ಶಿಕ್ಷಕರಲ್ಲಿ ಕರ್ತವ್ಯ ಪ್ರಜ್ಞೆ ಕುಸಿತ

ಶಿಕ್ಷಕರ ಕುರಿತು ನಕಾರಾತ್ಮಕ ಸಂದೇಶ ರವಾನೆ ಆಗುತ್ತಿರುವುದು ನೋವಿನ ಸಂಗತಿ: ಪಾಟೀಲ

Team Udayavani, Sep 6, 2019, 4:41 PM IST

6-Septecember-23

ವಿಜಯಪುರ: ಶಿಕ್ಷಕರ ದಿನಾಚರಣೆ ಸಮಾರಂಭದಲ್ಲಿ ಜಿಲ್ಲಾ ಉತ್ತಮ ಶಿಕ್ಷಕರಿಗೆ ಪ್ರಶಸ್ತಿ ಪ್ರದಾನ ಮಾಡಲಾಯಿತು.

ವಿಜಯಪುರ: ಶಿಕ್ಷಕರಲ್ಲಿ ಕರ್ತವ್ಯ ಪ್ರಜ್ಞೆ ಕಡಿಮೆ ಆಗುತ್ತಿರುವುದು ಸಮಾಜದಲ್ಲಿ ಶಿಕ್ಷಣ ಹಾಗೂ ಶಿಕ್ಷಕರ ಕುರಿತು ನಕಾರಾತ್ಮಕ ಸಂದೇಶ ರವಾನೆ ಆಗುತ್ತಿರುವುದು ನೋವಿನ ಸಂಗತಿ ಎಂದು ಜಿಲ್ಲಾಧಿಕಾರಿ ವೈ.ಎಸ್‌. ಪಾಟೀಲ ವಿಷಾದಿಸಿದರು.

ನಗರದ ಕಂದಗಲ್ ಹನುಮಂತರಾಯ ಜಿಲ್ಲಾ ರಂಗಮಂದಿರದಲ್ಲಿ ಗುರುವಾರ ಜಿಲ್ಲಾಡಳಿತ, ಸಾರ್ವಜನಿಕ ಶಿಕ್ಷ‌ಣ ಇಲಾಖೆ, ಜಿ.ಶಂಕರ ಫ್ಯಾಮಿಲಿ ಟ್ರಸ್ಟ್‌ ವತಿಯಿಂದ ನಡೆದ ಶಿಕ್ಷ‌ಕರ ದಿನೋತ್ಸವ-2019 ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಪಾಲ್ಗೊಂಡು ಅವರು ಮಾತನಾಡಿದರು. ಶಿಕ್ಷ‌ಕರು ಶಿಕ್ಷ‌ಕರಾಗಿಯೇ ಉಳಿದರೆ ಗೌರವ ತಾನಾಗಿಯೇ ಬರುತ್ತದೆ. ಜ್ಞಾನ, ಕಾರ್ಯ ವೈಖರಿ, ನಡತೆಯಿಂದ ಮಾತ್ರ ಗೌರವ ಸಿಗಲಿದೆ. ಕತ್ತಲೆಯನ್ನು ಓಡಿಸುವ ಶಕ್ತಿ ಗುರುವಿನಲ್ಲಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಶಿಕ್ಷ‌ಕರಲ್ಲಿ ಕರ್ತವ್ಯ ಪ್ರಜ್ಞೆ ಕಡಿಮೆ ಆಗುತ್ತಿರುವುದು ಬೇಸರದ ಸಂಗತಿ ಎಂದರು.

