ಪರೀಕ್ಷಾ ಫಲಿತಾಂಶ ಸುಧಾರಣೆಯಾಗಲಿ

ಮಕ್ಕಳನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಿ •ಪರಿಣಾಮಕಾರಿ ಬೋಧನೆಗೆ ಜಿಲ್ಲಾಧಿಕಾರಿ ಸಲಹೆ

Team Udayavani, Jun 19, 2019, 10:38 AM IST

19-June-6

ವಿಜಯಪುರ: ನಗರದ ಸಿಕ್ಯಾಬ್‌ ಪಪೂ ಮಹಿಳಾ ಮಹಾವಿದ್ಯಾಲಯದಲ್ಲಿ ಉಪನ್ಯಾಸಕರಿಗೆ ಹಮ್ಮಿಕೊಂಡಿದ್ದ ಕಾರ್ಯಾಗಾರವನ್ನು ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ ಉದ್ಘಾಟಿಸಿದರು

ವಿಜಯಪುರ: ಮಕ್ಕಳ ಭವಿಷ್ಯ ರೂಪಿಸುವಂತಹ ಗುರುತರ ಹೊಣೆಗಾರಿಕೆ ಹೊಂದಿರುವ ಉಪನ್ಯಾಸಕರು ತಮ್ಮ ವೃತ್ತಿಯನ್ನು ಪ್ರೀತಿಸುವ ಜೊತೆಗೆ ವಿದ್ಯಾರ್ಥಿಗಳನ್ನು ವಿಶ್ವಾಸಕ್ಕೆ ತೆಗೆದುಕೊಂಡಲ್ಲಿ ಸೂಕ್ತ ಫಲಿತಾಂಶ ತರಲು ಸಾಧ್ಯವಿದೆ ಎಂದು ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ ಹೇಳಿದರು.

ದ್ವಿತೀಯ ಪಿಯು ಪರೀಕ್ಷೆ ಫಲಿತಾಂಶ ವಿಶ್ಲೇಷಣೆ ಹಾಗೂ ಫಲಿತಾಂಶ ಸುಧಾರಣೆಗಾಗಿ 2019-20ನೇ ಸಾಲಿನ ಕ್ರಿಯಾಯೋಜನೆ ಸಿದ್ಧತೆ ಮತ್ತು ಅನುಷ್ಠಾನ ಕುರಿತಂತೆ ಉಪನ್ಯಾಸಕರಿಗೆ ನಗರದ ಸಿಕ್ಯಾಬ್‌ ಪಪೂ ಮಹಿಳಾ ಮಹಾವಿದ್ಯಾಲಯದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.

ಉಪನ್ಯಾಸಕರು ತಮ್ಮ ವೃತ್ತಿಯನ್ನು ಅತ್ಯಂತ ಶ್ರದ್ಧೆಯಿಂದ ನಿರ್ವಹಿಸಬೇಕು. ಅದರಂತೆ ತಮ್ಮ ಮಕ್ಕಳ ರೀತಿಯಲ್ಲಿ ಇತರೆ ಮಕ್ಕಳನ್ನು ಸಹ ಪ್ರೀತಿಯಿಂದ ವಿಶ್ವಾಸಕ್ಕೆ ತೆಗೆದುಕೊಂಡು ಸೂಕ್ತ ಮಾರ್ಗದರ್ಶನ ನೀಡಿದಲ್ಲಿ ವಿದ್ಯಾರ್ಥಿಗಳಲ್ಲಿ ಆತ್ಮವಿಶ್ವಾಸ ಮೂಡಿ ಸೂಕ್ತ ಫಲಿತಾಂಶ ಪಡೆಯಲು ಸಾಧ್ಯ. ತಮ್ಮ ಬೋಧನಾ ಕೌಶಲ್ಯಗಳ ಮೂಲಕ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಮೂಲಕ ಅವರ ಭವಿಷ್ಯಕ್ಕೆ ನೆರವಾಗುವಂತೆ ಸಲಹೆ ನೀಡಿದರು.

ಗುಣಮಟ್ಟದ ಶಿಕ್ಷಣವನ್ನು ಮಕ್ಕಳಿಗೆ ನೀಡುವುದರಿಂದ ತಾಂತ್ರಿಕವಾಗಿ ಫಲಿತಾಂಶವನ್ನು ಸಹ ಗುರಿಗೆ ತಕ್ಕಂತೆ ಪಡೆಯಬಹುದಾಗಿದೆ. ವಿಷಯವಾರು ನುರಿತ ಶಿಕ್ಷಕರೆಲ್ಲರೂ ತಮ್ಮ ನೈಪುಣ್ಯತೆಗೆ ಅನುಗುಣವಾಗಿ ವಿದ್ಯಾರ್ಥಿಗಳಿಗೆ ಬೋಧಿಸುವ ಮೂಲಕ ಭವಿಷ್ಯದಲ್ಲಿ ಅವರು ಸಜ್ಜುಗೊಳ್ಳುವಂತೆ ರೂಪಿಸಬೇಕು. ಅವರ ಸ್ವಾಭಿಮಾನಕ್ಕೆ ಧಕ್ಕೆ ತರುವಂತಹ ಅಥವಾ ವೈರತ್ವ ಮನೋಭಾವ ತೊರೆದು ಪ್ರೀತಿ ವಿಶ್ವಾಸದಿಂದ ಬೋಧಿಸುವ ಮೂಲಕ ಅವರ ಭವಿಷ್ಯಕ್ಕೆ ನೆರವಾಗುವಂತೆ ಕರೆ ನೀಡಿದರು.

