ಸ್ಲಂ ಮಕ್ಕಳೇ ಇಲ್ಲಿ ಕಾರ್ಮಿಕರು!

•ಎಪಿಎಂಸಿ ಮಾರುಕಟ್ಟೆಯಲ್ಲಿ ಮಕ್ಕಳ ಸೇವೆಗೆ ಎಲ್ಲಿಲ್ಲದ ಬೇಡಿಕೆ•ಹಣ್ಣು-ಪುಡಿಗಾಸಿಗೆ ಕೆಲಸ

Team Udayavani, May 18, 2019, 1:20 PM IST

18-May-16

ವಿಜಯಪುರ: ಶಾಲೆಗೆ ಹೋಗಿ ಎದೆಯಲ್ಲಿ ಅಕ್ಷರ ಬಿತ್ತಿಕೊಳ್ಳಬೇಕಿದ್ದ ಈ ಮಕ್ಕಳು ಪುಡಿಗಾಸಿನ ಆಸೆಗೆ ಸರ್ಕಾರಿ ಇಲಾಖೆಯೊಂದರ ಆವರಣದಲ್ಲೇ ಬಾಲ್ಯದಲ್ಲೇ ಕಾರ್ಮಿಕರಾಗಿ ದುಡಿಯುತ್ತಿದ್ದಾರೆ. ಇಂಥವರ ರಕ್ಷಣೆಗೆಂದೇ ಇರುವ ಹಲವು ಇಲಾಖೆಗಳು, ಸರ್ಕಾರಿ ಅನುದಾನ ಪಡೆಯುತ್ತಿರುವ ಸರ್ಕಾರೇತರ ಸಂಸ್ಥೆಗಳು ಇತ್ತ ಚಿತ್ತ ನೆಟ್ಟಿಲ್ಲ. ಪರಿಣಾಮ ನೂರಾರು ಮಕ್ಕಳು ಶಿಕ್ಷಣದಿಂದ ವಂಚಿತರಾಗುತ್ತಿದ್ದಾರೆ.

ಇದು ವಿಜಯಪುರ ಸರ್ಕಾರಿ ಸ್ವಾಮ್ಯದ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಹಣ್ಣು ಮತ್ತು ತರಕಾರಿ ಮಾರುಕಟ್ಟೆಯಲ್ಲಿ ಕಂಡು ಬರುವ ದೃಶ್ಯ. ಈ ಮಾರುಕಟ್ಟೆಗೆ ನಿತ್ಯವೂ ಹಣ್ಣು ಮತ್ತು ತರಕಾರಿ ಹೊತ್ತು ಬರುವ ನೂರಾರು ಲಾರಿಗಳಿಂದ ಇಳಿಸುವ ಹಾಗೂ ತುಂಬುವ ಕೆಲಸ ಈ ಮಕ್ಕಳದ್ದೇ. ಇದಕ್ಕಾಗಿ ಇಲ್ಲಿನ ವ್ಯಾಪಾರಿಗಳು ಹಾಗೂ ರೈತರು ಕೊಡುವ ಪುಡಿಗಾಸು ಇವರಿಗೆ ಆಸರೆಯಾಗಿದೆ.

ಹೆಚ್ಚಿನ ಬೇಡಿಕೆ: ಎಪಿಎಂಸಿ ಮಾರುಕಟ್ಟೆ ಪ್ರಾಂಗಣಕ್ಕೆ ಹೊಂದಿರುವ ಕೊಂಡಿರುವ ಹಲವು ಕೊಳಚೆ ಪ್ರದೇಶಗಳಿದ್ದು, ಇಲ್ಲಿಂದ ಬರುವ ಬಡ ಕುಟುಂಬಗಳ ಮಕ್ಕಳೇ ಇಲ್ಲಿನ ಕಾರ್ಮಿಕರಾಗಿ ಕೆಲಸ ಮಾಡುತ್ತಿದ್ದಾರೆ. ಲೋಡ್‌ ಮಾಡಿಕೊಂಡ ವಾಹನಗಳು ಬರುತ್ತಲೇ ಮುತ್ತಿಕೊಳ್ಳುವ ಈ ಮಕ್ಕಳು ವಾಹನಗಳಿಂದ ಹಣ್ಣು-ತರಕಾರಿ ಇಳಿಸುವ ಕೆಲಸ ಮಾಡುತ್ತಾರೆ. ಬಳಿಕ ಹರಾಜು ಪ್ರಕ್ರಿಯೆ ಮುಗಿದ ಮೇಲೆ ಮತ್ತೆ ವಾಹನಗಳಿಗೆ ಲೋಡ್‌ ಮಾಡುವ ಕೆಲಸವೂ ಇವರದ್ದೇ. ಹೀಗೆ ಮಾಡುವ ಕೆಲಸಕ್ಕೆ ಇವರಿಗೆ ಕೊಳೆತ ಹಣ್ಣು ಹಾಗೂ ಪುಡಿಗಾಸು ಸಿಗುತ್ತದೆ. ಹೀಗಾಗಿ ವಯಸ್ಕ ಕಾರ್ಮಿಕರಿಗಿಂತ ಈ ಮಾರುಕಟ್ಟೆಯಲ್ಲಿ ಬಾಲಕಾರ್ಮಿಕರ ಸೇವೆಗೆ ಹೆಚ್ಚಿನ ಬೇಡಿಕೆ ಇದೆ.

