ಕಲಾವಿದನಿಗೆ ಸಂವೇದನೆ ಅಗತ್ಯ


Team Udayavani, Oct 13, 2019, 6:09 PM IST

13-October-24

ವಿಜಯಪುರ: ಕಲಾವಿದರು ರೂಪಿಸುವ ಕಲಾಕೃತಿಗಳು ಅದ್ಬುತ್‌ ಸಂದೇಶ ಸಾರುವ ಮಹತ್ವದ ಸಾಧನಗಳು. ಹೀಗಾಗಿ ಕಲಾವಿದ ತನ್ನ ಮೇಲಿರುವ ಹೊಣೆಯನ್ನು ಅತ್ಯಂತ ಜವಾಬ್ದಾರಿಯುತವಾಗಿ ನಿರ್ವಹಿಸಿ ತನ್ನ ಕಲಾಕೃತಿಗಳ ಮೂಲಕ ಸಮಾಜಕ್ಕೆ ಉತ್ತಮ ಸಂದೇಶ ಸಾರುವ ಕೆಲಸ ಮಾಡಬೇಕು ಎಂದು ಖ್ಯಾತ ಚಿತ್ರಕಲಾವಿದ ಪೊನ್ನಪ್ಪ ಕಡೇಮನಿ ಹೇಳಿದರು.

ವಿಜಯಪುರದ ಆರ್ಟ್‌ ಗ್ಯಾಲರಿಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವರ್ಣ ಮಹಲ ಕಲಾ ಸಂಸ್ಥೆಯ ಸಹಯೋಗದಲ್ಲಿ ನಡೆದ ರಾಜ್ಯಮಟ್ಟದ ಚಿತ್ರಕಲಾ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಕಲಾವಿದರಿಗೆ ಸಾಮಾಜಿಕ ಪರಿಕಲ್ಪನೆಯ ಸೂಕ್ಷ್ಮಸಂವೇದನೆಗಳಿರಬೇಕು ಎಂದು ಸಲಹೆ ನೀಡಿದರು.

ಅಧ್ಯಕ್ಷತೆ ವಹಿಸಿದ್ದ ಲಲಿತ ಕಲಾ ವಿಶ್ವವಿದ್ಯಾಲಯದ ನಿಕಟಪೂರ್ವ ವಿಶೇಷಾಧಿ ಕಾರಿ ಡಾ| ಎಸ್‌.ಸಿ. ಪಾಟೀಲ ಮಾತನಾಡಿ, ಚಿತ್ರಕಲಾವಿದ ಉತ್ತಮವಾಗಿ ಚಿತ್ರ ರಚಿಸುವುದರ ಜೊತೆಗೆ ಉತ್ತಮವಾಗಿ ಬರೆಯುವ, ಭಾಷಣ ಮಾಡುವ ಕಲೆಯನ್ನು ಸಹ ಕರಗತ ಮಾಡಿಕೊಂಡರೆ ಅತ್ಯುತ್ತಮ ಕಲಾವಿದನಾಗಿ ರೂಪುಗೊಳ್ಳಬಹುದು. ಚಿತ್ರಕಲಾವಿದ ಉತ್ತಮ ಭಾಷಣ ಕಲೆ, ಸಂವಹನ ಕಲೆ ಹಾಗೂ ಬರೆಯುವ ಕೌಶಲವನ್ನು ರೂಢಿಸಿಕೊಳ್ಳುವುದು ಉತ್ತಮ ಎಂದರು.

