ಮಕ್ಕಳ ಸಾವು ಖಂಡಿಸಿ ಪ್ರತಿಭಟನೆ

ಅಪೌಷ್ಟಿಕತೆಯಿಂದ ಬಿಹಾರದಲ್ಲಿ ಮಕ್ಕಳ ಮಾರಣಹೋಮ-ಎಸ್‌ಯುಸಿಐ ಆರೋಪ

Team Udayavani, Jun 26, 2019, 10:57 AM IST

26-June-7

ವಿಜಯಪುರ: ಬಿಹಾರದಲ್ಲಿ ಅಪೌಷ್ಟಿಕತೆಯಿಂದ ನಡೆದ ಮಕ್ಕಳ ಸಾವಿನ ಘಟನೆ ಖಂಡಿಸಿ ಎಸ್‌ಯುಸಿಐ ನೇತೃತ್ವದಲ್ಲಿ ನಗರದಲ್ಲಿ ಪ್ರತಿಭಟನೆ ನಡೆಯಿತು.

ವಿಜಯಪುರ: ಬಿಹಾರ ಮತ್ತು ಕೇಂದ್ರ ಸರಕಾರಗಳ ನಿರ್ಲಕ್ಷ್ಯದಿಂದಾಗಿ ನಡೆದಿರುವ ಮಕ್ಕಳ ಮಾರಣಹೋಮ ಘಟನೆ ಖಂಡಿಸಿ ಎಸ್‌ಯುಸಿಐ ನೇತೃತ್ವದಲ್ಲಿ ಪ್ರತಿಭಟನೆ ನಡೆಸಲಾಯಿತು.

ನಗರದ ಮಹಾತ್ಮ ಗಾಂಧೀಜಿ ವೃತ್ತದಲ್ಲಿ ಪ್ರತಿಭಟನೆ ನಡೆಸಿ, ಅಪೌಷ್ಟಿಕತೆಯಿಂದ ಮಕ್ಕಳ ಸಾವಿಗೆ ಕಾರಣವಾಗಿರುವ ಉಭಯ ಸರ್ಕಾರಗಳು ಬಾಧಿತ ಕುಟುಂಬಗಳಿಗೆ ಸೂಕ್ತ ಪರಿಹಾರ ಕೊಡಬೇಕು ಎಂದು ಫ‌ಲಕ ಪ್ರದರ್ಶಿಸಿದರು.

ಈ ಸಂದರ್ಭದಲ್ಲಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಪಕ್ಷದ ಜಿಲ್ಲಾ ಕಾರ್ಯದರ್ಶಿ ಭಗವಾನರೆಡ್ಡಿ, ಕೇಂದ್ರದ ಬಿಜೆಪಿ ಸರಕಾರ ಮತ್ತು ಬಿಹಾರದ ಎನ್‌ಡಿಎ ಸಮ್ಮಿಶ್ರ ಸರಕಾರದ ನಿರ್ಲಕ್ಷ್ಯ ಮಕ್ಕಳ ಸಾಮೂಹಿಕ ಮರಣಕ್ಕೆ ಕಾರಣವಾಗಿದೆ. ಬಿಹಾರ ಸರ್ಕಾರದ ಆರೋಗ್ಯ ಸಚಿವರಿಗೆ ರಾಜ್ಯದ ಮಕ್ಕಳ ಆರೋಗ್ಯಕ್ಕಿಂತಲೂ ಕ್ರಿಕೆಟ್ ತಂಡದ ಸ್ಕೋರ್‌ ಬಗ್ಗೆಯೇ ಹೆಚ್ಚು ಚಿಂತೆ. ಆರೋಗ್ಯ ಸಮಾಲೋಚನಾ ಸಭೆಯಲ್ಲಿಯೂ ಇವರು ಕ್ರಿಕೆಟ್ ಸ್ಕೋರ್‌ ಕೇಳುತ್ತಿದ್ದರು ಎಂಬ ವರದಿ ಇವರ ಬೇಜವಾಬ್ದಾರಿತನಕ್ಕೆ ಸಾಕ್ಷಿ ಎಂದರು.

