸಿಇಒ

ಟಾಪ್ ನ್ಯೂಸ್

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು

6-bng-crime

Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್

jagadish shettar

Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್

7-bng

Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್‌ ಆತ್ಮಹತ್ಯೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Lok Sabha 1 Phase: ನಿತಿನ್‌ ಗಡ್ಕರಿ ಟು ಕನಿಮೋಳಿ..ಮೊದಲ ಹಂತದ ಘಟಾನುಘಟಿ ಅಭ್ಯರ್ಥಿಗಳು…

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

Navy chief: ಭಾರತೀಯ ನೌಕಾಪಡೆಯ ನೂತನ ಮುಖ್ಯಸ್ಥರಾಗಿ ದಿನೇಶ್ ತ್ರಿಪಾಠಿ ನೇಮಕ

9-fusion

Drama: ಪ್ರೇಕ್ಷಕರ ಮನಗೆದ್ದ “ಸೀತಾರಾಮ ಚರಿತಾ”

8-ptr

Puttur: ಶ್ರೀ ಮಹಾಲಿಂಗೇಶ್ವರ ದೇವರ ಅವಭೃಥ ಸವಾರಿ

pramod-muthalik

Neha Hiremath Case; ಕೊಲೆಗಡುಕನನ್ನು ಎನ್ ಕೌಂಟರ್ ಮಾಡಿ: ಪ್ರಮೋದ್ ಮುತಾಲಿಕ್ ಆಗ್ರಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.