2.55 ಲಕ್ಷ ಮಕ್ಕಳಿಗೆ ಸದ್ಯ ಹಳೆ ಬಟ್ಟೆ ಗತಿ


Team Udayavani, May 31, 2019, 10:40 AM IST

1-June-4

ವಿಜಯಪುರ: ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕರ ಕಚೇರಿ.

ಜಿ.ಎಸ್‌.ಕಮತರ
ವಿಜಯಪುರ:
ಪ್ರಸಕ್ತ ಶೈಕ್ಷಣಿಕ ವರ್ಷ ಆರಂಭವಾಗಿದೆ. ಇದರ ಜತೆಗೆ ಮಕ್ಕಳ ದಾಖಲಾತಿಯೂ ನಡೆಯುತ್ತಿದೆ. ಜಿಲ್ಲೆಯಲ್ಲಿ ಪ್ರಸಕ್ತ ವರ್ಷ 1ರಿಂದ 10ನೇ ತರಗತಿ ಮಕ್ಕಳಿಗೆ 33 ಲಕ್ಷ ಪಠ್ಯ ಪುಸ್ತಕದ ಅಗತ್ಯವಿದ್ದರೆ, ಶೇ. 90ರಷ್ಟು ಪೂರೈಕೆ ಆಗಿದೆ. ಆದರೆ 2.55 ಮಕ್ಕಳಿಗೆ ಸಮವಸ್ತ್ರ ಹಾಗೂ ಶೂ-ಸಾಕ್ಸ್‌ ಬೇಡಿಕೆ ಇದ್ದರೂ ಯಾವ ಮಕ್ಕಳಿಗೂ ಈ ಭಾಗ್ಯ ದಕ್ಕಿಲ್ಲ.

ಶಿಕ್ಷಣ ಹಕ್ಕು ಕಾಯ್ದೆಯಲ್ಲಿ ಜಿಲ್ಲೆಯಲ್ಲಿ ಸರ್ಕಾರಿ ಹಾಗೂ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳಲ್ಲಿ ದಾಖಲಾಗಿರುವ ಮಕ್ಕಳು ಸೇರಿದಂತೆ ಉಚಿತವಾಗಿ ಸರ್ಕಾರ 25,34,517 ಪಠ್ಯ ಪುಸ್ತಕ ವಿತರಿಸಬೇಕಿದೆ. ಇದರಲ್ಲಿ ಈ ವರೆಗೆ 24,40,230 ಪಠ್ಯ ಮಾತ್ರ ಪೂರೈಕೆಯಾಗಿದ್ದು, 9,69,300 ಪಠ್ಯ ಪುಸ್ತಕ ಮಾತ್ರ ಈ ವರೆಗೆ ವಿತರಣೆ ಆಗಿದೆ.

