ಹತ್ತಿ ಖರೀದಿ ತೂಕದಲ್ಲಿ ವಂಚನೆ

ತೂಕದ ಯಂತ್ರಕ್ಕೆ ರಿಮೋಟ್‌ ಬಳಕೆಶೇ.20ರಷ್ಟು ತೂಕದಲ್ಲಿ ವ್ಯತ್ಯಾಸಲಾರಿ ತಡೆದು ಪ್ರತಿಭಟನೆ

Team Udayavani, Dec 28, 2019, 12:45 PM IST

28-December-21

ವಾಡಿ: ರೈತರಿಂದ ಹತ್ತಿ ಖರೀದಿಸಲು ಬಂದ ದಲ್ಲಾಳಿಯೊಬ್ಬ ತೂಕದಲ್ಲಿ ಮೋಸ ಮಾಡುತ್ತಿದ್ದ ಘಟನೆ ಬೆಳಕಿಗೆ ಬಂದಿದ್ದು, ಮೋಸ ಹೋದ ರೈತರು ದಲ್ಲಾಳಿಯ ಹತ್ತಿ ಲಾರಿ ತಡೆದು ಆಕ್ರೋಶ ವ್ಯಕ್ತಪಡಿಸಿದ ಪ್ರಸಂಗ ಅಣ್ಣಿಕೇರಾ ಗ್ರಾಮದಲ್ಲಿ ನಡೆದಿದೆ.

ಲಾಡ್ಲಾಪುರ ಗ್ರಾಮ ಸಮೀಪದ ಅಣ್ಣಿಕೇರಾ ಗ್ರಾಮಕ್ಕೆ ಕಳೆದ ಎರಡು ತಿಂಗಳಿಂದ ಹತ್ತಿ ಖರೀದಿಸಲು ರೈತರ ಬಳಿ ಬರುತ್ತಿರುವ ದಲ್ಲಾಳಿಗಳು, ಸುಮಾರು 3000 ಕ್ವಿಂಟಲ್‌ ಹತ್ತಿಯನ್ನು ತೂಕದಲ್ಲಿ ಮೋಸ ಮಾಡಿ ಖರೀದಿಸಿದ್ದಾರೆ. ಎಲೆಕ್ಟ್ರಾನಿಕ್‌ ತೂಕದ ಯಂತ್ರವನ್ನು ರಿಮೋಟ್‌ ಕಂಟ್ರೋಲ್‌ನಿಂದ ನಿಯಂತ್ರಿಸುವ ತಂತ್ರಗಾರಿಕೆ ಕಲೆ ದಲ್ಲಾಳಿಗಳಿಗೆ ತಿಳಿದಿದ್ದು, ಸರಳವಾಗಿ ರೈತರನ್ನು ವಂಚಿಸಿದ್ದಾರೆ.

ದಲ್ಲಾಳಿ ಬರುವ ಮುಂಚೆ ಹತ್ತಿ ತೂಕ ಮಾಡಿಟ್ಟುಕೊಂಡಿದ್ದ ರೈತರು, ದಲ್ಲಾಳಿಯ ಯಂತ್ರದ ತೂಕದಲ್ಲಿ ಶೇ.20 ರಷ್ಟು ವ್ಯತ್ಯಾಸ ಬಂದಿದ್ದನ್ನು ಗಮನಿಸಿದರು. ಇದು ರೈತರ ಅನುಮಾನಕ್ಕೆ ಕಾರಣವಾಯಿತು. ದಲ್ಲಾಳಿಯಿಂದ ಮೋಸಕ್ಕೊಳಗಾಗಿದ್ದು ಅರಿವಿಗೆ ಬಂದ ತಕ್ಷಣ ಹತ್ತಿ ಲಾರಿಯನ್ನು ತಡೆದು ವಾಗ್ವಾದ ನಡೆಸಿದರು.

