ನೀರು ರೇಷನಿಂಗ್‌; ಎರಡು ದಿನಗಳೊಳಗೆ ಅಂತಿಮ ತೀರ್ಮಾನ: ಸಚಿವ ಖಾದರ್‌

ತುಂಬೆ ವೆಂಟೆಡ್‌ ಡ್ಯಾಂಗೆ ಸಚಿವರ ತಂಡ ಭೇಟಿ; ಪರಿಶೀಲನೆ

Team Udayavani, Apr 29, 2019, 11:15 AM IST

29-April-7

ತುಂಬೆ ವೆಂಟೆಡ್‌ ಡ್ಯಾಂಗೆ ಸಚಿವ ಯು.ಟಿ. ಖಾದರ್‌ ನೇತೃತ್ವದ ತಂಡ ರವಿವಾರ ಭೇಟಿ ನೀಡಿ ಪರಿಶೀಲಿಸಿತು.

ಮಹಾನಗರ: ನಗರದಲ್ಲಿ ಸದ್ಯಕ್ಕೆ ಕುಡಿಯುವ ನೀರಿನ ಸಮಸ್ಯೆ ಇಲ್ಲ. ಆದರೂ ಮುಂದಿನ ಎರಡು ದಿನಗಳ ತುಂಬೆಯ ಒಳಹರಿವು ಗಮನಿಸಿಕೊಂಡು, ಮಳೆಯ ಸಾಧ್ಯತೆಯನ್ನು ಪರಾಮರ್ಶಿಸಿ ರೇಷನಿಂಗ್‌ ಕುರಿತಂತೆ ಅಂತಿಮ ತೀರ್ಮಾನ ಕೈಗೊಳ್ಳಲಾಗುವುದು ಎಂದು ದ.ಕ. ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್‌ ಹೇಳಿದರು.

ನಗರಕ್ಕೆ ಕುಡಿಯುವ ನೀರು ಪೂರೈಕೆ ಯಲ್ಲಿ ಎದುರಾಗಿರುವ ಸಮಸ್ಯೆಗಳ ಹಿನ್ನೆಲೆಯಲ್ಲಿ, ರವಿವಾರ ತುಂಬೆ ವೆಂಟೆಡ್‌ ಡ್ಯಾಂಗೆ ಭೇಟಿ ನೀಡಿ ಅಧಿಕಾರಿಗಳ ಜತೆಗೆ ಪರಿಶೀಲಿಸಿದ ಬಳಿಕ ಅವರು ಸುದ್ದಿಗಾರರ ಜತೆಗೆ ಮಾತನಾಡಿದರು.

ಜಿಲ್ಲಾಡಳಿತ, ಮನಪಾದ ಸದ್ಯದ ನಿಯಮ ಪ್ರಕಾರ ಪಾಲಿಕೆ ರೇಷನಿಂಗ್‌ ಮೇ 1ರಿಂದ ಆರಂಭವಾಗುತ್ತದೆ. ಈ ಹಿನ್ನೆಲೆಯಲ್ಲಿ ಸ್ಥಳೀಯ ಇಬ್ಬರು ಶಾಸಕರ ಅಭಿಪ್ರಾಯ ಪಡೆದುಕೊಂಡು, ಮಾಜಿ ಶಾಸಕರು ಸಹಿತ ಜನಪ್ರತಿನಿಧಿಗಳಿಂದ ಮಾಹಿತಿ ಪಡೆದು, ಅಧಿಕಾರಿಗಳ ವಿವರಗಳೊಂದಿಗೆ ಜಿಲ್ಲಾಡಳಿತದ ಜತೆಗೆ ಚರ್ಚಿಸಿ ಮುಂದಿನ ಎರಡು ದಿನದೊಳಗೆ ಮುಂದಿನ ಕ್ರಮದ ಬಗ್ಗೆ ನಿರ್ಧರಿಸಲಾಗುವುದು ಎಂದರು.

