ಬಸಣ್ಣನ ಆಸ್ಥಾನದಲ್ಲಿ ಯಾರಿಗೆ ಸಚಿವ ಸ್ಥಾನ?

ಸಚಿವ ಸ್ಥಾನದ ಚರ್ಚೆ ಜೋರು | ರೇಸ್‌ನಲ್ಲಿ ಚರಂತಿಮಠ-ದೊಡ್ಡನಗೌಡ ಹೆಸರು¬| ರಾಜ್ಯಾಧ್ಯಕ್ಷರಾಗ್ತಾರಾ ನಿರಾಣಿ?

Team Udayavani, Aug 2, 2021, 3:35 PM IST

jk

ವರದಿ: ಶ್ರೀಶೈಲ ಕೆ. ಬಿರಾದಾರ

ಬಾಗಲಕೋಟೆ: ನಾಡಿನ ನೂತನ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಸಂಪುಟದಲ್ಲಿ ಜಿಲ್ಲೆಯ ಯಾವ ನಾಯಕರಿಗೆ ಸಚಿವ ಸ್ಥಾನ ದೊರೆಯಲಿದೆ ಎಂಬ ಕುತೂಹಲ ಚರ್ಚೆ ನಿತ್ಯವೂ ನಡೆಯುತ್ತಿವೆ.

ಹೌದು. ಬೀಳಗಿ ಕ್ಷೇತ್ರದ ಮುರುಗೇಶ ನಿರಾಣಿ ಸಿಎಂ ಆಗಲಿದ್ದಾರೆಂಬ ಬಹುದೊಡ್ಡ ನಿರೀಕ್ಷೆ ಜಿಲ್ಲೆಯ ಮಟ್ಟಿಗೆ ಅವರ ಅಭಿಮಾನಿಗಳಲ್ಲಿ ನಿರಾಸೆ ಮೂಡಿಸಿದ್ದು, ಪಕ್ಷದಲ್ಲಿ ದೊಡ್ಡ ಹುದ್ದೆ ಸಿಗಲಿದೆ ಎಂಬ ಆಶಾಭಾವ ಇನ್ನೊಂದೆಡೆ ವ್ಯಕ್ತಪಡಿಸುತ್ತಿದ್ದಾರೆ.

ರಾಜ್ಯಾಧ್ಯಕ್ಷರಾಗ್ತಾರಾ ನಿರಾಣಿ: ಮುಖ್ಯಮಂತ್ರಿ ಖುರ್ಚಿಯವರೆಗೂ ಹೆಸರು ಹೋಗಿ ಬಂದು ಕೊನೆ ಗಳಿಗೆಯಲ್ಲಿ ಅವಕಾಶ ವಂಚಿತರಾದ ಮುರುಗೇಶ ನಿರಾಣಿ ಅವರಿಗೆ ಪಕ್ಷದ ರಾಜ್ಯಾಧ್ಯಕ್ಷ ಸ್ಥಾನ ದೊರೆಯಲಿದೆಯೇ ಎಂಬ ಚರ್ಚೆ ನಡೆಯುತ್ತಿದೆ. ಮುಖ್ಯಮಂತ್ರಿ ಸ್ಥಾನಕ್ಕೆ ನಿರಾಣಿ ಅವರ ಹೆಸರು ಇದೇ ಮೊದಲ ಬಾರಿಗೆ ಕೇಳಿ ಬಂದಿರಲಿಲ್ಲ. ಕಳೆದ 2008-2013ರ ಬಿಜೆಪಿ ಸರ್ಕಾರದ ಅವಧಿಯಲ್ಲೂ ಯಡಿಯೂರಪ್ಪ ಅವರ ರಾಜೀನಾಮೆ ಬಳಿಕವೂ ಅವರ ಹೆಸರು ಕೇಳಿ ಬಂದಿತ್ತು. ಆಗ ಇಡೀ ಜಿಲ್ಲೆಯಲ್ಲಿ ನಿರಾಣಿ ಸಿಎಂ ಆಗಲೆಂದು ಹಲವು ದೇವಸ್ಥಾನಗಳಲ್ಲಿ ಪೂಜೆ-ಪುನಸ್ಕಾರ, ಉರುಳು ಸೇವೆ ಕೂಡ ಮಾಡಲಾಗಿತ್ತು. ಆದರೆ ಆಗಲೂ ಅವಕಾಶ ಸಿಕ್ಕಿರಲಿಲ್ಲ. ಆದರೆ ಈ ಬಾರಿ ಸಿಎಂ ಸ್ಥಾನ ಪಕ್ಕಾ ಎಂದೇ ನಂಬಿದ್ದ ನಿರಾಣಿ ಬೆಂಬಲಿಗರು ಹಾಗೂ ನಿರಾಣಿಗೆ ನಿರಾಸೆಯಾದರೂ ಉತ್ತರ ಕರ್ನಾಟಕಕ್ಕೆ ಈ ಸ್ಥಾನ ದೊರೆತಿದೆ ಎಂಬ ಸಂಭ್ರಮ ಮತ್ತೂಂದೆಡೆ ಮನೆ ಮಾಡಿದೆ.

