ರಾಷ್ಟ್ರೀಯ ಹೆದ್ದಾರಿಯಾಗುವುದು ಯಾವಾಗ ?
ವಿಟ್ಲ-ಅಡ್ಯನಡ್ಕ ಅಂತಾರಾಜ್ಯ ಹೆದ್ದಾರಿ ವಿಸ್ತರಣೆಗೆ ಬೇಡಿಕೆ
Team Udayavani, May 18, 2019, 12:44 PM IST
ಅಪಘಾತ ವಲಯ ಎಂದು ಇಲಾಖೆ ಹಾಕಿರುವ ಫಲಕ.
ವಿಟ್ಲ: ಅನೇಕ ವಾಹನ ಗಳು ದಿನನಿತ್ಯ ಸಂಚರಿಸುವ ಕಲ್ಲಡ್ಕ – ಕಾಂಞಂಗಾಡು ಅಂತಾರಾಜ್ಯ ಹೆದ್ದಾರಿಯ ಕೇರಳದ ಭಾಗದಲ್ಲಿ ರಸ್ತೆ ವಿಸ್ತರಣೆ ಕಾಮಗಾರಿ ನಡೆಯುತ್ತಿದೆ. ಕಳೆದ ಎಷ್ಟೋ ವರ್ಷಗಳಿಂದ ಈ ರಸ್ತೆಯಲ್ಲಿ ಸಂಚಾರಕ್ಕೆ ಅಡ್ಡಿಯಾಗಿದ್ದು, ಇದೀಗ ನೆಮ್ಮದಿಯ ನಿಟ್ಟುಸಿರು ಬಿಡುವಂತಾಗಿದೆ. ಆದರೆ ವಿಟ್ಲ ಮತ್ತು ಕೇರಳದ ಗಡಿಭಾಗವಾಗಿರುವ ಅಡ್ಯನಡ್ಕ ವರೆಗಿನ ವ್ಯಾಪ್ತಿಯಲ್ಲಿ ರಸ್ತೆ ಕಿರಿದಾಗಿದ್ದು, ವಿಸ್ತರಣೆ ಅಗತ್ಯವಿದೆ. ಈ ಅಂತಾರಾಜ್ಯ ಹೆದ್ದಾರಿಯು ರಾಷ್ಟ್ರೀಯ ಹೆದ್ದಾರಿಯಾಗುವುದು ಯಾವಾಗ ? ಎಂದು ನಾಗರಿಕರು ಪ್ರಶ್ನಿಸುತ್ತಿದ್ದಾರೆ.
ಸುರಕ್ಷಿತವಲ್ಲ
ಕಲ್ಲಡ್ಕ – ಕಾಂಞಂಗಾಡು ಅಂತಾ ರಾಜ್ಯ ಹೆದ್ದಾರಿಯು ರಾಷ್ಟ್ರೀಯ ಹೆದ್ದಾರಿಯಾಗಲಿದೆ ಎಂಬ ಮಾತು 6 ತಿಂಗಳ ಹಿಂದೆಯೇ ಕೇಳಿಬರುತ್ತಿದೆ. ಕೇರಳದಲ್ಲಿ ಕಾಮಗಾರಿ ಆರಂಭವಾ ಗಿದೆ ಎಂದೂ ಮಾಹಿತಿ ಬಂದಿತ್ತು. ಆದರೆ ಕರ್ನಾಟಕದಲ್ಲಿ ಈ ಬಗ್ಗೆ ಸರ್ವೆಯನ್ನೂ ನಡೆಸಲಾಗಲಿಲ್ಲ ವೆಂದು ಸಂಬಂಧಪಟ್ಟವರು ತಿಳಿಸಿ ದ್ದರು. ಕಲ್ಲಡ್ಕ – ಕಾಂಞಂಗಾಡು ಅಂತಾರಾಜ್ಯ ಹೆದ್ದಾರಿಯು ಬೆಂಗಳೂರು- ಕಾಸರಗೋಡು ಸಂಚರಿಸಲು ಅತ್ಯಂತ ಹತ್ತಿರವಾದ ಮಾರ್ಗವಾಗಿದೆ. ಸರಕು ಸಾಗಾಟಕ್ಕೆ ಈ ಮಾರ್ಗದಲ್ಲಿ ಅನೇಕ ಲಾರಿಗಳೂ ಸಂಚರಿಸುತ್ತವೆ. ಆದರೆ ರಸ್ತೆ ಸುಸಜ್ಜಿತವಾಗಿಲ್ಲ. ಘನ ಲಾರಿಗಳು ಸಂಚರಿಸಿದರೆ ಇತರ ವಾಹನಗಳ ಸಂಚಾರಕ್ಕೆ ಬಹಳಷ್ಟು ಸಮಸ್ಯೆಯಾಗುತ್ತದೆ. ಅಗಲ ಕಿರಿದಾಗಿರುವುದರಿಂದ ರಸ್ತೆ ಸುರಕ್ಷಿತವಾಗಿಲ್ಲ.