ಶಿಕ್ಷ‌ಕರು ತಮ್ಮ ಹಕ್ಕುಗಳನ್ನು ಪಡೆಯುವುದಲ್ಲಿ ತೋರುವ ಆಸಕ್ತಿಯನ್ನು ಕರ್ತವ್ಯ ಪಾಲನೆಗೆ ತೋರುತ್ತಿಲ್ಲ. ಶಿಕ್ಷ‌ಕರ ವಿಚಾರ ಹೆಚ್ಚಿನ ಗುಣಮಟ್ಟ ಹೊಂದಿದಲ್ಲಿ ದೇಶದ ಅಭಿವೃದ್ಧಿ ಆಗಲಿದೆ. ಶಿಕ್ಷಕರಾದವರು ನಿತ್ಯವೂ ವಿದ್ಯಾರ್ಥಿಯಾಗಿ, ನಿತ್ಯವೂ ಹೊಸದನ್ನು ಓದುವ ಹಾಗೂ ಓದಿದನ್ನು ಮಕ್ಕಳಿಗೆ ಹಂಚುವ ಕೆಲಸ ಮಾಡಬೇಕು. ಜ್ಞಾನದ ಹಸಿವಿಲ್ಲದ ಶಿಕ್ಷಕರು, ಮಕ್ಕಳಿಗೆ ವ್ಯಕ್ತಿತ್ವ ವಿಕಸನಕ್ಕೆ ಅಗತ್ಯವಾಗ ಶಿಕ್ಷಣ ನೀಡಲು ಸಾಧ್ಯವಿಲ್ಲ. ಶಿಕ್ಷಕರು ಮಾಡಿದ ಒಂದು ಪಾಠ ಪ್ರತಿ ವಿದ್ಯಾರ್ಥಿಯ ಜೀವಿತದ ಉದ್ದಕ್ಕೂ ಸ್ಮರಣೆಯಲ್ಲಿ ಇರುವಂತಿರಬೇಕು. ಶಿಕ್ಷಕರು ತಮ್ಮ ಶಾಲೆಯ ಪ್ರತಿ ಮಗುವಿಗೂ ಸ್ವಂತ ಮಕ್ಕಳಿಗೆ ತೋರುವ ಕಾಳಜಿ ತೋರಬೇಕು. ತಮ್ಮ ಶಾಲೆಯಲ್ಲಿ ಕಲಿಯುವ ಪ್ರತಿಯೊಂದು ಮಗುವಿನ ಶಿಕ್ಷಣಾಭಿವ್ರದ್ದಿಗೆ ಶ್ರಮಿಸಬೇಕು ಎಂದು ಸಲಹೆ ನೀಡಿದರು.

ವಿಶೇಷ ಉಪನ್ಯಾಸ ನೀಡಿದ ಬಸವಜ್ಞಾನ ಗುರುಕುಲದ ಅಧ್ಯಕ್ಷ‌ ಈಶ್ವರ ಮಂಟೂರ, ಬುದ್ಧಿವಂತಿಕೆ ಮತ್ತು ಹೃದಯ ವಂತಿಕೆ ಸೇರಿದರೆ ಮಾತ್ರ ದೇಶ ಜಾಗತೀಕ ಮಟ್ಟದಲ್ಲಿ ಅಭಿವೃದ್ಧಿ ಹೊಂದಲು ಸಾಧ್ಯ. ಈ ಎರಡೂ ಗುಣಗಳು ಶಿಕ್ಷ‌ಕರಲ್ಲಿ ಇರಬೇಕು. ಜಾತಿ, ಮತದ ಭೇದ, ಪಂಥ ಪಂಗಡದ ಆಸೆ, ಮೌಢ್ಯಾಚಾರಣೆ ಸೆಳೆತ ಇರಬಾರದು, ಮನೆ, ಮೋಹದ ಬಗ್ಗೆ ವ್ಯಾಮೋಹ ಇರಬಾರದು. ಸಂಕುಚಿತ ವಿಚಾರ ಮಾಡುವ ಶಿಕ್ಷಕರಿಂದ ಸಮಾಜಕ್ಕೆ ಮಾರಕ ಎಂದರು.

ನಾಗಠಾಣ ಶಾಸಕ ದೇವಾನಂದ ಚವ್ಹಾಣ ಸಮಾರಂಭ ಚಾಲನೆ ನೀಡಿದರು. ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ ಯತ್ನಾಳ ಅಧ್ಯಕ್ಷತೆ ವಹಿಸಿದ್ದರು. ಜಿ.ಪಂ. ಶಿಕ್ಷ‌ಣ ಮತ್ತು ಆರೋಗ್ಯ ಸ್ಥಾಯಿ ಸಮಿತಿ ಅಧ್ಯಕ್ಷ‌ ಕಲ್ಲಪ್ಪ ಕೊಡಬಾಗಿ, ಜಿ.ಪಂ. ಉಪಕಾರ್ಯದರ್ಶಿ ಅಮರೇಶ ನಾಯಕ, ಜಿಲ್ಲಾ ಶಿಕ್ಷ‌ಣ ಮತ್ತು ತರಬೇತಿ ಸಂಸ್ಥೆ ಉಪನಿರ್ದೇಶಕಿ ಸಾಯಿರಾಬಾನು ಖಾನ್‌, ನೋಡಲ್ ಅಧಿಕಾರಿ ಎಂ.ಎಸ್‌.ಬ್ಯಾಹಟ್ಟಿ, ಕ್ಷೇತ್ರ ಶಿಕ್ಷ‌ಣಾಧಿಕಾರಿ ಶರೀಫ್‌ ನದಾಫ್‌, ಜಿ.ಶಂಕರ ಫ್ಯಾಮಿಲಿ ಟ್ರಸ್ಟ್‌ ಸಂಚಾಲಕ ಅರವಿಂದ ಕುಲಕರ್ಣಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

