ಜಾಧವ ಗೆದ್ಮೇಲೆ ವರ್ಗಾವಣೆ ದಂಧೆ ಹೆಚ್ಚಳ

ಕಲ್ಯಾಣ ಕರ್ನಾಟಕ ಹೆಸರು ಬದಲಿಸಿದ್ದೇ ಸಾಧನೆಜನರ ಕಲ್ಯಾಣಕ್ಕಾಗಿ ಯಾವುದೇ ಯೋಜನೆಗಳಿಲ್ಲ

Team Udayavani, Oct 4, 2019, 11:03 AM IST

3-Sepctember-31

ವಾಡಿ: ಪತ್ರಿಕೆಗಳಿಗೆ ಫೋಜು ಕೊಡುವ ಉಮೇಶ ಜಾಧವ ಗೆದ್ದ ಮೇಲೆ ಜಿಲ್ಲೆಯಲ್ಲಿ ವರ್ಗಾವಣೆ ದಂಧೆ ಶುರುವಾಗಿದೆ ಎಂದು ಮಾಜಿ ಸಚಿವ, ಶಾಸಕ ಪ್ರಿಯಾಂಕ್‌ ಖರ್ಗೆ ಆರೋಪಿಸಿದರು.

ಕೆಬಿಜೆಎನ್‌ಎಲ್‌ ಯೋಜನೆಯ 10 ಲಕ್ಷ ರೂ. ಅನುದಾನದಡಿ ಚಾಮನೂರ ಗ್ರಾಮದ ಪ.ಜಾ ಬಡಾವಣೆಗೆ ಮಂಜೂರಾದ ಸಮುದಾಯ ಭವನ ಕಾಮಗಾರಿಗೆ ಅಡಿಗಲ್ಲು ನೆರವೇರಿಸಿ ಅವರು ಮಾತನಾಡಿದರು.

ವಿವಿಧ ಇಲಾಖೆಗಳ ಅಧಿಕಾರಿಗಳಿಗೆ ವರ್ಗಾವಣೆಗಾಗಿ ಒಂದೊಂದು ರೇಟ್‌ ನಿಗದಿ ಮಾಡಲಾಗಿದೆ. ಬಿಜೆಪಿಯ ಯಾವ ನಾಯಕರು ಎಲ್ಲೆಲ್ಲಿ ಏನೇನು ದಂಧೆ ನಡೆಸುತ್ತಿದ್ದಾರೆ ಎನ್ನುವುದು ಗೊತ್ತಾಗಿದೆ. ಇವರ ರೇಟ್‌ ಕಾರ್ಡ್‌ ಸಿದ್ಧಪಡಿಸುವ ಮೂಲಕ ರಾಜಕೀಯ ವೇದಿಕೆಗಳಲ್ಲಿ ಬಣ್ಣ ಬಯಲು ಮಾಡುತ್ತೇನೆ ಎಂದು ಬಿಜೆಪಿ ವಿರುದ್ಧ ಹರಿಹಾಯ್ದರು.

