ಡಿಜಿಟಲ್‌ ಕ್ರಾಂತಿಯಿಂದ ಮನೆ ಬಾಗಿಲಿಗೆ ಸೌಲಭ್ಯ

ನಿತ್ಯದ ಬದುಕಿನ ಪ್ರಮುಖ ಸ್ಥಾನ ಪಡೆದ ಡಿಜಿಟಲೈಜೇಶನ್‌: ಪ್ರೊ| ಛಾಯಾ ದೇಗಾಂವ್ಕರ್‌ 

Team Udayavani, Nov 22, 2019, 1:19 PM IST

21-November-14
ವಿಜಯಪುರ: ಇಂದಿನ ಡಿಜಿಟಲ್‌ ಕ್ರಾಂತಿಯಿಂದಾಗಿ ಪ್ರತಿ ಸೌಲಭ್ಯವು ಮನೆಯ ಬಾಗಿಲಿಗೆ ಬಂದು ನಿಲ್ಲುತ್ತಿವೆ. ಇದು ಡಿಜಿಟಲೈಜೇಶನ್‌ ಪ್ರಭಾವ ತೋರಿಸುತ್ತದೆ ಎಂದು ಕರ್ನಾಟಕ ಮೌಲ್ಯಮಾಪನಾ ಪ್ರಾಧಿಕಾರದ ಹೆಚ್ಚುವರಿ ಮುಖ್ಯ ಮೌಲ್ಯಮಾಪನಾಧಿಕಾರಿ ಪ್ರೊ| ಛಾಯಾ.ಕೆ. ದೇಗಾಂವ್ಕರ್‌ ಹೇಳಿದರು.
ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಜ್ಞಾನಶಕ್ತಿ ಆವರಣದ ಕನ್ನಡ ಅಧ್ಯಯನ ಸಭಾಂಗಣದಲ್ಲಿ ಆರ್ಥಿಕ ಅಧ್ಯಯನ ವಿಭಾಗದ ವತಿಯಿಂದ “ಭಾರತದಲ್ಲಿ ಡಿಜಿಟಲ್‌ ಆರ್ಥಿಕತೆ ಸಮಸ್ಯೆಗಳು ಮತ್ತು ಸವಾಲುಗಳು’ ಕುರಿತು ಹಮ್ಮಿಕೊಂಡಿದ್ದ ರಾಷ್ಟ್ರೀಯ ಸಮ್ಮೇಳನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಸರ್ಕಾರವು ಸೇರಿದಂತೆ ಶೈಕ್ಷಣಿಕ, ಆರೋಗ್ಯ, ಕೃಷಿಸೇರಿದಂತೆ ಹಲವಾರು ಕ್ಷೇತ್ರಗಳು ಡಿಜಿಟಲೀಕರಣ ಹೊಂದಿವೆ. ಸಾರ್ವಜನಿಕರು ಇದರ ಪ್ರಯೋಜನ ಪಡೆಯುತ್ತಿದ್ದಾರೆ. ಈ ಡಿಜಿಟಲೀಕರಣ ವ್ಯವಸ್ಥೆಯಿಂದಾಗಿ ಸಮಯ ವ್ಯರ್ಥವಾಗದೆ ನಮ್ಮ ಕೆಲಸ ಕಾರ್ಯಗಳನ್ನು ನಾವು ಇದ್ದ ಸ್ಥಳದಿಂದಲೇ ಮಾಡಬಹುದಾಗಿದೆ. ಈ ನಿಟ್ಟಿನಲ್ಲಿ ಡಿಜಿಟಲೈಜೇಶನ್‌ ನಮ್ಮ ಬದುಕಿನಲ್ಲಿ ಪ್ರಮುಖ ಸ್ಥಾನ ಗಿಟ್ಟಿಸಿಕೊಂಡಿದೆ. ಆದರೆ ಸಂಪೂರ್ಣ ಡಿಜಿಟಲೀಕರಣವಾಗಲು ಇನ್ನೂ ಕೆಲವು ತಾಂತ್ರಿಕ ಸಮಸ್ಯೆಗಳಿದ್ದರೂ ಸಹ ಮುಂಬರುವ ದಿನಗಳಲ್ಲಿ ಭಾರತ ಖಂಡಿತವಾಗಿಯೂ ಯಶಸ್ವಿ ಡಿಜಿಟಲೈಜ್ಡ್ ದೇಶವಾಗಿ ಹೊರಹೊಮ್ಮುತ್ತದೆ ಎಂಬ ಭರವಸೆ ಇದೆ ಎಂದರು.
ಕೊಲ್ಲಾಪುರದ ಶಿವಾಜಿ ವಿವಿಯ ಪ್ರಾಧ್ಯಾಪಕ ಪ್ರೊ | ಪ್ರಕಾಶ ಕಾಂಬಳೆ ಮಾತನಾಡಿ, ಪ್ರಸ್ತುತ ಸರ್ಕಾರದಲ್ಲಿ ಡಿಜಿಡಲೀಕರಣ ಯಶಸ್ವಿಯಾಗಿ ಕಾರ್ಯನಿರ್ವಹಿಸುತ್ತಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರಗಳಲ್ಲಿ ಈಗಾಗಲೇ ಇ-ಆಡಳಿತ ಸುವ್ಯವಸ್ಥೆಯಿಂದ ಸಾಗುತ್ತಿದ್ದು, ಜನರು ಸದುಪಯೋಗ ಪಡೆಸಿಕೊಳ್ಳುತ್ತಿರುವುದು ನಮಗೆ ತಿಳಿದ ವಿಷಯ. ಇ-ಗವರ್ನಮೆಂಟ್‌ನಿಂದ ಸಾರ್ವಜನಿಕರು ಕೃಷಿ ಸೇರಿದಂತೆ ವಿವಿಧ ರಂಗಗಳ ಪ್ರಯೋಜನ ಪಡೆಯುತ್ತಿದ್ದಾರೆ ಎಂದರು. ವಿವಿಯ ಕುಲಪತಿ ಪ್ರೊ | ಸಬಿಹಾ ಭೂಮಿಗೌಡ
ಮಾತನಾಡಿ, ಡಿಜಿಟಲಿ ಆರ್ಥಿಕತೆ ಎನ್ನುವುದು ನೋಡು ನೋಡುವಷ್ಟರಲ್ಲಿ ನಮ್ಮನ್ನು ಆವರಿಸಿಕೊಂಡಿದೆ.
ನಮ್ಮ ಕೈಯಲ್ಲಿ ಒಂದು ಸ್ಮಾರ್ಟ್‌ಫೋನ್‌ ಇದ್ದರೆ ಸಾಕು ಅರ್ಧ ಕೆಲಸ ಅದರಲ್ಲೇ ಮುಗಿಯುತ್ತದೆ. ಇ-ಬ್ಯಾಂಕಿಂಗ್‌ನಿಂದ ನಾವು ಬ್ಯಾಂಕಿಂಗೆ ಹೋಗಿ ಸಾಲಿನಲ್ಲಿ ನಿಲ್ಲುವ ತಾಪತ್ರೆಯ ತಪ್ಪಿದೆ. ಆನ್‌ ಲೈನ್‌ ಟ್ರಾಂಜಾಕ್ಷನ್‌ಗಳಿಂದ ನಮ್ಮ ಕೆಲಸಗಳು ಸುಲಭವಾಗಿವೆ. ಆದರೆ ಈ ಡಿಜಟಲೀಕರಣ ಬರೀ ನಗರ ಪ್ರದೇಶಗಳಲ್ಲಿ ಮಾತ್ರ ತನ್ನ ಪ್ರಭಾವವನ್ನು ಹೆಚ್ಚಿಸಿಕೊಂಡಿದೆ. ಗ್ರಾಮೀಣ ಪ್ರದೇಶಗಳಲ್ಲಿ ಇನ್ನು ಇದರ ಅಭಿವೃದ್ಧಿಯಾಗಬೇಕಿದೆ. ಸಮಾಜದ ಕಟ್ಟಕಡೆಯ ಮನುಷ್ಯನಿಗೆ, ಮಹಿಳೆಯರಿಗೆ, ಅಶಿಕ್ಷಿತರಿಗೆ ಇದು ಈಗಲೂ ಸಹ ಸವಾಲಾಗಿ ಉಳಿದಿದೆ. ಮುಂಬರುವ ದಿನಗಳಲ್ಲಿ ಈ ಎಲ್ಲ ಸವಾಲು ಸಮಸ್ಯೆಗಳು ನಿರ್ನಾಮವಾಗುತ್ತವೆ ಎಂಬ ನಂಬಿಕೆ ಇದೆ ಎಂದು ಆಶಯ ವ್ಯಕ್ತಪಡಿಸಿದರು.
ಡಾ| ಆರ್‌.ವಿ. ಗಂಗಶೆಟ್ಟಿ ಸ್ವಾಗತಿಸಿದರು. ಪ್ರೊ| ಎಂ. ಮದರಿ ವಂದಿಸಿದರು.

