ಕೃಷಿ ವಿಜ್ಞಾನಿಗಳಿಂದ ಭತ್ತ ಬೆಳೆ ಹಾನಿ ಸಮೀಕ್ಷೆ

ಜಿಲ್ಲೆಯ 12 ಗ್ರಾಮಗಳಿಗೆ ತಂಡ ಭೇಟಿ

Team Udayavani, Aug 25, 2019, 4:23 PM IST

25-Agust-36

ಯಾದಗಿರಿ: ಪ್ರವಾಹದ ನೀರು ಜಮೀನುಗಳಿಗೆ ನುಗ್ಗಿ ಬೆಳೆ ಹಾನಿಯಾಗಿದ್ದನ್ನು ಕೃಷಿ ವಿಜ್ಞಾನಿಗಳ ತಂಡ ಪರಿಶೀಲಿಸಿತು.

ಯಾದಗಿರಿ: ಜಿಲ್ಲೆಯ ನೆರೆ ಪೀಡಿತ ಪ್ರದೇಶಗಳಲ್ಲಿ ಉಂಟಾಗಿರುವ ಭತ್ತ ಬೆಳೆ ಹಾನಿ ಹಾಗೂ ಅದರ ಪುನಶ್ಚೇತನ ಕುರಿತು ಅಧ್ಯಯನ ಕೈಗೊಳ್ಳುವ ನಿಟ್ಟಿನಲ್ಲಿ ಕೃಷಿ ವಿಜ್ಞಾನ ಕೇಂದ್ರ ವತಿಯಿಂದ ಈಚೆಗೆ ಸಮೀಕ್ಷೆ ನಡೆಸಿತು.

ತಂಡವು ಜಿಲ್ಲಾಧಿಕಾರಿ ಸಲಹೆ ಹಾಗೂ ಮಾರ್ಗದರ್ಶನದೊಂದಿಗೆ ಜಿಲ್ಲೆಯ ವಿವಿಧ ಭತ್ತದ ತಾಕುಗಳಿಗೆ ಭೇಟಿ ನೀಡಿ, ಮೂರು ತಾಲೂಕಿನ ವಿವಿಧ ಭತ್ತದ ಬೆಳೆಯ ತಾಕುಗಳನ್ನು ವೀಕ್ಷಿಸಲಾಯಿತು.

ಕೃಷ್ಣಾ ಮತ್ತು ಭೀಮಾ ನದಿ ಪ್ರವಾಹದ ನೀರಿನಲ್ಲಿ ಏಳು ದಿನಗಳ ಮೇಲ್ಪಟ್ಟು ನೀರಿನಲ್ಲಿ ಮುಳುಗಿದ ಭತ್ತದ ತಾಕುಗಳು ಸಂಪೂರ್ಣವಾಗಿ ಹಾನಿಗೊಳಗಾಗಿದ್ದನ್ನು ತಂಡ ಮನಗಂಡು ಜಿಲ್ಲಾಧಿಕಾರಿಗೆ ವರದಿ ಸಲ್ಲಿಸಿದೆ.

ಹೈದ್ರಾಬಾದ್‌ ಭಾರತೀಯ ಭತ್ತ ಸಂಶೋಧನಾ ಕೇಂದ್ರದ ವಿಜ್ಞಾನಿಗಳಾದ ಡಾ| ಬ್ರಿಜೇಂದ್ರ, ಡಾ| ಶ್ರೀಧರ, ಡಾ| ಗಿರೀಶ, ಡಾ| ಅನಂತ, ಡಾ| ಬಸವರಾಜ ಅವರು ಕವಡಿಮಟ್ಟಿ ಕೃಷಿ ವಿಜ್ಞಾನ ಕೇಂದ್ರದ ಮುಖ್ಯಸ್ಥ ಡಾ| ಮಲ್ಲಿಕಾರ್ಜುನ ಕೆಂಗನಾಳ ಅವರ ನೇತೃತ್ವದಲ್ಲಿ ಯಾದಗಿರಿ, ಶಹಾಪುರ ಹಾಗೂ ಸುರಪುರ ತಾಲೂಕುಗಳಲ್ಲಿ ನೆರೆ ಪೀಡತ ಗ್ರಾಮಗಳ ಭತ್ತದ ತಾಕುಗಳಿಗೆ ಭೇಟಿ ನೀಡಿ ಹಾನಿ ಕುರಿತು ಪರಿಶೀಲಿಸಿದರು.

