ಕಬ್ಬಿಣ ಪೈಪ್‌ ರಿಪೇರಿಗೆ ಚಿನ್ನದ ಖರ್ಚು

ಒಂಭತ್ತು ತಿಂಗಳಲ್ಲಿ 7.28 ಕೋಟಿ ವೆಚ್ಚ ,ಕೇರ್‌ಸಿಟಿ ಅನುದಾನ ಲೂಟಿಗೆ ಆಕ್ರೋಶ

Team Udayavani, Nov 1, 2019, 10:55 AM IST

1-November-1

ವಾಡಿ: ಕುಡಿಯುವ ನೀರಿನ ಗೇಣುದ್ದ ಕಬ್ಬಿಣದ ಪೈಪ್‌ ದುರಸ್ತಿ, ಬೋರ್‌ವೆಲ್‌ ಯಂತ್ರ ರಿಪೇರಿ, ಜಾಯಿಂಟ್‌ ಬಿಚ್ಚಿದ ಪೈಪ್‌ ವೆಲ್ಡಿಂಗ್‌ ಕೆಲಸಕ್ಕೆ ಬೇಕಾಬಿಟ್ಟಿ ಖರ್ಚು ಬರೆಯಲಾಗಿದೆ. ಒಂದೇ ಕೆಲಸಕ್ಕೆ ವಿವಿಧ ಹೆಸರುಗಳಡಿ ಮೂರ್ನಾಲ್ಕು ಬೋಗಸ್‌ ಖರ್ಚು ದಾಖಲಿಸಲಾಗಿದೆ. ಸಾರ್ವಜನಿಕರ ಲಕ್ಷಾಂತರ ರೂ. ತೆರಿಗೆ ಹಣ ನೀರುಪಾಲು ಮಾಡಿದ್ದೀರಿ. ನೀರು ಸರಬರಾಜಿಗಾಗಿ ಚಿನ್ನದ ಪೈಪ್‌ ಅಳವಡಿಸಿದ್ದೀರಾ? ಎಂದು ಪುರಸಭೆ ವಿರೋಧ ಪಕ್ಷದ ನಾಯಕ ಬಿಜೆಪಿಯ ಪ್ರಕಾಶ ನಾಯಕ ಕಾಂಗ್ರೆಸ್‌ ಆಡಳಿತವನ್ನು ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡರು.

ಪುರಸಭೆ ಅಧ್ಯಕ್ಷೆ ಮೈನಾಬಾಯಿ ಗೋಪಾಲ ರಾಠೊಡ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಾಮಾನ್ಯ ಸಭೆಯಲ್ಲಿ 2019ನೇ ಸಾಲಿನ ಜನೆವರಿ-ಸೆಪ್ಟೆಂಬರ್‌ ತಿಂಗಳ ವರೆಗಿನ ಆದಾಯ-ಖರ್ಚು ಚರ್ಚೆ ವೇಳೆ ಈ ಪ್ರತಿರೋಧ ವ್ಯಕ್ತವಾಯಿತು.

ವಿವಿಧ ವಾರ್ಡ್‌ಗಳಲ್ಲಿ ನಡೆದ ಕುಡಿಯುವ ನೀರಿನ ಪೈಪ್‌ ದುರಸ್ತಿಗೆ ಮತ್ತು ಮೋಟಾರು ರಿಪೇರಿಗೆ ಅಗತ್ಯ ಬೆಲೆಗಿಂತ ನಾಲ್ಕುಪಟ್ಟು ಖರ್ಚು ದಾಖಲಿಸಿ ಕಾಂಗ್ರೆಸ್‌ ಆಡಳಿತ ಅವ್ಯವಹಾರ ನಡೆಸಿದೆ. 1.5 ಎಚ್‌ಪಿ ಮೋಟಾರ್‌ ರಿಪೇರಿಗೆ 18000 ರೂ., ವಾಲ್‌ ರಿಪೇರಿಗೆ 10,000 ರೂ., ನಳ ರಿಪೇರಿಗೆ 5000 ರೂ. ಹೀಗೆ ಸಾವಿರ ರೂ. ಖರ್ಚಿನ ಕೆಲಸಗಳಿಗೆ ಲಕ್ಷಾಂತರ ರೂ. ಬಿಲ್‌ ಬರೆದು ಕೇರ್‌ಸಿಟಿ ಅನುದಾನ ಲೂಟಿ ಮಾಡಿ, ಜನರಿಗೆ ಮೋಸ ಮಾಡಿದ್ದೀರಿ ಎಂದು ಅಧಿಕಾರಿಗಳ
ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಇಂದ್ರಾ ನಗರದ ಜನರಿಗೆ ಕಳೆದ 50 ವರ್ಷಗಳಿಂದ ಕುಡಿಯುವ ನೀರಿನ ಸೌಲಭ್ಯವಿಲ್ಲ. ಬೋರ್‌ ವೆಲ್‌ ಅಳವಡಿಸಲು ಒತ್ತಾಯಿಸಿದ ಬಳಿಕ ಮೂರು ಕಿ.ಮೀ ದೂರದ ಕಲ್ಲು ಗಣಿಯಲ್ಲಿ ಬೋರ್‌ವೆಲ್‌ ಹಾಕಲಾಗಿದೆ. ಬಡಾವಣೆ ವರೆಗೆ ಪೈಪ್‌ಲೈನ್‌ ಅಳವಡಿಸಿಲ್ಲ. ಜನರು ನೀರಿಗಾಗಿ ತತ್ತರಿಸುತ್ತಿದ್ದರೂ ಅಧಿಕಾರಿಗಳು ಮೌನವಾಗಿದ್ದೀರಿ. ಅಧ್ಯಕ್ಷರು ಮನೆಬಿಟ್ಟು ಹೊರಗೆ ಬರುತ್ತಿಲ್ಲ ಎಂದು ಕೈ ಸದಸ್ಯ ತಿಮ್ಮಯ್ಯ ಪವಾರ ತಮ್ಮದೇ ಆಡಳಿತದ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು.