ಬಾವಿಗಳ ಸ್ವಚ್ಛತೆಗೆ ಕ್ರಮ
ಮುಂಜಾಗೃತ ಕ್ರಮವಾಗಿ ಮನಪಾ ವ್ಯಾಪ್ತಿಯ 48 ಸರಕಾರಿ ಬಾವಿ, ಸಾರ್ವ ಜನಿಕ ಬಾವಿಗಳನ್ನು ಸ್ವಚ್ಛಗೊಳಿಸಿ ಬಳಕೆಗೆ ಕ್ರಮ ವಹಿಸಲಾಗುತ್ತಿದೆ. ಪಾಲಿಕೆ ವ್ಯಾಪ್ತಿಯ ಎತ್ತರ ಪ್ರದೇಶಗಳಿಗೆ ನೀರಿನ ಪೂರೈಕೆಗೆ ಅಡಚಣೆಯಾದಲ್ಲಿ ಕುಡಿಯುವ ನೀರು ಒದಗಿಸಲು ಒಟ್ಟು 8 ಟ್ಯಾಂಕರ್‌ಗಳನ್ನು ಖಾಸಗಿಯವರಿಂದ ಬಾಡಿಗೆ ಆಧಾರದಲ್ಲಿ ಪಡೆಯಲು ಕ್ರಮ ವಹಿಸಲಾಗಿದೆ.

ಜತೆಗೆ ಕೊಳವೆಬಾವಿಗಳನ್ನು ಸುಸ್ಥಿತಿಯಲ್ಲಿಡಲು ಸೂಚಿಸಲಾಗಿದ್ದು, ಪ್ಲಷಿಂಗ್‌ ಮಾಡಲು ಕ್ರಮ ವಹಿಸಲಾಗಿದೆ ಎಂದರು.

ಮನಪಾದಿಂದ ಉಳ್ಳಾಲ ಪುರಸಭೆಗೆ 3 ಎಂಎಲ್ಡಿ, ಮೂಲ್ಕಿ ಪುರಸಭೆಗೆ 2 ಎಂಎಲ್ಡಿ ನೀರನ್ನು ಪೂರೈಕೆ ಮಾಡುವ ಬಗ್ಗೆ ಎಂಓಯು ಮಾಡಲಾಗಿದ್ದು, ನೀರಿನ ಲಭ್ಯತೆಯನ್ನು ಅನುಸರಿಸಿ ಪ್ರಸ್ತುತ ಉಳ್ಳಾಲ ಪುರಸಭೆಗೆ 1.6 ಎಂಎಲ್ಡಿ ಹಾಗೂ ಮೂಲ್ಕಿ ಪುರಸಭೆಗೆ 1 ಎಂಎಲ್ಡಿ ನೀರನ್ನು ಪೂರೈಕೆ ಮಾಡಲಾಗುತ್ತಿದೆ ಎಂದರು.

ಮಂಗಳೂರು ತಾಲೂಕು ಬರಪೀಡಿತ ಎಂದು ಘೋಷಣೆಯಾಗಿದ್ದರೂ ನಗರವ್ಯಾಪ್ತಿಯಲ್ಲಿ 5 ವರ್ಷಗಳಲ್ಲಿ ನೀರಿನ ಯಾವುದೇ ಸಮಸ್ಯೆ ಇಲ್ಲದೆ ಸರಾಗವಾಗಿ ನೀರು ನೀಡಿರುವ ಪಾಲಿಕೆಯ ಆಡಳಿತ ಅವಧಿ ಯಶಸ್ವಿ ಕಾರ್ಯನಿರ್ವಹಿಸಿದೆ ಎಂದರು.

