ತೆಲಂಗಾಣ ಸಿಎಂ ಜತೆ ಚರ್ಚಿಸಿ ಕ್ರಮ

ಜಿಲ್ಲೆಯ ಎಲ್ಲ ಹಳ್ಳಿಗಳಿಗೆ ಶಾಶ್ವತವಾಗಿ ಕುಡಿಯುವ ನೀರು ಕಲ್ಪಿಸಲು ಮುಖ್ಯಮಂತ್ರಿ ಕುಮಾರಸ್ವಾಮಿ ಸೂಚನೆ

Team Udayavani, Jun 23, 2019, 10:57 AM IST

23–June-11

ಯಾದಗಿರಿ: ಚಂಡರಕಿ ಗ್ರಾಮದಿಂದ ನಿರ್ಗಮಿಸುವ ವೇಳೆಯೂ ಸಿಎಂ ಕುಮಾರಸ್ವಾವಿ ಅವರಿಗೆ ಸಾರ್ವಜನಿಕರು ಮನವಿ ಸಲ್ಲಿಸಿದರು.

ಯಾದಗಿರಿ: ತೆಲಂಗಾಣ ರಾಜ್ಯದ ಸಂಗಂಬಂಡಾ ಹಳ್ಳದ ಬ್ಯಾರೇಜ್‌ ಹಿನ್ನೀರಿನಿಂದ ಗುರುಮಠಕಲ್ ಕ್ಷೇತ್ರದ ಹಳ್ಳಿಗಳ 400 ಎಕರೆ ಜಮೀನು ಮುಳುಗಡೆ ಭೀತಿ ಇದೆ. ಸಂಕ್ಲಾಪುರ, ಚಲ್ಹೇರಿ, ಇಡ್ಲೂರು, ಜೈಗ್ರಾಂ ಭಾಗದ ರೈತರಲ್ಲಿ ಆತಂಕ ಇದೆ. ಇಂಜಿನಿಯರ್‌ಗಳನ್ನು ಕಳುಹಿಸಿ ಸಮಸ್ಯೆಗಳ ಮಾಹಿತಿ ಪಡೆಯಲಾಗುವುದು ಎಂದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ತಿಳಿಸಿದರು.

ಚಂಡರಕಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಈಗಾಗಲೇ ಶಾಸಕರು ಗಮನಕ್ಕೆ ತಂದಿದ್ದು, ಪರಿಹಾರ ಕುರಿತು ತೆಲಂಗಾಣ ಸಿಎಂ ಜತೆ ಚರ್ಚಿಸಿ ಯಾವ ರೀತಿ ಕ್ರಮ ವಹಿಸಬೇಕು ಎನ್ನುವ ತೀರ್ಮಾನಕ್ಕೆ ಬರಲಾಗುವುದು ಎಂದು ತಿಳಿಸಿದರು.

ಜಿಲ್ಲೆಯ ಎಲ್ಲ ಹಳ್ಳಿಗಳಿಗೆ ಶಾಶ್ವತವಾಗಿ ಕುಡಿಯುವ ನೀರು ಕಲ್ಪಿಸುವಂತೆ ಗ್ರಾಮೀಣ ಕುಡಿಯುವ ನೀರಿನ ಇಲಾಖೆಗೆ ಸೂಚನೆ ನೀಡಲಾಗಿದೆ. ಗುರುಮಠಕಲ್ಗೆ ವಿಶೇಷವಾಗಿ ಶಾಸಕ ನಾಗನಗೌಡ ಕಂದಕೂರ ಅವರು ಹಲವು ಬೇಡಿಕೆಗಳ ಕುರಿತು ಗಮನಕ್ಕೆ ತಂದಿದ್ದಾರೆ. ಎಲ್ಲವನ್ನೂ ಅನುಷ್ಠಾನಕ್ಕೆ ಸಿದ್ಧತೆ ಮಾಡಿಕೊಳ್ಳುವುದಾಗಿ ಭರವಸೆ ನೀಡಿದರು.

ನಿಯಮಾವಳಿಗಳ ಸಡಿಲಿಕೆ ಬಗ್ಗೆ ತೀರ್ಮಾನ: ಹೈಕ ಭಾಗಕ್ಕೆ ಶಿಕ್ಷಕ ನೇಮಕಾತಿಯಲ್ಲಿ ಅರ್ಹತಾ ಪರೀಕ್ಷೆ ನಿಯಮಾವಳಿಗಳ ಸಡಿಲಿಕೆ ಬಗ್ಗೆ ತೀರ್ಮಾನಿಸಲಾಗುವುದು ಎಂದು ತಿಳಿಸಿದರು.