ಮುಖ್ಯಮಂತ್ರಿ ಸ್ಥಾನದಿಂದ ವಂಚಿತರಾದ ನಿರಾಣಿ, ಪ್ರಬಲ ಪಂಚಮಸಾಲಿ ಲಿಂಗಾಯತ ಸಮುದಾಯಕ್ಕೆ ಸೇರಿದ್ದು, ಉತ್ತರ ಕರ್ನಾಟಕ ಮತ್ತು ರಾಜ್ಯದಲ್ಲಿ ಪ್ರಬಲ ಸಮುದಾಯಕ್ಕೆ ಅವಕಾಶ ಕೊಡುವ ಜತೆಗೆ ಪಕ್ಷ ಸಂಘಟನೆಗೆ ನೆರವಾಗಲು ಅವರಿಗೆ ರಾಜ್ಯಾಧ್ಯಕ್ಷ ಸ್ಥಾನ ದೊರೆಯಲಿದೆ ಎಂಬ ಚರ್ಚೆಗೂ ರೆಕ್ಕೆ-ಪುಕ್ಕ ಹೆಚ್ಚಿವೆ.

ಸಿಎಂ ಸ್ಥಾನ ತಪ್ಪಿದ್ದು ಹೇಗೆ?: ನಿರಾಣಿ ಅವರು ಉತ್ತರ ಕರ್ನಾಟಕದಿಂದ ದಕ್ಷಿಣ ಕರ್ನಾಟಕಕ್ಕೂ ಸಕ್ಕರೆ ಉದ್ಯಮ ವಿಸ್ತರಿಸಿ ಇಡೀ ದೇಶದಲ್ಲೇ ಯಶಸ್ವಿ ಉದ್ಯಮಿ ಎಂಬ ಹೆಸರೂ ಪಡೆದವರು. ಆ ಉದ್ಯಮದ ಮೂಲಕವೇ ಪಕ್ಷದ ರಾಷ್ಟ್ರೀಯ ನಾಯಕರಿಗೆ ಹತ್ತಿರವಾಗಿ ಪ್ರಭಾವಿ ನಾಯಕರಾಗಿ ಹೊರ ಹೊಮ್ಮಲು ಕಾರಣವೂ ಆಗಿದೆ. ಕೇವಲ ಶಾಸಕರಾಗಿದ್ದುಕೊಂಡೇ ದೆಹಲಿ ಮಟ್ಟದ ನಾಯಕರೊಂದಿಗೆ ನಿಕಟ ಸಂಪರ್ಕ ಹೊಂದಿದ್ದ ನಿರಾಣಿ ರಾಜ್ಯದಲ್ಲಿ ಮೊಟ್ಟ ಮೊದಲ ಬಾರಿಗೆ ಖಾಸಗಿ ಕಾರ್ಯಕ್ರಮವೊಂದಕ್ಕೆ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರನ್ನು ಕರೆತರುವಲ್ಲಿ ಯಶಸ್ವಿಯಾಗಿದ್ದರು. ನಿರಾಣಿ ಮುಟ್ಟಿದ್ದೆಲ್ಲ ಚಿನ್ನ ಎಂಬ ಮಾತು ಅವರ ಮನೆತನ ಹಾಗೂ ಬೆಂಬಲಿಗರಲ್ಲಿದ್ದು, ಅದು ಹಲವು ಬಾರಿ ಉದ್ಯಮದಲ್ಲಿ ಯಶಸ್ವಿಯಾಗಿ ಕೇಳಿ ಬಂದಿದೆ. ಆದರೆ ಹಿಂದೆ ಯಡಿಯೂರಪ್ಪ ಅವರ ಮಾನಸಪುತ್ರನಂತಿದ್ದ ನಿರಾಣಿ ಅವರು ಕಳೆದ 2013ರ ಚುನಾವಣೆ ವೇಳೆ ಅವರೊಂದಿಗೆ ಕೆಜೆಪಿ ಸೇರದ ಹಿನ್ನೆಲೆಯಲ್ಲಿ ಈಗ ಅದೇ ಯಡಿಯೂರಪ್ಪ ಅವರು ನಿರಾಣಿಗೆ ಸಿಎಂ ಸ್ಥಾನ ತಪ್ಪಿಸಲು ಕಾರಣರಾದರೇ? ಎಂಬ ಚರ್ಚೆಯೂ ನಡೆಯುತ್ತಿದೆ.