ಟಾಪ್ ನ್ಯೂಸ್

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

musk

Tesla; ಭಾರತದಲ್ಲಿ ಎಲಾನ್‌ ಮಸ್ಕ್ 25,000 ಕೋಟಿ ಹೂಡಿಕೆ?

voter

EVM ಯಾವ ಗುಂಡಿ ಒತ್ತಿದರೂ ಬಿಜೆಪಿಗೆ ಮತ: ಭಾರೀ ಚರ್ಚೆ

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-qwewqeqwe

Cerelac ಶಿಶು ಆಹಾರದಲ್ಲಿ ಹೆಚ್ಚುವರಿ ಸಕ್ಕರೆ ಬೆರೆತಿದೆ: ಗಂಭೀರ ಆರೋಪ

1-kudre

Horse riding ಎಚ್ಚರಿಕೆ: ಅಪಾಯಕಾರಿ ಗ್ಲ್ಯಾಂಡರ್ಸ್‌ ಸೋಂಕು ಅಂಟಿಕೊಂಡೀತು ಹುಷಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

1-weqwewq

Belur: ದೈತ್ಯ ‘ಕರಡಿ’ ಆನೆ ಕೊನೆಗೂ ಸೆರೆ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-24-friday

Daily Horoscope: ಉದ್ಯೋಗದಲ್ಲಿ ಪ್ರತಿಭೆಗೆ ಗೌರವ, ದೇವತಾರಾಧನೆಯ ಮೂಲಕ ವಿಘ್ನ ನಿವಾರಣೆ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

Srirangapatna: ಐಸ್‌ ಕ್ರೀಂನಲ್ಲಿ ವಿಷ ಬೆರೆಸಿ ಮಕ್ಕಳ ಕೊಂದ ತಾಯಿ

1-wewqwq

Loksabha Election; ದೇಶದಲ್ಲಿ ಹಂತ-1: ಮತ ಇಂದು

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Ls Polls: ಕಾಂಗ್ರೆಸ್‌ ಗೆಲ್ಲಿಸದಿದ್ದರೆ ಸಿದ್ದು ಸ್ಥಾನಕ್ಕೆ ಕಂಟಕ; ಸಚಿವ ಬೈರತಿ ಸುರೇಶ್‌

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.