ಇನ್ನು ಅನುದಾನ ರಹಿತ ಖಾಸಗಿ ಶಾಲೆಗಳು 8,06,575 ಪಠ್ಯ ಪುಸ್ತಕಕ್ಕೆ ಬೇಡಿಕೆ ಸಲ್ಲಿಸಿವೆ. ಆದರೆ ಈ ವರೆಗೆ 7,52,440 ಪಠ್ಯ ಪುಸ್ತಕ ಮಾತ್ರ ಪೂರ್ಯೆಕೆಯಾಗಿದೆ. ಈ ವರೆಗೆ 1200 ಪಠ್ಯ ಮಾತ್ರ ವಿತರಣೆ ಆಗಿದೆ. ಖಾಸಗಿ ಶಾಲೆಗಳ ಆಡಳಿತ ಮಂಡಳಿ ಪಠ್ಯ ಪುಸ್ತಕಕೊಳ್ಳಲು ಅಗತ್ಯ ಪ್ರಮಾಣದ ಶುಲ್ಕ ಭರಿಸಬೇಕಿದ್ದು, ಜೂ. 1ರ ನಂತರ ಈ ಪಠ್ಯ ವಿತರಣೆ ಆಗುವ ನಿರೀಕ್ಷೆ ಇದೆ. ಸರ್ಕಾರಿ ಶಾಲೆಗಳ ಮಕ್ಕಳಿಗೆ ಸರ್ಕಾರ ಪೂರೈಸುವ ಸಮವಸ್ತ್ರ ಈ ವರೆಗೂ ಬಂದಿಲ್ಲ. ಜಿಲ್ಲೆಯಲ್ಲಿ 2,55,631 ಮಕ್ಕಳಿಗೆ ಸಮವಸ್ತ್ರದ ಬೇಡಿಕೆ ಇದ್ದು, ಸರ್ಕಾರ ಪೂರೈಕೆ ಮಾಡಿಲ್ಲ. ಇಷ್ಟೇ ಸಂಖ್ಯೆ ಮಕ್ಕಳಿಗೆ ಸರ್ಕಾರ ಶೂ ಹಾಗೂ ಸಾಕ್ಸ್‌ ಪೂರೈಕೆ ಮಾಡಬೇಕಿದ್ದು, ಇದಕ್ಕೆ ಬೇಕಾದ ಅನುದಾನವನ್ನು ಅಯಾ ಶಾಲಾ ಮುಖ್ಯೋಪಾಧ್ಯಾಯರು ಹಾಗೂ ಎಸ್‌ಡಿಎಂಸಿ ಅಧ್ಯಕ್ಷರ ಹೆಸರಿನಲ್ಲಿರುವ ಬ್ಯಾಂಕ್‌ ಜಂಟಿ ಖಾತೆಗೆ ಜಮೆ ಮಾಡುತ್ತದೆ. ಈ ಅನುದಾನವನ್ನು ಸರ್ಕಾರ ಈ ವರೆಗೆ ಬಿಡುಗಡೆ ಮಾಡದ ಕಾರಣ ಈ ವರ್ಷ ಶಾಲೆಗೆ ತೆರಳುವ ಮಕ್ಕಳಿಗೆ ಶೂ-ಸಾಕ್ಸ್‌ ಹಾಕಿಕೊಳ್ಳಲು ಹಲವು ತಿಂಗಳು ಕಾಯಲೇಬೇಕು. ಸಮವಸ್ತ್ರ, ಶೂ-ಸಾಕ್ಸ್‌ ಮಾತ್ರವಲ್ಲ ಪ್ರಸಕ್ತ ಸಾಲಿನ ಸರ್ಕಾರಿ ಶಾಲೆ 28,741 ಮಕ್ಕಳಿಗೆ ಸರ್ಕಾರ ಉಚಿತವಾಗಿ ನೀಡಬೇಕಿರುವ ಸೈಕಲ್ ಕೂಡ ಬರಬೇಕಿದೆ. ಬಟ್ಟೆ, ಬೂಟುಗಳನ್ನೇ ಶೈಕ್ಷಣಿಕ ವರ್ಷದ ಆರಂಭದ ಹಂತದಲ್ಲಿ ಪೂರೈಕೆ ಮಾಡಲಾಗದ ಸಕಾರರ್ಕ್ಕೆ ಸೈಕಲ್ ಕೊಡಲು ಸಾಧ್ಯವೆ ಎಂಬ ಪ್ರಶ್ನೆ ಮಕ್ಕಳು ಹಾಗೂ ಪಾಲಕರನ್ನು ಕಾಡುತ್ತಿದೆ.

ಶಾಲೆಗಳು ಈಗಷ್ಟೇ ಆರಂಭವಾಗಿವೆ. ಪಠ್ಯ ಪುಸ್ತಕ ವಿತರಣೆ ನಡೆದಿದೆ. ಇದಲ್ಲದೇ ಸರ್ಕಾರ ನೀಡುವ ಎಲ್ಲ ಸೌಲಭ್ಯಗಳನ್ನೂ ಮಕ್ಕಳಿಗೆ ಕಲ್ಪಿಸಿಕೊಡಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುತ್ತದೆ. ಸಮವಸ್ತ್ರ ಹಾಗೂ ಶೂ-ಸಾಕ್ಸ್‌ ಸೇರಿದಂತೆ ಎಲ್ಲ ಸೌಲಭ್ಯಗಳನ್ನು ತ್ವರಿತವಾಗಿ ಪೂರೈಸಲಾಗುತ್ತದೆ.
ಪ್ರಸನ್ನಕುಮಾರ ಡಿಡಿಪಿಐ,
ವಿಜಯಪುರ

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.