ಹೆರೂರಿಗೆ ಬರುವೆ, ಸಮಸ್ಯೆಆಲಿಸುವೆ: ಎಚ್ಡಿಕೆ
ಗ್ರಾಮ ವಾಸ್ತವ್ಯ ಮುಂದೂಡಿದ್ದಕ್ಕೆ ಸಿಎಂ ಕ್ಷಮೆಯಾಚನೆ | ಜುಲೈನಲ್ಲಿ ಗ್ರಾಮ ವಾಸ್ತವ್ಯ ನಿಗದಿ
Team Udayavani, Jun 23, 2019, 4:06 PM IST
ಯಾದಗಿರಿ: ಮಳೆಯಿಂದಾಗಿ ಕಲಬುರಗಿ ಜಿಲ್ಲೆ ಹೆರೂರಿನ ಗ್ರಾಮ ವಾಸ್ತವ್ಯ ಕಾರ್ಯಕ್ರಮ ಮುಂದೂಡಲಾಗಿದೆ. ಹೀಗಾಗಿ, ಜನತೆ ನಿರಾಸೆಗೊಳ್ಳುವುದು ಬೇಡ. ಮತ್ತೆ ಬಂದು ಸಮಸ್ಯೆ ಆಲಿಸುತ್ತೇನೆ ಎಂದು ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅಭಯ ನೀಡಿದರು.
ಚಂಡರಕಿಯ ಸರಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಮಳೆಯಿಂದ ಕಾರ್ಯಕ್ರಮ ಮುಂದೂಡಲಾಗಿದೆ. ಜುಲೈನಲ್ಲಿ ವಿಧಾನಸಭೆ ಅಧಿವೇಶನ ನಡೆಯಲಿದ್ದು, ಈ ಮಧ್ಯೆ ಸಮಯ ನೋಡಿಕೊಂಡು ಜುಲೈ ಮೊದಲನೇ ಅಥವಾ ಎರಡನೇ ವಾರದಲ್ಲಿ ಗ್ರಾಮ ವಾಸ್ತವ್ಯ ನಿಗದಿಪಡಿಸುವುದಾಗಿ ಭರವಸೆ ನೀಡಿದರು.
ಹೆರೂರು ಗ್ರಾಮ ಹಾಗೂ ಸುತ್ತಮುತ್ತಲಿನ ಜನರು ಸಾಕಷ್ಟು ನಿರೀಕ್ಷೆಗಳನ್ನಿಟ್ಟುಕೊಂಡು ತಮ್ಮ ಸಮಸ್ಯೆಗಳಿಗೆ ಪರಿಹಾರದ ಭರವಸೆ ಹೊಂದಿದ್ದರು. ದೊಡ್ಡಮಟ್ಟದ ನಿರೀಕ್ಷೆ ಹೊಂದಿದ್ದರು. ಆದರೆ, ಅನಿವಾರ್ಯವಾಗಿ ಕಾರ್ಯಕ್ರಮ ಮುಂದೂಡಿರುವುದಕ್ಕೆ ಜನರ ಬಳಿ ಕ್ಷಮೆಯಾಚಿಸುವೆ ಎಂದರು.
ಮಳೆಯ ಕಾರಣ ಕಾರ್ಯಕ್ರಮ ಮುಂದೂಡಿರುವುದಕ್ಕಿಂತ ಹೆಚ್ಚಾಗಿ ಈ ಭಾಗದಲ್ಲಿ ಮಳೆಯಾಗಿರುವುದು ತಮಗೆ ಸಂತಸ ತಂದಿದೆ. ಬಿತ್ತನೆ ವೇಳೆಯಲ್ಲಿ ಮಳೆ ಸುರಿದಿರುವುದು ರೈತರಿಗೆ ಆಶಾದಾಯಕವಾಗಿದೆ. ಪ್ರಕೃತಿಯ ಸಹಕಾರ ದೊರೆತಿದೆ ಎಂದರು.