ಕಳೆದ ಸಭೆಯಲ್ಲಿ ಪೌರಕಾರ್ಮಿಕರಿಗೆ ವೇತನ ಬಿಡುಗಡೆ ಮಾಡುವಂತೆ ಮತ್ತು ಗಾಂಧೀಜಿ ಪ್ರತಿಮೆ ಸ್ಥಾಪನೆಗಾಗಿ ಜಿಲ್ಲಾಧಿ ಕಾರಿಗೆ ಪತ್ರ ಬರೆದು ಅನುಮೋದನೆ ಪಡೆಯಲು ನಿರ್ಣಯ ಮಂಡಿಸಲಾಗಿತ್ತು. ಆದರೂ ನೀವು ನಿರ್ಲಕ್ಷ್ಯ ವಹಿಸಿದ್ದೀರಿ ಎಂದು ಸದಸ್ಯ ದೇವಿಂದ್ರ ಕರದಳ್ಳಿ
ಮುಖ್ಯಾ ಧಿಕಾರಿ ವಿರುದ್ಧ ದೂರಿದರು.

ವಿವಿಧ ಅಭಿವೃದ್ಧಿ ಕಾರ್ಯಗಳ ಕುರಿತು ಸದಸ್ಯ ಶರಣು ನಾಟೀಕಾರ, ಮರಗಪ್ಪ ಕಲಕುಟಗಿ, ಶೋಭಾ ಪವಾರ, ಸುಗಂಧಾ ಜೈಗಂಗಾ, ಅನಿತಾ ರಾಠೊಡ, ಅಫÕರಾಬೇಗಂ, ಸುಶೀಲಾಬಾಯಿ ಮೌಸಲಗಿ, ಗುಜ್ಜಾಬಾಯಿ ಸಿಂಗೆ, ಝರೀನಾಬೇಗಂ, ಪೃಥ್ವಿರಾಜ, ರಾಜೇಶ ಅಗರವಾಲ ಚರ್ಚೆ ನಡೆಸಿದರು.

ಉಪಾಧ್ಯಕ್ಷ ಮಲ್ಲಯ್ಯ ಗುತ್ತೇದಾರ, ಮುಖ್ಯಾಧಿಕಾರಿ ವಿಠ್ಠಲ ಹಾದಿಮನಿ, ಸಮುದಾಯ ಸಂಘಟನಾಧಿಕಾರಿ ಕಾಶೀನಾಥ ಧನ್ನಿ, ಕಿರಿಯ ಅಭಿಯಂತರರಾದ ಶಾಂತಪ್ಪ ಹೊಸೂರ, ರಾಜಕುಮಾರ ಅಕ್ಕಿ, ಹಿರಿಯ ಆರೋಗ್ಯ ನೈರ್ಮಲ್ಯ ನಿರೀಕ್ಷಕ ಶರಣಪ್ಪ ಮಡಿವಾಳ, ಕಂದಾಯ ಅಧಿ ಕಾರಿ ಎಂ. ಪಂಕಜಾ ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

BJP ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ, ನಾಳೆ ಕಾಂಗ್ರೆಸ್ ಸೇರ್ಪಡೆ

BJP ಯಿಂದ ನಿರ್ಲಕ್ಷ್ಯ… ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ ಕೆ.ಪಿ.ನಂಜುಂಡಿ

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Kollywood: ಚಿನ್ನದ ಅಡ್ಡೆಗೆ ʼಕೂಲಿʼಯಾಗಿ ಬಂದ ತಲೈವರ್; ಟೈಟಲ್‌ ಟೀಸರ್‌ ಔಟ್

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewewqewq

Kalaburagi; ಕಾರುಗಳ ಮುಖಾಮುಖಿ ಢಿಕ್ಕಿ: ಮಠಾಧೀಶ ವಿಧಿವಶ

yatnal

Lok Sabha elections ನಂತರ ರಾಜ್ಯ ವಿಧಾನಸಭೆ ವಿಸರ್ಜನೆಯಾದರೂ ಆಶ್ಚರ್ಯವಿಲ್ಲ: ಯತ್ನಾಳ್

1-qweqeqw

Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ‌ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

Kalaburagi; ಬಿಜೆಪಿ ತೊರೆದು ಮರಳಿ ಕಾಂಗ್ರೆಸ್ ಸೇರಿದ ಮಾಲೀಕಯ್ಯ ಗುತ್ತೇದಾರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

5

Crime: ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆಗೈದು ಪೊಲೀಸರಿಗೆ ಶರಣಾದ ವ್ಯಕ್ತಿ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

Lok Sabha Election: ಕಾಂಗ್ರೆಸ್‌ನಿಂದ ಜನರಿಗೆ ಸುಳ್ಳಿನ ಗ್ಯಾರಂಟಿ: ಗಾಯಿತ್ರಿ ಸಿದ್ದೇಶ್ವರ

ಉಡುಪಿಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.