ಹಣ್ಣು-ಪುಡಿಗಾಸಿನ ಆಸೆ: ನಿತ್ಯವೂ 20-30ರ ಸಂಖ್ಯೆಯಲ್ಲಿ ಕಾಣಿಸಿಕೊಳ್ಳುವ ಈ ಬಾಲ ಕಾರ್ಮಿಕರು ಹಲವು ಸಂದರ್ಭಗಳಲ್ಲಿ ನೂರರ ಗಡಿಯಲ್ಲೂ ಕಾಣ ಸಿಗುತ್ತಾರೆ. ಬಾಲ ಕಾರ್ಮಿಕರ ಸೇವೆ ನಿಷಿದ್ಧ ಎಂಬ ಕಾನೂನಿನ ಮಾಹಿತಿ ಇಲ್ಲಿನ ಅಧಿಕಾರಿಗಳು ಹಾಗೂ ವ್ಯಾಪಾರಿಗಳಿಗೆ ಇದೆ. ಹೀಗಾಗಿ ಹಲವು ವ್ಯಾಪಾರಿಗಳು ಇದನ್ನು ವಿರೋಧಿಸಿದರೂ ಹಣ್ಣು ಹಾಗೂ ಬಿಡಿಗಾಸಿನ ಆಸೆಗೆ ಈ ಮಕ್ಕಳು ಬಲವಂತಕ್ಕೆ ಕೆಲಸ ಮಾಡುತ್ತಾರೆ ಎಂದು ಸಗಟು ವ್ಯಾಪಾರಿಗಳು, ಏಜೆಂಟರು ಹೇಳುತ್ತಾರೆ.

ಮತ್ತೊಂದೆಡೆ ಮಕ್ಕಳ ಹಕ್ಕುಗಳ ರಕ್ಷಣೆಗಾಗಿ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಇಲಾಖೆ, ಕಾರ್ಮಿಕರ ಇಲಾಖೆ, ಕಂದಾಯ, ಪೊಲೀಸ್‌ ಸೇರಿದಂತೆ ಹಲವು ಇಲಾಖೆಗಳಲ್ಲಿ ಇಂಥ ಮಕ್ಕಳ ಸಮೀಕ್ಷೆ, ರಕ್ಷಣೆ-ಸಂರಕ್ಷಣೆಗಾಗಿ ಮಕ್ಕಳ ಹಕ್ಕುಗಳ ರಕ್ಷಣಾ ಸಮಿತಿ, ಮಕ್ಕಳ ರಕ್ಷಣಾ ಸಮಿತಿ, ಮಕ್ಕಳ ಕಲ್ಯಾಣ ಸಮಿತಿ ಮಾತ್ರವಲ್ಲ, ಬಾಲ ನ್ಯಾಯ ಮಂಡಳಿಯೂ ಇದೆ. ಸರ್ಕಾರೇತರ ಹಲವು ಸಂಸ್ಥೆಗಳು ಮಕ್ಕಳ ಹೆಸರಿನಲ್ಲೇ ಕೆಲಸ ಮಾಡುತ್ತಿವೆ.