ತಕ್ಷಣವೇ ಕ್ರಮ: ಚಂಡರಕಿಯಲ್ಲಿ ಜನಸ್ಪಂದನ ವೇಳೆ ಸಿವಿಲ್ ವ್ಯಾಜ್ಯಗಳನ್ನು ಹೊರತುಪಡಿಸಿ ಶಾಲಾ ಕಟ್ಟಡ, ವಿಧವಾ ವೇತನ, ಸಂಧ್ಯಾ ಸುರಕ್ಷಾ ಫಲಾನುಭವಿಗಳ ಕೆಲ ಅರ್ಜಿಗಳು ಬಂದಿದ್ದು, ಪ್ರಮುಖವಾಗಿ ಯುವಕರು ಉದ್ಯೋಗ ಕಲ್ಪಿ ಸಲು ಮನವಿ ಸಲ್ಲಿಸಿದ್ದಾರೆ. ಅಂಗವಿಕಲರು, ಮಹಿಳೆಯರ ಕೆಲವು ಅರ್ಜಿ, ಆಕಸ್ಮಿಕವಾಗಿ ಚಿಕ್ಕ ವಯಸ್ಸಿನಲ್ಲಿ ಗಂಡ ಇಲ್ಲದೇ ಅನಾನುಕೂಲವಾಗಿ ಉದ್ಯೋಗ ಕೊಡಿಸುವಂತೆ ಮನವಿಗಳು ಬಂದಿವೆ. ಸಾಧ್ಯವಾದಷ್ಟು ಮಟ್ಟಿಗೆ ಖಾಸಗಿ ಉದ್ಯೋಗ ಕಲ್ಪಿಸುವ ನಿಟ್ಟಿನಲ್ಲಿ ಪ್ರಯತ್ನಿಸಲಾಗುವುದು. ಹಲವು ಹಳ್ಳಿಗಳ ರಸ್ತೆ ನಿರ್ಮಾಣಕ್ಕೆ ಮನವಿ ಬಂದಿದ್ದು, ತಕ್ಷಣದಲ್ಲೇ ಕ್ರಮ ಕೈಗೊಳ್ಳಲಾಗುವುದು ಎಂದರು. ಈಗಾಗಲೇ ಚಂಡರಕಿಯಲ್ಲಿ ಹಿರಿಯ ಅಧಿಕಾರಿಗಳು, ಸಚಿವರು, ಶಾಸಕರು ಎಲ್ಲರ ಜತೆಗೂಡಿ ಜನಸಾಮಾನ್ಯರ ಮನವಿ ಸ್ವೀಕರಿಸಿ, ಎಲ್ಲವನ್ನೂ ವಿಂಗಡಿಸಿ ಸಮಸ್ಯೆಗಳನ್ನು ಬೇರ್ಪಡಿ ಸಲಾಗಿದೆ. ಇಲಾಖಾವಾರು ಪರಿಮಿತಿಯಲ್ಲಿ ಪರಿಹಾರಕ್ಕೆ ಜಿಲ್ಲಾಧಿಕಾರಿಗಳು ತೀರ್ಮಾನ ಮಾಡಲಿದ್ದಾರೆ ಎಂದರು.
ಅದ್ಧೂರಿ ಸಿದ್ಧತೆ ಬಯಸಿಲ್ಲ: ಗ್ರಾಮ ವಾಸ್ತವ್ಯಕ್ಕೆ ದೊಡ್ಡ ಅದ್ಧೂರಿಯ ಸಿದ್ಧತೆಗಳನ್ನೇನೂ ಬಯ ಸಿಲ್ಲ. ಎರಡು ಫ್ಯಾನ್, ನೆಲದ ಮೇಲೆ ಚಾಪೆ ಹಾಸಿ ಮಲಗಿದ್ದೇನೆ. ನಾನು ಜನಸಾಮಾನ್ಯರ ಜತೆ ಇರುವವನಾಗಿದ್ದು, ಶಾಲೆಗಳ ಅಭಿವೃದ್ಧಿ ಉದ್ದೇ ಶದಿಂದ ಶಾಲೆಯಲ್ಲಿ ವಾಸ್ತವ್ಯ ಮಾಡಿದ್ದೇನೆ. ವಿದ್ಯಾರ್ಥಿಗಳೊಂದಿಗೆ ಊಟ ಮಾಡಿದ್ದೇನೆ. ಮಕ್ಕಳು ಖುಷಿಪಟ್ಟಿದ್ದಾರೆ. ಶಾಲಾ ವಾಸ್ತವ್ಯದಿಂದ ಮಕ್ಕಳಿಗೆ ಉತ್ತೇಜನ ದೊರೆತು ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ ಎಂದು ತಿಳಿಸಿದರು.
ನೀರು ಹಂಚಿಕೆ ವಿಷಯ ಕುರಿತು ಪ್ರಸ್ತಾಪಿಸಿದ ಅವರು, ಈ ವಿಷಯದಲ್ಲಿ ರಾಜಕೀಯ ಮಾಡ ಬಾರದು. ಅಕ್ಕಪಕ್ಕದ ರಾಜ್ಯಗಳು ಸೌಹಾರ್ದ ಯುತವಾಗಿರಬೇಕು. ಕೊಟ್ಟು ತೆಗೆದುಕೊಳ್ಳುವ ನೀತಿ ಅನುಸರಿಸಬೇಕು. ಒಟ್ಟಿನಲ್ಲಿ ಅಭಿವೃದ್ಧಿ ಮುಖ್ಯ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ
MUST WATCH
ಹೊಸ ಸೇರ್ಪಡೆ
Neha Hiremath Case: ಹಂತಕನ ಊರಿನಲ್ಲಿ ಪ್ರತಿಭಟನೆ, ಮುಸ್ಲಿಂ ಸಮುದಾಯದ ಸಾಥ್
Belagavi; ಕಾಂಗ್ರೆಸ್ ಸರ್ಕಾರದ ಓಲೈಕೆಯಿಂದ ಜಿಹಾದಿ ಕೃತ್ಯಗಳು ಹೆಚ್ಚುತ್ತಿದೆ: ಶೆಟ್ಟರ್
Bengaluru: ರೈಲಿಗೆ ಸಿಲುಕಿ ವೈದ್ಯ, ಸ್ಟಾಫ್ ನರ್ಸ್ ಆತ್ಮಹತ್ಯೆ
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Bengaluru Crime: ಅಕ್ರಮ ಸಂಬಂಧ ಜೋಡಿ ಕೊಲೆಯಲ್ಲಿ ಅಂತ್ಯ