ಬಬಲೇಶ್ವರ: ಅಗ್ನಿಕುಂಡ ಹಾಯ್ದ ಭಕ್ತರು

1,050 ಅಡಿ ಉದ್ದದ ತಂತಿಶಸ್ತ್ರ ಹಾಕಿ ಸಾಹಸ ಮೆರೆದ ವೀರಗಾಸೆ 400 ಕಲಾವಿದರು

Team Udayavani, Dec 5, 2019, 2:55 PM IST

5-December-7

ವಿಜಯಪುರ: ಜಿಲ್ಲೆಯ ಬಬಲೇಶ್ವರ ಪಟ್ಟಣದ ವೀರಭದ್ರೇಶ್ವರ ದೇವಸ್ಥಾನದ 61ನೇ ಜಾತ್ರೋತ್ಸ ಡಾ| ಮಹಾದೇವ ಶ್ರೀಗಳ ನೇತೃತ್ವದಲ್ಲಿ ಅದ್ಧೂರಿ ತೆರೆ ಕಂಡಿತು. ಸೂರ್ಯೋದಯ ಸಂದರ್ಭದಲ್ಲಿ ಅಗ್ನಿ ಕುಂಡಕ್ಕೆ ಕಿಡಿ ಹೊತ್ತಿಸಿ, ಗ್ರಾಮದ ಪ್ರಮುಖ ಬೀದಿಗಳಲ್ಲಿ ವೀರಭದ್ರೇಶ್ವರನ ಪಲ್ಲಕಿ ಮೆರವಣಿಗೆ,  ಮಂಗಲೆಯರ ಆರತಿ, ವಿವಿಧ ಕಲಾ ತಂಡಗಳು, ಕರಡಿ ಮಜಲು ಕುಣಿತ, ವಿವಿಧ ವಾದ್ಯಗಳೊಂದಿಗೆ ಸಾಗಿತು.

ಜಾತ್ರಾ ಸಂಭ್ರಮಕ್ಕೆ ವಿವಿಧ ಭಾಗಗಳಿಂದ ಆಗಮಿಸಿದ್ದ ವೀರಗಾಸೆಯ 400 ಪುರವಂತ ಕಲಾವಿದರು ವೀರಭದ್ರೇಶ್ವರ ದೇವರ ವಿವಿಧ ಅವತಾರ ಬಣ್ಣಿಸಲು ಕಾವಿ ಧೋತರ, ತಲೆಗೆ ಕಾವಿಯ ಪೇಟ, ತೋಳಿಗೆ ಬೆಳ್ಳಿ ನಾಗರ, ಕಿವಿಗೆ ರುದ್ರಾಕ್ಷಿ, ಹಣೆಗೆ ವಿಭೂತಿ, ಸೊಂಟಕ್ಕೆ ಗಂಟೆ, ಕತ್ತಿಗೆ ರುದ್ರಾಕ್ಷಿ ಮಾಲೆ, ಎದೆ ಮೇಲೆ ನರಸಿಂಹನ ಮುಖ, ಕೈಗೂ ರುದ್ರಾಕ್ಷಿ, ಸೊಂಟಕ್ಕೆ ಬಣ್ಣದ ಬಟ್ಟೆ ಧರಿಸಿ ಬಲ ಕೈಯಲ್ಲಿ ಖಡ್ಗ ಹಿಡಿದು ಎಡಗೈಯಲ್ಲಿ ನಿಂಬೆ ಹಣ್ಣಿನ ಶಸ್ತ್ರ ಹಿಡಿದು ಮೆರವಣಿಗೆಯಲ್ಲಿ ವೀರಗಾಥೆ ಹೇಳುತ್ತ ಸಾಗಿದರು.

ಶಸ್ತ್ರಗಳನ್ನು ಎರಡು ಕೈಗಳಿಗೆ, ನಾಲಗೆಗೆ, ಕಣ್ಣಿನ ಹುಬ್ಬಿಗೆ ಏಕ ಕಾಲದಲ್ಲಿ ಚುಚ್ಚಿಕೊಂಡು, ಇದೇ ಶಸ್ತ್ರವನ್ನು ಇನ್ನೊಬ್ಬ ಪುರವಂತ ಇದೇ ಮಾದರಿಯಲ್ಲಿ ಏಕ ಕಾಲದಲ್ಲಿ ಚುಚ್ಚಿಕೊಂಡು ವೀರಭದ್ರೇಶ್ವರನ ಪವಾಡ ಪ್ರದರ್ಶಿಸಿದರು.