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಬಿದರಾಣಿ ಗ್ರಾಮದ ಶಿವರೆಡ್ಡಿಗೌಡ ಎನ್ನುವರು ಎರಡು ತಿಂಗಳಿಂದ ಹಣ್ಣಿಕೇರಾ ಹಾಗೂ ಸುತ್ತಲ ಗ್ರಾಮಗಳು, ತಾಂಡಾಗಳ ರೈತರಿಂದ ಹತ್ತಿ ಖರೀದಿಸುತ್ತಿದ್ದಾರೆ. ರೈತರು ಮಾಡಿಟ್ಟ ತೂಕಕ್ಕೂ ಮತ್ತು ದಲ್ಲಾಳಿಗಳು ಮಾಡುವ ತೂಕಕ್ಕೂ ಭಾರಿ ವ್ಯತ್ಯಾಸ ಕಂಡುಬಂದಿದೆ. ಹತ್ತಿಯನ್ನು ಹೊತ್ತು ಸಾಗುತ್ತಿದ್ದ ಲಾರಿಯನ್ನು ತಡೆದು ಪ್ರತಿಭಟನೆ ನಡೆಸಿದ್ದಾರೆ. ಈವರೆಗೂ 30ರಿಂದ 40 ಲಾರಿ ಹತ್ತಿ ಖರೀದಿಯಾಗಿದೆ. ಇದರಲ್ಲೂ ಸಾಕಷ್ಟು ಮೋಸವಾಗಿರುವುದು ಸ್ಪಷ್ಟವಾಗಿದೆ.

ಪ್ರಕರಣ ವಾಡಿ ಪೊಲೀಸ್‌ ಠಾಣೆ ಮೆಟ್ಟಿಲೇರಿದೆ. ದೂರು ಸ್ವೀಕರಿಸಿರುವ ಪಿಎಸ್‌ಐ ವಿಜಯಕುಮಾರ ಭಾವಗೆ ಆರೋಪಿ ದಲ್ಲಾಳಿ ಪತ್ತೆಗೆ ಮುಂದಾಗಿದ್ದಾರೆ. ಹತ್ತಿ ಖರೀದಿಸುವ ನೆಪದಲ್ಲಿ ದಲ್ಲಾಳಿಗಳು ರೈತರಿಗೆ ಭಾರಿ ಮೋಸ ಮಾಡುತ್ತಿದ್ದು, ನಾಲವಾರ ವಲಯದ ಹಲವು ಗ್ರಾಮಗಳಿಗೂ ಈ ಮೋಸಗಾರರು ಕಾಲಿಟ್ಟಿದ್ದಾರೆ. ಪೊಲೀಸರು ಈ ಜಾಲವನ್ನು ಭೇದಿಸಬೇಕು
ಎಂದು ರೈತರು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Gujarat Lok Sabha Constituency: ಗುಜರಾತ್‌ ಎಂಬ ಕೇಸರಿ ಕೋಟೆಗೆ ಲಗ್ಗೆ ಸಾಧ್ಯವೇ?

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

Israel – Iran: ಕ್ಷಿಪಣಿ ದಾಳಿಯ ಮೂಲಕ ಸೇಡು ತೀರಿಸಿಕೊಂಡ ಇಸ್ರೇಲ್; ಎಚ್ಚರಿಕೆ ನೀಡಿದ ಇರಾನ್

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ

Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯಿತಿ ಸಿದ್ದೇಶ್ವರ

Lok Sabha Election: ಮಠಾಧೀಶರ ಆಶೀರ್ವಾದ ಪಡೆದ ಬಿಜೆಪಿ ಅಭ್ಯರ್ಥಿ ಗಾಯತ್ರಿ ಸಿದ್ದೇಶ್ವರ

4-gadaga

Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್‌ಪಿ

3-gadaga

Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

O2

O2: ತೆರೆಗೆ ಬಂತು ಓ2; ಚಿತ್ರದ ಮೇಲೆ ಆಶಿಕಾ ನಿರೀಕ್ಷೆ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Bangalore south Lok Sabha Constituency:ಸುಶಿಕ್ಷಿತರ ಕ್ಷೇತ್ರದಲ್ಲಿ ಸೂರ್ಯ ಸೌಮ್ಯಾ ಕದನ

Stones Pelted: ಪಶ್ಚಿಮ ಬಂಗಾಳ: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Stones Pelted: ಮತದಾನದ ವೇಳೆ ಕಲ್ಲು ತೂರಾಟ… ಬಿಜೆಪಿ ನಾಯಕನಿಗೆ ಗಾಯ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

Gadag Incident; ದರೋಡೆಯ ಉದ್ದೇಶವಿಲ್ಲ; ಕೊಲೆ ಮಾಡಲೆಂದೆ ಬಂದಿದ್ದಾರೆ; ಐಜಿಪಿ ಹೇಳಿಕೆ

5-congress

Udupi-ಚಿಕ್ಕಮಗಳೂರಿನಲ್ಲಿ ಬಿಜೆಪಿಗರೂ ಜೆಪಿ-ಜೆಪಿ ಎನ್ನುತ್ತಿದ್ದಾರೆ: ನಿಕೇತ್‌ರಾಜ್‌ ಮೌರ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.