ಗುಣಮಟ್ಟದಲ್ಲಿರಲಿ ಜಿ+2 ಮಾದರಿ ಮನೆ

ಬರಟಗಿ ತಾಂಡಾದಲ್ಲಿ ಪೌರ ಕಾರ್ಮಿಕರಿಗೆ ಮನೆ ನಿರ್ಮಾಣ•ನಗರಾಭಿವೃದ್ಧಿ ಸಚಿವ ಖಾದರ್‌ ಪರಿಶೀಲನೆ

Team Udayavani, Jul 4, 2019, 10:37 AM IST

04-July-8

ವಿಜಯಪುರ: ನಗರದ ಉದ್ಯಾನಗಳಲ್ಲಿ ನಿರ್ಮಾಣಗೊಂಡಿರುವ ಜಿಮ್‌ನಲ್ಲಿ ಸಚಿವ ಯು.ಟಿ. ಖಾದರ್‌, ಎಂ.ಸಿ. ಮನಗೂಳಿ, ಶಾಸಕ ದೇವಾನಂದ ಚವ್ಹಾಣ ಜೊತೆ ವ್ಯಾಯಾಮ ಮಾಡಿದರು.

ವಿಜಯಪುರ: ವಿಜಯಪುರ ಪೌರ ಕಾರ್ಮಿಕರಿಗೆ ನಿರ್ಮಿಸುತ್ತಿರುವ ಮನೆಗಳಿಗೆ ಬಳಸುವ ಸಾಮಗ್ರಿಗಳು ಗುಣಮಟ್ಟದಿಂದ ಕೂಡಿರಬೇಕು. ಮನೆಗಳಿಗೆ ಬೇಕಾದ ಪೂರಕ ಕಾಮಗಾರಿಗಳನ್ನು ವ್ಯವಸ್ಥಿತವಾಗಿ ಮಾಡಬೇಕು. ಮನೆಗಳಲ್ಲಿ ಅಳವಡಿಸಲಾಗುವ ವೈರಿಂಗ್‌ ವ್ಯವಸ್ಥೆ, ನಳದ ತೋಟಿ ಸೇರಿದಂತೆ ಇತರೆ ವಸ್ತುಗಳನ್ನು ಗುಣಮಟ್ಟ ಖಾತ್ರಿ ನಂತರವೇ ಖರೀದಿಸಬೇಕು ಎಂದು ನಗರಾಭಿವೃದ್ಧಿ ಸಚಿವ ಯು.ಟಿ. ಖಾದರ್‌ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.

ಬುಧವಾರ ವಿಜಯಪುರ ನಗರಕ್ಕೆ ಆಗಮಿಸಿದ್ದ ಅವರು, ಜಿಲ್ಲಾ ಉಸ್ತುವಾರಿ ಸಚಿವ ಎಂ.ಸಿ. ಮನಗೂಳಿ ಅವರೊಂದಿಗೆ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಕೈಗೊಂಡಿರುವ ವಿವಿಧ ಯೋಜನೆಗಳ ಕಾಮಗಾರಿ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದರು.

ಮಹಾನಗರ ಪಾಲಿಕೆ ಪೌರ ಕಾರ್ಮಿಕಗೆ ಸರ್ಕಾರ ನಗರದ ಹೊರ ವಲಯದಲ್ಲಿರುವ ಬರಟಗಿ ತಾಂಡಾದಲ್ಲಿ ನಿರ್ಮಿಸುತ್ತಿರುವ ಜಿ+2 ಮಾದರಿ ಮನೆ ನಿರ್ಮಾಣ ಯೋಜನಾ ಪ್ರದೇಶಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಮನೆಗಳ ನಿರ್ಮಾಣಕ್ಕೆ ಬಳಸಲಾಗುತ್ತಿರುವ ಸಿಮೆಂಟ್, ಕಬ್ಬಿಣ, ಕಂಕರ್‌, ಇಟ್ಟಿಗೆ ಸೇರಿದಂತೆ ವಿವಿಧ ವಸ್ತುಗಳ ಕುರಿತು ಮಾಹಿತಿ ಪಡೆದು, ಪರಿಶೀಲನೆ ನಡೆಸಿ ಗುಣಮಟ್ಟದ ಖಾತ್ರಿ ಬಗ್ಗೆ ಅಧಿಕಾರಿಗಳೊಂದಿಗೆ ಚರ್ಚಿಸಿದರು. ಕಾರ್ಮಿಕರಿಗೆ ನಿರ್ಮಿಸುತ್ತಿರುವ ಮನೆಗಳು ಅತ್ಯಂತ ಗುಣಮಟ್ಟದಿಂದ ಕೂಡಿರಬೇಕು ಎಂದು ಅಧಿಕಾರಿಗಳಿಗೆ ತಾಕೀತು ಮಾಡಿದರು. ಐದು ವಿಭಾಗಗಳಲ್ಲಿ ಜಿ-ಪ್ಲಸ್‌ ಮನೆಗಳ ನಿರ್ಮಾಣಗೊಳ್ಳುತ್ತಿದ್ದು, ಒಂದೊಂದು ವಿಭಾಗದ ನಡುವೆ ಖಾಲಿ ಉಳಿದಿರುವ ಜಾಗವನ್ನು ವ್ಯರ್ಥ ಮಾಡದೇ ಮಕ್ಕಳಿಗೆ ಆಟದ ಮೈದಾನ ನಿರ್ಮಿಸಬೇಕು. ಅಲ್ಲಿ ಮಕ್ಕಳು ಕುಳಿತು ಆಟವಾಡುವ ರೀತಿಯಲ್ಲಿ ಆ ಜಾಗೆಯನ್ನು ಬಳಸಿಕೊಳ್ಳಿ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ನಂತರ ನಗರದ ಐಶ್ವರ್ಯ ನಗರದ ಬಳಿ ಇರುವ ಟೀಚರ್ ಕಾಲೋನಿಯಲ್ಲಿ ಅಮೃತ ಯೋಜನೆ ಅಡಿಯಲ್ಲಿ ನಿರ್ಮಿಸಿರುವ ಉದ್ಯಾನವನಕ್ಕೆ ಭೇಟಿ ನೀಡಿದರು. ಪಾಲಿಕೆ ಸದಸ್ಯ ರವೀಂದ್ರ ಲೋಣಿ ಸಚಿವ ಖಾದರ್‌ ಅವರಿಗೆ ಉದ್ಯಾನವನ ಕುರಿತು ಮಾಹಿತಿ ನೀಡಿದರು.