ಹೈಕ ಭಾಗದಲ್ಲಿ ಶಿಥಿಲಗೊಂಡಿರುವ ಎಲ್ಲ ಶಾಲೆಗಳ ಕಟ್ಟಡಗಳನ್ನು ಈ ವರ್ಷವೇ ಸಂಪೂರ್ಣ ರಿಪೇರಿ, ಹೊಸ ಕಟ್ಟಡ ನಿರ್ಮಿಸಲು ತೀರ್ಮಾನ ಮಾಡಿದ್ದೇವೆ. ಹಿಂದಿನ ಸರ್ಕಾರದ ಭರವಸೆಗಳು ನನಗೆ ಗೊತ್ತಿಲ್ಲ. ಶಿಥಿಲ ಕಟ್ಟಡಗಳ ಪಟ್ಟಿ ಮಾಡಿ, ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲಾಗುವುದು ಎಂದರು.

ಪಶು ಇಲಾಖೆಯಲ್ಲಿ ಖಾಲಿ ಇರುವ 150 ವೈದ್ಯರ ಹುದ್ದೆ ಭರ್ತಿಗೆ ಹೈಕ ಭಾಗದಿಂದ ಕೇವಲ 70 ಜನರು ಅರ್ಜಿ ಹಾಕಿದ್ದಾರೆ ಎಂದು ತಿಳಿಸಿದರು.

ಅಗತ್ಯ ಸೌಲಭ್ಯ: ಯಾದಗಿರಿ ಜಿಲ್ಲೆಯ ಎಸ್‌ಎಸ್‌ಎಲ್ಸಿ ಫಲಿತಾಂಶ ಮೊದಲನೇ ಸ್ಥಾನಕ್ಕೆ ತರಲು ಅಗತ್ಯ ಮೂಲಭೂತ ಸೌಕರ್ಯ, ಶಿಕ್ಷಕರ ಕೊರತೆ ನೀಗಿಸಲಾಗುವುದು. ಮೊದಲ ಸ್ಥಾನಕ್ಕೆ ತರುವ ವಾತಾವರಣ ನಿರ್ಮಾಣ ಮಾಡಲಾಗುವುದು ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಗಣಿ ಮತ್ತು ಭೂ ವಿಜ್ಞಾನ ಖಾತೆ ಹಾಗೂ ಯಾದಗಿರಿ ಜಿಲ್ಲಾ ಉಸ್ತುವಾರಿ ಸಚಿವ ರಾಜಶೇಖರ ಪಾಟೀಲ, ಸಮಾಜ ಕಲ್ಯಾಣ ಖಾತೆ ಸಚಿವ ಪ್ರಿಯಾಂಕ್‌ ಎಂ. ಖರ್ಗೆ, ಪಶು ಸಂಗೋಪನೆ ಮತ್ತು ಮೀನುಗಾರಿಕೆ ಖಾತೆ ಸಚಿವ ವೆಂಕಟರಾವ ನಾಡಗೌಡ, ಪ್ರವಾಸೋದ್ಯಮ ಖಾತೆ ಸಚಿವ ಸಾ.ರಾ.ಮಹೇಶ, ಸಹಕಾರ ಖಾತೆ ಸಚಿವ ಬಂಡೆಪ್ಪ ಖಾಶೆಂಪುರ, ಗುರುಮಠಲ್ ಶಾಸಕ ನಾಗನಗೌಡ ಕಂದಕೂರ, ಜಿಲ್ಲಾಧಿಕಾರಿ ಕೂರ್ಮಾರಾವ್‌, ಎಸ್‌ಪಿ ಋಷಿಕೇಷ ಸೋನವಣೆ, ಸಿಇಒ ಕವಿತಾ ಮನ್ನಿಕೇರಿ ಮತ್ತಿತರರಿದ್ದರು.

ಟಾಪ್ ನ್ಯೂಸ್

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Gangavati: ಜೈ ಶ್ರೀರಾಮ್‌ ಎಂದಿದ್ದಕ್ಕೆ ಯುವಕರ ತಂಡದಿಂದ ಹಲ್ಲೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.