7 ಮೀ.ನೀರು ಸಂಗ್ರಹದ ಗುರಿ
ಸದ್ಯ ತುಂಬೆ ವೆಂಟೆಡ್‌ ಡ್ಯಾಂನಲ್ಲಿ 6 ಮೀಟರ್‌ ನೀರು ನಿಲುಗಡೆಗೆ ಮಾತ್ರ ಅವಕಾಶವಿದೆ. ಆದರೆ 7 ಮೀಟರ್‌ ನೀರು ನಿಲ್ಲಿಸಲು ಸಾಧ್ಯತೆಗಳಿವೆ. ಹೀಗಾಗಿ ಸಮೀಪದಲ್ಲಿ ಕೆಲವು ಕಡೆಗಳಲ್ಲಿ ಭೂಮಿ ಮುಳುಗಡೆಯಾಗುವ ಬಗ್ಗೆ ಮಾಹಿತಿಯಿದೆ. ಇದಕ್ಕಾಗಿ ಸಂಬಂಧಪಟ್ಟ ರೈತರ ಜತೆಗೆ ಮಾತುಕತೆ ನಡೆಸುವಂತೆ ಜಿಲ್ಲಾಡಳಿತಕ್ಕೆ ಈ ಹಿಂದೆಯೇ ತಿಳಿಸಲಾಗಿತ್ತು. ಯಾರಿಗೂ ತೊಂದರೆಯಾಗದಂತೆ ಅತ್ಯಂತ ಎಚ್ಚರಿಕೆಯಿಂದ ಈ ಕಾರ್ಯ ನಡೆಯಲಿದೆ ಎಂದು ಸಚಿವ ಖಾದರ್‌ ಹೇಳಿದರು.

ವಿ.ಪರಿಷತ್‌ ಸದಸ್ಯ ಐವನ್‌ ಡಿ’ಸೋಜಾ, ಮಾಜಿ ಶಾಸಕ ಜೆ.ಆರ್‌.ಲೋಬೋ, ಮನಪಾ ಮಾಜಿ ಮೇಯರ್‌ಗಳಾದ ಎಂ. ಶಶಿಧರ ಹೆಗ್ಡೆ, ಭಾಸ್ಕರ್‌ ಕೆ, ಮಾಜಿ ಸದಸ್ಯರಾದ ನವೀನ್‌ ಡಿ’ಸೋಜಾ, ಅಬ್ದುಲ್ ರವೂಫ್‌, ದೀಪಕ್‌ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

ನೀರು ಮುಂದಿನ 28 ದಿನಕ್ಕೆ ಮಾತ್ರ!
ತುಂಬೆ ವೆಂಟೆಡ್‌ ಡ್ಯಾಂನಲ್ಲಿ 4.90 ಮೀ. (7.30 ಎಂ.ಸಿ.ಎಂ)ನಷ್ಟು ನೀರು ಸಂಗ್ರಹವಾಗಿದ್ದು ,ನಿರಂತರ ನೀರು ಪೂರೈಕೆ ಮಾಡಿದರೆ ಮುಂದಿನ 28 ದಿನಗಳಿಗೆ ಸಾಕಾಗುತ್ತದೆ. ಒಂದು ವೇಳೆ ಆ ವೇಳೆಗಾಗುವಾಗ ಮಳೆ ಬಾರದಿದ್ದರೆ ಸಮಸ್ಯೆ ಆಗಬಹುದು ಎಂಬ ಕಾರಣಕ್ಕಾಗಿ ರೇಷನಿಂಗ್‌ ಮಾಡಿ ನೀರು ಸಂಗ್ರಹಕ್ಕೆ ಉದ್ದೇಶಿಸಲಾಗಿದೆ. ಹೀಗಾಗಿ, ಒಂದು ವೇಳೆ ರೇಷನಿಂಗ್‌ ರೀತಿಯಲ್ಲಿ (4 ದಿನ ನೀರು-2 ದಿನ ಸ್ಥಗಿತ) ಇದೇ ನೀರನ್ನು ನೀಡುವುದಾದರೆ ಜೂನ್‌ 15ರ ವರೆಗೆ ಸುಧಾರಿಸಬಹುದು. ಸದ್ಯ ಎಎಂಆರ್‌ ಡ್ಯಾಂನಲ್ಲಿ ನೀರಿನ ಮಟ್ಟ ಕಡಿಮೆ ಇದ್ದು ಬಳಕೆಗೆ ಲಭ್ಯವಿಲ್ಲ ಎಂದು ಮನಪಾ ಅಧಿಕಾರಿಗಳು ತಿಳಿಸಿದರು.