ಬಿಹಾರ ಮುಖ್ಯಮಂತ್ರಿ ನಿತೀಶಕುಮಾರ್‌ ಕೂಡಾ ಇದರ ಬಗ್ಗೆ ತೀವ್ರ ಗಮನ ಹರಿಸಿ ಕ್ರಮ ಕೈಗೊಳ್ಳುವಲ್ಲಿ ವಿಫಲರಾಗಿದ್ದಾರೆ. ಅಲ್ಲಿನ ಸರಕಾರ ಲಿಚ್ಚಿ ಹಣ್ಣು ತಿಂದಿರುವುದೇ ಮಕ್ಕಳ ಸಾವಿಗೆ ಕಾರಣ ಎಂದು ಸುಳ್ಳು ಹೇಳುವ ಮೂಲಕ ಪ್ರಕರಣದ ದಿಕ್ಕು ತಪ್ಪಿಸುವ ಹುನ್ನಾರ ನಡೆಸಿದೆ. ವಾಸ್ತವದಲ್ಲಿ ಅಲ್ಲಿನ ತಜ್ಞರ ಅಭಿಪ್ರಾಯದ ಪ್ರಕಾರ ಮಕ್ಕಳು ಪೌಷ್ಟಿಕ ಆಹಾರ ಕೊರತೆಯಿಂದ ಮತ್ತು ಆಸ್ಪತ್ರೆಗಳಲ್ಲಿ ಸಕಾಲಿಕ ಉಪಚಾರ ಸಿಗದೆ ಸಾವಿಗೀಡಾಗಿದ್ದಾರೆ ಎಂದು ಎಂದು ಹೇಳುತ್ತಿದ್ದಾರೆ. ಆದರೆ ಕೇಂದ್ರ-ರಾಜ್ಯ ಸರಕಾರಗಳು ಎರಡು ಸೇರಿ ದೇಶದ ಜನಗಳ ಕಣ್ಣಿಗೆ ಮಣ್ಣೆರಚುತ್ತಿವೆ ಎಂದು ಹರಿಹಾಯ್ದರು.

ಬಿಹಾರ ರಾಜ್ಯದಲ್ಲಿ ಭೀಕರ ಬಡತನ ಪರಿಸ್ಥಿತಿ ಇದ್ದು, ಬಡ ಕುಟುಂಬಗಳ ಮಕ್ಕಳು ಹೊಟ್ಟೆ ತುಂಬಾ ಆಹಾರ ಸೇವಿಸಲೂ ಸಾಧ್ಯವಾಗದೇ ಕೇವಲ ಲಿಚ್ಚಿ ಹಣ್ಣು ತಿಂದು ಜೀವಿಸುವಂತ ಸ್ಥಿತಿಗೆ ಬಂದಿದೆ. ಸರಕಾರಕ್ಕೆ ಅಲ್ಲಿನ ಕಡುಬಡವರಿಗೆ ಪೌಷ್ಟಿಕ ಆಹಾರ ಪೂರೈಸಲಾಗುತ್ತಿಲ್ಲ ಎಂಬ ಸಂಗತಿಯೂ ನಾಚಿಕೆಗೇಡು ಸಂಗತಿ. ಸರ್ಕಾರ ಇನ್ನಾದರೂ ಮಕ್ಕಳಿಗೆ ಪೌಷ್ಟಿಕ ಆಹಾರ ಒದಗಿಸುವ ಜೊತೆಗೆ ಮೃತ ಮಕ್ಕಳ ಕುಟುಂಬಗಳಿಗೆ ತಲಾ ಕನಿಷ್ಠ 10 ಲಕ್ಷ ರೂ. ಪರಿಹಾರ ನೀಡಬೇಕು ಎಂದು ಆಗ್ರಹಿಸಿದರು.

ಮಲ್ಲಿಕಾರ್ಜುನ ಮಾತನಾಡಿ, ಪ್ರಧಾನ ಮಂತ್ರಿಗಳು ಹಸಿವು ಮುಕ್ತ ಭಾರತ ಮಾಡುತ್ತೇನೆ ಎಂಬ ಮಾತು ಒಣ ಮಾತಾಗಿದ್ದು ವಾಸ್ತವದಲ್ಲಿ ಇಂದಿಗೂ ಕೂಡಾ ಜನತೆಗೆ ಆರೋಗ್ಯ ಕಲ್ಪಿಸುವಲ್ಲಿ ವಿಫಲರಾಗಿದ್ದಾರೆ. ಇಂತಹ ಸಂದರ್ಭದಲ್ಲಿ ತುರ್ತಾಗಿ ಸಹಾಯ ಹಸ್ತ ಚಾಚುವುದನ್ನು ಬಿಟ್ಟು ಯೋಗ ಮಾಡುವುದರಲ್ಲೇ ಮುಳುಗಿರುವುದು ದುರಂತವೇ ಸರಿ ಎಂದರು. ಇವರ ಆಯುಷ್ಮಾನ್‌ ಭಾರತವೂ ದೇಶದ ಕಡು ಬಡಜನತೆಗೆ ಉಪಯೋಗವಾಗುತ್ತಿಲ್ಲ ಎಂದರು.