ಒಬ್ಬ ಕಲಾವಿದನ ಚಿತ್ರ ಅನೇಕ ಸಂದೇಶಗಳನ್ನು ಅಭಿವ್ಯಕ್ತಗೊಳಿಸಿರುತ್ತದೆ. ತಮ್ಮ ಕಲಾಕೃತಿಯಲ್ಲಿ ಅಡಕವಾಗಿರುವ ಮನೋಜ್ಞವಾದ ವಿಚಾರ ಹಾಗೂ ಸಂದೇಶವನ್ನು ಕಲಾವಿದನೇ ಪ್ರಸ್ತುತ ಪಡಿಸಬೇಕು. ಆಗ ಕಲಾಕೃತಿಯಲ್ಲಿನ ನೈಜ ಸಂದೇಶ ಜನರಿಗೆ ತಿಳಿಯುತ್ತದೆ. ಈ ಹಿನ್ನೆಲೆಯಲ್ಲಿ ಕಲಾವಿದರು ಈ ಎಲ್ಲ ಕೌಶಲಗಳನ್ನು ಬೆಳೆಸಿಕೊಳ್ಳುವತ್ತ ವಿಶೇಷ ಆಸಕ್ತಿ ವಹಿಸಬೇಕು ಎಂದು ಕರೆ ನೀಡಿದರು.

ಕಲಾವಿದರಲ್ಲಿ ಅಪಾರವಾದ ಪ್ರತಿಭೆ ಇರುತ್ತದೆ. ಕಲಾವಿದರು ತಮ್ಮ ಆರೋಗ್ಯದ ಬಗ್ಗೆಯೂ ವಿಶೇಷ ಗಮನ ಹರಿಸಬೇಕು. ಅನೇಕ ಪ್ರತಿಭಾನ್ವಿತ ಕಲಾವಿದರು ದುಶ್ಚಟಗಳಿಗೆ ಬಲಿಯಾಗಿ ತಮ್ಮ ಅಮೂಲ್ಯವಾದ ಜೀವನ ಹಾಳು ಮಾಡಿಕೊಂಡಿದ್ದಾರೆ. ದುಶ್ಚಟಗಳ ಸಹವಾಸದಿಂದಾಗಿ ಅವರಲ್ಲಿರುವ ಅದ್ಬುತ್‌ ಕಲಾ ವಿದ್ವತ್ತು ಕಮರುತ್ತಿದೆ ಎಂದು ವಿಷಾದಿಸಿದರು. ಕರ್ನಾಟಕದ ಮೂಲೆ-ಮೂಲೆಗಳಲ್ಲಿಯೂ ಪ್ರತಿಭಾನ್ವಿತ ಚಿತ್ರಕಲಾವಿದರಿದ್ದಾರೆ. ಅನೇಕ
ಕಲಾವಿದರ ಕಲಾಕೃತಿಗಳು ವಿದೇಶದ ಪ್ರಮುಖ ಕಟ್ಟಡಗಳಲ್ಲಿ ರಾರಾಜಿಸುತ್ತಿವೆ.

ವಿಜಯಪುರ ಭಾಗದ ಅನೇಕ ಕಲಾವಿದರ ಕಲಾಕೃತಿಗಳು ವಿದೇಶದಲ್ಲಿ ಮಿಂಚುತ್ತಿವೆ. ಇದು ಪ್ರತಿಯೊಬ್ಬರು ಹೆಮ್ಮೆ ಪಡುವ ಸಂಗತಿಯಾಗಿದೆ ಎಂದರು. ಕಲಾವಿದರು ಪರಸ್ಪರ ಕಲಾವಿದರ ಶ್ರೇಯೋಭಿವೃದ್ಧಿಗಾಗಿ ಚರ್ಚೆ ಮಾಡಬೇಕು. ಆಗ್ಗಾಗ ವಿಶೇಷ ಸಭೆಗಳನ್ನು ನಡೆಸಿ ಕಲಾವಿದರ ಪ್ರಗತಿಗೆ ಪೂರಕವಾದ ವಿಚಾರಗಳನ್ನು ಚಿಂತಿಸಬೇಕು ಎಂದರು.

ಕಲಾಸೇವೆ ಎನ್ನುವುದು ಒಂದು ತಪಸ್ಸು ಹಾಗೂ ವೃತವಿದ್ದಂತೆ, ಈ ವ್ರತವನ್ನು ಚಾಚೂತಪ್ಪದೇ ಪಾಲಿಸುತ್ತಾ ಬಂದಿರುವ ಅನೇಕ ಕಲಾವಿದರು ಇಂದು ಉನ್ನತ ಸಾಧನೆ ತೋರಿದ್ದಾರೆ ಎಂದರು.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.