ಪರ್ಯಾಯ ನೀರಿಗಾಗಿ ಹರೇಕಳ-ಅಡ್ಯಾರ್‌ ಡ್ಯಾಂ
ಉಳ್ಳಾಲ ಸಹಿತ ವಿವಿಧ ಭಾಗಗಳಿಗೆ ಕುಡಿಯುವ ನೀರು ಒದಗಿಸುವ ನಿಟ್ಟಿನಲ್ಲಿ ಆಯೋಜಿಸಲಾಗಿರುವ ಹರೇಕಳ-ಅಡ್ಯಾರ್‌ ಕಿಂಡಿ ಅಣೆಕಟ್ಟು ಕಾಮಗಾರಿಗೆ ಈಗಾಗಲೇ ಒಪ್ಪಿಗೆ ದೊರೆತು ಟೆಂಡರ್‌ ಹಂತದಲ್ಲಿದೆ. ತುಂಬೆ ಡ್ಯಾಂನಿಂದ ಈ ಡ್ಯಾಂಗೆ ಸುಮಾರು 3 ಕಿ.ಮೀ. ಅಂತರವಿರಲಿದೆ. 4 ಮೀಟರ್‌ ಎತ್ತರದಲ್ಲಿ ನಿರ್ಮಿಸುವ ಹೊಸ ಡ್ಯಾಂನಲ್ಲಿ 3 ಮೀಟರ್‌ ನೀರು ನಿಲುಗಡೆಗೆ ಉದ್ದೇಶಿಸಲಾಗಿದೆ. ಜತೆಗೆ 8 ಮೀ. ವಿಸ್ತೀರ್ಣದ ರಸ್ತೆ ನಿರ್ಮಾಣಕ್ಕೂ ಇಲ್ಲಿ ಉದ್ದೇಶಿಸಲಾಗಿದ್ದು, ಇದರಲ್ಲಿ 1 ಮೀ. ಪಾದಚಾರಿಗಳಿಗೆ ಮೀಸಲಾಗಿರುತ್ತದೆ. ಇದು ಕೈಗೂಡಿದರೆ ಸಿಹಿನೀರಿನ ಇನ್ನೊಂದು ಡ್ಯಾಂ ನಗರ ವ್ಯಾಪ್ತಿಯ ಹತ್ತಿರದಲ್ಲಿ ಮತ್ತೂಂದು ನಿರ್ಮಾಣ ವಾದಂತಾಗುತ್ತದೆ ಎಂದು ಸಚಿವ ಖಾದರ್‌ ಅಭಿಪ್ರಾಯಪಟ್ಟರು.

ಟಾಪ್ ನ್ಯೂಸ್

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

ನೀತಿ ಸಂಹಿತೆ ಉಲ್ಲಂಘನೆ: ಏಪ್ರಿಲ್ 29ರೊಳಗೆ ಉತ್ತರ ನೀಡಲು ಮೋದಿ, ರಾಹುಲ್‌ಗೆ ಸೂಚನೆ

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

11-belthangady

LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

14-fusion

Rural Life: ಗ್ರಾಮೀಣ ಬದುಕಿನ ಮೆಲುಕು

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ

13-uv-fusion

MOTHER: ತಾಯಿಗಿಂತ ಮಿಗಿಲಾದ ದೇವರಿಲ್ಲ

ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ

12–uv-fusion

Village Life: ಅಪರೂಪವೆನಿಸುತ್ತಿರುವ ಹಳ್ಳಿಗಾಡಿನ ಜೀವನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.