ಕುರಿಗಳ್ಳರ ಹಾವಳಿಯಿಂದ ಕಂಗಾಲು

ಬೈಕ್‌-ಆಟೋಗಳಲ್ಲಿ ಬಂದು ಕುರಿಗಳ್ಳತನ ಪ್ರತಿಭಟಿಸಿದರೆ ಮಾರಕಾಸ್ತ್ರ ತೋರಿಸಿ ಬೆದರಿಕೆ

Team Udayavani, Jul 22, 2019, 3:42 PM IST

Udayavani Kannada Newspaper

„ಜಿ.ಎಸ್‌. ಕಮತರ
ವಿಜಯಪುರ:
ಜಿಲ್ಲೆಯಲ್ಲಿ ಕುರಿಗಾರರು ಹಲವು ಸಮಸ್ಯೆಗಳಿಂದ ಬಳಲುತ್ತಿದ್ದಾರೆ. ಈ ಸಮಸ್ಯೆಗಳ ಮಧ್ಯೆ ಜಿಲ್ಲೆಯಲ್ಲಿ ಕಳ್ಳರ ಹಾವಳಿಯಿಂದ ಕುರಿಗಾರತರು ಕಂಗೆಟ್ಟಿದ್ದು, ಸರ್ಕಾರ ಅಥವಾ ಅಧಿಕಾರಿಗಳು ಕುರಿಗಾರರ ನೆರವಿಗೆ ಬರುತ್ತಿಲ್ಲ. ಹೀಗಾಗಿ ಕುರಿಗಳ್ಳರ ಕುರಿತು ನಿಖರ ಮಾಹಿತಿ ನೀಡಿದವರಿಗೆ ಬಹುಮಾನ ನೀಡುವ ಕಾರ್ಯಕ್ರಮದ ಮೂಲಕ ಕುರಿಗಾರರ ನೆರವಿಗೆ ಧಾವಿಸಲು ಸಂಘಟನೆಯೊಂದು ಮುಂದೆ ಬಂದಿದೆ.

ಜಿಲ್ಲೆಯ ಸುತ್ತಲೂ ಕುರಿ-ಮೇಕೆ ಕಳ್ಳರ ಹಾವಳಿ ಮಿತಿ ಮೀರಿದೆ. ಜಿಲ್ಲೆಯಲ್ಲಿ ಕುರಿಗಳ್ಳತನ ವ್ಯವಸ್ಥಿತ ದೊಡ್ಡ ಜಾಲ ರೂಪಿಸಿದ್ದು, ಕುರಿ-ಮೇಕೆ ಸಾಕಾಣಿಕೆದಾರರು ಕಂಗಾಲಾಗಿದ್ದಾರೆ. ಮುಂಗಾರು ಮಳೆ ಆರಂಭಗೊಂಡಿದ್ದು, ಜಮೀನುಗಳಲ್ಲಿ ಬಿತ್ತನೆ ನಡೆದಿದೆ. ಪರಿಣಾಮ ಕುರಿಗಾರರು ತಮ್ಮ ಕುರಿಗಳನ್ನು ಮೇಯಿಸಲು ಪರದಾಡುತ್ತಿದ್ದಾರೆ. ಕುರಿ ಗಳನ್ನು ಮೇಯಿಸಲು ಸೂಕ್ತ ವ್ಯವಸ್ಥೆ ಇಲ್ಲದ ಕಾರಣ ನಗರ- ಪಟ್ಟಣಗಳು, ಜನವಸತಿ ಪ್ರದೇಶಗಳ ಸುತ್ತ ಮುತ್ತಲಿನ ರಸ್ತೆ-ಹೆದ್ದಾರಿಗಳು, ಪಾಳು ಬಿದ್ದ ಜಮೀನುಗಳಲ್ಲಿ ಕುರಿ ಮೇಯಿಸುವುದು
ಅನಿವಾರ್ಯವಾಗಿದೆ. ಅದರೆ ಹೆದ್ದಾರಿಗಳಲ್ಲಿ ಕುರಿ ಮೇಯಿಸುವ ಕುರಿಗಾರರಿಗೆ ಇದೀಗ ಕುರಿಗಳ್ಳರ ಹಾವಳಿ ಹೈರಾಣಾಗಿಸಿದೆ. ಹೆದ್ದಾರಿಗಳ ಮೇಲೆ ಬೈಕ್‌-ಆಟೋಗಳಲ್ಲಿ ಬರುವ ಕೆಲವು ಪುಂಡರು ಅಮಾಯಕರಂತೆ ನಿಂತು ಮಾತನಾಡಿಸುವ ನೆಪದಲ್ಲಿ ಕುರಿಗಳನ್ನು ಕಳ್ಳತನ ಮಾಡಿಕೊಂಡು ನೋಡ ನೋಡುತ್ತಲೇ ಪರಾರಿಯಾಗುತ್ತಿದ್ದಾರೆ.