17-

Bantwala: ರಾಂಗ್‌ಸೈಡಿನಲ್ಲಿ ಬಂದು ಎರಡು ಬೈಕ್‌ಗಳಿಗೆ  ಢಿಕ್ಕಿ ಹೊಡೆದ ಲಾರಿ

Man shot a Cow on head twice

Manipur; ಹಸುವಿಗೆ ಗುಂಡಿಟ್ಟು ಕೊಂದ ಕ್ರೂರಿ!: ವ್ಯಾಪಕ ಆಕ್ರೋಶ

Rekha Jhunjhunwala lost Rs 800 crore in a single day!

Share Market; ರೇಖಾ ಜುಂಜುನ್‌ವಾಲಾಗೆ ಒಂದೇ ದಿನ 800 ಕೋಟಿ ರೂ. ನಷ್ಟ!

sunita williams

Sunita williams ಬಾಹ್ಯಾಕಾಶ ಯಾನ 90 ನಿಮಿಷಗಳಿದ್ದಾಗ ರದ್ದು!

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

16-

ಮೂಡುಬಿದಿರೆ: ಹಿಟಾಚಿಗಳ ಬ್ಯಾಟರಿ ಕಳವು

yuzvendra Chahal

IPL 2024; ಹೊಸ ಭಾರತೀಯ ದಾಖಲೆ ಬರೆದ ಯುಜುವೇಂದ್ರ ಚಾಹಲ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

17-

Bantwala: ರಾಂಗ್‌ಸೈಡಿನಲ್ಲಿ ಬಂದು ಎರಡು ಬೈಕ್‌ಗಳಿಗೆ  ಢಿಕ್ಕಿ ಹೊಡೆದ ಲಾರಿ

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

16-

ಮೂಡುಬಿದಿರೆ: ಹಿಟಾಚಿಗಳ ಬ್ಯಾಟರಿ ಕಳವು

14-

Kundapura ಭಾಗದ ಅಪರಾಧ ಸುದ್ದಿಗಳು

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

ಮತ ಚಲಾವಣೆ ಮಾಡದಿದ್ದಕ್ಕೆ ಬೇಸರ ವ್ಯಕ್ತಪಡಿಸಿದ ಪದ್ಮಶ್ರೀ ಸುಕ್ರಿ ಗೌಡ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

17-

Bantwala: ರಾಂಗ್‌ಸೈಡಿನಲ್ಲಿ ಬಂದು ಎರಡು ಬೈಕ್‌ಗಳಿಗೆ  ಢಿಕ್ಕಿ ಹೊಡೆದ ಲಾರಿ

Man shot a Cow on head twice

Manipur; ಹಸುವಿಗೆ ಗುಂಡಿಟ್ಟು ಕೊಂದ ಕ್ರೂರಿ!: ವ್ಯಾಪಕ ಆಕ್ರೋಶ

Rekha Jhunjhunwala lost Rs 800 crore in a single day!

Share Market; ರೇಖಾ ಜುಂಜುನ್‌ವಾಲಾಗೆ ಒಂದೇ ದಿನ 800 ಕೋಟಿ ರೂ. ನಷ್ಟ!

sunita williams

Sunita williams ಬಾಹ್ಯಾಕಾಶ ಯಾನ 90 ನಿಮಿಷಗಳಿದ್ದಾಗ ರದ್ದು!

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Kalaburagi; ಮತದಾನ ಮಾಡಿ ವಿಡಿಯೋ ವೈರಲ್ ಮಾಡಿದ ಚಿಂಚೋಳಿ ಮತದಾರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.