ಎಸ್‌ಯುಸಿಐನ ಸಿದ್ದಲಿಂಗ ಬಾಗೇವಾಡಿ ಮಾತನಾಡಿ, ಭಾರತಕ್ಕೆ ಸ್ವಾತಂತ್ರ್ಯ ಬಂದು 70 ವರ್ಷ ಕಳೆದರೂ ದೇಶದ ಜನರು ಇಂದಿಗೂ ಹಸಿವಿನಿಂದ ಸಾಯುತ್ತಿದ್ದಾರೆ ಎಂಬುದು ನೋವಿನ ಸಂಗತಿ. ಮತ್ತೂಂದೆಡೆ ಅಪೌಷ್ಟಿಕತೆಯಿಂದ ಬಳಲುತ್ತಿದ್ದ ಮಕ್ಕಳಿಗೆ ಸೂಕ್ತ ಚಿಕಿತ್ಸೆ ದೊರಕಲಿಲ್ಲ ಎಂಬುದು ಕೂಡ ದೇಶದ ಆರೋಗ್ಯ ಕ್ಷೇತ್ರಕ್ಕೆ ಹಿಡಿದ ಕನ್ನಡಿ. ಆದ್ದರಿಂದ ದೇಶದ ಎಲ್ಲ ಸರಕರಗಳು ಆರೋಗ್ಯ ಕ್ಷೇತ್ರಕ್ಕೆ ಬಜೆಟ್‌ನಲ್ಲಿ ಹೆಚ್ಚು ಅನುದಾನ ಮೀಸಲಿಟ್ಟು ಅನುದಾನ ಬಿಡುಗಡೆಗೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಭರತಕಮಾರ, ಬಾಳು ಜೇವೂರ, ಶಿವಬಾಳಮ್ಮ ಉಪ್ಪಾರ, ಗೀತಾ, ಮುತ್ತುರಾಜ, ರೂಪಾ ಬಿರಾದಾರ, ಸುನಿಲ ಸಿದ್ರಾಮಶೆಟ್ಟಿ, ರಾಹು ಇದ್ದರು.

ಟಾಪ್ ನ್ಯೂಸ್

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Hamsalekha ಸಂಗೀತದಿಂದ ದೂರವಾಗುತ್ತಿರುವುದು ಯಾಕೆ?ಯಾರಿಗೆ ಬರೆಯಲಿ ಸಾಹಿತ್ಯ ಎಂದ ನಾದಬ್ರಹ್ಮ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

Tour: 9 ದಿನ 4,800 ಕಿ.ಮೀ ಪ್ರಯಾಣ-ಅಡ್ವೆಂಚರ್‌ ಬೈಕ್‌ನಲ್ಲಿ 64ರ ಹಿರಿಯರ ಸಾಹಸ ಯಾನ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

Lok Sabha Election: ‘ಬಿವೈಆರ್‌ಗೆ 3 ಲಕ್ಷ ಮತ ಅಂತರದ ಗೆಲುವು ಖಚಿತ’

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

ಹಣ ಪಡೆದು ವರ್ಗಾವಣೆಯಾದ ಪೊಲೀಸರಿಂದ ಕಾನೂನು ವ್ಯವಸ್ಥೆ ನಿರೀಕ್ಷೆ ಸಾಧ್ಯವೇ?: ಜೋಶಿ ಪ್ರಶ್ನೆ

11-

Kushtagi: ನಿರೀಕ್ಷಿತ ಫಲಿತಾಂಶ ಬಾರದ ಹಿನ್ನೆಲೆ ಮನನೊಂದು ವಿದ್ಯಾರ್ಥಿನಿ ಆತ್ಮಹತ್ಯೆ  

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Sagara: ರಾತ್ರೋ ರಾತ್ರಿ ಅತಿಕ್ರಮ ಮನೆ ನಿರ್ಮಾಣ… ತಹಶೀಲ್ದಾರ್‌ರಿಂದ ಪರಿಶೀಲನೆ

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

Nagaland Poll: ಬೇಡಿಕೆ ಈಡೇರಿಸಿ- ಆರು ಜಿಲ್ಲೆಗಳಲ್ಲಿ ಒಂದೇ ಒಂದು ಮತದಾನ ನಡೆದಿಲ್ಲ!

17-uv-fusion

Holi: ಹೋಳಿ ಹುಣ್ಣಿಮೆ ಹಿನ್ನೆಲೆ

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

Manipura: ಮತಗಟ್ಟೆ ಮೇಲೆ ಗುಂಡಿನ ದಾಳಿ… ದಿಕ್ಕಾ ಪಾಲಾಗಿ ಓಡಿದ ಮತದಾರರು

16-fusion

UV Fusion: ಎಳೆಯರಿಗೂ ಒಂದಿಷ್ಟು ಸಮಯ ಮೀಸಲಿಡೋಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.