20 ಕಿ.ಮೀ. ದೂರ ಅಭಿವೃದ್ಧಿಯಾಗಬೇಕು
ಕೇರಳದ ಸಾರಡ್ಕ ಗಡಿಯಿಂದ ಅಡ್ಕಸ್ಥಳ ಸೇತುವೆ ತನಕ ರಸ್ತೆ ವಿಸ್ತರಣೆ ಕಾಮಗಾರಿ ಆರಂಭವಾಗಿದ್ದು, ಬದಿಯಡ್ಕ ವರೆಗೆ ಅಲ್ಲಲ್ಲಿ ವಿಸ್ತರಣೆ ಕಾಮಗಾರಿ ನಡೆಯುತ್ತಿದೆ. ಆರಂಭ ಹಾಗೂ ಕೊನೆಯಲ್ಲಿ ಕಾಮಗಾರಿ ಪೂರ್ತಿಯಾಗಿ ರಸ್ತೆ ಅಗಲವಾಗಿದ್ದರೂ ಮಧ್ಯೆ ಸುಮಾರು 20 ಕಿ.ಮೀ. ದೂರ ರಸ್ತೆ ಕಿರಿದಾಗಿ ಉಳಿದಿದೆ. ಈ ಭಾಗವು ಅಪಘಾತ ಆಹ್ವಾನಿಸುತ್ತಿದೆ. ರಸ್ತೆ ಕುಸಿಯುವ ಭೀತಿಸಾರಡ್ಕ ಗಡಿಯಲ್ಲಿ ತೊರೆಯ ಬದಿಯಲ್ಲಿ ಹೆದ್ದಾರಿ ಹಾದು ಹೋಗುತ್ತಿದ್ದು, ಕೊರೆತಕ್ಕೊಳಗಾಗಿದೆ. ಘನ ಲಾರಿಗಳ ಸಂಚಾರ ಸಂದರ್ಭ ರಸ್ತೆಯ ಭೂಭಾಗ ಕುಸಿತಕೊಳ್ಳಗಾಗುವ ಭೀತಿಯಿದೆ. ಇದೇ ರೀತಿ ಸಾರಡ್ಕ ಚೆಕ್ಪೋಸ್ಟ್ ಸಮೀಪವೂ ಕುಸಿತ ಭೀತಿ ಇದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Delhi CM Arvind Kejriwalಗೆ ಮತ್ತೆ 4 ದಿನ ಇ.ಡಿ. ಕಸ್ಟಡಿ
Belagavi: ಕಣಕುಂಬಿ ಚೆಕ್ ಪೋಸ್ಟ್’ನಲ್ಲಿ ದಾಖಲೆಯಿಲ್ಲದ 7.98 ಲಕ್ಷ ರೂ ವಶಕ್ಕೆ
Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ
Sandalwood: ಸ್ಟಾರ್ ಸಿನ್ಮಾಗಳ ರಿಲೀಸ್ ಟೆನ್ಶನ್: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ
Editorial: ಐಟಿ ಕಂಪೆನಿಗಳಿಗೆ ಆಹ್ವಾನ: ಕೇರಳದ ಬಾಲಿಶ ನಡೆ