ಹೈದ್ರಾಬಾದ ಕರ್ನಾಟಕವನ್ನು “ಕಲ್ಯಾಣ ಕರ್ನಾಟಕ’ ಎಂದು ಹೆಸರು ಬದಲಿಸಿದ್ದೇ ಬಿಜೆಪಿ ಸಾಧನೆಯಾಗಿದೆ. ಈ ಭಾಗದ ಜನರ ಕಲ್ಯಾಣಕ್ಕಾಗಿ ಒಂದೂ ಹೊಸ ಯೋಜನೆಗಳು ಜಾರಿಯಾಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ವಿವಿಧೆಡೆ ಕಾಮಗಾರಿಗೆ ಚಾಲನೆ: ಶಾಂಪೂರಹಳ್ಳಿ ಗ್ರಾಮದಲ್ಲಿ 49.50 ಲಕ್ಷ ರೂ. ವೆಚ್ಚದ ಸಿಸಿ ರಸ್ತೆ ಮತ್ತು ಚರಂಡಿ ಕಾಮಗಾರಿ, ಲಾಡ್ಲಾಪುರ-ಅಳ್ಳೊಳ್ಳಿ ರಸ್ತೆ ಸುಧಾರಣೆಗೆ 1.87 ಕೋಟಿ ರೂ., ಹಳಕರ್ಟಿ ಗ್ರಾಪಂ ವ್ಯಾಪ್ತಿಯ ದೇವಜಿ ತಾಂಡಾದಲ್ಲಿ 49.50 ಲಕ್ಷ ರೂ. ವೆಚ್ಚದ ಸಿಸಿ ರಸ್ತೆ-ಚರಂಡಿ, ದೇವಾಪುರ ಗ್ರಾಮದಲ್ಲಿ 45 ಲಕ್ಷ ರೂ. ವೆಚ್ಚದ ಬೀದಿ ದೀಪ, ಶಾಲೆಗೆ ಶೌಚಾಲಯ ಹಾಗೂ ಸಿಸಿ ರಸ್ತೆ-ಚರಂಡಿ ಹಾಗೂ 8.75 ಲಕ್ಷ ರೂ. ಅನುದಾನದಲ್ಲಿ ಹಳಕರ್ಟಿ ಗ್ರಾಮದ ಉರ್ದು ಪ್ರಾಥಮಿಕ ಶಾಲೆ ಕೋಣೆಗಳ ನಿರ್ಮಾಣ ಸೇರಿದಂತೆ 3.89 ಕೋಟಿ ರೂ. ಅನುದಾನದ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ಪ್ರಿಯಾಂಕ್‌ ಖರ್ಗೆ ಅಡಿಗಲ್ಲು ನೆರವೇರಿಸಿದರು.

ಕೆಪಿಸಿಸಿ ಸದಸ್ಯ ಶ್ರೀನಿವಾಸ ಸಗರ, ಜಿ.ಪಂ ವಿರೋಧ ಪಕ್ಷದ ನಾಯಕ ಶಿವಾನಂದ ಪಾಟೀಲ, ಜಿ.ಪಂ ಸದಸ್ಯ ಶಿವುರುದ್ರ ಭೀಣಿ, ಚಿತ್ತಾಪುರ ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಭೀಮಣ್ಣ ಸಾಲಿ, ಗ್ರಾ.ಪಂ ಅಧ್ಯಕ್ಷೆ ವಿಮಲಾಬಾಯಿ ರಾಠೊಡ, ಉಪಾಧ್ಯಕ್ಷ ಶ್ರೀಮಂತ ಭಾವಿ, ಮುಖಂಡರಾದ ಶರಣಗೌಡ ಚಾಮನೂರ, ಟೋಪಣ್ಣ ಕೋಮಟೆ, ಅಬ್ದುಲ್‌ ಅಜೀಜ್‌ಸೇಠ, ಶಂಕ್ರಯ್ಯಸ್ವಾಮಿ ಮದರಿ, ಚಂದ್ರಸೇನ ಮೇನಗಾರ, ಸುಭಾಷ ಯಾಮೇರ, ಸೂರ್ಯಕಾಂತ ರದ್ದೇವಾಡಿ, ಇಂದ್ರಜೀತ ಸಿಂಗೆ, ಗುಂಡುಗೌಡ ಇಟಗಿ, ರಸೂಲಸಾಬ ಪಾಲ್ಗೊಂಡಿದ್ದರು. ಗ್ರಾಪಂ ಸದಸ್ಯ ಭಗವಾನ ಎಂಟಮನ್‌ ನಿರೂಪಿಸಿ, ವಂದಿಸಿದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

ಮುಂಬರುವ ಚುನಾವಣೆಗೆ ಯಾವುದೇ ಕಾರಣಕ್ಕೂ ಸ್ಪರ್ಧಿಸುವುದಿಲ್ಲ: ಎಂ. ವೈ. ಪಾಟೀಲ್

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.