ವೀರಗಾಸೆಯ ಸಾಹಸಿ ಕಲಾವಿದರಾದ ಹಿಟ್ನಳ್ಳಿ ಗ್ರಾಮದ ಶಿವಾನಂದ ಬಗಲಿ, ಬಬಲೇಶ್ವರದ ಬಸಪ್ಪ ಸುಕಾಲಿ ಎಂಬವರು ಕಪಾಳದ ಚರ್ಮಕ್ಕೆ 1,050 ಅಡಿ ಉದ್ದದ ತಂತಿಯ ಶಸ್ತ್ರ ಹಾಕಿ ಬಾಯಿಯಿಂದ ಹೊರ ತೆಗೆಯುವ ಮೂಲಕ ವಿಶಿಷ್ಟ ಪರಂಪರೆಯ ಸಾಹಸ ಮೆರೆದರು.

ವೀರಗಾಸೆಯ ಕಲಾವಿದರಾದ ಕಲ್ಲಪ್ಪ ಮನಗೊಂಡ, ಚನ್ನಪ್ಪ ಭದ್ರನವರ, ಈರಯ್ಯ ಹಿರೇಮಠ, ಈರಪ್ಪ ಸುಕಾಲಿ, ದುಂಡಪ್ಪ ಮೇಡೆಗಾರ, ಹನುಮಂತ ತಾಯಿಗೊಂಡ ಇತರರು ಕಡ್ಡಿ ಕೆರೆಯದೇ ಬೆಂಕಿ ಸೃಷ್ಟಿಸಿ ಕರ್ಪೂರ ಹೊತ್ತಿಸುವ ಮೂಲಕ ನೆರೆದ ಭಕ್ತರಿಂದ ಭಕ್ತಿಯ ಚಪ್ಪಾಳೆ ಗಿಟ್ಟಿಸಿದರು. ಐಟಿಜಿಟಿ ಮಳೆಯನ್ನೂ ಲೆಕ್ಕಿಸದೇ ಮೆರವಣಿಗೆಯಲ್ಲಿ ಸಾಗಿದ್ದ ವೀರಗಾಸೆಯ ಕೆಲ ಕಲಾವಿದರು ಖಾಲಿ ಕೊಡದಲ್ಲಿ ಅಕ್ಕಿ ತುಂಬಿ, ಆ ಅಕ್ಕಿ ತುಂಬಿದ ಕೊಡಕ್ಕೆ ಕತ್ತಿಯ ಶಸ್ತ್ರ ಚುಚ್ಚಿ ಕೊಡವನ್ನು ಮೆಲಕ್ಕಿತ್ತಿ ಸಾಹಸ ಮೆರೆದುದು ಭಕ್ತರಲ್ಲಿ ಸಂಭ್ರಮ ಮೂಡಿಸಿತ್ತು.

ಮತ್ತೂಂದೆಡೆ ಜಾತ್ರೆ ನಿಮಿತ್ತ ಹರಕೆ ಹೊತ್ತ ಭಕ್ತರು ದೇವಸ್ಥಾನದ ಎದುರು ಹಾಕಿದ್ದ ಅಗ್ನಿ ಕುಂಡದಲ್ಲಿ ಹಾಯುವ ಮೂಲಕ ತಮ್ಮ ಹರಕೆ ತೀರಿಸಿದರು.

ಟಾಪ್ ನ್ಯೂಸ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

Byndoor ವಿವಾಹಿತ ಮಹಿಳೆ ಯುವಕನ ಜತೆ ಪರಾರಿ

aaa

ನೇಹಾ ಕಗ್ಗೊಲೆ ಆಕಸ್ಮಿಕ, ವೈಯಕ್ತಿಕ ಸರಕಾರದ ಹೇಳಿಕೆ ವಿವಾದ, ಆಕ್ರೋಶ

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Puttur ಎಲೆಕ್ಷನ್‌ ಇದೆ ನಿಜ, ಆದರೆ ಹಿಂದಿನ ಅಬ್ಬರ ಕಾಣಿಸುತ್ತಿಲ್ಲ !

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.