ನೂತನ ಮುಖ್ಯಮಂತ್ರಿ ನೇಮಕದ ಹಿಂದಿನ ದಿನ ಸಿಎಂ ಸ್ಥಾನ ಸಂಪೂರ್ಣ ಖಚಿತ ಮಾಡಿಕೊಂಡೇ ದೆಹಲಿಯಿಂದ ಬೆಂಗಳೂರಿಗೆ ಬಂದಿದ್ದ ನಿರಾಣಿ ಅವರಿಗೆ ಮರುದಿನದ ಬೆಳವಣಿಗೆಯಲ್ಲಿ ಕೈ ತಪ್ಪಿ ಹೋಗಿದೆ.

ಚರಂತಿಮಠ-ದೊಡ್ಡನಗೌಡರ ಹೆಸರೂ ಮುಂಚೂಣಿ: ಬಸವರಾಜ ಬೊಮ್ಮಾಯಿ ಸಂಪುಟದಲ್ಲಿ ಜಿಲ್ಲೆಯ ಹಿರಿಯ ನಾಯಕ ಗೋವಿಂದ ಕಾರಜೋಳರಿಗೆ ಸ್ಥಾನ ದೊರೆಯುವುದರಲ್ಲಿ ಸಂಶಯವಿಲ್ಲ. ವಿಧಾನಸಭೆ ಸಭಾಧ್ಯಕ್ಷ ಸ್ಥಾನಕ್ಕೂ ಅವರ ಹೆಸರು ಕೇಳಿ ಬರುತ್ತಿದೆಯಾದರೂ ರಾಜಕೀಯ ಲೆಕ್ಕಾಚಾರ, ವರ್ಗವಾರು ಕೋಟಾದಡಿ ಅವರಿಗೆ ಪ್ರಮುಖ ಹುದ್ದೆ ಮಾತ್ರ ದೊರೆಯಲಿದೆ. ಆದರೆ ಅವರ ಹೊರತಾಗಿ ಬಾಗಲಕೋಟೆಯ ಕ್ರಿಯಾಶೀಲ ಶಾಸಕ ಡಾ|ವೀರಣ್ಣ ಚರಂತಿಮಠ, ಹುನಗುಂದದ ದೊಡ್ಡನಗೌಡ ಪಾಟೀಲ ಅವರ ಹೆಸರೂ ಮುಂಚೂಣಿಯಲ್ಲಿದೆ. ತೇರದಾಳದ ಸಿದ್ದು ಸವದಿ ಕೂಡ ಸಚಿವ ಸ್ಥಾನಕ್ಕಾಗಿ ಬೇಡಿಕೆ ಇಟ್ಟಿದ್ದಾರೆ. ಸದ್ಯದ ರಾಜಕೀಯ ಬೆಳವಣಿಗೆಯಲ್ಲಿ ಚರಂತಿಮಠ ಅವರ ಹೆಸರು, ಸಚಿವ ಸ್ಥಾನಕ್ಕೆ ಪ್ರಬಲವಾಗಿ ಕೇಳಿ ಬರುತ್ತಿದೆ. ಯಾವುದೇ ಸ್ಥಾನ, ಜವಾಬ್ದಾರಿ ಕೊಟ್ಟರೂ ಸಶಕ್ತವಾಗಿ ನಿಭಾಯಿಸುತ್ತಾರೆಂಬ ಮಾತು ಅವರ ಹೆಸರಿಗಿದ್ದು, ಪಕ್ಷದ ಹೈಕಮಾಂಡ್‌ ಯಾವ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಕಾದು ನೋಡಬೇಕಿದೆ.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಬಾಗಲಕೋಟೆ: ಕೋಟೆ ನಾಡಿನ ದಾಹ ತೀರಿಸುವ ದಾನಿಗಳು!

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ದೇಶಪಾಂಡೆ ಸಾವು

ಖಾನಾಪುರ ಬಳಿ ಭೀಕರ ಅಪಘಾತ: ವಕೀಲ ಕೆ.ಎಸ್‌. ದೇಶಪಾಂಡೆ ಸಾವು

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

ಶ್ರೀಶೈಲ ಪಾದಯಾತ್ರೆಯಲ್ಲಿ ಮತದಾನ ಜಾಗೃತಿ: ಮಲ್ಲಯ್ಯನ ಧ್ವಜ ಅನಾವರಣ

4-bgl

Theft: ಅಮೀನಗಡದ ದೇವಸ್ಥಾನದಲ್ಲಿ ಕಳ್ಳತನ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

ಬಾಗಲಕೋಟೆ: ಐತಿಹಾಸಿಕ ಹೋಳಿ ಬಣ್ಣದಾಟಕ್ಕೆ ಚಾಲನೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.