ಕುರಿಗಾರರು ಇಬ್ಬರು-ಮೂವರು ಮಾತ್ರ ಇರುತ್ತಿದ್ದು, ಮಾರಕಾಸ್ತ್ರಗಳನ್ನು ತೋರಿಸಿ ಬೆದರಿಸುತ್ತಾರೆ. ಪ್ರತಿಭಟಿಸುವ ಕುರಿಗಾರರಿಗೆ ಕುರಿಗಳ್ಳರು ಜೀವ ಭಯು ಹಾಕುತ್ತಾರೆ. ರಾತ್ರಿ ವೇಳೆ ರಸ್ತೆಗಳ ಪಕ್ಕದಲ್ಲೇ ಕತ್ತಲಲ್ಲಿ ಮಲಗುವ ಕುರಿಗಾರರು ಇದರಿಂದ ಭಯಗೊಂಡು ಯಾರಿಗೂ ದೂರು ನೀಡದೇ ಅಸಹಾಯಕ ಸ್ಥಿತಿಯಲ್ಲಿದ್ದಾರೆ. ಕಳೆದ ಒಂದು ವರ್ಷದಿಂದ
ನಡೆಯುತ್ತಿರುವ ಈ ಕುರಿಗಳ್ಳತನದ ಕುರಿತು ಅವ್ಯಕ್ತ ಭಯದಲ್ಲಿ ಬನದುಕುತ್ತಿರುವ ಕುರಿಗಾರರು ತಮ್ಮ ನೆರವಿಗೆ ಬರುವಂತೆ ಮನವಿ ಮಾಡಿಕೊಳ್ಳುತ್ತಿದ್ದಾರೆ. ಅಸಂಘಟಿತ ವ್ಯವಸ್ಥೆಯಲ್ಲಿ ಜೀವಿಸುವ ಕುರಿಗಾರರು ನಿತ್ಯವೂ ಅನುಭವಿಸುತ್ತಿರುವ ಈ ಸಂಕಷ್ಟದ ಕುರಿತು ಯಾರಿಗೂ ಹೇಳಿಕೊಳ್ಳಲಾಗದ ಕಾರಣ ಸರ್ಕಾರ ಕೂಡ ಇವರ ನೆರವಿಗೆ ಬರುತ್ತಿಲ್ಲ. ಹೊಲಗಳಲ್ಲೇ ಜೀವನ ಸಾಗಿಸುವ ಕುರಿಗಾರರಿಗೆ ಸರ್ಕಾರಗಳು ಕುರಿಗಾರರಿಗೆ ರೂಪಿಸುವ ಯಾವ ಯೋಜನೆಗಳೂ ತಲುಪುತ್ತಿಲ್ಲ. ವಿಮೆ ಸೇರಿದಂತೆ ಕುರಿಗಾರರಿಗೆ ಸರ್ಕಾರ ಕನಿಷ್ಠ ಸೌಲಭ್ಯಗಳು ದೊರೆಯುತ್ತಿಲ್ಲ ಎಂದು ಕುರಿಗಾರರು ದೂರುತ್ತಾರೆ.