ಉದ್ಯಾನವನಗಳಲ್ಲಿ ಜಿಮ್‌ಗೆ ಅಳವಡಿಸಿರುವ ಪರಿಕರಗಳನ್ನು ಅಳವಡಿಸಿರುವುದು ಸಾರ್ವ ಜನಿಕರಿಗೆ ಹೆಚ್ಚಿನ ಅನುಕೂಲ ಕಲ್ಪಿಸಲಿದೆ. ಉದ್ಯಾನವನದಲ್ಲಿ ಸುಸಜ್ಜಿತವಾದ ಫುಡ್‌ ಕೋರ್ಟ್‌ ನಿರ್ಮಿಸಬೇಕು. ಇದರಿಂದಾಗಿ ಈ ಬಡಾವಣೆ ಹಾಗೂ ಸಾರ್ವಜನಿಕರಿಗೆ ಸಮಯ ಕಳೆಯಲು ಇಲ್ಲಿಗೆ ಬರಲು ನೆರವಾಗುತ್ತದೆ. ಪಾಲಿಕೆಗೂ ಆದಾಯ ಬರುತ್ತದೆ ಎಂದ‌ರು.

ನಂತರ ಉದ್ಯಾನವನದಲ್ಲಿನ ಜಿಮ್‌ಗಳಲ್ಲಿ ಸ್ವಯಂ ವ್ಯಾಯಾಮ ಮಾಡಿದರು. ಇದರಿಂದ ಸ್ಫೂರ್ತಿ ಪಡೆದ ಜಿಲ್ಲಾ ಉಸ್ತುವಾರಿ ಸಚಿವ ಎಂ.ಸಿ. ಮನಗೂಳಿ ಅವರು ತಮ್ಮ ಇಳಿವಯಸ್ಸನ್ನೂ ಮರೆತು ಜಿಮ್‌ ಮಾಡಲು ಯತ್ನಿಸಿದ್ದು ಗಮನ ಸೆಳೆಯಿತು. ನಾಗಠಾಣ ಶಾಸಕ ಡಾ| ದೇವಾನಂದ ಚವ್ಹಾಣ, ಮೇಯರ್‌ ಶ್ರೀದೇವಿ ಲೋಗಾವಿ, ಉಪ ಮೇಯರ್‌ ಗೋಪಾಲ ಘಟಕಾಂಬಳೆ, ರಾಜಶೇಖರ ಮಗೀಮಠ, ಶಂಕರ ಕುಂಬಾರ, ಪಾಲಿಕೆ ಆಯುಕ್ತ ಡಾ| ಔದ್ರಾಮ ಇದ್ದರು.

ಟಾಪ್ ನ್ಯೂಸ್

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Kollywood: ಅಜಿತ್‌ ಹುಟ್ಟುಹಬ್ಬಕ್ಕೆ ಸೂಪರ್‌ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್‌ ಖುಷ್

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ

19-uv-fusion

Vote: ಬನ್ನಿ ಉತ್ತಮ ನಾಯಕನನ್ನು ಆಯ್ಕೆ ಮಾಡೋಣ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

ಕೊಡಪಾಡಿ: ಮೃತ ವ್ಯಕ್ತಿಯ ಹೆಸರಲ್ಲಿ ನಕಲಿ ಸಹಿ ಬಳಸಿ ಪವರ್‌ ಆಫ್‌ ಅಟಾರ್ನಿ, ದೂರು ದಾಖಲು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.