ಭತ್ತದ ಬೆಳೆ ಮೂರರಿಂದ ಐದು ದಿನಗಳವರೆಗೆ ಮುಳುಗಿದ ಪ್ರದೇಶಗಳಲ್ಲಿ ಸ್ವಲ್ಪ ಸಾರಜನಕ ಗೊಬ್ಬರಗಳನ್ನು ಹಾಕಿದ್ದಲ್ಲಿ ಮತ್ತೆ ಚೇತರಿಸಿಕೊಳ್ಳುವ ಸಾಧ್ಯತೆ ಇದೆಯಂದು ವಿಜ್ಞಾನಿಗಳು ರೈತರಿಗೆ ತಿಳಿಸಿದ್ದು, ಇನ್ನು ಪರ್ಯಾಯವಾಗಿ ಪ್ರಮುಖವಾಗಿ ಕಾಲುವೆ ನೀರಾವರಿ ಪ್ರದೇಶದ ರೈತರ ಹತ್ತಿರ ಭತ್ತದ ಸಸಿಗಳು ದೊರೆಯುವ ಸಾಧ್ಯತೆ ಇದ್ದರೆ, ಭತ್ತವನ್ನು ಪುನಃ ನಾಟಿ ಮಾಡಲು ಅವಕಾಶವಿದೆ ಎಂದು ಕ್ಷೇತ್ರ ಭೇಟಿ ಸಂದರ್ಭದಲ್ಲಿ ಸಂವಾದ ಕೈಗೊಂಡ ರೈತರಿಗೆ ವಿಜ್ಞಾನಿಗಳು ತಿಳುವಳಿಕೆ ನೀಡಿದರು.

ಇಲ್ಲವಾದಲ್ಲಿ ಮತ್ತೆ ಸಸಿಗಳನ್ನು ತಯಾರಿಸಿ ಭತ್ತದ ಬೆಳೆ ಬೆಳೆಯಬಹುದು. ಇದರಿಂದ ಹಂಗಾಮು ಒಂದು ತಿಂಗಳು ಮುಂದುವರೆದರೂ ಶೇ. 85ರಿಂದ 90ರಷ್ಟು ಇಳುವರಿ ಪಡೆಯಲು ಅವಕಾಶವಿದೆ ಎಂದು ತಿಳಿಸಿದರು.

ಮುಂದಿನ ಕೆಲ ದಿನಗಳಲ್ಲಿ ಕೃಷಿ ವಿಜ್ಞಾನ ಕೇಂದ್ರದಿಂದ ನೇರವಾಗಿ ಬಿತ್ತನೆ ಮಾಡಲು ಸಾಧ್ಯವಿರುವ ಡ್ರಮ್‌ ಸೀಡರ್‌ ಬಳಕೆ ಪ್ರಾತ್ಯಕ್ಷಿಕೆಗಳನ್ನು ಜಿಲ್ಲೆಯ ಕೆಲವು ಗ್ರಾಮಗಳಲ್ಲಿ ಕೈಗೊಳ್ಳಲು ಸಹ ತಂಡವು ಸಲಹೆ ನೀಡಿದೆ. ಒಟ್ಟಾರೆ ಭತ್ತ ಹಾನಿಯಾಗಿರುವ ಪ್ರದೇಶದಲ್ಲಿ ಭತ್ತವನ್ನೆ ಬೆಳೆಯಲು ಇಚ್ಚಿಸುವ ರೈತರಿಗೆ ಇನ್ನೂ ಕಾಲಾವಕಾಶವಿದ್ದು, ಸಸಿಗಳ ಅಥವಾ ಬೀಜದ ವ್ಯವಸ್ಥೆಯನ್ನು ಮಾಡಿಕೊಂಡು ಭತ್ತದ ಬೆಳೆಯನ್ನು ಪುನಃ ನಾಟಿ ಮಾಡಬಹುದೆಂದು ತಂಡವು ಸಲಹೆ ನೀಡಿದೆ.

ಒಟ್ಟು ಮೂರು ತಾಲ್ಲೂಕಿನಲ್ಲಿ 12 ಗ್ರಾಮಗಳಿಗೆ ತಂಡ ಭೇಟಿ ನೀಡಿ, ರೈತರೊಂದಿಗೂ ಚರ್ಚೆ ನಡೆಸಿತು. ಸಮೀಕ್ಷೆಯಲ್ಲಿ ಕೃಷಿ ವಿಜ್ಞಾನ ಕೇಂದ್ರದ ಡಾ| ಉಮೇಶ ಬಾರಿಕರ, ಕೃಷಿ ವಿಸ್ತರಣಾ ಶಿಕ್ಷಣ ಕೇಂದ್ರದ ಡಾ| ಹೊನ್ನಳ್ಳಿ, ಜಂಟಿ ಕೃಷಿ ನಿರ್ದೇಶಕಿ ದೇವಿಕಾ ಆರ್‌, ಶಹಾಪುರ ಮತ್ತು ಸುರಪುರ, ವಡಗೇರಾ ಹಾಗೂ ಕಕ್ಕೇರಾ ಸಹಾಯಕ ಕೃಷಿ ನಿರ್ದೇಶಕರು ಕೃಷಿ ಅಧಿಕಾರಿಗಳು ಅಲ್ಲದೇ ಆತ್ಮ ಯೋಜನೆ ತಂತ್ರಜ್ಞಾನ ವ್ಯವಸ್ಥಾಪಕರು ಸಹ ಭಾಗವಹಿಸಿದ್ದರು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Mandya: ಬಿಜೆಪಿ ಮುಖಂಡರಿಗೆ ವೇದಿಕೆ ಬಿಟ್ಟು ಕೆಳಗೆ ಕುಳಿತ ಮಂಡ್ಯ ದಳಪತಿಗಳು!

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.