ಅನಕ್ಷರಸ್ತರು ಹಾಗೂ ಸಂಕಷ್ಟ ಸಂದರ್ಭದಲ್ಲಿ ಯಾರಿಗೆ ದೂರು ನೀಡಬೇಕು ಎಂದು ಅಸಂಘಟಿತ ಕುರಿಗಾರರಿಗೆ ತಿಳಿದಿಲ್ಲ. ಪರಿಣಾಮ ತಾವು ಅನುಭವಿಸುತ್ತಿರುವ ಕುರಿಗಳ್ಳತನದ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಪರದಾಡುತ್ತಿದ್ದಾರೆ. ಇದನ್ನು ಮನಗಂಡಿರುವ ತೊರವಿ ಬೀರಲಿಂಗೆಶ್ವರ ಕುರಿ ಸಾಕಾಣಿಕೆ ಹಾಗೂ ಉಣ್ಣೆ ಉತ್ಪಾದಕರ ಸಹಕಾರ ಸಂಘ ಅಸಂಘಟಿತ ಕುರಿಗಾರರು ಕುರಿ ಕಳ್ಳತವಾದ ತಕ್ಷಣ ತಮ್ಮ ಗಮನಕ್ಕೆ ತರುವಂತೆ ಸಲಹೆ ನೀಡಿದ್ದಾರೆ. ಜಿಲ್ಲೆಯ ಎಲ್ಲ ಕುರಿಗಾರರು ತಮ್ಮ ಹೆಸರು, ಮೊಬೈಲ್‌ ನಂಬರ್‌ಗಳನ್ನು 9972160258 ವಾಟ್ಸ್ ಆ್ಯಪ್‌ ಮೂಲಕ ಮಾಹಿತಿ ನೀಡಬೇಕು. ಸಂಕಷ್ಟದ ಸಂದರ್ಭದಲ್ಲಿ ಕರೆ ಮಾಡಿಯೂ ಮಾಹಿತಿ ನೀಡಿದರೆ ಸಾಕು. ಇಲ್ಲವೇ ವಿಜಯಪುರ ನಗರ ಇಂಡಿ ರಸ್ತೆಯಲ್ಲಿರುವ ತೇಲಿ ಕಾಂಪ್ಲೆಕ್ಸ್‌ನಲ್ಲಿರುವ ತಮ್ಮ ಸಂಪರ್ಕ ಕಚೇರಿಗೆ ಬಂದು ಮಾಹಿತಿ ನೀಡಬೇಕು ಎಂದು ಮನವಿ ಮಾಡಿದ್ದಾರೆ.

ಅಸಂಘಟಿತ ಕುರಿತಗಾರರಿಗೆ ಸರ್ಕಾರದ ಯೋಜನೆಗಳ ತಲುಪುವ ಮಾತಿರಲಿ, ಕನಿಷ್ಠ
ರಕ್ಷಣೆಯೂ ಇಲ್ಲವಾಗಿದೆ. ರಸ್ತೆ ಬದಿಯಲ್ಲಿ ಕುರಿ ಮೇಯಿಸುವ ಕುರಿಗಾರರ ಕುರಿಗಳನ್ನು ನಿರ್ಭಯದಿಂದ ಕುರಿಗಳ್ಳರು ಕಳ್ಳತನ ಮಾಡುತ್ತಿದ್ದು, ಯಾರಿಗೆ ಹೇಗೆ ದೂರು ನೀಡಬೇಕು ಎಂದು ತಿಳಿಯದ ಮುಗ್ಧತೆ ಹೊಂದಿದ್ದಾರೆ. ಹೀಗಾಗಿ ಕುರಿಗಾರರು ಸಂಘಟಿತರಾಗಬೇಕಿದೆ. ಕುರಿಗಳ್ಳರ ಕುರಿತು ನಿಖರ ಮಾಹಿತಿ ನೀಡಿದವರಿಗೆ ನಮ್ಮ ಸಂಘದಿಂದ ಯೋಗ್ಯ ಬಹುಮಾನ ನೀಡಲು ಮುಂದಾಗಿದ್ದೇವೆ.
ಬೀರಪ್ಪ ಜುಮನಾಳ
ಅಧ್ಯಕ್ಷರು ಬೀರಲಿಂಗೆಶ್ವರ ಕುರಿ ಸಾಕಾಣಿಕೆ ಹಾಗೂ ಉಣ್ಣೆ ಉತ್ಪಾದಕರ ಸಹಕಾರ ಸಂಘ, ತೊರವಿ

 

ಟಾಪ್ ನ್ಯೂಸ್

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

Exam; ದ್ವಿತೀಯ ಪಿಯು ವಾರ್ಷಿಕ ಪರೀಕ್ಷೆ-2ಕ್ಕೆ 1.49 ಲಕ್ಷ ವಿದ್ಯಾರ್ಥಿಗಳ ನೋಂದಣಿ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.