ಸಮನ್ವಯ-ಇಚ್ಛಾಶಕ್ತಿ ಕೊರತೆ: ಹೀಗೇಕೆ ಎಂದು ಯಾವುದೇ ಇಲಾಖೆ ಅಧಿಕಾರಿ-ಸಿಬ್ಬಂದಿ ಮಾತನಾಡಿಸಿದರೆ ಪ್ರತಿಯೊಬ್ಬರೂ ತಮ್ಮ ವ್ಯಾಪ್ತಿ, ಇತಿ-ಮಿತಿ ಅಂತಲೇ ಹೇಳುತ್ತ ಪರಸ್ಪರ ಒಬ್ಬರ ಮೇಲೊಬ್ಬರು ಹೊಣೆಗಾರಿಕೆ ಜಾರಿಸಿ ಕೈತೊಳೆದುಕೊಳ್ಳುತ್ತಿದ್ದಾರೆ. ಮಕ್ಕಳ ಭವಿಷ್ಯ ರೂಪಿಸುವ ಹೆಸರಿನಲ್ಲಿ ಕೆಲಸ ಮಾಡುವ ಇಲಾಖೆಗಳ ಅಧಿಕಾರಿ-ಸಿಬ್ಬಂದಿ ಹಾಗೂ ಸರ್ಕಾರೇತರ ಸಂಸ್ಥೆಗಳ ಮಧ್ಯೆ ಪರಸ್ಪರ ಸಮನ್ವಯವೂ ಇಲ್ಲ. ಎಲ್ಲಕ್ಕಿಂತ ಹೆಚ್ಚಾಗಿ ಯಾರಿಗೂ ಇಚ್ಛಾಶಕ್ತಿ ಇಲ್ಲದಿರುವುದು ಸ್ಪಷ್ಟವಾಗುತ್ತಿದೆ.

ಇಂಥ ಮಕ್ಕಳ ರಕ್ಷಣೆ ಹಾಗೂ ಪುನರ್ವಸತಿ ಕೆಲಸಕ್ಕಾಗಿಯೇ ಸರ್ಕಾರ ಹಲವು ಅಧಿಕಾರಿ-ಸಿಬ್ಬಂದಿ ನೇಮಿಸಿ ಕೋಟಿ ಕೋಟಿ ರೂ. ಖರ್ಚು ಮಾಡುತ್ತಿದೆ. ಆದರೆ ಇಂಥ ಯಾವ ಇಲಾಖೆ-ಅಧಿಕಾರಿ-ಸರ್ಕಾರೇತರ ಸಂಸ್ಥೆ ಹೀಗೆ ಯಾರೊಬ್ಬರೂ ನಗರದ ಹೃದಯ ಭಾಗದಲ್ಲಿರುವ ಈ ಬಾಲ ಕಾರ್ಮಿಕರು ಕಣ್ಣು ಹಾಯಿಸಿಲ್ಲ ಎಂಬುದು ಅಚ್ಚರಿ ಮೂಡಿಸುತ್ತಿದೆ. ಇನ್ನೂ ಅಚ್ಚರಿ ಹಾಗೂ ಗಮನೀಯ ಅಂಶ ಎಂದರೆ ಈ ಮಕ್ಕಳು ಕೆಲಸ ಮಾಡುವ ಆವರಣದಲ್ಲೇ ಪೊಲೀಸ್‌ ಠಾಣೆಯೂ ಇರುವುದು.

ಇನ್ನಾದರೂ ಈ ಮಕ್ಕಳ ಸಂರಕ್ಷಣೆ ಮಾಡುವ ಜೊತೆಗೆ ಅವರ ಶಿಕ್ಷಣ ಹಾಗೂ ಸಮಾಜದ ಮುಕ್ತ ವಾಹಿನಿಯಲ್ಲಿ ಗೌರವಯುತವಾಗಿ ಬದುಕುವುದಕ್ಕೆ ದಾರಿ ಮಾಡಿಕೊಡಬೇಕಿದೆ. ಇದಕ್ಕಾಗಿ ಜಿಲ್ಲಾಡಳಿತ ಮಕ್ಕಳ ಹಕ್ಕುಗಳ ವಿಷಯದಲ್ಲಿ ಕೆಲಸ ಮಾಡಲು ಸಮನ್ವಯ ಸಾಧಿಸುವ ಮೂಲಕ ಸರ್ಕಾರಿ ಲೆಕ್ಕದಲ್ಲಿ ಮಕ್ಕಳ ಸಂರಕ್ಷಣೆ ಸಾಧನೆ ಮಾಡಿರುವ ಕೆಲಸಕ್ಕೆ ಕಡಿವಾಣ ಹಾಕಬೇಕಿದೆ.

ಜಿ.ಎಸ್‌. ಕಮತರ

ಟಾಪ್ ನ್ಯೂಸ್

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Chitradurga: ಹೃದಯಾಘಾತದಿಂದ ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಮೃತ್ಯು…

Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

LS Polls: ರಾಜ್ಯದಲ್ಲಿ ಕಾಂಗ್ರೆಸ್‌ ವಿರೋಧಿ ಅಲೆ: ರಾಘವೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್‌ ಮೆಟ್ಟಿಲೇರಿದ ಪ್ರಕರಣ, ಏನಿದು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.