ಉಪನ್ಯಾಸಕ ವೃತ್ತಿಯೂ ಅತ್ಯಂತ ಜವಾಬ್ದಾರಿಯುತ ವೃತ್ತಿ. ವಿವಿಧ ಕಾರ್ಯಾಗಾರಗಳು ಹಾಗೂ ತರಬೇತಿಗಳನ್ನು ಆಯೋಜಿಸಿದ ಸಂದರ್ಭದಲ್ಲಿ ಹಗುರವಾಗಿ ಪರಿಗಣಿಸದೇ ಗಂಭೀರವಾಗಿ ಇಂತಹ ಕಾರ್ಯಾಗಾರ ಸದುಪಯೋಗ ಮಾಡಿಕೊಳ್ಳುವ ಮೂಲಕ ವೃತ್ತಿ ಕೌಶಲ್ಯತೆ ಹೆಚ್ಚಿಸಿಕೊಳ್ಳಬೇಕು. ಮಕ್ಕಳಿಗೆ ಪ್ರೋತ್ಸಾಹಿಸಬೇಕೆಂದ ಅವರು, ಇದರಿಂದ ವಿದ್ಯಾರ್ಥಿಗಳು ಹಾಗೂ ಉಪನ್ಯಾಸ ವರ್ಗದ ಮಧ್ಯೆ ಪ್ರೀತಿ ವಿಶ್ವಾಸ ವೃದ್ಧಿಗೊಳ್ಳುವ ಜೊತೆಗೆ ಫಲಿತಾಂಶಕ್ಕೂ ನೆರವಾಗಲಿದೆ ಎಂದು ಹೇಳಿದರು.

ಉಪನ್ಯಾಸಕರು ತಾವು ಬೋಧಿಸುವ ಶಿಕ್ಷಣವನ್ನು ವಿದ್ಯಾರ್ಥಿಗಳು ಸಂತಸದಿಂದ ಆಲಿಸಿದ್ದಲ್ಲಿ ಉಪನ್ಯಾಸಕರ ಬೋಧನಾ ಕಾರ್ಯ ಸಾರ್ಥಕತೆ ಪಡೆಯಲಿದೆ. ಈ ಹಿನ್ನೆಲೆಯಲ್ಲಿ ಆಡಳಿತಾತ್ಮಕ ಯಾವುದೇ ರೀತಿಯ ಸಮಸ್ಯೆ ಇಲ್ಲದಿದ್ದರೂ ಮಕ್ಕಳ ಭವಿಷ್ಯ ರೂಪಿಸುವ ಮತ್ತು ಮಕ್ಕಳನ್ನು ಸಾಧನೆ ಮಾಡುವಂತಹ ಪ್ರೇರಣಾ ಬೋಧನೆಗಳು ಅತ್ಯಂತ ಪರಿಣಾಮಕಾರಿಯಾಗಲಿವೆ. ಉಪನ್ಯಾಸಕರೆಲ್ಲರೂ ಈ ದಿಸೆಯಲ್ಲಿ ಕಾರ್ಯಪ್ರವೃತ್ತರಾಗುವಂತೆ ತಮ್ಮ ಉಪನ್ಯಾಸ ಅವಧಿಯಲ್ಲಿ ಅನುಭವದ ಉದಾಹರಣೆಗಳನ್ನು ಹಂಚಿಕೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಕಿವಿಮಾತು ಹೇಳಿದರು.

ಕಾರ್ಯಾಗಾರದಲ್ಲಿ ಸಿಕ್ಯಾಬ್‌ ಸಂಸ್ಥೆ ನಿರ್ದೇಶಕ ಸಲಾವುದ್ದೀನ್‌ ಪುಣೇಕರ ಮಾತನಾಡಿದರು. ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಜೆ.ಎಸ್‌.ಪೂಜೇರಿ ಕಾರ್ಯಾಗಾರದ ಮಹತ್ವದ ಬಗ್ಗೆ ಮಾಹಿತಿ ನೀಡಿದರು. ಅಪರ್‌ ಜಿಲ್ಲಾಧಿಕಾರಿ ಎಚ್.ಪ್ರಸನ್ನ, ಸಿಕ್ಯಾಬ್‌ ಸಂಸ್ಥೆ ಪ್ರಧಾನ ಕಾರ್ಯದರ್ಶಿ ಜೆ.ಎಸ್‌. ಪಾಟೀಲ, ಕಗ್ಗೋಡ ಸರ್ಕಾರಿ ಕಾಲೇಜ್‌ ಪ್ರಾಚಾರ್ಯ ಎಸ್‌.ವೈ. ಅಮಾತೆ, ಸಿಕ್ಯಾಬ್‌ ಮಹಿಳಾ ಪಪೂ ಕಾಲೇಜ್‌ ಪ್ರಾಂಶುಪಾಲ ಎಸ್‌.ಎನ್‌. ಶೇಖ್‌, ಮುಳವಾಡ ಸರ್ಕಾರಿ ಪಪೂ ಕಾಲೇಜ್‌ ಪ್ರಾಂಶುಪಾಲ ಆರ್‌.ಎ. ಜಹಾಗೀರದಾರ, ಸಿಕ್ಯಾಬ್‌ ಗಂಡು ಮಕ್ಕಳ ಕಾಲೇಜ್‌ ಪ್ರಾಂಶುಪಾಲ ಎನ್‌.ಎಸ್‌. ಭೂಸನೂರ, ದರಬಾರ್‌ ಕಾಲೇಜ್‌ ಉಪನ್ಯಾಸಕಿ ಗೌರಿ ಸೇರಿದಂತೆ ಇತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.